ವಿರಾಜಪೇಟೆ ಜ.13 : ವಿರಾಜಪೇಟೆ ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಹೇಳಿದರು. ಆರ್ಜಿ ಗ್ರಾ.ಪಂ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೇಟೋಳಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ಸಮ್ಮೇಳನಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಲ್ಲಾ ಜನರ ಸಹಕಾರವು ಅಗತ್ಯವಾಗಿದೆ ಎಂದರು. ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಜ.21ರಂದು ಬೆಳಿಗ್ಗೆ…
ಲೇಖಕ: admin
ಮಡಿಕೇರಿ ಜ.13 : ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. :: ಜ್ಯೋತಿಷ್ಯದ ತಳಹದಿ :: ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ್ಯ. ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ…
ಮಡಿಕೇರಿ ಜ.13 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯಿಂದ ಮಡಿಕೇರಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗದಾಮಯ್ಯ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಜನತೆಗೆ ಸ್ಪೂರ್ತಿದಾಯಕವಾಗಿದ್ದವು. ಅವರ ಜೀವನ ಸಂದೇಶ, ತತ್ವಚಿಂತನೆಗಳು ಪ್ರತಿಯೊಬ್ಬರು ಪಾಲಿಸುವ ಅಗತ್ಯವಿದೆ ಎಂದು ಹೇಳಿದರು. ದೇಶಭಕ್ತಿಗೀತೆ ಎಂಬುದು ದೇಶಕ್ಕೆ ಗೌರವ, ಎಲ್ಲಾರಿಗೂ ಶುಭವಾಗಲಿ ಎಂದು ಹಾರೈಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತೆ ಮೈಥಿಲಿ ರಾವ್, ಉಪಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ ಪುಷ್ಟವೇಣಿ, ಪ್ರಮುಖರಾದ ಶೋಭಾ ಸುಬ್ಬಯ್ಯ, ಬೈತಡ ಜಾನಕ್ಕಿ, ಎಲ್ಲಾ ಶಾಲೆಯ ಶಿಕ್ಷಕರು ಹಾಜರಿದ್ದರು. ಹದಿನೆಂಟು ಶಾಲೆಗಳು ಸ್ಪರ್ಧೆಯಲ್ಲಿ…
ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರ ಜೀವನ ಹಾಗೂ ಭೋದನೆಗಳು ನವ ಸಮಾಜಕ್ಕೆ ಆದರ್ಶವಾಗಿವೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸ್ವಾಮಿ ವಿವೇಕಾನಂದರು ತಮ್ಮ ಬಾಲ್ಯ ಜೀವನದಿಂದಲೇ ಸಾಧಕರಾಗಿದ್ದಾರೆ. ಅವರ ತತ್ವಗಳು ಆಧುನಿಕ ಜಗತ್ತಿನಲ್ಲಿ ಮಹತ್ವದ್ದಾಗಿದೆ. ಸದಾ ಯುವ ಜನತೆಯ ಪ್ರೇರಕ ಮಾರ್ಗದರ್ಶಕರಾದ ವಿವೇಕಾನಂದರು ಆದ್ಯಾತ್ಮಿಕತೆಯ ಬಗ್ಗೆ ಒಲವು ಹೊಂದಿದ್ದರು ಎಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಅರ್ಜುನ್ ಎಚ್.ಆರ್.ರಾಷ್ಟ್ರೀಯ ಯುವ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರು ಮಹಾನ್ ಸಂತರಾಗಿದ್ದರು. ಅವರಿಗೆ ಬುದ್ದಿ, ಏಕಾಗ್ರತೆ, ಆದ್ಯಾತ್ಮಿಕ ಬಗ್ಗೆ ಒಲವು ಇತ್ತು. ಅವರು ಯುವ ಶಕ್ತಿಯ ಮಾರ್ಗದರ್ಶಕರಾಗಿದ್ದರಲ್ಲದೆ ಸಮಾಜ ಸುಧಾರಣೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.…
ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.14 ರಂದು ಶ್ರೀ ಅಯ್ಯಪ್ಪ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀ ಗಣಪತಿ ಹವನ, ಪಂಚಾಮೃತ ಅಭಿಷೇಕ, ಮಹಿಳಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಜರುಗಲಿದ್ದು, ಸಂಜೆ ಮಕರ ಜ್ಯೋತಿ ಪೂಜೆ ನಡೆದು ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ವಸಂತ ನಾಯಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ಖ್ಯಾತ ಕಲಾವಿದ ಶ್ರೀ ಪ್ರಹ್ಲಾದ ಆಚಾರ್ಯ ತಂಡದಿಂದ ಮಾತನಾಡುವ ಗೊಂಬೆ ಹಾಗೂ ನೆರಳಿನಾಟ ನಡೆಯಲಿದೆ. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜ.13 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಸತಿ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎ.ಎಂ ಚೈತನ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಇವಳು 100 ಮೀ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇವರ ಸಾಧನೆಗೆ ಶಾಲಾ ಪ್ರಾಂಶುಪಾಲರು , ಶಿಕ್ಷಕ ವೃಂದ , ದೈಹಿಕ ಶಿಕ್ಷಕರು ಮತ್ತು ಮನೆಯವರು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಮಡಿಕೇರಿ ಜ.13 : ಮಂಗಳೂರು ವಿಶ್ವ ವಿದ್ಯಾನಿಲಯ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಪ್ರಥಮ ವರ್ಷದ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿ ಗಳಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಪ್ರೌಢಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ನೇರುಗಳಲೆ ಗ್ರಾ.ಪಂ ಅಧ್ಯಕ್ಷರಾದ ಕೆ.ಜಿ .ಪುಷ್ಪ ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಎಚ್ಚರ ವಹಿಸಿಕೊಳ್ಳಲಿದ್ದಾರೆ ಎಂದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಲೋಕೇಶ ಭರಣಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ಶುಶ್ರೂಷಕಿ ಎಂ.ಜಿ.ದಿವ್ಯ, ಅಬ್ಬೂರು ಕಟ್ಟೆಯ ಸಮುದಾಯ ಆರೋಗ್ಯ ಅಧಿಕಾರಿ ಡಿ.ನಂದಿನಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ಮನದಟ್ಟು ಮಾಡಿಸಿದರು. ವೈಯಕ್ತಿಕ ಆರೋಗ್ಯ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಿಂದ ಹೇಗೆ ರಕ್ಷಣೆ ಹೊಂದಬೇಕು…
ಮಡಿಕೇರಿ ಜ.13 : ಸ್ವಾಮಿ ವಿವೇಕಾನಂದ ಜನಸೇವ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕ ಬಳಗದ ಮಡಿಕೇರಿ ತಾಲೂಕಿನ ಅಧ್ಯಕ್ಷರಾದ ಪದ್ಮಿನಿ ಮಾತನಾಡಿ, ವಿವೇಕಾನಂದರು ಬೆಳೆದು ಬಂದ ರೀತಿಯನ್ನು ವಿವರಿಸಿದರು. ಸ್ವಾಮಿ ವಿವೇಕಾನಂದರು ತಮ್ಮ ವಾಕ್ಚಾತುರ್ಯದಿಂದ ಯುವಕರನ್ನು ತಮ್ಮೆಡೆಗೆ ಸೆಳೆಯುತ್ತಿದ್ದರು. ಚಿಕಾಗೋ ನಗರದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಪ್ರಸ್ತುತಪಡಿಸಿದ ಭಾಷಣವೇ ಇದಕ್ಕೆ ಸಾಕ್ಷಿ ಎಂದರು. ಈ ಸಂದರ್ಭ ಸ್ವಾಮಿ ವಿವೇಕಾನಂದ ಜನಸೇವಾ ಸಂಘದ ಗೌರವಾಧ್ಯಕ್ಷ ಎಸ್.ಸಿ.ಮಂಜುನಾಥ್, ಅಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಪಿ.ಪಿ.ಪ್ರಸಾದ್, ಕಾರ್ಯದರ್ಶಿ ಎಚ್.ಎಲ್.ನಾರಾಯಣ್, ಖಜಾಂಜಿ ಸೋಮಶೇಖರ್, ಸದಸ್ಯರುಗಳಾದ ಪಿ.ಮಣಿ, ಎ.ಸಿ.ಲವ ಪ್ರಸಾದ್, ಎಸ್.ಎಂ.ಮೋಣ್ಣಪ್ಪ, ಬಿ.ಕೆ.ಬಾಲಕೃಷ್ಣ, ಮೀನಾಕ್ಷಿ ಹಾಗೂ ವಿವೇಕ ಬಳಗದ ಲೀಲಾ ಶೆಟ್ಟಿ, ಜ್ಯೋತಿ ಕುಮಾರಿ, ಪ್ರಭಾವತಿ, ಅಚ್ಚಮ್ಮ, ಅಶೋಕ ಶೆಟ್ಟಿ, ಭೋಜಮ್ಮ , ಪ್ರಭಾವತಿ, ಅಂಬಿಕಾ, ಅಶ್ವಿನಿ, ಚೇತನ್ ಹಾಗೂ ಇತರರು ಹಾಜರಿದ್ದರು. ಕಾರ್ಯಕ್ರಮವು ವಿವೇಕದ ಭಜನೆಯೊಂದಿಗೆ ಪ್ರಾರಂಭವಾಯಿತು.
ಮಡಿಕೇರಿ ಜ.13 : ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಿಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಡಿ ಎಸ್ ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ಹೆಚ್.ಕೆ.ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು. ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್ಗಳನ ಬಗ್ಗೆ ಹಾಗೂ ಡಿ ಎಸ್ ಎಸ್ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…
ವಿರಾಜಪೇಟೆ ಜ.14 : ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿರಾಜಪೇಟೆಯ ನಾಟ್ಯಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ಪ್ರೇಮಾಂಜಲಿ ಹಾಗೂ ವಿದ್ಯಾರ್ಥಿಗಳ ತಂಡವು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಲವಾರು ಸಾಹಿತಿಗಳು, ಗಣ್ಯವ್ಯಕ್ತಿಗಳು, ಹಾಗೂ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್ ಭಾಗವಹಿಸಿದರು.






