ಮಡಿಕೇರಿ ಜ.4 : ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 10ನೇ ವರ್ಷದ ‘ಚಂಡಿಕಾ ಹೋಮ’ ಕಾವೇರಿ ಕ್ಷೇತ್ರ ಭಾಗಮಂಡಲದ ಟ್ರಸ್ಟ್ ನ ಜಾಗದಲ್ಲಿ ಜ.15 ರಂದು ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ನ ಅಧ್ಯಕ್ಷರಾದ ಎಂ.ಬಿ.ದೇವಯ್ಯ, ಅಂದು ಸುಬ್ರಹ್ಮಣ್ಯ ಬೆಳ್ಳೂಕರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ 7 ಗಂಟೆಗೆ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರ ಪಠಣ ಹಾಗೂ ಚಂಡಿಕಾ ಹೋಮ ನಡೆಯಲಿದೆಯೆಂದು ಮಾಹಿತಿ ನೀಡಿದರು. ಜಿಲ್ಲೆಯ ಕೊಡವ ಮತ್ತು ಅಮ್ಮಕೊಡವ ಜನಾಂಗ ಬಾಂಧವರು ಒಂದಾಗಿ ಸೇರಿ ಟ್ರಸ್ಟ್ ನ ಸಹಯೋಗದಲ್ಲಿ ಚಂಡಿಕಾ ಹೋಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪುರಾಣಗಳಲ್ಲಿ ಪ್ರಸ್ತಾಪವಾಗಿರುವಂತೆ ಅಗಸ್ತ್ಯ ಮುನಿಗಳು ಮತ್ತು ಕಾವೇರಿಯ ನಡುವೆ ಕಲಹವೇರ್ಪಟ್ಟಾಗ ಕಾವೇರಿಯ ಪರವಾಗಿ ನಿಂತ ಕೊಡವರಿಗೆ ಮತ್ತು ಅಮ್ಮ ಕೊಡವರಿಗೆ ಅಗಸ್ತ್ಯ ಮುನಿಗಳು ಶಾಪ ನೀಡಿದ್ದರು. ಈ ಬಗ್ಗೆ ಅಷ್ಟಮಂಗಲ ಪ್ರಶ್ನೆಯಲ್ಲಿ ಬಂದ ಪರಿಹಾರ ಕ್ರಮಗಳಂತೆ ಕಾವೇರಿಯ…
ಲೇಖಕ: admin
ಸುಂಟಿಕೊಪ್ಪ ಜ.4 : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕೊಡಗು ಜಿಲ್ಲಾ ಪ್ರಾಚಾರ್ಯರುಗಳ ಸಂಘದ ವತಿಯಿಂದ 2021-22 ಸಾಲಿನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಲ್ಯಾಪ್ಟಾಪ್ ಅನ್ನು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿ.ಜೆ.ಸೌಮ್ಯ ಪಡೆದುಕೊಂಡರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈಕೆ ವಾಣಿಜ್ಯ ವಿಷಯದಲ್ಲಿ 556 ಅಂಕ ಪಡೆದು ಪರಿಶಿಷ್ಟ ಜಾತಿ ವಿಭಾಗದಲ್ಲಿ ಕೊಡಗಿನ ಪ್ರಥಮ ಸ್ಥಾನವನ್ನು ಪಡೆದಿದ್ದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲ್ಯಾಪ್ಟಾಪ್ ವಿತರಿಸಲಾಯಿತು. ಈಕೆ ಸುಂಟಿಕೊಪ್ಪ ಒಂದನೇ ವಿಭಾಗದ ಜ್ಞಾನೇಶ್ ಮತ್ತು ಪ್ರೇಮ ದಂಪತಿಗಳ ಪುತ್ರಿ.
ನಾಪೋಕ್ಲು ಜ.4 : ಹದಿ ಹರೆಯದವರು ಯಾವುದೇ ಆಕರ್ಷಣೆಗಳಿಗೆ ಬಲಿಯಾಗದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಏಡ್ಸ್ ನಿಯಂತ್ರಣ ಘಟಕದ ಸೂಪರಿಡೆಂಟ್ ಸುನೀತಾ ಹೇಳಿದರು. ಮೂರ್ನಾಡಿನ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹೆಚ್ಐವಿ ಹರಡುವಿಕೆ ಹಾಗೂ ಏಡ್ಸ್ ಜಾಗೃತಿ ಕುರಿತು ಮಾತನಾಡಿದ ಅವರು ಏಡ್ಸ್ ನಿಯಂತ್ರಣ ಕ್ರಮಗಳ ಬಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ದಮಯಂತಿ, ಉಪನ್ಯಾಸಕರಾದ ಕಲಾವತಿ, ಉಷಾ, ರಶ್ಮಿ ಉಪಸ್ಥಿತರಿದ್ದರು. ವರದಿ -ದುಗ್ಗಳ ಸದಾನಂದ
ಸೋಮವಾರಪೇಟೆ ಜ.3 : ಕರ್ನಾಟಕ ಸ್ಟೇಟ್ ಡ್ರೈವರ್ಸ್ ಆರ್ಗನೈಸೇಷನ್(ಕೆಟಿಡಿಒ) ಸಂಘದ ವತಿಯಿಂದ ಜ.26ರಂದು ಅದ್ಧೂರಿ ಗಣರಾಜ್ಯೋತ್ಸವ ಮತ್ತು ರಾಜ್ಯ ಮಟ್ಟದ ಮುಕ್ತ ನೃತ್ಯ ಸ್ಪರ್ಧೆ ನಡೆಸಲಾಗುವುದು ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ವಿ. ರವಿ ತಿಳಿಸಿದರು. ಅಂದು ಬೆಳಿಗ್ಗೆ ಜಿಲ್ಲಾ ಸಮಿತಿಯ ಸಮಾವೇಶ ನಡೆಸಲಾಗುವುದು. ನಂತರ ಖಾಸಗಿ ಬಸ್ ನಿಲ್ದಾಣದಲ್ಲಿನ ಬೃಹತ್ ವೇದಿಕೆಯಲ್ಲಿ ಮಧ್ಯಾಹ್ನ 2ಕ್ಕೆ ಪುರುಷೋತ್ತಮ್ ಮತ್ತು ತಂಡದದವರಿAದ ದೇಶ ಭಕ್ತಿ ಗೀತೆ ಕಾರ್ಯಕ್ರಮ ನಡೆಸಲಾಗುವುದು. ನಂತರ 12 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಹಾಗೂ 12 ವರ್ಷ ವಯೋಮಾನದ ನಂತರದವರಿಗೆ ರಾಜ್ಯಮಟ್ಟದ ಮುಕ್ತ ನೃತ್ಯ ಸ್ಪರ್ಧಾ ಕಾರ್ಯಕ್ರಮ ನಡೆಯುವುದು ಎಂದರು. ನೃತ್ಯ ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ ರೂ. 25ಸಾವಿರ, ದ್ವಿತೀಯ ಬಹುಮಾನ ರೂ. 15 ಹಾಗೂ ತೃತೀಯ ಬಹುಮಾನ ರೂ. 10ನ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ತಂಡಗಳಿಗೂ ಸಮಾಧಾನಕರ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು. ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಸಲಾಗುವುದು.…
ಸೋಮವಾರಪೇಟೆ ಜ.3 : ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಾರ್ಥ ನಗರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಘಟಕದ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ಸುಜಿತ್, ಬಿ.ಬಿ. ಆನಂದ್, ಬ್ಲಾಕ್ ಅಧ್ಯಕ್ಷ ಎಚ್.ಬಿ. ರಾಜಪ್ಪ, ಸೋಮವಾರಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ನಾಗರಾಜು, ಬಿ.ಕೆ. ದೇವರಾಜು ಮತ್ತಿತರರು ಇದ್ದರು. ಇದೇ ಸಂದರ್ಭ ಬೆಟ್ಟದಳ್ಳಿ ವಲಯದ ಪರಿಶಿಷ್ಟ ಜಾತಿ ಘಟಕವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಿ.ಆರ್. ಯೋಗೇಂದ್ರ, ಉಪಾಧ್ಯಕ್ಷರಾಗಿ ಬಿ.ಆರ್. ಧರ್ಮಪ್ಪ, ಬಿ.ಬಿ. ಜಯೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಸಿ. ಆದರ್ಶ್, ಖಜಾಂಚಿಯಾಗಿ ಬಿ.ಈ. ದಿಲೀಪ, ಸಮಿತಿ ಸದಸ್ಯರಾಗಿ ಬಿ.ಎ. ಅಭಿಷೇಕ್, ಬಿ.ಅರ್. ಧರ್ಮೇಂದ್ರ, ಬಿ.ಪಿ. ರಾಜು, ಬಿ.ಎಸ್. ಸುದೀಶಾ, ಬಿ.ಯು. ಲವಕುಶ, ಬಿ.ಎಸ್. ಭರತ್, ಬಿ.ಬಿ. ರಾಜ. ಬಿ.ಸಿ. ಚಂದ್ರ ಹಾಗೂ ಬಿ.ಈ. ಜಯಪ್ಪ ಆಯ್ಕೆಯಾದರು.
ಸೋಮವಾರಪೇಟೆ ಜ.3 : ಕುರುಹಿನಶೆಟ್ಟಿ ಸಮಾಜದ ಶ್ರೀ ರಾಮಮಂದಿರದಲ್ಲಿ ಸೋಮವಾರ 6ನೇ ವರ್ಷದ ವೈಕುಂಠ ಏಕಾದಶಿ ನಡೆಯಿತು. ಬೆಳಿಗ್ಗೆ 7 ರಿಂದ 10ರ ವರೆಗೆ ಮತ್ತು ಸಂಜೆ 5 ರಿಂದ 8-30ರ ವರೆಗೆ ಸ್ವರ್ಗದ ಬಾಗಿಲ ಪ್ರವೇಶ ಮತ್ತು ದೇವರ ದರ್ಶನ ನಡೆಯಿತು. ಸಂಜೆ 5ಕ್ಕೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ, ಪಠನ, ನಂತರ ಆರ್ಟ್ ಆಫ್ ಲಿವಿಂಗ್ನ ಸೂರ್ಯಪಾದಾಜೀ ಮತ್ತು ತಂಡದವರಿಂದ ದಿವ್ಯಸತ್ಸಂಗ ನಡೆಯಿತು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಸಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ಸೀತಾ ಬಳಗದ ಅಧ್ಯಕ್ಷೆ ಲೀಲಾ ನಿರ್ವಾಣಿ, ರಾಮ ಯುವಕ ಸಂಘದ ಅಧ್ಯಕ್ಷ ಬಿ.ಜಿ. ರವಿ, ಪ್ರಮುಖರಾದ ಸತಿನ್ ಸಿದ್ದಪ್ಪ, ಬಿ.ಎಂ. ಶ್ರೀಧರ್ ಮತ್ತಿತರರು ಇದ್ದರು.
ವಿರಾಜಪೇಟೆ ಜ.3 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 21 ರಂದು ನಡೆಯಲಿರುವ ವಿರಾಜಪೇಟೆ ತಾಲ್ಲೋಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕೊಡಗಿನ ಪಕ್ಷಿತಜ್ಞ, ಪರಿಸರ ಬರಹಗಾರ ಡಾ.ಎಸ್.ವಿ ನರಸಿಂಹನ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ತಾಲ್ಲೋಕಿನ ಆರ್ಜಿ ಮತ್ತು ಬೇಟೋಳಿ ಗ್ರಾಮದಲ್ಲಿ ಈ ಬಾರಿಯ ತಾಲ್ಲೋಕು ಸಮ್ಮೇಳನ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ.ಎಸ್.ವಿ.ನರಸಿಂಹನ್ ವಹಿಸಲಿದ್ದಾರೆ. ಇಂದು ವಿರಾಜಪೇಟೆ ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿರಾಜಪೇಟೆಯ ಪುರಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ವಿರಾಜಪೇಟೆ ತಾಲ್ಲೋಕು ಕ.ಸಾ.ಪ ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆಯಲ್ಲಿ, ಜಿಲ್ಲಾಧ್ಯಕ್ಷರಾದ ಕೇಶವ ಕಾಮತ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತಾಲ್ಲೋಕು ಕಸಾಪ ನಿಕಟ ಪೂರ್ವ ಅಧ್ಯಕ್ಷ ಮದೋಶ್ ಪೂವಯ್ಯ ಹಾಗೂ ಸಭೆಯ ಸರ್ವಾನುಮತದ ಒಪ್ಪಿಗೆಯ ಮೂಲಕ ಸಮ್ಮೇಳನ ಅಧ್ಯಕ್ಷರ ಆಯ್ಕೆಯನ್ನು ಮಾಡಲಾಯಿತು. ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಎಸ್.ವಿ.ನರಸಿಂಹನ್ ಮೂಲತಃ ವಿರಾಜಪೇಟೆಯವರೇ ಆಗಿದ್ದು, ಡಾ.ದೇಶಿಕಾಚಾರ್ ಹಾಗೂ ಜಾನಕಮ್ಮ ದಂಪತಿಗಳ ಸುಪುತ್ರ. ವೃತ್ತಿಯಿಂದ ವೈದ್ಯರಾಗಿರುವ ಇವರು ಪ್ರವೃತ್ತಿಯಿಂದ ಪಕ್ಷಿತಜ್ಞ, ಪರಿಸರ ಬರಹಗಾರ,…
ಕುಶಾಲನಗರ, ಜ.3 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿದಿನ ಕುಶಾಲನಗರದ ಬಸ್ ನಿಲ್ದಾಣದಿಂದ ಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯವನ್ನು ಮಂಗಳವಾರದಿಂದ ಕಲ್ಪಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಕುಶಾಲನಗರದಿಂದ ಬಸ್ ಹೊರಟು 9.45 ಕ್ಕೆ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ತಲುಪಲಿದೆ. ಸಂಜೆ 5 ಗಂಟೆಗೆ ಕೇಂದ್ರದಿಂದ ಕುಶಾಲನಗರಕ್ಕೆ ತಲುಪಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೇಂದ್ರದ ಪ್ರಭಾರ ನಿರ್ದೇಶಕರಾದ ಡಾ. ಕೆ. ಕೆ. ಧರ್ಮಪ್ಪ ತಿಳಿಸಿದ್ದು,ಕ್ಷೇತ್ರ ಶಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಕುಶಾಲನಗರ ಡಿ.3 : ಸೋಮವಾರ ರಾತ್ರಿ ಲಿಂಗೈಕ್ಯರಾದ ಬಿಜಾಪುರದ ಜ್ಞಾನ ಯೋಗಾಶ್ರಮದ ಸಂತ ಸಿದ್ದೇಶ್ವರ ಸ್ವಾಮೀಜಿಗಳ ಸಂತಾಪ ಸಭೆ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಸದಾ ಶ್ವೇತ ವಸ್ತ್ರಧಾರಿಗಳಾಗಿ ಸರಳವಾಗಿ ಬದುಕು ನಡೆಸಿದವರು. ನಿತ್ಯವೂ ಪ್ರವಚನಗಳ ಮೂಲಕ ಸಹಸ್ರಾರು ಭಕ್ತರ ಬದುಕನ್ನು ಕಟ್ಟಿದ ಶ್ರೀಗಳು ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ನಡೆದಾಡುವ ದೇವರಾದರು ಎಂದು ಬಣ್ಣಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಭಕ್ತರ ಪಾಲಿನ ನಿಜದೈವ ಸಿದ್ದೇಶ್ವರ ಶ್ರೀಗಳು ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ, ಮಹಾವೀರ ಮೊದಲಾದ ಶ್ರೇಷ್ಟ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದ ಶ್ರೀಗಳು ಪ್ರತಿದಿನ ಆಶ್ರಮದ ಆವರಣದಲ್ಲಿ ಮುಂಜಾನೆ ಸಮಯ ನೀಡುತ್ತಿದ್ದ ಪ್ರವಚನಕ್ಕೆ ಭಕ್ತರ ದಂಡೇ ಕಾದಿರುತ್ತಿತ್ತು . ಹಾಗಾಗಿ ಶ್ರೀಗಳ ಅಗಲಿಕೆಯಿಂದ ಭಕ್ತ ಕುಲ ಬಡವಾಗಿದೆ ಎಂದರು. ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ವಿಜೇತ್, ಹೆಬ್ಬಾಲೆ ಹೋಬಳಿ ಕಸಾಪ ಅಧ್ಯಕ್ಷ ಮಣಜೂರು…
ಕುಶಾಲನಗರ ಜ.3 : ಕುಶಾಲನಗರ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಕನ್ನಡ ಹಬ್ಬವಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕೆಂದು ಪ್ರಥಮ ಸಾಹಿತ್ಯ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ವುರಂಜನ್ ಕರೆನೀಡಿದ್ದಾರೆ. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಸಮ್ಮೇಳನದ ಅಂಗವಾಗಿ ಊರಿನ ಕಟ್ಟಡಗಳು, ಬೀದಿಗಳನ್ನು ಅಲಂಕರಿಸುವ ಮೂಲಕ ಸಮ್ಮೇಳನವನ್ನು ವ್ಯವಸ್ಥಿತವಾಗಿ, ಯಶಸ್ವಿಯಾಗಿ ನಡೆಸುವ ಸಂಬಂಧ ಸಾರ್ವಜನಿಕರು ಹಾಗು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸಾಹಿತ್ಯ, ಕಲೆ, ಸಂಸ್ಕøತಿ ಬೆಳಗಲು ವಿದ್ಯಾರ್ಥಿಗಳ ಪಾತ್ರ ಹಾಗೂ ಸಮ್ಮೇಳನದ ಮೆರವಣಿಗೆಯ ರೂಪುರೇμÉಗಳ ಕುರಿತು ಸಲಹೆ ನೀಡಿದರು.ಸಮ್ಮೇಳನಕ್ಕೆ ಅಗತ್ಯವಿರುವ ಆರ್ಥಿಕ ಕ್ರೋಢಿಕರಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕುಶಾಲನಗರದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಜಾತಿ, ಮತ ಭೇದಗಳನ್ನು ಲೆಕ್ಕಿಸದೆ ಸರ್ವರೂ ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ನಿಕಟಪೂರ್ವಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ…






