ಲೇಖಕ: admin

ಮಡಿಕೇರಿ ಜ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆ.3 ರಿಂದ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಗಿಡಗಳನ್ನು ಪಾತಿಯಲ್ಲಿ ಹಾಗೂ ಕುಂದಗಳಲ್ಲಿ ನಾಟಿ ಮಾಡಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುವುದು. ಫಲಪುಷ್ಪ ಪ್ರದರ್ಶನದ ಮುಖ್ಯ ಆರ್ಕಷಣೆಯಾಗಿ ವಿವಿಧ ಹೂಗಳಿಂದ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕೆ ಇಡಲಾಗುವುದು ಹಾಗೂ ಅಲಂಕಾರಿಕ ವಿವಿಧ ಹೂ ಕುಂದಗಳ ಪ್ರದರ್ಶನ, ಬೋನ್ ಸಾಯ್ ಪ್ರದರ್ಶನ, ತರಕಾರಿ ಕೆತ್ತನೆ ಪ್ರದರ್ಶಿಸಲಾಗುವುದು. ಫಲಪುಷ್ಪ ಪ್ರದರ್ಶನ ಜೊತೆಗೆ ವೈನ್ ಉತ್ಸವ (Wine Festival) ಆಯೋಜಿಸಲಾಗುವುದು ವೈನ್ ಉತ್ಸವದಲ್ಲಿ ವಿವಿಧ ಹಣ್ಣುಗಳಿಂದ ತಯಾರಿಸಿದ ವೈನ್…

Read More

ಕುಶಾಲನಗರ, ಜ.14: ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪದವಿ ಕಾಲೇಜಿನಲ್ಲಿ ಅಂತರ ಜಿಲ್ಲಾ ಮಟ್ಟದ ಪಿಯು ಕಾಲೇಜಿನ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಫಾ.ಜೋಸೇಫ್ ವರ್ಗಿಸ್ ಪಂದ್ಯಾವಳಿಗೆ ಚಾಲನೆ ನೀಡಿದರು. ಪಂದ್ಯಾವಳಿಯಲ್ಲಿ ಒಟ್ಟು 15 ತಂಡಗಳು ಪಾಲ್ಗೊಂಡಿದ್ದವು. ವಾಲಿಬಾಲ್ ಪಂದ್ಯಾವಳಿಯಲ್ಲಿ ಅರಕಲಗೂಡು ಬಿಜಿಎಸ್ ತಂಡ ಪ್ರಥಮ, ದ್ವೀತಿಯ ಸ್ಥಾನವನ್ನು ಹುಣಸೂರು ಟಾಲೆಂಟ್ ಪಿಯು ಕಾಲೇಜ್ ಮತ್ತು ತೃತೀಯ ಸ್ಥಾನವನ್ನು ಪಾಲಿಬೆಟ್ಟ ಸರ್ಕಾರಿ ಪಿಯು ಕಾಲೇಜು ಪಡೆದುಕೊಂಡಿತ್ತು. ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ ಸೆಂಟ್ ಮೇರಿಸ್ ಪ್ರಥಮ, ನೆಲ್ಲಿಹುದಿಕೇರಿ ಸರ್ಕಾರಿ ಪಿಯು ಕಾಲೇಜು ದ್ವಿತೀಯ ಸ್ಥಾನ ಮತ್ತು ತೃತೀಯ ಸ್ಥಾನವನ್ನು ಕೊಪ್ಪ ಭಾರತ್ ಮಾತಾ ಪಿಯು ಕಾಲೇಜು ತನ್ನದಾಗಿಸಿಕೊಂಡಿತು. ಸಮಾರೋಪ ಸಮಾರಂಭದಲ್ಲಿ ಉಪಪ್ರಾಂಶುಪಾಲರಾದ ಫಾ.ಅಭಿನ್ ಬೇಬಿ, ಉದ್ಯಮಿ ಬಾಷಾ, ಉಲ್ಲಾಸ್ ಕೃಷ್ಣ, ಸೆಂಟ್ ಮೇರಿಸ್ ಕಾಲೇಜಿನ ಆಡಳಿತಾಧಿಕಾರಿ ಅರುಲ್ ಸೆಲ್ವಿ, ಲೋಕೋಪಯೋಗಿ ಅಧಿಕಾರಿ ಸೈಜನ್ ಕೆ.ಪೀಟರ್, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಂಚಾಲಕರಾದ…

Read More

ಮಡಿಕೇರಿ ಜ.13 : ಕೊಡಗು ಜಿಲ್ಲೆಯಲ್ಲಿರುವ ತುಳುನಾಡಿನ ದೈವಸ್ಥಾನದ ಹೆಸರು, ಊರು, ದೈವ ನರ್ತಕರು, ದೈವ ಆರಾಧಕರು ಮತ್ತು ದೈವ ಸಂಪ್ರದಾಯದ ಮಾಹಿತಿಯನ್ನೊಳಗೊಂಡ ದಾಖಲೀಕರಣದ ಪುಸ್ತಕವನ್ನು ಹೊರ ತರುವ ಯೋಜನೆಯನ್ನು ರೂಪಿಸುವ ಅಗತ್ಯವಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ. ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ, ದೈವದ ಬಗ್ಗೆ ಅಪಹಾಸ್ಯ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಶಾಲಾ, ಕಾಲೇಜು ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲಿ ದೈವದ ವೇಷಭೂಷಣ ತೊಟ್ಟು ಪಾತ್ರ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದರು. ಸರಕಾರದ ಆದೇಶದಂತೆ ದೈವ…

Read More

ಮಡಿಕೇರಿ ಜ.13 : ಪ್ರಸಕ್ತ ಸಾಲಿನ 15ನೇ ಹಣಕಾಸು ಆಯೋಗದಡಿ ಸುಮಾರು 148 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಮತ್ತು ನಗರಸಭಾ ನಿಧಿ ಆಯೋಗ ಅನುದಾನದಡಿ ಸುಮಾರು 111.72 ಲಕ್ಷ ರೂ. ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ವಾರ್ಡ್ ನಂಬರ್ 2 ಭಗವತಿ ನಗರದ ಹೌಸಿಂಗ್ ಬೋರ್ಡ್‍ನಲ್ಲಿ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.10 ರಲ್ಲಿ ಕಾಲೇಜು ರಸ್ತೆಯ ಐಡಿಬಿಐ ಬ್ಯಾಂಕ್ ಹತ್ತಿರ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.16 ರಲ್ಲಿ ಕುಮಾರವಿಲಾಸ ರಸ್ತೆಯ ಮೈಲಾರಿ ಹೋಟೆಲ್ ಮುಂಭಾಗ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.1 ರಲ್ಲಿ ವಿದ್ಯಾನಗರದ ಹೌಸಿಂಗ್ ಬೋರ್ಡ್‍ನಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ವಾರ್ಡ್ ನಂಬರ್ 8 ರಲ್ಲಿ ಮಾರುಕಟ್ಟೆ ಬಳಿ ರಾಣಿಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಪಾದಚಾರಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.6 ರ ಕನ್ನಂಡ ಬಾಣೆ ಪಂಪ್‍ಹೌಸ್ ಹಿಂಭಾಗ ಫುಟ್‍ಪಾತ್ ನಿರ್ಮಾಣ ಕಾಮಗಾರಿ, ವಾರ್ಡ್ ನಂ.14 ರಲ್ಲಿ…

Read More

ಮಡಿಕೇರಿ ಜ.13 : ಅರಣ್ಯ ಇಲಾಖೆಯಿಂದ ಹಿಂಪಡೆಯುವ 2 ಲಕ್ಷ ಏಕರೆ ಜಾಗವನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತರು, ಆದಿವಾಸಿಗಳು ಹಾಗೂ ಕೃಷಿ ಕಾರ್ಮಿಕರಿಗೆ ಹಂಚಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯ ಈಡೇರಿಗಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ದಲಿತರು, ಆದಿವಾಸಿಗಳು ತಲತಲಾಂತರದಿಂದ ಸ್ವಂತ ಭೂಮಿ ಇಲ್ಲದೆ, ಸ್ವಂತ ಸೂರಿಲ್ಲದೆ ಉಳ್ಳವರ ಲೈನ್ ಮನೆಗಳಲ್ಲಿ, ಅರಣ್ಯದಲ್ಲಿ ಟಾರ್ಪಲ್ ಗುಡಿಸಲು ನಿರ್ಮಿಸಿಕೊಂಡು ನರಕಯಾತೆನಲ್ಲಿ ಬದುಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 2 ಲಕ್ಷ ಏಕರೆ ಭೂಮಿಯನ್ನು ಅರಣ್ಯದಿಂದ ಹಿಂಪಡೆದು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತರಿಗೆ, ಆದಿವಾಸಿ ಕೃಷಿ ಕಾರ್ಮಿಕ ನಿರಾಶ್ರಿತರಿಗೆ ತಲಾ 3 ಏಕರೆಯಂತೆ ಹಂಚಬೇಕು, ಎಲ್ಲಾ ಲೈನ್ ಮನೆ ನಿವಾಸಿಗಳಿಗೆÉ…

Read More

ಮಡಿಕೇರಿ ಜ.13 : ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಇದೇ ಜ.25 ರ ಒಳಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜ.31 ರಂದು ರಾಜ್ಯವ್ಯಾಪಿ ನಮ್ಮೆಲ್ಲ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ‘ವಿಧಾನಸೌಧ’ ಮುತ್ತಿಗೆ ಮತ್ತು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿರುವುದಾಗಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ. ಈರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರನ್ನು ಮಲತಾಯಿ ಧೋರಣೆಯಿಂದ ನಡೆಸಿಕೊಳ್ಳುತ್ತಿದ್ದು, ಈ ಬಾರಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ನೀರು ಸರಬರಾಜು, ಡಾಟಾ ಆಪರೇಟರ್‍ಗಳು, ಸ್ವಚ್ಛತಾ ಕಾರ್ಯದಲ್ಲಿ ನಿರತ ಕಾರ್ಮಿಕರು ತಮ್ಮ ಕೆಲಸವನ್ನು ಪ್ರತಿಭಟನೆಯ ಸಂದರ್ಭ ಸ್ಥಗಿತಗೊಳಿಸಲಿದ್ದಾರೆ. ಸಾರ್ವಜನಿಕರು ನಮ್ಮ ಸಂಕಷ್ಟಗಳನ್ನು ಅರಿತು ಸಹಕರಿಸುವಂತೆ ಮನವಿ ಮಾಡಿಕೊಂಡರು. ಪೌರಕಾರ್ಮಿಕರ ನೇರ ನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ, ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜುದಾರರು, ಡಾಟಾ ಅಪರೇಟರ್ಸ್, ಸಹಾಯಕರು, ಲೋಡರ್ಸ್, ಕ್ಲೀನರ್ಸ್,…

Read More

ಮಡಿಕೇರಿ ಜ.13 : ಕಾಡಾನೆ ಸೆರೆ ಕಾರ್ಯಾಚರಣೆಯ ಸಂದರ್ಭ ಕಾಡಾನೆಯೊಂದು ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟವೊಂದರಲ್ಲಿ ಸೆರೆ ಸಿಕ್ಕ 20 ವರ್ಷದ ಗಂಡಾನೆಯನ್ನು ಸಾಕಾನೆಗಳ ಸಹಾಯದಿಂದ ಸ್ಥಳಾಂತರಿಸುವ ಸಂದರ್ಭ ಈ ಘಟನೆ ನಡೆದಿದೆ. ಅತ್ತೂರು ನಲ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದರಿಂದ ಕಳೆದ 3 ದಿನಗಳಿಂದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ದುಬಾರೆ ಸಾಕಾನೆ ಶಿಬಿರದ ಪ್ರಶಾಂತ್, ಹರ್ಷ, ಸುಗ್ರೀವ, ಶ್ರೀರಾಮ ಹಾಗೂ ಲಕ್ಷ್ಮಣ ಎಂಬ 5 ಸಾಕಾನೆಗಳ ಸಹಕಾರ ಪಡೆಯಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರಂಜನ್, ಇಲಾಖೆಯ ವೈದ್ಯರಾದ ಡಾ.ಚಿಟ್ಟಿಯಪ್ಪ ಮತ್ತು ಡಾ. ರಮೇಶ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಸೆರೆ ಹಿಡಿದಿದ್ದರು. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಮೋದೂರು ತೋಟವೊಂದರಲ್ಲಿ ಪುಂಡಾನೆ ಬೀಡು ಬಿಟ್ಟಿರುವುದನ್ನು ಕಾರ್ಯಾಚರಣೆ ತಂಡ ಗುರುತಿಸಿತು. ಬಳಿಕ…

Read More

ಸುಂಟಿಕೊಪ್ಪ, ಜ.13: ಸ್ವಸ್ಥ ವಿಶೇಷ ಶಿಕ್ಷಣ ಪುನರ್ವಸತಿ ಕೇಂದ್ರದ 10ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಚೇತನ ಮಕ್ಕಳು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು. ಭಾರತದ ಏಕತೆಯನ್ನು ಸಾರುವ ವೈವಿಧ್ಯಮಯ ನೃತ್ಯಗಳನ್ನು ತಾಳೆ ಮದಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಪೋಷಕರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Read More

ಮಡಿಕೇರಿ ಜ.13 :  ಬೇಂಗೂರು ಗ್ರಾ.ಪಂ  ವ್ಯಾಪ್ತಿಯ ಬಿ.ಬಾಡಗ ಗ್ರಾಮದಲ್ಲಿ 2.46 ಕೋಟಿ ವೆಚ್ಚ ಮತ್ತು ಕೊಳಗದಾಳು ಗ್ರಾಮದಲ್ಲಿ 2.45 ಕೋಟಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗೆ ಶಾಸಕ  ಕೆ.ಜಿ.ಬೋಪಯ್ಯ  ಭೂಮಿ ಪೂಜೆ ಮಾಡಿದರು. ಬಳಿಕ ಬಿ.ಬಾಡಗ ಮತ್ತು ಬಲ್ಲಮಾವಟ್ಟಿ ಗ್ರಾಮದ ಸಂಪರ್ಕ ಸೇತುವೆ ಕಾಮಗಾರಿ ಪರಿಶೀಲಿಸಿದರು.

Read More

ಸುಂಟಿಕೊಪ್ಪ,ಜ.13: ಶ್ರದ್ಧಾಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಕಾನ್‍ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಚಗೊಳಿಸಿದರು. ನಂತರ ದೇವಾಲಯದ ಒಳಭಾಗವನ್ನು ಶುಚಿಗೊಳಿಸಲಾಯಿತು. ಕಾನ್‍ಬೈಲ್ ಶ್ರೀರಾಮ ಮಂದಿರ ಅಧ್ಯಕ್ಷ ಬಿ.ಜಿ.ರಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾ ಮೇಲ್ವಿಚಾರಕಿ ಭವ್ಯ, ಕಾನ್‍ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋಧ ಬಸವರಾಜು, ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಹಾಗೂ ನಾಕೂರು ಶಿರಂಗಾಲ, ಕಾನ್‍ಬೈಲ್, ಮಂಜಿಕೆರೆ, ಮಳ್ಳೂರು, ಹೆರೂರು ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Read More