ಮಡಿಕೇರಿ ಜ.15 NEWS DESK : ಮಡಿಕೇರಿಯ ಕೊಡಗು ಮಹಿಳಾ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದಮಣಿ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ನಂತರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವ ಕುರಿತು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಲೇಖಕ: admin
ಸುಂಟಿಕೊಪ್ಪ ಜ.15 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಣಕ್ಕೆ ಮಾತ್ರ ಸಿಮೀತವಾಗಿರದೆ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆ ನಡೆಯಿತು. ಮಕ್ಕಳು ತೋಟಗಳಲ್ಲಿ ಬೆಳೆದ ತರಕಾರಿ, ಸೊಪ್ಪು ಕಾಯಿ ಪಲ್ಯಗಳು, ಆಹಾರ ತಿಂಡಿ ತಿನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನಿಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ವ್ಯಾಪಾರಿಗಳ ರೀತಿಯಲ್ಲಿಯೆ ವ್ಯಾಪಾರ ವಹಿವಾಟನ್ನು ನಡೆಸಿ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಪಂಚಾಯಿತಿ ಸದಸ್ಯರಾದ ರಫೀಕ್ ಖಾನ್ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಸಾಮಾಜಿಕವಾಗಿ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ. ಮಕ್ಕಳು ಅತ್ಯಂತ ಉತ್ಸಾಹದಿಂದ ವ್ಯಾಪಾರ ವಹಿವಾಟಿಗೆ ಬೇಕಾದ ತರಕಾರಿ, ಸೋಪ್ಪು, ತಿಂಡಿ ತಿನ್ನಿಸುಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ರಫೀಕ್ಖಾನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಸರಕಾರವು…
ನಾಪೋಕ್ಲು ಜ.15 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ನಡೆಸಿದ ಟ್ಯಾಲೆಂಟ್ ಸರ್ಚ್ ಎಕ್ಸಾಮನ್ನು ಕಾಲೇಜಿನ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಬರೆದಿದ್ದು, ಪ್ರಥಮ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಪ್ರಥಮ ವಿಜ್ಞಾನ ವಿಭಾಗದ ಮಹಮದ್ ಆಶಿಕ್ ರಾಜ್ಯ ಮಟ್ಟದಲ್ಲಿ ಆರನೇ ರ್ಯಾಂಕ್, ದ್ವಿತೀಯ ವಿಜ್ಞಾನ ವಿಭಾಗದಲ್ಲಿ ಮಹಮ್ಮದ್ ಸಿನಾನ್ ರಾಜ್ಯಮಟ್ಟದಲ್ಲಿ 10ನೇ ರ್ಯಾಂಕ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ರವಿ ತಾಲ್ಲೂಕು ಮಟ್ಟದಲ್ಲಿ ಆರನೇ ರ್ಯಾಂಕ್ ಅನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ರ್ಯಾಂಕ್ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪರೀಕ್ಷೆಯನ್ನು ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಬ್ಯಾಡ್ಜ್, ಗಣಿತ ಪುಸ್ತಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಮೂರ್ನಾಡು…
ನಾಪೋಕ್ಲು ಜ.15 NEWS DESK : ಮೂರ್ನಾಡು ಪಿಎಂಶ್ರೀ ಸರಕಾರಿ ಪ್ರಾರ್ಥಮಿಕ ಶಾಲೆಗೆ ಗ್ರಾಮ ಪಂಚಾಯತಿ, ವಿವಿಧ ಸಂಘ ಸಂಸ್ಥೆಗಳು ಹಾಗೂ ದಾನಿಗಳಿಂದ ಬ್ಲೂಟೂತ್ ಸ್ಪೀಕರನ್ನು ಕೊಡುಗೆಯಾಗಿ ನೀಡಲಾಯಿತು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಕೆ.ಎ.ಮಜೀದ್, ಆಪ್ತಮಿತ್ರಾ ಬಳಗ, ಗಜಾನನ ಸಂಘ ಮತ್ತು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ಮೂರ್ನಾಡು ಜೊತೆಗೂಡಿ ಶಾಲಾ ವಿದ್ಯಾರ್ಥಿಗಳಿಗೆ ಪೂರಕವಾಗಿರುವ ಬ್ಲೂಟೂತ್ ಸ್ಪೀಕರ್ ಅನ್ನು ನೀಡಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.15 NEWS DESK : ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಬೀರೇಶ್ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಮಿಮಿಕ್ರಿ ಸ್ಪರ್ಧೆಯಲ್ಲಿ ಬೀರೇಶ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟ ಸ್ಪರ್ಧೆಗೆ ಸ್ಥಾನ ಪಡೆದುಕೊಂಡಿದ್ದಾನೆ. ವಿದ್ಯಾರ್ಥಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಿವೈಪಿಸಿ ಸೌಮ್ಯ ಪೆÇನ್ನಪ್ಪ, ಬಿಆರ್ಸಿ ಶರ್ಮಿಳ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಹಶೀಲ್ದಾರರಾದ ಶ್ರೀಧರ ಅವರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ತಹಶೀಲ್ದಾರರು, ಶಿವಯೋಗಿ ಸಿದ್ದರಾಮೇಶ್ವರರ ವೈಚಾರಿಕ ಪೂರ್ಣ ವಿಚಾರಗಳನ್ನು ಇಂದು ನಾವು ಅರಿಯುವ ಅಗತ್ಯವಿದೆ ಎಂದರು. ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಜನರಿಗೆ ತಲುಪಿಸಬೇಕಿದೆ. ಸಿದ್ದರಾಮೇಶ್ವರರು ಜನಾಂಗವೊಂದಕ್ಕೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಆದರ್ಶನೀಯರು ಎಂದು ನುಡಿದರು. ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಉಷಾರಾಣಿ ಅವರು ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ಜಗತ್ತಿಗೆ ಬೇಕಾದ ಒಬ್ಬ ಶ್ರೇಷ್ಠ ಸಂತ. ಯುವ ಜನಾಂಗದವರು ಇವರ ಆದರ್ಶನೀಯ, ಕಾಯಕಪೂರ್ಣ ಜೀವನವನ್ನು ಪಾಲಿಸುವಂತಾಗಬೇಕು ಎಂದರು. ಸಿದ್ದರಾಮೇಶ್ವರರು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ವಚನಗಳ ಮೂಲಕ ಸಮಾಜವನ್ನು ಅಂದೇ ತಿದ್ದುವ ಕಾರ್ಯವನ್ನೂ ಸಹ ಮಾಡಿದ್ದಾರೆ ಎಂದು ನುಡಿದರು. ಶಿವಯೋಗಿ ಸಿದ್ದರಾಮೇಶ್ವರ 12ನೇ ಶತಮಾನದಲ್ಲಿ…
ಮಡಿಕೇರಿ ಜ.14 NEWS DESK : ವಾಹನ ಚಲಾಯಿಸುವ ಪ್ರತಿಯೊಬ್ಬರಲ್ಲಿಯೂ ಸಹ ಸಂಚಾರ ನಿಯಮವನ್ನು ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡಬೇಕು. ಇದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ,ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ ಜಾಗೃತಿ ಮೂಡಿಸಿದರು. ವಾಹನ ಸಂಚಾರ ಸಂಬಂಧಿಸಿದಂತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜೊತೆಗೆ ವಾಹನದ ವಿಮೆ ಇರಬೇಕು ಎಂದು ದಿನೇಶ್ ಕುಮಾರ್ ಅವರು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು…
ಮಡಿಕೇರಿ ಜ.14 NEWS DESK : ಮಹಿಳಾ ಶಕ್ತಿಯನ್ನು ಒಗ್ಗೂಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಶಶಿಕಲಾ ತಿಳಿಸಿದ್ದಾರೆ. ಮಡಿಕೇರಿ ನಗರದಲ್ಲಿ ಮಹಿಳಾ ಸಂಘಟನೆಯನ್ನು ಬಲಪಡಿಸಲಾಗುವುದು, ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಪ್ರತಿ ವಾರ್ಡ್ಗಳಲ್ಲಿ ಮಹಿಳಾ ಕಾಂಗ್ರೆಸ್ ನ್ನು ಬಲಪಡಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ನನ್ನ ಪಕ್ಷ ನಿಷ್ಠೆಯನ್ನು ಗುರುತಿಸಿ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಸೌಮ್ಯ ರೆಡ್ಡಿ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಲತಾ ಜಿ.ಆರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರು ನನಗೆ ಅಧ್ಯಕ್ಷ ಸ್ಥಾನವನ್ನು ನೀಡಿದ್ದು,…
ವಿರಾಜಪೇಟೆ ಜ.14 NEWS DESK : ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಅಯ್ಯಪ್ಪ ದೇವರ ಬನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಮಕರ ಜ್ಯೋತಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೆದಮುಳ್ಳೂರು ಮಹಾದೇವರ ದೇವಾಸ್ಥಾನದ ಅರ್ಚಕರಾದ ರಾಧಕೃಷ್ಣ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮುಂಜಾನೆ ದೇವತಾ ಪ್ರಾರ್ಥನೆ ಹಾಗೂ ಶ್ರೀ ಮಹಾಗಣಪತಿ ಹೋಮ ನೆರವೇರಿತು. ನಂತರ ವಿಶೇಷ ಪ್ರಾರ್ಥನೆ ಹಾಗೂ ಚಾಮುಂಡಿ, ಗುಳಿಗ ದೈವ, ಅಯ್ಯಪ್ಪ ದೇವರ ವಾರ್ಷಿಕ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ಪಾಲೇಕಂಡ ಕುಟುಂಬಸ್ಥರು, ಸ್ಥಳೀಯ ಭಕ್ತಾದಿಗಳು ಹಾಜರಿದ್ದರು.
ಮಡಿಕೇರಿ ಜ.14 NEWS DESK : ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಬಾಲಕರ ಬಾಲಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸೌಲಭ್ಯ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಕುಂದುಕೊರತೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ನೀಡಿದು. ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಸಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರತೀ ತಿಂಗಳು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿದ್ಯಾರ್ಥಿಗಳು ಪ್ರತೀ ನಿತ್ಯ ದಿನಪತ್ರಿಕೆಯನ್ನು ಓದಬೇಕು. ಗ್ರಂಥಾಲಯ ಸೌಲಭ್ಯವನ್ನು ಪಡೆದು ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಪಾಠದ ಜೊತೆಗೆ ಆಟ ಇರಬೇಕು. ಹೆಚ್ಚು ಅಧ್ಯಯನ ಮಾಡುವುದರಿಂದ ಉನ್ನತ ವ್ಯಾಸಂಗ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರ ಶಿಕ್ಷಣ…






