ಲೇಖಕ: admin

ಮಡಿಕೇರಿ ಜ.18 : 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಭೇತಿ ಕೇಂದ್ರದ ಮೂಲಕ ಜೆಇಇ(ಅಡ್ವಾನ್ಸ್ ಅಂಡ್ ಮೈನ್ಸ್) ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜನವರಿ, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸ್ಶೆಟ್ www.sw.kar.nic.in ನಲ್ಲಿ ನೋಡಬಹುದು. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ರಾಜ್ಯದ ಅನುಸೂಚಿತ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿರತಕ್ಕದ್ದು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 300 ಕ್ಕಿಂತ ಹೆಚ್ಚು ಅಂಕ ಪಡೆದಿರತಕ್ಕದ್ದು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.5 ಲಕ್ಷಗಳ ಮಿತಿಯಲ್ಲಿರತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ…

Read More

ಮಡಿಕೇರಿ ಜ.18 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನ ಆಹ್ವಾನಿಸಲಾಗಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ., ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಕಳುಹಿಸಬಹುದಾಗಿದೆ. ಲೇಖನಗಳು ಕೈಬರಹವಾದರೆ ಒಂದೇ ಮಗ್ಗುಲಲ್ಲಿ ಮೂರು ಪುಟ, ಡಿಟಿಪಿ ಆದರೆ ಎರಡು ಪುಟಗಳು, ಕವನಗಳು 20 ಸಾಲುಗಳನ್ನು ಮೀರಬಾರದು. ಲೇಖನಗಳನ್ನು ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ಸಾಮಥ್ರ್ಯ ಸೌಧ ಭವನ, ಫೀ.ಮಾ.ಕಾರ್ಯಪ್ಪ ವೃತ್ತ, ಮಡಿಕೇರಿ, ಇಲ್ಲಿಗೆ, ಅಥವಾ kudekalsanthu@gmail.com ಗೆ ಇಮೇಲ್ ಮುಖಾಂತರ, ಇಲ್ಲವೇ 8672110948, 9535615759 ಈ ಸಂಖ್ಯೆಗಳಿಗೆ ವ್ಯಾಟ್ಸಪ್ ಮಾಡಬಹುದಾಗಿದೆ. ಲೇಖನಗಳನ್ನು ಕಳುಹಿಸಲು ಜನವರಿ, 25 ಕೊನೆಯ ದಿನವಾಗಿದೆ. ಸಂಪಾದಕೀಯ ಮಂಡಳಿಯಲ್ಲಿ ಆಯ್ಕೆಯಾಗುವ ಅರ್ಹ ಲೇಖನಗಳನ್ನು…

Read More

ಮಡಿಕೇರಿ ಜ.17 : ಭಾರತ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಉಚಿತವಾಗಿ ಎರಡನೆಯ ವರಸೆಯ ಹಾಗೂ ಮುಂಜಾಗ್ರತಾ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಕೋವಿಡ್ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎರಡನೇ ವರಸೆಯ ಒಟ್ಟು 10,707 ಫಲಾನುಭವಿಗಳು ಹಾಗೂ ಎರಡನೇ ವರಸೆಯ ಕೋವಿಡ್ ಲಸಿಕೆಯನ್ನು ಪಡೆದು 6 ತಿಂಗಳು ಪೂರೈಸಿರುವ 18 ವರ್ಷ ಮೇಲ್ಪಟ್ಟ ಒಟ್ಟು 3,14,296 ಫಲಾನುಭವಿಗಳು ಮುಂಜಾಗ್ರತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದ್ದು, ಈ ಎಲ್ಲಾ ಅರ್ಹರು ತಮ್ಮ ಸಮೀಪದ ಆರೋಗ್ಯ ಕೇಂದ್ರದಲ್ಲಿ ಪ್ರತಿ ದಿನ ನಡೆಯುವ ಲಸಿಕಾ ಶಿಬಿರದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆಯುವಂತೆ ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್…

Read More

ಮಡಿಕೇರಿ ಜ.17 : ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವ ಸಾಮಾಗ್ರಿಗಳಿಗೆ ಮಾರುಕಟ್ಟೆ ದರ ನಿಗದಿ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಭೆ, ಸಮಾರಂಭಕ್ಕೆ ಬಳಸುವ ಫೆಂಡಾಲ್, ಚೇರ್, ಶಾಮಿಯಾನ, ಹ್ಯಾಂಡ್ ಬಿಲ್, ಪೋಸ್ಟರ್, ಜಾಹೀರಾತು, ಫಲಕಗಳು, ವಿಡಿಯೋ, ಆಡಿಯೋ ಪ್ರಚಾರ ಮತ್ತಿತರ ವೆಚ್ಚಪಟ್ಟಿ ಸಂಬಂಧಿಸಿದಂತೆ ಚರ್ಚೆ ನಡೆಯಿತು. ಒಬ್ಬ ಅಭ್ಯರ್ಥಿ ರೂ.40 ಲಕ್ಷ ವರೆಗೆ ವೆಚ್ಚ ಮಾಡಬಹುದಾಗಿದ್ದು, ಚುನಾವಣಾ ಸಂದರ್ಭದಲ್ಲಿ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ನೀಡಲಾಗಿರುವ ಪಟ್ಟಿ ಸಂಬಂಧಿಸಿದಂತೆ ಪರಿಶೀಲಿಸಿ ತಿದ್ದುಪಡಿ ಇದ್ದಲ್ಲಿ ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಸಂದರ್ಭದಲ್ಲಿನ ವೆಚ್ಚಪಟ್ಟಿ, ಹಾಗೆಯೇ ಹತ್ತಿರದ ಜಿಲ್ಲೆಗಳಲ್ಲಿ ವೆಚ್ಚಪಟ್ಟಿ ಯಾವ ರೀತಿ ಇದೆ ಎಂದು ಪರಿಶೀಲಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ…

Read More

ವಿರಾಜಪೇಟೆ ಜ.17 : ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 9ನೇ ಸಾಹಿತ್ಯ ಸಮ್ಮೇಳನಕ್ಕೆ ಸಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ವೈಧ್ಯರು, ಖ್ಯಾತ ಪಕ್ಷಿ ತಜ್ಞರು ಸಾಹಿತಿಗಳಾದ ವಿರಾಜಪೇಟೆಯ ಡಾ. ಎಸ್.ವಿ.ನರಸಿಂಹನ್ ಅವರಿಗೆ ಕಸಾಪದಿಂದ ಅಧಿಕೃತ ಆಹ್ವಾನ ನೀಡಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ನೇತೃತ್ವದಲ್ಲಿ ಡಾ. ಎಸ್.ವಿ.ನರಸಿಂಹನ್ ಅವರ ನಿವಾಸದಲ್ಲಿ ಆಹ್ವಾನ ನೀಡಲಾಯಿತು. ಈ ಸಂದರ್ಭ ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಟೋಮಿ ಥೋಮಸ್, ಸಮಿತಿ ಸದಸ್ಯರಾದ ಸಾಹಿತಿಗಳಾದ ರಜಿತಾ ಕಾರ್ಯಪ್ಪ, ಉಷಾ ಪ್ರೀತಮ್ ಹಾಜರಿದ್ದರು. ಆಹ್ವಾನ ಸ್ವೀಕರಿಸಿದ ನರಸಿಂಹನ್ ಅವರು ಸಂತಸ ವ್ಯಕ್ತಪಡಿಸಿದ್ದು, ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಸಮಸ್ತ ಸಾಹಿತ್ಯಸಕ್ತರಿಗೆ ಹಾಗೂ ತಾಲೂಕಿನ ಎಲ್ಲ ಸಾಹಿತ್ಯಾಭಿಮಾನಿಗಳಿಗೆ ವಂದನೆ ಸಲ್ಲಿಸಿದರು.

Read More

ಕುಶಾಲನಗರ ಜ.16 : ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ಕಚೇರಿಯನ್ನು ಸ್ಥಳೀಯ ಹಿಲಾಲ್ ಮಸೀದಿ ಧರ್ಮಗುರು ಸೂಫಿದಾರಿಮಿ ಉದ್ಘಾಟಿಸಿದರು. ಕುಶಾಲನಗರದ ದಂಡಿನಪೇಟೆಯಲ್ಲಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯದ ಹಿತಕ್ಕಾಗಿ ಒಕ್ಕೂಟ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು. ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷಅಬ್ದುಲ್ ಕರೀಂ ಮಾತನಾಡಿ, ತಾಲ್ಲೂಕು ಮುಸ್ಲಿಂ ಒಕ್ಕೂಟ ಸ್ಥಾಪನೆಯಾಗಿ ಆರು ವರ್ಷಗಳು ಕಳೆದಿದೆ. ಒಕ್ಕೂಟವು ಸಮುದಾಯದಲ್ಲಿ ಅನ್ಯಾಯಕ್ಕೊಳಗದವರ, ದೌರ್ಜನ್ಯಕ್ಕೊಳಗಾದವರ ಪರ ನಿಂತು ಹೋರಾಟ ನಡೆಸುತ್ತಾ ಬಂದಿದೆ. ಮುಂದೆಯೂ ಸಮುದಾಯ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದರು. ಈ ಸಂದರ್ಭ ಜಾಮಿಯಾ ಮಸೀದಿ ಅಧ್ಯಕ್ಷರಾದ ಮುಜೀಬುರ್ ರಹಮಾನ್, ಹಿಲಾಲ್ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಅಬ್ದುಲ್ ರಹಮಾನ್, ರಶೀದ್ ಅಹ್ಮದ್, ತಾಲ್ಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಇದ್ದರು.

Read More

ಕುಶಾಲನಗರ ಜ.16 : ಕೂಡುಮಂಗಳೂರು ಗ್ರಾ.ಪಂ ಎರಡನೇ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತು  ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧಿನ್ ಪರಿಶೀಲನೆ ನಡೆಸಿದರು. ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಸಾರ್ವಜನಿಕ ಕಾರ್ಯ ಇಲಾಖೆ ವತಿಯಿಂದ ಅಂದಾಜು 9.8 ಲಕ್ಷ ರೂ.ಗಳ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

Read More

ಕುಶಾಲನಗರ ಜ.17 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಕುಶಾಲನಗರದ ಬ್ಯಾಂಕ್ ಆಫ್ ಬರೋಡ ಸಂಯುಕ್ತಾಶ್ರಯದಲ್ಲಿ ಕುಶಾಲನಗರದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಅಭಾಕಾರ್ಡ್ ನೊಂದಣಿ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಶಿಬಿರವನ್ನು ಚೇಂಬರ್ ಆಫ್‍ಕಾಮರ್ಸ್ ಅಧ್ಯಕ್ಷ ಅಮೃತ್‍ರಾಜ್ ಉದ್ಘಾಟಿಸಿದರು. ಶಿಬಿರದಲ್ಲಿ ರಕ್ತದೊತ್ತಡ, ಡಯಾಬಿಟಿಸ್, ಮತ್ತಿತರ ಸಣ್ಣಪುಟ್ಟ ಕಾಯಿಲೆಗಳ ಬಗ್ಗೆ ಪರೀಕ್ಷೆ ನಡೆದುಚಿಕಿತ್ಸೆ ನೀಡಲಾಯಿತು. ಪಿಎಂಜೆವೈ, ಅಭಾಕಾರ್ಡ್ ನೊಂದಣಿಕಾರ್ಯ ಹಮ್ಮಿಕೊಳ್ಳಲಾಯಿತು. ತಾಲೂಕು ಆರೋಗ್ಯ ಅಧಿಕಾರಿ ಶಾಂತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಪ್ರಯೋಜನವನ್ನು ಪಡೆಯುವ ಮೂಲಕ ತಮ್ಮ ಆರೋಗ್ಯದ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಕೋರಿದರು. ಈ ಸಂದರ್ಭ ಡಾ.ತೇಜಸ್ವಿನಿ, ಡಾ. ನಿಜಾಮುದ್ದಿನ್, ಡಾ.ನಂದಿನಿ, ಬ್ಯಾಂಕ್‍ಆಫ್ ಬರೋಡ ವ್ಯವಸ್ಥಾಪಕರಾದ ಸತೀಶ್, ಅಶೋಕ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ರಾಣಿ ಇದ್ದರು.

Read More

ವಿರಾಜಪೇಟೆ ಜ.17 ಕೊಡಗಿನಾದ್ಯಂತ ಘಂಟೆ ಕಳ್ಳತನ ಮಾಡುವುದರ ಮೂಲಕ ದೇವಸ್ಥಾನಗಳಲ್ಲಿ ಘಂಟೆಯ ಸದ್ದು ಕೇಳದಂತೆ ಮಾಡಿದ ಘಂಟೆ ಕಳ್ಳರನ್ನು ಹಿಡಿದು ಎಡೆಮುರಿ ಕಟ್ಟಿದ ಪೊಲೀಸರು ಆರೋಪಿಗಳನ್ನು ಹಳ್ಳಿಗಟ್ಟು ಭದ್ರಕಾಳಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭದ್ರತೆಯೊಂದಿಗೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಲಾಯಿತು. ದೇವರ ಶಕ್ತಿ ಎಂಬಂತೆ ಹಳ್ಳಿಗಟ್ಟು ಭದ್ರಕಾಳಿ ದೇವಸ್ಥಾನದ ಘಂಟೆ ಕಳ್ಳತನವೇ ಜಿಲ್ಲೆಯ ಕೊನೆಯ ಕಳ್ಳತನವಾಗಿತ್ತು ಎನ್ನುವುದು ಗಮನಾರ್ಹ. ಇದಕ್ಕೂ ಮುಂಚೆ ಕೂಡ ಹಲವಾರು ಕಡೆ ಹುಂಡಿ ಕಳ್ಳತನ ಮಾಡಿದ ಕಳ್ಳರು ಇದೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನ ಮಾಡಲು ಪ್ರಯತ್ನಿಸಿ ವಿಫಲರಾಗಿ 24 ಗಂಟೆಯೊಳಗೆ ತಾವಾಗಿಯೇ ಪೊಲೀಸ್ ಠಾಣೆಗೆ ಹೋಗಿ ಸಿಕ್ಕಿಹಾಕಿಕೊಂಡಿದ್ದು ವಿಶೇಷ.

Read More

ಮಡಿಕೇರಿ ಜ.19 :  ಭಾರತ ಸರ್ಕಾರ,  ನೆಹರು ಯುವ ಕೇಂದ್ರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಆದರ್ಶ ಮಹಿಳಾ ಸಮಾಜ  ಸಂಯುಕ್ತಾಶ್ರಯದಲ್ಲಿ ಯುವ ಮುಂದಾಳತ್ವದ ಮತ್ತು ಸಮುದಾಯ ಅಭಿವೃದ್ಧಿ ತರಬೇತಿ  ಕಾರ್ಯಕ್ರಮ  ಬಲ್ಲಮಾವಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ನೇತಾಜಿ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಉದ್ಘಾಟಿಸಿದರು.  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ  75 ಶಿಬಿರಾರ್ಥಿಗಳು ಮೂರು ದಿನದ ತರಬೇತಿಯ ಪ್ರಯೋಜನವನ್ನು ಯಶಸ್ವಿಗೊಳಿಸಿದರು.

Read More