ವಿರಾಜಪೇಟೆ ಜ.14 : ಸಮಾಜವು ವೈದ್ಯರ ಸೇವೆಯು ದೇವರ ಸೇವೆ ಎಂದು ನಂಬಿಕೊಂಡು ಸಾಗುತ್ತಿದೆ. ಸಮಾಜಕ್ಕೆ ಉತ್ತಮ ಸೇವೆ ಕಲ್ಪಿಸುವುದು ಸಾಮಾನ್ಯ ವೈದ್ಯನ ಬಹುಮುಖ್ಯ ಕರ್ತವ್ಯವಾಗಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಎಂ.ಕೆ.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷ ಪೂರೈಸಿದ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪತ್ರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆದುಕೊಳ್ಳುವ ಸುದಿನವು ಸಾಮಾಜಿಕ ಜೀವನದ ಮೈಲಿಗಲ್ಲು. ಈ ನಿಟ್ಟಿನಲ್ಲಿ ಕೊಡಗು ದಂತ ಮಹಾವಿದ್ಯಾಲಯವು ಗುರುಕುಲದ ಮಾದರಿಯಲ್ಲಿ ಮೌಲ್ಯಯುತವಾದ ಶಿಕ್ಷಣವನ್ನು ಒದಗಿಸಿದೆ. ವೈದ್ಯನಾದವನು ರೋಗಿಗಳನ್ನು ಹಸನ್ಮುಖಿಯಾಗಿ ನಗುಮುಖದೊಂದಿಗೆ ಸ್ವಾಗತಿಸಬೇಕು ಹಾಗೂ ರೋಗಿಯ ಚಿಕಿತ್ಸಾವಿಧಿಗಳನ್ನು ಅನುಸರಿಸಬೇಕು. ಬೃಹತ್ ಸಮಾಜವು ನಮಗೆ ಹಲವು ಉತ್ತಮ ವ್ಯಾವಹಾರಿಕ, ಆರೋಗ್ಯಕರ, ಹಿತವಾದ ಸ್ವಸ್ಥ ಪ್ರಕೃತಿಕ ಜಗತ್ತನ್ನು ಕಲ್ಪಿಸಿದೆ. ಇಂತಹ ಸಮಾಜಕ್ಕೆ ದ್ರೋಹಬಗೆಯದೆ ಉತ್ತಮ ಸೇವೆಯನ್ನು ನೀಡುವುದರೊಂದಿಗೆ…
ಲೇಖಕ: admin
ಮಡಿಕೇರಿ ಜ.14 : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯಲ್ಲಿ ಜ.28 ರಂದು ನಡೆಯುವ 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ಲು ನವೀನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧ್ಯಕ್ಷ ಕೇಶವಕಾಮತ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಡಾ.ವಿಜಯ್ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಪುದಿಯನೆರವನ ರೇವತಿ ರಮೇಶ್, ಪುದಿಯನೆರವನ ರಿಶಿತ್ ಮಾದಯ್ಯ, ಮಡಿಕೇರಿ ತಾಲ್ಲೂಕು ಗೌರವ ಕಾರ್ಯದರ್ಶಿ ಕೆ.ಯು.ರಂಜಿತ್, ತುಳಸಿ ಮೋಹನ್, ಸಂಘಟನಾ ಕಾರ್ಯದರ್ಶಿ ತಳೂರು ದಿನೇಶ್, ಸಮ್ಮೇಳನದ ಮೇಲುಸ್ತುವಾರಿ ಸದಸ್ಯ ಚಂದ್ರಶೇಖರ್, ನಿರ್ದೇಶಕರುಗಳಾದ ಶ್ರೀಧರ್, ಹರೀಶ್ ಸರಳಾಯ, ಮಂಜುನಾಥ್, ಅಬ್ದುಲ್ಲ, ಪ್ರಕಾಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ::: ಡಾ.ವಿಜಯ್ ಪೂಣಚ್ಚ ಸಾಧನೆ ::: 26 ವರ್ಷಗಳಿಂದ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕ. ಮಂಗಳೂರು ವಿಶ್ವವಿದ್ಯಾಲಯದಲ್ಲಿ…
ವಿರಾಜಪೇಟೆ ಜ.14 : ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲು ಯತ್ನಿಸಿದ ಇಬ್ಬರನ್ನು ಪತ್ತೆ ಹಚ್ಚಿರುವ ಸ್ಥಳೀಯ ಪೊಲೀಸರು, ಒಂದು ಕರು ಸೇರಿದಂತೆ 7 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಪೆರುಂಬಾಡಿ ಗ್ರಾಮದಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಕೈಯರಾಳಂ ಗ್ರಾಮದ ನಿವಾಸಿ ಎನ್.ಪಿ.ಸೈನುದ್ದೀನ್(38) ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಕಿತ್ತೂರು ಗ್ರಾಮದ ಪರ್ವಿಜ್ ಬಾಷ (35) ಬಂಧಿತ ವ್ಯಕ್ತಿಗಳು. ಪಿರಿಯಾಪಟ್ಟಣದಿಂದ ಲಾರಿಯೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಗೋಣಿಕೊಪ್ಪಲು, ಪೆರುಂಬಾಡಿ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಆರೋಪಿಗಳು ತೆರಳುತ್ತಿದ್ದರು. ಪೆರುಂಬಾಡಿ ಪೊಲೀಸು ತಪಾಸಣೆ ಕೇಂದ್ರದಲ್ಲಿ ಲಾರಿ ಪರಿಶೀಲನೆ ಮಾಡಿದಾಗ ಗೋವುಗಳ ಅಕ್ರಮ ಸಾಗಾಟ ಪತ್ತೆಯಾಗಿತ್ತು. ಬಂಧಿತ ಆರೋಪಿಗಳ ವಿರುದ್ಧ ವಿರಾಜಪೇಟೆ ನಗರ ಠಾಣಾ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾಧಿಕಾರಿ ಶ್ರೀಧರ್ ಮತ್ತು ಎಎಸ್ಐನಾಣಿಯಪ್ಪ ಹಾಗೂ ಸಿಬ್ಬಂದಿ ಸತೀಶ್, ಸುಬ್ರಮಣಿ, ಮಲ್ಲಿಕಾರ್ಜುನ ಮತ್ತು ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜ.14 : ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ನಗರದ ಸಾಯಿ ಹಾಕಿ ಟರ್ಫ್ ಕ್ರೀಡಾ ಮೈದಾನದಲ್ಲಿ ಯೋಗಥಾನ್ ಪೂರ್ವಾಭ್ಯಾಸ ನಡೆಯಿತು.
ಮಡಿಕೇರಿ ಜ.14 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಬಗ್ಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ, 18 ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಜನವರಿ, 27 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.14 : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಪಣೀಂದ್ರ ಅವರು ಜನವರಿ, 21 ಮತ್ತು 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.21 ರಂದು ಬೆಳಗ್ಗೆ 10.30 ರಿಂದ 1.30 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ. ಹಾಗೆಯೇ ಜನವರಿ, 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರು ಮಾಡಿಕೊಡಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ…
ಮಡಿಕೇರಿ ಜ.14 : ಪ್ರಸಕ್ತ(2022-23) ಸಾಲಿನಲ್ಲಿ ಪಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ, ನೀಟ್ ಲಾಂಗ್ ಟರ್ಮ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಜನವರಿ, 31 ರೊಳಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 08272-22553, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.14 : ನಿವೃತ್ತ ರಾಜ್ಯ ಸರ್ಕಾರಿ ನೌಕರರ ‘ಪಿಂಚಣಿ ಅದಾಲತ್’ ಜನವರಿ, 24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕುಂದು ಕೊರತೆಗಳೇನಾದರೂ ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಜನವರಿ, 20 ರೊಳಗೆ ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ, ಕೊಠಡಿ ಸಂಖ್ಯೆ 06, ಜಿಲ್ಲಾಡಳಿತ ಭವನ, ಮಡಿಕೇರಿ ಅವರಿಗೆ ಸಲ್ಲಿಸಲು ಹಾಗೂ ಅದಾಲತ್ನಲ್ಲಿ ಭಾಗವಹಿಸುವಂತೆ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಜ.14 : ಕುಶಲ ಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ. 15 ಸಾವಿರಗಳ ವರೆಗೆ ಸಹಾಯಧನ ನೀಡಲಾಗುವುದು. ಕುಶಲಕರ್ಮಿಯು 18 ವರ್ಷ ವಯಸ್ಸಾಗಿರಬೇಕು, ಹಾಗೂ ಇಲಾಖೆ ನಿಗಧಿ ಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂಕ್ ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) ಪಡೆಯಬೇಕು. ಅಭ್ಯರ್ಥಿಯು ನಿಗಧಿ ಪಡಿಸಿದ ಅರ್ಜಿಯ ಜೊತೆಗೆ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ, ಕುಶಲಕರ್ಮಿ ವೃತ್ತಿಯ ಬಗ್ಗೆ ಧೃಡೀಕರಣ ಪತ್ರಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಜನವರಿ, 21 ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯನ್ನು (08272-228431/…
ಮಡಿಕೇರಿ ಜ.14 : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗೆ ಜ.16 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ. ಇಂಗ್ಲೀಷ್ ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ, ಸಂಖ್ಯಾ ಶಾಸ್ತ್ರ ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆಯವರೆಗೆ ಹಾಗೂ ಕೊಡವ ಭಾಷೆ ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಹೊಂದಿದ್ದು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳು), ಯುಜಿಸಿ, ಎನ್ಇಟಿ/ ಎಸ್ಎಲ್ಇಟಿ ಉತ್ತೀರ್ಣತೆ, ಎಂ.ಫಿಲ್/ ಪಿಎಚ್ಡಿ ಪದವಿ ಪ್ರಮಾಣಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅವಶ್ಯಕತೆಗೆ…






