ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ : ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು*
- *ಚೆಟ್ಟಳ್ಳಿ ಠಾಣಾಧಿಕಾರಿಯಾಗಿ ಪಟ್ರಪಂಡ ಮೊಣ್ಣಪ್ಪ ಅಧಿಕಾರ ಸ್ವೀಕಾರ*
- *ಮಗ್ಗುಲ : ಆರೋಗ್ಯಯುಕ್ತ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಿ : ಪೂಜಾ ಸಜೇಶ್*
- *ಪಲ್ಸ್ ಪೋಲಿಯೋ ಕಾರ್ಯಕ್ರಮ : ಮನೆ ಮನೆ ಭೇಟಿ ನೀಡಿದ ಆರೋಗ್ಯಾಧಿಕಾರಿಗಳು*
- *ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿಗೆ ಮನವಿ*
- *ಟಿ.ಜಿ.ಪ್ರೇಮಕುಮಾರ್ ಅವರಿಗೆ ವಿಜ್ಞಾನಿ ಡಾ.ಡಾರ್ವಿನ್ ಪ್ರಶಸ್ತಿ*
- *ಎಂ.ಬಿ.ವಿನ್ಸೆಂಟ್’ರಿಗೆ ದತ್ತಿ ಪ್ರಶಸ್ತಿ*
- *ಸೋಮವಾರಪೇಟೆ : ರಸ್ತೆಗಳ ಕಾಮಗಾರಿ ಕಳಪೆಯಾಗದಂತೆ ಎಚ್ಚರ ವಹಿಸಿ : ಶಾಸಕ ಡಾ.ಮಂತರ್ ಗೌಡ*
- *ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್.ಜಿ.ಶ್ರೀನಿವಾಸ್ ಆಯ್ಕೆ*
- *ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್, ಕಾಯ೯ದಶಿ೯ಯಾಗಿ ಡಾ.ಚೇತನ್ ಆಯ್ಕೆ*






