ಲೇಖಕ: admin

ಮಡಿಕೇರಿ, ಜ.4 :  ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್  ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿ.ಪಂ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ…

Read More

ಮಡಿಕೇರಿ ಜ.4 : ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಜ.16 ರಿಂದ ಜ.18ರ ವರೆಗೆ ನಡೆಯಲಿರುವ ರಾಜ್ಯ ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಗೆ ಜ.8 ರಂದು ಕೊಡಗು ತಂಡದ ಆಡಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ಕುಶಾಲನಗರದ ಜ್ಞಾನಭಾರತಿ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಪುರುಷ ಆಟಗಾರರು 85 ಕೆ.ಜಿ.ಒಳಗಿರಬೇಕು, ಮಹಿಳಾ ಆಟಗಾರರು 75 ಕೆ.ಜಿ.ಒಳಗಿರಬೇಕು, ಪುರುಷರು ಹಾಗೂ ಮಹಿಳೆಯರು ಕ್ರೀಡಾ ಸಮವಸ್ತ್ರದೊಂದಿಗೆ ಹಾಜರಾಗಬೇಕೆಂದು ಕೊಡಗು ಜಿಲ್ಲಾ ಆಮೇಚೂರ್ ಕಬಡ್ಡಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಿ.ಎಸ್.ಮಧು : 9483825085, ಅವಿನಾಷ್ : 9036000141, ಮಣಿಕಂಠ : 9482863707 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.4 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಜ.6 ರಂದು ಮಾಸಿಕ ಸಾಮೂಹಿಕ ದುರ್ಗಾಪೂಜೆ ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ನಡೆಯಲಿರುವ ದುರ್ಗಾಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸೋಮವಾರಪೇಟೆ ಜ.4 : ತಾಲ್ಲೂಕಿನ ಮಾದಾಪುರ, ಬೇಳೂರು ಮತ್ತು ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿವೇಶನ ರಹಿತರಿಗೆ ವಿತರಿಸುವಂತೆ ಆಗ್ರಹಿಸಿ ಎಐಟಿಯುಸಿ ವತಿಯಿಂದ ತಹಸೀಲ್ದಾರ್ ಎಸ್.ಎನ್.ನರಗುಂದ ಅವರಿಗೆ ಮನವಿ ಸಲ್ಲಿಸಲಾಯಿತು. ಅನೇಕ ವರ್ಷಗಳಿಂದ ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ. ಲೈನ್ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಮನೆ ನಿಡುವಂತೆ ಸ್ಥಳೀಯ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರೂ, ಇಲ್ಲಿಯವರೆಗೆ ಕಾರ್ಯಗತವಾಗಿಲ್ಲ. ತಕ್ಷಣವೇ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ನೀಡುವಂತೆ ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ಸೋಮಪ್ಪ ಮನವಿ ಮಾಡಿದರು. ಗರಗಂದೂರು ಗ್ರಾಮದ ಸರ್ವೆ ನಂ.231/1ರಲ್ಲಿ 50.22 ಏಕರೆ ಜಾಗ ಮತ್ತು 22/1ರಲ್ಲಿ 1.83 ಏಕರೆ ಪೈಸಾರಿ ಜಾಗ ಇದ್ದು, ಈ ಜಾಗದಲ್ಲಿ ನಿವೇಶನ ರಹಿತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವಂತೆ ಹಲವಾರು ಭಾರಿ ಸಂಬಂಧಿಸಿದ ಇಲಾಖೆಯವರಿಗೆ…

Read More

ನಾಪೋಕ್ಲು ಜ.4 : ಉತ್ತಮ ಪರಿಸರದಲ್ಲಿ ಸರಳತೆ ಹಾಗೂ ಮೌಲ್ಯಯುತ ಶಿಕ್ಷಣ ದೊರೆಯುವುದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಗುರಿ ಸಾಧಿಸಬಹುದು ಎಂದು ವಿರಾಜಪೇಟೆಯ ಡಾ. ರೇಖಾ ಚಿಣ್ಣಪ್ಪ ಹೇಳಿದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿಯನ್ನು ಇರಿಸಿಕೊಳ್ಳಬೇಕು. ಉತ್ತಮ ಗುಣ ನಡತೆಗಳನ್ನು ರೂಡಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದರು. ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯವಿದ್ದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯ. ಮೌಲ್ಯಾಧಾರಿತ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಗುರಿಯಾಗಿರಬೇಕು ಎಂದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಬೊಪ್ಪಂಡ.ಎಂ.ಬೋಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಸ್ಥೆಯ ದ್ಯೇಯೋದ್ದೇಶ ಹಾಗೂ ಕಾರ್ಯ ಚಟುವಟಿಕೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಕಲಿಯಂಡ…

Read More

ಸೋಮವಾರಪೇಟೆ ಜ.4 : ಸೋಮವಾರಪೇಟೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಮೇರಿಕಾದಲ್ಲಿ ಕಿಡ್ನಿ ತಜ್ಞರಾಗಿರುವ ಶಾಸಕ ಅಪ್ಪಚ್ಚು ರಂಜನ್ ಅವರ ಪುತ್ರ ಎಂ.ಎ.ಕಾರ್ಯಪ್ಪ ಉಚಿತ ಆರೋಗ್ಯ ತಪಾಸಣೆ ನಡೆಸಿದರು. ಕಿಡ್ನಿಗೆ ಸಂಬಂಧಿಸಿದಂತೆ ರೋಗಿಗಳು ಸೋಮವಾರದಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Read More

ಸೋಮವಾರಪೇಟೆ ಜ.4 : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ 36ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿಯು ಜ.7ರಂದು ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಪಟ್ಟಣದ ಸಾಕಮ್ಮನ ಬಂಗಲೆ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗಲಿವೆ. ಮೈದಾನ ಶುಲ್ಕ 1200 ರೂ.ಗಳನ್ನು ನಿಗಧಿಪಡಿಸಲಾಗಿದೆ. ಮೊದಲ ಬಹುಮಾನ 10 ಸಾವಿರ ರೂ., ಎರಡನೇ ಬಹುಮಾನ 5ಸಾವಿರ, ತೃತೀಯ ಬಹುಮಾನ 3 ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಜ.7ರಂದು ಬೆಳಿಗ್ಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಮೈದಾನ ಶುಲ್ಕ 400ರೂ.ಗಳು, 20 ವರ್ಷದೊಳಗಿನ ಮಕ್ಕಳಿಗೂ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ರೂ.600 ಮೈದಾನ ಶುಲ್ಕವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9449791791 ಸಂಪರ್ಕಿಸಲು ಕೋರಿದ್ದಾರೆ.  

Read More

ಸೋಮವಾರಪೇಟೆ ಜ.4 : ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‍ಗೆ ಆಯ್ಕೆಯಾದ ಹಿನ್ನೆಲೆ ವಿದ್ಯಾರ್ಥಿನಿ ಹಾನಗಲ್ ಗ್ರಾಮದ ಸ್ನೇಹಾಳಿಗೆ ಸೋಮವಾರಪೇಟೆ ಜೇಸಿ ಸಂಸ್ಥೆಯಿಂದ ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಲಾಯಿತು. ಜ.8 ರಂದು ಅಸ್ಸಾಂನ ಕಾಮರೂಪ್‍ನಲ್ಲಿ ನಡೆಯಲಿರುವ 57ನೇ ನ್ಯಾಷನಲ್ ಕ್ರಾಸ್ ಕಂಟ್ರಿ ಅಥ್ಲೆಟಿಕ್ಸ್ ಚಾಂಪಿಯನ್‍ಶಿಫ್‍ಗೆ ಆಯ್ಕೆಯಾಗಿದ್ದಾರೆ. ಜೇಸಿ ಅಧ್ಯಕ್ಷೆ ಎಂ.ಎ.ರುಬಿನಾ, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ಲಕ್ಷ್ಮೀ ಕುಮಾರ್, ಜೂನಿಯರ್ ಜೇಸಿ ಚೇರ್ ಪರ್ಸನ್ ರಿಶಾ ಪ್ರಮುಖರಾದ ಮಾಯಾ ಗಿರೀಶ್, ಕೆ.ಎ. ಪ್ರಕಾಶ್, ಪುರುಷೋತ್ತಮ್ , ನಾಗರಾಜು, ಪೃಥ್ವಿ ಗೌಡ, ಸ್ನೇಹ ಪೋಷಕರಾದ ಮಹೇಶ್ ಮಂಜುಳಾ ಮತ್ತು ಜೇಸಿ ಪದಾಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ ಜ.4 : ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ ಶ್ರೀ ಗಣಪತಿ, ಭಗವತಿ ಹಾಗೂ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಥಮ ವರ್ಷದ ವಾರ್ಷಿಕ ಮಹಾಪೂಜೆ ಜ.7 ಮತ್ತು 8ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಪಿ.ಜಗನ್ನಾಥ್ ತಿಳಿಸಿದ್ದಾರೆ. ಜ.7 ರಂದು ಬೆಳಿಗ್ಗೆ 10 ಗಂಟೆಯಿಂದ ಗ್ರಾಮದಲ್ಲಿ ಚಂಡೆ ವಾದ್ಯದೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ, ಸಂಜೆ 6 ಗಂಟೆಯಿಂದ 1.30ರವರೆಗೆ ಮಹಾ ಭಗವತಿ ಸೇವೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.8 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆಯವರೆಗೆ ವಿವಿಧ ಪೂಜೆಗಳು, ಸಂಜೆ 4 ಘಂಟೆಗೆ ಅಯ್ಯಪ್ಪ ಆನಂದ ನೃತ್ಯ ನಡೆಯಲಿದೆ. ಕೇರಳದ ತಂತ್ರಿ ವರ್ಯರಾದ ಬ್ರಹ್ಮಶ್ರೀ ಹರಿಕೃಷ್ಣನ್ ನಂಬೂದರಿ ಅವರು ಪೂಜೆಯ ನೇತೃತ್ವವನ್ನು ವಹಿಸಲಿದ್ದಾರೆ.

Read More

ಸುಂಟಿಕೊಪ್ಪ ಜ.4 : ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 2023-24ನೇ ಸಾಲಿನ ಅಧ್ಯಕ್ಷರಾಗಿ 2ನೇ ಬಾರಿಗೆ ಅಂಬೆಕಲ್ ಚಂದ್ರಶೇಖರ್ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷರಾಗಿ ಎ.ಆರ್.ಗೋಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಶಂಕರನಾರಾಯಣ, ಖಜಾಂಜಿಯಾಗಿ ಕೆ.ಎಸ್.ವಿನೋದ್, ಸಹಕಾರ್ಯದರ್ಶಿಯಾಗಿ ಬಿ.ಎ.ವಸಂತ, ಕ್ರೀಡಾ ಕಾರ್ಯದರ್ಶಿಯಾಗಿ ಕೆ.ಜೆ.ಜಗದೀಶ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಪಿ.ಎಂ.ರವಿ, ಸಿ.ಬಿ.ಪ್ರವೀಣ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ 12 ಮಂದಿ ಸದಸ್ಯರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Read More