ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*
- *ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*
- *ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
- *ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*
- *ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*
- *ಎಸ್ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*
- *ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*
- *ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
- *ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*
- *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*






