ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
- *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
- *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
- *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
- *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
- *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
- *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
- *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
- *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
- *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*






