ಮಡಿಕೇರಿ NEWS DESK ನ.26 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 35ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನವನ್ನು ಆಚರಿಸಲಾಯಿತು. ಮಡಿಕೇರಿ ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 10 ಹಕ್ಕೊತ್ತಾಯಗಳನ್ನು ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಖ್ಯಾತ ರಾಜಕೀಯ ತಜ್ಞ, ಇತಿಹಾಸಕಾರ, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾರ್ವಾರ್ಡ್ ವಿದ್ವಾಂಸ ಡಾ.ಸಂಜೀವ್ ಚೋಪ್ರ ಅವರು ಸಿಎನ್ಸಿ ಮಂಡಿಸಿದ ಹಕ್ಕೊತ್ತಾಯಗಳನ್ನು ಸಮರ್ಥಿಸಿ ಮಾತನಾಡಿದರು. ಎನ್.ಯು.ನಾಚಪ್ಪ ಅವರ ನೇತೃತ್ವದ ಸಿಎನ್ಸಿ ಸಂಘಟನೆ ಕೇಳುತ್ತಿರುವ ಕೊಡವಲ್ಯಾಂಡ್ ತೀರ ವಾಸ್ತವಿಕ ಮತ್ತು ಕಾರ್ಯಸಾಧನೆಯಾಗಲಿರುವ ಅಂಶವಾಗಿದೆ. ಪ್ರತ್ಯೇಕ ರಾಷ್ಟçವನ್ನು ಕೇಳುವುದು ಅವಾಸ್ತವಿಕ, ರಾಜ್ಯ ಕೇಳುವುದು ಜಟಿಲ ವಿಚಾರ. ಸಿಎನ್ಸಿ ಇದೆರಡನ್ನು ಕೇಳದೆ ತಮ್ಮ ಕಳೆದುಹೋದ ತಾಯಿನೆಲವನ್ನು ಸಂವಿಧಾನದ 5 ಮತ್ತು 6ನೇ ಶೆಡ್ಯೂಲ್ನಡಿ ಕೇಳುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಯ ಅತೀ ಮುಖ್ಯ…
ಲೇಖಕ: admin
ಮಡಿಕೇರಿ ನ.26 NEWS DESK : ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಯ 57ನೇ ವಾರ್ಷಿಕ ಮಹಾರಥೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮಾರ್ಗಶಿರ ಶುಕ್ಲಚಂಪಾ ಷಷ್ಠಿಯ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮುಂಜಾನೆಯಿಂದಲೇ ವಿಶೇಷ ಅಭಿಷೇಕ, ಹೋಮ ಹವನ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆದು ನಂತರ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ಧಿಗ್ಬಲಿ, ರಥ ಬಲಿ, ರಥ ಪೂಜೆ ಸೇರಿದಂತೆ ವಿವಿಧ ಪೂಜೆಗಳು ನೆರವೇರಿತು. ನಂತರ ಶ್ರೀ ಸ್ವಾಮಿಯ ವಿಗ್ರಹವನ್ನು ಹೂವಿನಿಂದ ಸಿಂಗಾರಗೊಂಡಿದ ಭವ್ಯ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ನಂತರ ಭಕ್ತರ ಜೈಘೋಷದೊಂದಿಗೆ ಮಹಾ ರಥೋತ್ಸವಕ್ಕೆ ಚಾಲನೆ ದೊರೆಯಿತು. ರಥೋತ್ಸವಕ್ಕೂ ಮುನ್ನ ಅಯ್ಯಪ್ಪ ವ್ರತಾಧಾರಿಗಳು ದೇವರ ಕೀರ್ತನೆಗಳನ್ನು ಹಾಡಿ ಬೃಹತ್ ಪ್ರಮಾಣದ ಕರ್ಪೂರವನ್ನು ಹಚ್ಚಿ ಭಕ್ತಿ ಮೆರೆದರು. ರಥೋತ್ಸವವು ಸ್ವಾಮಿಯ ಸನ್ನಿದಿಯಿಂದ ಸಂಪ್ರದಾಯದಂತೆ ಕೂಡಿಗೆ ಮುಖ್ಯ ರಸ್ತೆಯ ಮೂಲಕ ಕೂಡುಮಂಗಳೂರು ಗ್ರಾಮದವರೆಗೆ ಸಾಗಿತು. ಈ ಸಂದರ್ಭ ಸಾವಿರಾರು ಭಕ್ತರು ರಥಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಬಾಳೆ ಹಣ್ಣು, ಜವನಗಳನ್ನು ರಥಕ್ಕೆ…
ಮಡಿಕೇರಿ ನ.26 NEWS DESK : ಸಮಸ್ತ ಉಲಮಾ ಸಂಘಟನೆಗೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.4 ರಿಂದ 8ರ ವರೆಗೆ ‘ಆದರ್ಶ ಪರಿಶುದ್ಧತೆ ಶತಮಾನಗಳಿಂದ’ ಎಂಬ ಘೋಷಣೆಯೊಂದಿಗೆ ಕೇರಳದ ಕಾಸರಗೋಡುವಿನ ಕುಣಿಯಲ್ಲಿ 100ನೇ ಅಂತರರಾಷ್ಟ್ರೀಯ ಮಹಾ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಕ್ಕಾಗಿ ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾ ಒಕ್ಕೂಟದಿಂದ ನ.29 ರಂದು ‘ಸಮಸ್ತ ಶತಮಾನೋತ್ಸವ ಪ್ರಚಾರ ಮಹಾ ಸಮ್ಮೇಳನ’ವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಸ್ತ ಉಲಮಾ ಒಕ್ಕೂಟದ ಜಂಟಿ ಕಾರ್ಯದರ್ಶಿ ಎಂ.ವೈ.ಅಶ್ರಫ್ ಫೈಝಿ ಅವರು, ನಗರದ ಗಾಂಧಿ ಮೈದಾನದಲ್ಲಿ ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್ ಕಲ್ಲುಬಾಣೆ ಅವರ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 10 ಗಂಟೆಗೆ ಸಮ್ಮೇಳನದ ಅಧ್ಯಯನ ಶಿಬಿರ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದರು. ಮೊದಲನೇ ಹಂತದ ಅಧ್ಯಯನ ಶಿಬಿರದಲ್ಲಿ ‘ಆಧ್ಯಾತ್ಮಿಕತೆಯ ಅನಿವಾರ್ಯತೆ’ ಎಂಬ ವಿಷಯವನ್ನಾಧರಿಸಿ ಸಯ್ಯಿದ್ ಝನುಲ್ ಆಬಿದೀನ್…
ಬೆಂಗಳೂರು ನ.26 NEWS DESK : ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ. ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ ಎಂದು ಹೇಳಿದರು. ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು…
ಮಡಿಕೇರಿ ನ.26 NEWS DESK : ಕೇಂದ್ರ ಸರಕಾರ ಕಾರ್ಮಿಕರ ವಿರೋಧದ ನಡುವೆಯೂ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿ ಮತ್ತು ಕಾರ್ಮಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಲ್ಲ ನಿಯಮಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಿಐಟಿಯು ಸಂಘಟನೆ ಬೆಂಬಲ ಸೂಚಿಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿತು. ಕಾರ್ಮಿಕ ವಿರೋಧಿ ನೀತಿಗಳು ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾರ್ಮಿಕರ ಅಳಲನ್ನು ಆಡಳಿತ ನಡೆಸುವವರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ಮಾತನಾಡಿ ಕಾರ್ಮಿಕ ವಿರೋಧಿಯಾದ ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ…
ಮಡಿಕೇರಿ ನ.26 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ಸುಬಹ್ಮಣ್ಯ ದೇವರ ಶ್ರೀ ಭೂತ ಬಲಿ(ಕ್ಷೇತ್ರ ಪ್ರದಕ್ಷಿಣೆ), ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನೆರವೇರಿತು. :: ದೈವಗಳ ವೆಳ್ಳಾಟಂ :: ಬೆಳಿಗ್ಗೆ ಶ್ರೀ ಕುಟ್ಟಿಚಾತನ್ ದೇವರ ವಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಜರುಗಿತು. ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯಿಂದ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ…
ಮಡಿಕೇರಿ ನ.26 NEWS DESK : ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿ.3 ರಿಂದ 5ರವರೆಗೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುಲ್ಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಮಡಿಕೇರಿ ಜೂನಿಯರ್ ಕಾಲೇಜುವಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ತಾಲ್ಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ನಡೆದ ಜಿಲ್ಲಾ ಯುವಜನೋತ್ಸವದಲ್ಲಿ ಭಾಗವಹಿಸಿ ಗುಂಪು ಹಾಗೂ ವ್ಯಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದು, ವಿಜೇತರು ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಲು ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಮೈಸೂರು ನ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಾಣಿಜ್ಯ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಸಂಸದರು, ತಂಬಾಕು ಖರೀದಿಗೆ ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಈಗಿರುವ ಮಾಹಿತಿ ಪ್ರಕಾರ ಸುಮಾರು 10 ಸಾವಿರ ಕಾರ್ಡ್ದಾರ ಬೆಳೆಗಾರರು ಸುಮಾರು 10 ಮಿಲಿಯನ್ ಕೆಜಿ ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ ಇದನ್ನು ಅನಧಿಕೃತ ಎಂದು ಘೋಷಣೆ ಮಾಡಿರುವುದರಿದ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಪಾರು ಮಾಡಲು ಈ ಕೂಡಲೇ ತಂಬಾಕು ಬೆಳೆಯ ಖರೀದಿಗೆ ಅವಕಾಶ ಮಾಡಿಕೊಡಬೇಕೆಂದು ವಾಣಿಜ್ಯ ಸಚಿವರಿಗೆ ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ…
ಮಡಿಕೇರಿ ನ.26 NEWS DESK : ಗ್ರಾಮಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲು ಕುಂದಚೇರಿ (ಚೆಟ್ಟಿಮಾನಿ) ಗ್ರಾ.ಪಂ ನಿರ್ಧಾರ ಕೈಗೊಂಡಿದೆ. ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ಗ್ರಾಮಸಭೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಮೀನುಗಾರಿಕೆ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಶು ವೈದ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದರು. ಗ್ರಾಮ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಗೈರು ಹಾಜರಾದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು. ಈ ಹಿನ್ನಲೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯಕಾರ್ಯನಿರ್ವಣಾಧಿಕಾರಿಗಳಿಗೆ ಪತ್ರ…
ಮಡಿಕೇರಿ ನ.26 NEWS DESK : ಕೊಡಗಿನ ಪವಿತ್ರ ಕಾವೇರಿ ನದಿಯ ಸ್ವಚ್ಛತೆ, ಪಾವಿತ್ರ್ಯತೆ ಕಾಪಾಡಿ ಸಂರಕ್ಷಿಸುವ ಮತ್ತು ನದಿಯ ಪ್ರವಾಹ ನಿರ್ವಹಣೆ ಹಾಗೂ ನದಿ ತೀರದ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಸಮಿತಿಯ ಪ್ರಮುಖರು ಮಾತನಾಡಿ, ಕಾವೇರಿ ನದಿಯ ಸಂರಕ್ಷಣೆ ಮತ್ತು ಅದರ ಪ್ರವಾಹ ನಿರ್ವಹಣೆ ನಮ್ಮೆಲ್ಲರ ಹೊಣೆಯಾಗಿದೆ. ಕಾವೇರಿಯು ಕರ್ನಾಟಕ ರಾಜ್ಯದ ಜೀವನದಿಯಾಗಿದ್ದು, ಅನ್ನದಾತ ರೈತರ ಪಾಲಿಗೆ ವರದಾನವಾಗಲಿದೆ. ಇದು ನಮ್ಮ ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ಮಹತ್ವದ ಕೊಡಗುಗೆ ನೀಡುತ್ತದೆ ಎಂದರು. ಕಾವೇರಿ ನದಿಯ ಮೂಲ ಪ್ರದೇಶಗಳು, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ಅರಣ್ಯವನ್ನು ಮತ್ತು ಜಲಮೂಲಗಳನ್ನು ರಕ್ಷಿಸಲು ಬಹುಮುಖ್ಯವಾಗಿದೆ. ಕಾವೇರಿ ನದಿಯ ಹಾನಿಯು ನದಿ ದಡದ ಸಮೃದಧ ಪರಿಸರ, ಜನರ ಜೀವನ ಹಾಗೂ ಕೃಷಿಗೆ ಮಾರಕವಾಗಲು ಅಪಾಯ ಎದುರಾಗುತ್ತಿದೆ. ಈ…






