ಮಡಿಕೇರಿ ಜ.3 : ಕನ್ನಡ ಚಿತ್ರರಂಗದಲ್ಲಿ ಕೊಡಗಿನ ಹತ್ತಾರು ಪ್ರತಿಭೆಗಳು ಮಿಂಚಿದ್ದಾರೆ. ಈಗಲೂ ಮಿಂಚುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮೂಲತಃ ಇಬ್ಬನಿವಲವಾಡಿ ಗ್ರಾಮದ ಮಾಲೆರ ಪ್ರಮೋದ್ ಬೋಪಣ್ಣ ಹೊಸ ಎಂಟ್ರಿಯಾಗಿದ್ದಾರೆ. ಇವರು ನಾಯಕ ನಟನಾಗಿ ಬಣ್ಣ ಹಚ್ಚಿರುವ ಮರೆಯದೆ ಕ್ಷಮಿಸು ಕನ್ನಡ ಚಲನಚಿತ್ರ ಇದೇ ಜ.6ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಆರ್.ವಿ.ಎಸ್ ಪ್ರೊಡಕ್ಷನ್ ಬ್ಯಾನರ್ ನಡಿ , ವಿ. ಶಿವರಾಂ ನಿರ್ಮಾಣದ, ಕೆ. ರಾಘವ್ ನಿರ್ದೇಶನದ ಮರೆಯದೆ ಕ್ಷಮಿಸು ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಸದ್ಯ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರತಂಡ ಇದೀಗ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ರಿಷಿಕೇಶ್ ಛಾಯಾಗ್ರಹಣ , ಆರೋನ್ ಕಾರ್ತಿಕ್ ವೆಂಕಟೇಶ್, ಕ್ರಿಸ್ಟೋಫರ್ ಸಂಗೀತ, ಧನುಷ್ ಸಂಕಲನ ಈ ಚಿತ್ರಕ್ಕಿದೆ. ಉದಯ ಟಿವಿಯಲ್ಲಿ ವಾರ್ತಾ ವಾಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಮೋದ್, ಬಳಿಕ ಹಲವು ಧಾರವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಮರೆಯದೆ ಕ್ಷಮಿಸು ಚಿತ್ರದ ಮೂಲಕ ನಾಯಕನಟನಾಗಿ ಬಡ್ತಿ ಪಡೆದಿದ್ದಾರೆ.…
ಲೇಖಕ: admin
ವಿರಾಜಪೇಟೆ ಜ.3 : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಕಾಳೇಘಾಟ್ ಕಳಿಯಾಟ್ ಮಹೋತ್ಸವವು ಜ.11 ರಿಂದ 13ರ ವರೆಗೆ ಜರುಗಲಿದೆ ಎಂದು ಆಡಳಿತ ಮಂಡಳಿಯು ತಿಳಿಸಿದೆ. ಜ.11 ರಂದು ಬೆಳಿಗ್ಗೆ ಗಣಹೋಮ , ಉಷಾಪೂಜೆ , ಉಚ್ಚಪೂಜೆ , ದೀಪಾರಾಧನೆ , ಅತ್ತಾಳಪೂಜೆ ಹಾಗೂ ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.12 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.13 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಜ.3 : ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ 11 ನೇ ಸಮ್ಮೇಳನದ ಸ್ವಾಗತ ಸಮಿತಿ ಸಭೆಯು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಉಪಸ್ಥಿತಿಯಲ್ಲಿ ಜನವರಿ, 4 ರಂದು ಮಧ್ಯಾಹ್ನ 3.30 ಗಂಟೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರು ಮತ್ತು ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ತಿಳಿಸಿದ್ದಾರೆ.
ಮಡಿಕೇರಿ ಜ.3 : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ…
ಮಡಿಕೇರಿ ಜ.3 : ಪ್ರಸಕ್ತ (2022-23) ಸಾಲಿನ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಸಂಸ್ಥೆಗಳಿಂದ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022-23ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಜ.1, 2022 ರಿಂದ ಡಿಸೆಂಬರ್ 31, 2022ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು…
ಮಡಿಕೇರಿ ಜ.3 : ವಿಕಲಚೇತನರ ರಿಯಾಯಿತಿ ದರದ ಬಸ್ಪಾಸ್ಗಳನ್ನು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು 2022 ರ ಡಿಸೆಂಬರ್, 31 ರವರೆಗೆ ಮಾನ್ಯತೆ ಇರುವ, ವಿಕಲಚೇತನರ ಪಾಸ್ಗಳನ್ನು 2023 ರ ಫೆಬ್ರವರಿ, 28 ರವರೆಗೆ ಮಾನ್ಯ ಮಾಡಲಾಗಿದೆ. 2022 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳನ್ನು 2022 ರ ಡಿಸೆಂಬರ್, 26 ರಿಂದ ವಿತರಿಸಲು ಅವಕಾಶ ಕಲ್ಪಿಸಿದ್ದು ಆನ್ಲೈನ್ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2023 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕ ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಅಥವಾ ಡಿ.ಡಿ.ರೂಪದಲ್ಲಿ ಪಾವತಿಸಿ ವಿಕಲಚೇತನರ ರಿಯಾಯಿತಿ ದರದ ಬಸ್ಪಾಸ್ಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829ರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.3 : ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2022-23 ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸಿಯಾಗಿರುವ 20 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ಜನವರಿ, 13 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ(ದೂ.ಸಂ.08272-228427) ಮತ್ತು ಕೊಡಗು ಜಿಲ್ಲೆಯಲ್ಲಿರುವ ಗೃಹರಕ್ಷಕದಳದ ಘಟಕ ಕಚೇರಿಯ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು. ಘಟಕಾಧಿಕಾರಿಗಳ ವಿವರ ಮಡಿಕೇರಿ ಘಟಕ ವೈ.ಎನ್.ಕವನ್ಕುಮಾರ್ 9448204356, ಭಾಗಮಂಡಲ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಎಚ್.ಸಿ.ತಿಮ್ಮು 9663765849, ಕುಶಾಲನಗರ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಎಸ್.ಆರ್.ದೇವರಾಜು 9482729233, ಶನಿವಾರಸಂತೆ ಈ.ಬಿ.ಲೋಕೇಶ 9902047075 ಇವರಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು…
ಮಡಿಕೇರಿ ಜ.3 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ವಿತರಿಸಿದರು. ನಗರದ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೆಯೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು. ಬಳಿಕ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಉದ್ಯೋಗ ಪಡೆಯುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಸಮಯವನ್ನು ವ್ಯರ್ಥ ಮಾಡದೆ ಇರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂದು ಪುಟ್ಟರಾಜು ಅವರು ಹೇಳಿದರು. ಕಳೆದ 2022 ರ…
ಮಡಿಕೇರಿ ಜ.3 : 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ…
ಮಡಿಕೇರಿ ಜ.3 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಜ.4 ರಂದು ಕೊಡಗಿನಲ್ಲಿ ಲಭ್ಯ ಇರಲಿದ್ದಾರೆ. ಗ್ಯಾಸ್ಟ್ರೋಎಂಟೆರಾಲಜಿ ಮತ್ತು ಹೆಪಟಾಲಜಿ ತಜ್ಞ ಡಾ. ದೇವರಾಜ ಆರ್. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4ರ ವರೆಗೆ ವಿರಾಜಪೇಟೆಯ ಕೂರ್ಗ್ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 2ರ ವರೆಗೆ ನಾರಾಯಣ ಮೆಡಿಕಲ್ ಸೆಂಟರ್ (ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್) ನಲ್ಲಿ ದೊರೆಯಲಿದ್ದಾರೆ. ಕರುಳಿನ ಕಾಯಿಲೆಗಳು, ಕಾಮಲೆ, ವಾಂತಿಯಲ್ಲಿ ರಕ್ತ, ಗುದನಾಳದ ರಕ್ತಸ್ರಾವ, ಎದೆಯುರಿ, ಡೆಸ್ಫೇಜಿಯಾ, ಜೀರ್ಣಾಂಗದ ಸಮಸ್ಯೆಗಳು, ಪಿತ್ತಕೋಶ ಮತ್ತು ಪ್ಯಾಂಕ್ರಿಯಾಟಿಕ್ ಅಸ್ವಸ್ಥತೆಗಳ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8884458890, 9513408004, 8197623892 ಸಂಪರ್ಕಿಸಬಹುದಾಗಿದೆ. ಪ್ರಸೂತಿ ಮತ್ತು ಸ್ತ್ರೀ ರೋಗ : ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಕುಶಾಲನಗರದ ನಾರಾಯಣ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಪಾಸಣೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ 4 ಗಂಟೆ…






