ಮಡಿಕೇರಿ ಜ.16 NEWS DESK : ಬಾಲ್ಯದಿಂದಲೇ ಹಿಂದೂ ಸಂಸ್ಕಾರವನ್ನು ಮನವರಿಕೆ ಮಾಡಿಕೊಡುವ ಮತ್ತು ಧರ್ಮ ಬೋಧನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಮೂರ್ನಾಡಿನಲ್ಲಿ ಹಿಂದೂ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮೂರ್ನಾಡಿನ ಶಿಕ್ಷಕರು ಹಾಗೂ ಅರ್ಚಕರಾದ ಶ್ರೀಹರಿ ಮತ್ತು ಮಮತಾ ಶ್ರೀಹರಿಯವರ ನಿವಾಸದ ಪೂಜಾ ಕೇಂದ್ರದಲ್ಲಿ ದೀಪ ಬೆಳಗಿಸಿ ಮಕ್ಕಳು ಮತ್ತು ಪೋಷಕರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೇಂದ್ರವನ್ನು ಉದ್ಘಾಟಿಸಲಾಯಿತು. ನಂತರ ಮಕ್ಕಳಿಗೆ ಧರ್ಮ ಬೋಧನೆಯನ್ನು ನೀಡಿ ಸಂಸ್ಕಾರ ಪಾಠ ಮಾಡಲಾಯಿತು. ಹಾದಿ ತಪ್ಪಿ ಖಿನ್ನತೆಗೆ ಒಳಗಾಗುತ್ತಿರುವ ಮತ್ತು ದುಶ್ಚಟಗಳಿಗೆ ಬಲಿಯಾಗುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಪೋಷಕರ ಒತ್ತಡದ ಜೀವನದ ನಡುವೆ ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಮನಗಂಡು ಹಾಗೂ ಹಿಂದೂ ಧರ್ಮ ಬೋಧನೆಯನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಹಿಂದೂ ಬಾಲ ಸಂಸ್ಕಾರ ಕೇಂದ್ರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲಿ ವಿವಿಧೆಡೆ ಕೇಂದ್ರ ಆರಂಭಗೊಳ್ಳಲಿದೆ ಎಂದು ಪ್ರಮುಖರು ವಿವರಿಸಿದರು. ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ…
ಲೇಖಕ: admin
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಹೋಬಳಿ ನಾಗರಿಕರ ಹೋರಾಟ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಎಂ.ಎ.ಉಸ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಡಿ.ರಾಜು ರೈ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಪ್ರವಾಸಿ ಮಂದಿರದಲ್ಲಿ ನೂತನ ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಾಗೇಶ್ ಪೂಜಾರಿ, ಪಟ್ಟೆಮನೆ.ಪಿ.ಉದಯಕುಮಾರ್, ಹೆಚ್.ಎಸ್.ಮುತ್ತಪ್ಪ, ಖಜಾಂಚಿಯಾಗಿ ರಮೇಶ್ ಶೇಟ್, ಸಹಕಾರ್ಯದರ್ಶಿಗಳಾಗಿ ಆರ್.ರಮೇಶ್ ಪಿಳ್ಳೆ, ಕೆ.ಎಸ್.ಅನಿಲ್ಕುಮಾರ್, ಎ.ಎಂ.ಶರೀಫ್, ಸಂತೋಷ್ (ದೀನು), ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಅಶೋಕ್ ನೇಮಕಗೊಂಡರು. ಸಮಿತಿ ಸದಸ್ಯರುಗಳಾಗಿ ಯಂಕನ ಶ್ರೀರಾಮ, ಗೌರವಧ್ಯಕ್ಷರುಗಳಾಗಿ ಎಸ್.ಎ.ವಹೀದ್ಜಾನ್, ಜಿನ್ನಪ್ಪ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ನಂತರ ಎಂ.ಎ.ಉಸ್ಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಗ್ರಾಮದಲ್ಲಿರುವ 18 ವರ್ಷ ಮೇಲ್ಪಟ್ಟ ಯುವಕರನ್ನು ಸಂಘಟನೆಗೆ ಸೇರಿಸಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಹೋರಾಟ ನಡೆಸಲು ಸಭೆಯಲ್ಲಿ ಅಂಗೀಕರಿಸಲಾಯಿತು. ಸುಂಟಿಕೊಪ್ಪ ಪಟ್ಟಣವು ಹೋಬಳಿ ಕೇಂದ್ರವಾಗಿದ್ದು, ಸಾಕಷ್ಟು ಭೌಗೋಳಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳನ್ನು ಪರಿಹರಿಸುವ ದಿಸೆಯಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆ ಪೂರಕವಾಗಿ ಸ್ಪಂದಿಸದಿರುವುದು, ಮೂಲಭೂತ ಸೌಕರ್ಯಗಳನ್ನು…
ಮಡಿಕೇರಿ ಜ.16 NEWS DESK : ಕೊಡುಗು ಗೌಡ ಹಿತ ರಕ್ಷಣಾ ಸಮಿತಿ ವತಿಯಿಂದ ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಕರ್ ಹಾಗೂ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿಯ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹೂವಿನ ಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ಪಿ.ಎಲ್.ಸುರೇಶ, ಪರ್ಮಲೆ ಗಣೇಶ, ದಂಬೆಕೋಡಿ ರಶ್ಮಿ, ದಂಬೆಕೋಡಿ ಕವನಾ ಬಿಷ್ಮ, ಪೂಜಾರಿರ ಪ್ರದೀಪ ಕುಮಾರ್, ಬಂಗಾರ ಕೋಡಿ ತುಳಸಿ ಗಾಂಧಿ ಪ್ರಸಾದ್, ಪಟ್ಟಡ ದೀಪಕ್, ಡೆಮ್ಮೆಲೆ ರಿತೀನ್, ಪೂಜಾರಿರ ದ್ರುವ, ಕವನ್ ಕೊತ್ತೋಳಿ ಹಾಗೂ ಪ್ರಮುಖರು ಹಾಜರಿದ್ದರು.
ವಾಷಿಂಗ್ಟನ್, ಜ.16 NEWS DESK : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಈ ವೇಳೆ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಟ್ರಂಪ್ ಅವರಿಗೆ ಪ್ರದಾನ ಮಾಡಿದರು. ಈ ಭೇಟಿಯನ್ನು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ದೃಢಪಡಿಸಿದರು.
ಭಾರತದ ಪ್ರಾಚೀನ ಕಡಲ ಸಂಪ್ರದಾಯ ಹಾಗೂ ಸಮುದ್ರ ವ್ಯಾಪಾರದ ಇತಿಹಾಸವನ್ನು ಜೀವಂತವಾಗಿ ಪುನರುಜ್ಜೀವನಗೊಳಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಸಾಂಪ್ರದಾಯಿಕ ಕೈಯಿಂದ ಹೊಲಿಯಲಾದ ಭಾರತೀಯ ಹಡಗು ‘ಐಎನ್ಎಸ್ವಿ ಕೌಂಡಿನ್ಯಾ’ ತನ್ನ ಮೊದಲ ವಿದೇಶಿ ಸಮುದ್ರ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 18 ದಿನಗಳ ದೀರ್ಘ ಸಮುದ್ರಯಾನದ ಬಳಿಕ ಈ ಹಡಗು ಓಮನ್ನ ಮಸ್ಕತ್ ಕರಾವಳಿಗೆ ತಲುಪಿದ್ದು, ಬುಧವಾರ ಅದರ ಆಗಮನವನ್ನು ಅಧಿಕೃತವಾಗಿ ದೃಢಪಡಿಸಲಾಯಿತು. :: ಪೋರಬಂದರ್ನಿಂದ ಮಸ್ಕತ್ವರೆಗೆ ಐತಿಹಾಸಿಕ ಪಯಣ : : ಐಎನ್ಎಸ್ವಿ ಕೌಂಡಿನ್ಯಾ ಡಿಸೆಂಬರ್ 29, 2025 ರಂದು ಗುಜರಾತ್ನ ಪೋರಬಂದರ್ ಬಂದರಿನಿಂದ ತನ್ನ ಮೊದಲ ವಿದೇಶಿ ಸಮುದ್ರಯಾನ ಆರಂಭಿಸಿತ್ತು. ಈ ಪ್ರಯಾಣವನ್ನು ಸುಮಾರು 15 ದಿನಗಳಲ್ಲಿ ಪೂರ್ಣಗೊಳಿಸುವ ಯೋಜನೆ ಇತ್ತು. ಆದರೆ ಸಮುದ್ರದ ಸಹಜ ಸವಾಲುಗಳು ಹಾಗೂ ಹವಾಮಾನ ಪರಿಸ್ಥಿತಿಗಳ ಕಾರಣದಿಂದ ಈ ಯಾನ 18 ದಿನಗಳ ಕಾಲ ಮುಂದುವರಿಯಿತು. ಈ ಐತಿಹಾಸಿಕ ಹಡಗಿನಲ್ಲಿ ಕಮಾಂಡರ್ ವಿಕಾಸ್ ಶಿಯೋರನ್ ನೇತೃತ್ವದ 16 ಸದಸ್ಯರ ಸಿಬ್ಬಂದಿ ಭಾಗವಹಿಸಿದ್ದರು. ಆಧುನಿಕ ಸೌಲಭ್ಯಗಳಿಲ್ಲದ ಹಡಗಿನಲ್ಲಿ ಪ್ರಯಾಣಿಸುವ…
ಮಡಿಕೇರಿ ಜ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025 ನೇ ವರ್ಷದ ಅಕಾಡೆಮಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಅಹ್ವಾನಿಸಿದ್ದು, ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿ 2025 ಕ್ಕೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2025” ಎಂದು ಬರೆದು…
ಮಡಿಕೇರಿ ಜ.16 NEWS DESK : ಜಿಲ್ಲೆಯ ಅಮ್ಮತ್ತಿ, ಪಾಲಿಬೆಟ್ಟ ಮತ್ತು ಚೆನ್ನಯ್ಯನ ಕೋಟೆ ಪೊಲೀಸ್ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಈ ಸಂದರ್ಭ ಉಪ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವಿಕೆ ಮುಂತಾದ ವಿಚಾರಗಳ ಬಗ್ಗೆ ಉಪ ಠಾಣಾ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಲಾಯಿತು.
ನಾಪೋಕ್ಲು ಜ.16 NEWS DESK : ಮಕರ ಸಂಕ್ರಾಂತಿ ಭೂಮಿಗೂ ರೈತನಿಗೂ ಗೋವಿಗೂ ಇರುವ ಅವಿನಾಭಾವ ಸಂಬಂಧವನ್ನು ಸೂಚಿಸುವ ಹಬ್ಬ ಎಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ನಿರ್ದೇಶಕಿ ಕೂಡಕಂಡಿ ಸೋನಿ ಸುದೀಪ್ ಅವರು ಹೇಳಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಚೇರಂಬಾಣೆ ಗೌಡ ಸಮಾಜದ ಆಯೋಜಿಸಿದ ಮಕರ ಸಂಕ್ರಾಂತಿ ಹಬ್ಬ ಹಾಗೂ ಒಕ್ಕೂಟದ 2026ನೇ ವರ್ಷದ ಮಾಸಿಕ ಸಭೆಯಲ್ಲಿ ಅವರು ಭಾಗವಹಿಸಿ ಸಂಕ್ರಮಣದ ಆಚರಣೆ ಮತ್ತು ಪದ್ಧತಿ ಪರಂಪರೆ ಬಗ್ಗೆ ಬೆಳಕು ಚೆಲ್ಲಿದರು. ರೈತರಿಗೆ ಇದು ಸುಗ್ಗಿ ಹಬ್ಬ. ದವಸ ಧಾನ್ಯಗಳು ಮನೆ ತುಂಬಿ ಸಂಭ್ರಮಿಸುವ ಕಾಲ. ಆದ್ದರಿಂದ ಮಾನವರಿಗೂ ಪ್ರಾಣಿಗಳಿಗೂ ಯಥೇಚ್ಛವಾಗಿ ದಾನ ನೀಡುತ್ತಾ ವರ್ಷವಿಡೀ ರೈತನಿಗೆ ಹೆಗಲುಕೊಟ್ಟ ಗೋವನ್ನು ಪೂಜಿಸುತ್ತಾ ಅವುಗಳ ದೇಹದಲ್ಲಿ ಕ್ರಿಮಿಕೀಟಗಳು ಬಾಧಿಸದಂತೆ ಅವುಗಳನ್ನು ಕಿಚ್ಚು ಹಾಯಿಸಿ ಸಂರಕ್ಷಣೆ ಮಾಡುವಂತಹ ಜಾನಪದ ಹಬ್ಬವೂ ಸಂಕ್ರಾಂತಿ ಎಂದರು. ಮಕರ ಸಂಕ್ರಾಂತಿಯನ್ನು ದೇಶದ ಎಲ್ಲೆಡೆಯಲ್ಲೂ ನಾನಾ ಹೆಸರುಗಳಿಂದ ಆಚರಿಸುತ್ತಾರೆ. ಒಟ್ಟಿನಲ್ಲಿ ಸಂಕ್ರಾಂತಿ ರೈತರ ಬಾಳಿನಲ್ಲಿ ಸಂಭ್ರಮದ…
ನಾಪೋಕ್ಲು ಜ.16 NEWS DESK : ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಗ್ರಾಮ ಸಭೆಯು ಜ.17 ರಂದು ನಡೆಯಲಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2025-26ನೇ ಸಾಲಿನ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷ ಶಾಂತಿ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್ ತಿಳಿಸಿದ್ದಾರೆ. ವರದಿ: ದುಗ್ಗಳ ಸದಾನಂದ.
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಸಂಭ್ರಮದಿಂದÀ ಪೊಂಗಲ್(ಮಕರಸಂಕ್ರಾಂತಿ) ಹಬ್ಬವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ 26ನೇ ವರ್ಷದ ಆಚರಣೆಯ ಅಂಗವಾಗಿ ಬೆಳಿಗ್ಗೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು, ಯುವತಿಯರು ಪೂರ್ಣಕುಂಭ ಕಳಸವನ್ನು ಇರಿಸಿ ವಿಶೇಷ ಪೂಜೆಯನ್ನು ನೇರವೇರಿಸಿದರು. ನಂತರ ದೇವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮದುರಮ್ಮ ಬಡಾವಣೆಯ ವೃಕ್ಷೋದ್ಭವ ದೇವಾಲಯದಿಂದ ನಾದಸ್ವರದೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ಮುಖ್ಯ ಬೀದಿಗಳ ಮೂಲಕ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಾಲಯದ ಆವರಣದಲ್ಲಿ ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಧ್ಯಾಹ್ನ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ…






