ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.…
ಲೇಖಕ: admin
ಮಡಿಕೇರಿ ಜ.30 NEWS DESK : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಸಾರ್ವಜನಿಕರು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜೆಸ್ಸಿ ಕೆ.ಎಫ್. ಸ್ವಾಗತಿಸಿದರು. ಪಿ.ಸಿ. ಉಷಾ ನಿರೂಪಿಸಿದರು. ಪ್ರಜ್ಞಾ ವಂದಿಸಿದರು. ಗ್ರಾಪಂ ಸದಸ್ಯೆ ಪ್ರಭಾ, ಎಸ್ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.29 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವಸಂಸ್ಥೆಯ ಅಂತರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ದಿನವನ್ನು ಆಚರಿಸಿತು. 12 ಡಿಸೆಂಬರ್ 1785 ರಲ್ಲಿ ದೇವಟ್ಪರಂಬ್ ಕೊಡವ ನರಮೇಧದ ದುರಂತದಲ್ಲಿ ಬಲಿಯಾದವರಿಗೆ ಪುಷ್ಪ ನಮನ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಮಂದಪಂಡ ಮನೋಜ್ ಮಂದಣ್ಣ ಹಾಗೂ ಮಂದಪಂಡ ಸೂರಜ್ ಅವರು ಹತ್ಯಾಕಾಂಡದಲ್ಲಿ ಕಗ್ಗೊಲೆಯಾದ ನತದೃಷ್ಟ ಹಿರಿಯರಿಗೆ ಗೌರವ ನಮನ ಸಲ್ಲಿಸಿದರು. ಅವರಿಗಾಗಿ ಪ್ರಾರ್ಥಿಸಿದರು ಮತ್ತು ಸಿಎನ್ಸಿಯ ಗುರಿಗಳನ್ನು ಸಾಧಿಸಲು ಆಶೀರ್ವಾದವನ್ನು ಪಡೆದರು. ಆದಿಮಸಂಜಾತ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರಿಗೆ ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಆದಿಮಸಂಜಾತ ಜನರಾಗಿ ಗುರುತಿಸಲು ವಿಶ್ವಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು. ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಒದಗಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯ ಮತ್ತು ಸ್ವ-ಆಡಳಿತ ನೀಡಬೇಕು, ಭೂಮಿ, ಭಾಷೆ ಮತ್ತು ಸಾಂಸ್ಕöÈತಿಕ ಪರಂಪರೆಯ ರಕ್ಷಣೆ ಮಾಡಬೇಕು. ಶೋಷಣೆಯಿಂದ ಮುಕ್ತಗೊಳಿಸಬೇಕು, ದೇವಟ್ಪರಂಬ್ ಹತ್ಯಾಕಾಂಡ ಮತ್ತು ಅರಮನೆ ಪಿತೂರಿಯಲ್ಲಿ ಕೊಡವ ರಾಜಕೀಯ ಹತ್ಯೆಗಳನ್ನು…
ಮಡಿಕೇರಿ NEWS DESK ಜ.29 : ಕೊಡಗು ಜಿಲ್ಲೆಯನ್ನು ನಿರಂತರವಾಗಿ ಕಾಡುತ್ತಿರುವ ವನ್ಯಜೀವಿ ಉಪಟಳದ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಘೋಷಿಸಿ ತಕ್ಷಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಜಿಲ್ಲಾಧ್ಯಕ್ಷ ಅಣ್ಣ ಷರೀಪ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ. ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ಅಮಾಯಕ ಕಾರ್ಮಿಕನನ್ನು ಕಾಡಾನೆ ಬಲಿ ಪಡೆದಿದೆ. ಮೃತ ಲತೀಫ್ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸರಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷö್ಯವೇ ಕಾರಣವೆಂದು ಆರೋಪಿಸಿದ್ದಾರೆ. ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ವನ್ಯಜೀವಿ ಉಪಟಳ ತೀವ್ರಗೊಂಡಿದೆ. ಆದರೆ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಇಲ್ಲಿಯವರೆಗೆ ಸಾಧ್ಯವಾಗಿಲ್ಲ. ಇದರ ಪರಿಣಾಮ ಅಮಾಯಕ ಮಾನವ ಜೀವಗಳು, ಜಾನುವಾರುಗಳು ಬಲಿಯಾಗುತ್ತಿವೆ, ಅಲ್ಲದೆ ಕೃಷಿ ಫಸಲು ನಾಶವಾಗುತ್ತಿದೆ. ವನ್ಯಜೀವಿ ದಾಳಿ ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದ್ದರೂ ಅರಣ್ಯ ಇಲಾಖೆ ಇಲ್ಲಿಯವರೆಗೆ ನವೀನ…
ಮಡಿಕೇರಿ ಜ.29 NEWS DESK : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಹುಂಡಿ ನಿವಾಸಿ ಲತೀಫ್ (65) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬಜೆಗೊಲ್ಲಿ ಬಳಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡ ಲತೀಫ್ ಅಸುನೀಗಿದರು. ಮೃತರು ಪತ್ನಿ ನಬೀಸ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಕಾಡಾನೆ ಉಪಟಳದಿಂದ ಆತಂಕಗೊಂಡಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವೆಂದು ಆರೋಪಿಸಿದರು. ಇತ್ತೀಚೆಗೆ ಒಂಟಿ ಸಲಗವೊಂದು ನಡು ರಸ್ತೆಯಲ್ಲೇ ಶಾಲಾ ವಾಹನದ ಮೇಲೆ ದಾಳಿ ಮಾಡಲು ಪ್ರಯತ್ನಸಿದೆ. ತಕ್ಷಣ ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆಗಳ ಉಪಟಳ ತಡೆಗೆ ಶಾಶ್ವತ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ…
ಮಡಿಕೇರಿ ಜ.29 NEWS DESK : 66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6-ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11 ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್ನಲ್ಲಿ ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ 2025-26ನೇ ಸಾಲಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೌಢಶಾಲಾ ವಿಭಾಗದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ.24 ರಂದು ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸಿಗಬೇಕಾದಂತಹ ಗೌರವ, ಪ್ರಾಮುಖ್ಯತೆ ಕೊಡುತ್ತಿರಲಿಲ್ಲ. ಹಾಗಾಗಿ ಇಂತಹ ದಿನಾಚರಣೆ ಮಾಡುವುದರ ಮೂಲಕ ಜನರಿಗೆ ಹೆಣ್ಣು ಮಕ್ಕಳ ಮಹತ್ವ ಮತ್ತು ಪ್ರಾಮುಖ್ಯತೆ ತಿಳಿಯಲಿ ಎಂಬುದಕ್ಕಾಗಿ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ದಿನಾಚರಣೆಗಳು ಆಚರಣೆಗೆ ಬಂದಿತು ಎಂದರು. ಹೆಣ್ಣು ಎಂದರೆ ಜವಾಬ್ದಾರಿ, ಹೊರೆ ಎಂಬ ಮನೋಭಾವ ಹಿಂದಿನ ಕಾಲದಿಂದಲೂ…
ಮಡಿಕೇರಿ ಜ.29 NEWS DESK : ಪೊನ್ನಂಪೇಟೆ ತಾಲ್ಲೂಕಿನ ಮರೂರು, ತಿತಿಮತಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಬೆಂಗಳೂರಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಷನ್ ಆಸ್ಪತ್ರೆಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಪರಿಶಿಷ್ಟ ಪಂಗಡಗಳ ಜಿಲ್ಲಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿ ಅವರು ಕೊಡಗಿನಲ್ಲಿ 218 ಬುಡಕಟ್ಟು ಕಾಲೋನಿಗಳಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಶ್ರಮ ಶಾಲೆಗಳ ಸುತ್ತಮುತ್ತಲಿನ ಕಾಲೋನಿಗಳ ಜನರು ಹಾಗೂ ವಿದ್ಯಾರ್ಥಿಗಳಿಗೆ ಫೆ.15 ರೊಳಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಮರೂರು ತಿತಿಮತಿ ಹಾಗೂ ಕುಶಾಲನಗರ ಆಶ್ರಮ ಶಾಲೆಗಳನ್ನು 1ನೇ ತರಗತಿಯಿಂದ ಪಿಯುಸಿ ವರೆಗೆ ಮೇಲ್ದರ್ಜೆಗೇರಿಸಿ 16 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು. ತಾಲ್ಲೂಕು ಅಧಿಕಾರಿ ತೇಜರಾಜ…
ಮಡಿಕೇರಿ ಜ.29 NEWS DESK : ಗೌಡ ಈವ್ನಿಂಗ್ ಸ್ಟಾರ್ ಸಂಘದ ವತಿಯಿಂದ ಏ.13 ರಿಂದ ಹದಿನೈದು ದಿನಗಳ ಕಾಲ ಮರಗೋಡಿನ ಭಾರತೀ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಮನೋರಂಜನಾ ಕಾರ್ಯಕ್ರಮಗಳ “ಗೌಡ ಕುಟುಂಬ ಕಲರವ-2026” ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಟ್ಟೆಮನೆ ರೋಷನ್ ಅವರು ಗೌಡ ಕುಟುಂಬ ಕಲರವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೌಡ ಕುಟುಂಬಗಳ ಸುಮಾರು 100 ರಿಂದ 150 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಬಾರಿ ಯಾವುದೇ ಕುಟುಂಬ ತಂಡದಲ್ಲಿ ಆಟಗಾರರ ಕೊರತೆ ಇದ್ದಲ್ಲಿ ಮಹಿಳಾ ಆಟಗಾರರನ್ನು ಸೇರಿಸಿಕೊಳ್ಳಲು ಅವಕಾಶವನ್ನು ನೀಡಿರುವುದಲ್ಲದೆ, ಅವರಿಗೆ ಥ್ರೋ ಬೌಲಿಂಗ್ಗೂ ಅವಕಾಶ ನೀಡಲಾಗಿದೆ ಎಂದರು. ಆಸಕ್ತ ತಂಡಗಳು ಮಾ.31ರ ಒಳಗಾಗಿ ನೋಂದಣಿ ಶುಲ್ಕ 3 ಸಾವಿರ ರೂ.ಗಳೊಂದಿಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆಸಕ್ತರು ಮಗೇರನ ರಂಜು ಮೊ.8762249317, ಬಿದ್ರುಪಣೆ ದೀಪು ಮೊ.9482395358, ಬೊಳ್ಳೂರು ಮುನ್ನ ಮೊ.9483678377 ನ್ನು ಸಂಪರ್ಕಿಸಬಹುದು. ಗೌಡ ಸಮೂಹದ ಕುಟುಂಬವಾರು ಹಗ್ಗ ಜಗ್ಗಾಟ…
ಮಡಿಕೇರಿ ಜ.29 NEWS DESK : ಮೈಸೂರಿನಿಂದ ಕೊಡಗು ಜಿಲ್ಲೆಯ ಕುಶಾಲನಗರದವರೆಗಿನ ಉದ್ದೇಶಿತ ರೈಲು ಸಂಪರ್ಕ ಯೋಜನೆ ಸ್ಥಗಿತವಾಗಿಲ್ಲ, ಬದಲಾಗಿ ಹಿನ್ನಡೆಯಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿನ ರಾಜ್ಯ ಸರಕಾರದ ವಿಳಂಬವೇ ಇದಕ್ಕೆ ಪ್ರಮುಖ ಕಾರಣವೆಂದು ಮೈಸೂರು- ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲು ಮಾರ್ಗದ ಈ ಯೋಜನೆ ಜಾರಿಯಾಗುವ ಪ್ರದೇಶಗಳಲ್ಲಿ ರಾಜ್ಯ ಸರಕಾರ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿತ್ತು. ಆದರೆ ಸಾಕಷ್ಟು ಮನವಿ ಬಳಿಕವೂ ಭೂಸ್ವಾಧೀನ ನಡೆಸದೆ ವಿಳಂಬ ನೀತಿ ಅನುಸರಿಸಿದೆ ಎಂದು ಟೀಕಿಸಿದರು. ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಯೋಜನೆ ಬಗ್ಗೆ ಮನವರಿಕೆ ಮಾಡಿ, ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಕೋರಲಾಗುತ್ತದೆ. ಉದ್ದೇಶಿತ ರೈಲು ಸಂಪರ್ಕ ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವುದು ಯೋಜನೆ ವಿಳಂಬಕ್ಕೆ ಕಾರಣವಲ್ಲ. ಕೆಲವೊಮ್ಮೆ ಆರ್ಥಿಕ ಲಾಭ ನೋಡುವುದಕ್ಕಿಂತ ಉದ್ದೇಶಿತ ಸ್ಥಳಗಳಿಗೆ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆ ಬಗ್ಗೆ ಗಮನ ನೀಡುವುದು ಮುಖ್ಯ ಎಂದು ಯದುವೀರ್ ಅಭಿಪ್ರಾಯಪಟ್ಟರು.






