ಲೇಖಕ: admin

ಮಡಿಕೇರಿ ಜ.3 :   ವಿದ್ಯಾರ್ಥಿಗಳು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಉತ್ತಮ ಭವಿಷ್ಯಕ್ಕೆ ಗ್ರಾಮದಲ್ಲಿರುವ ಅಂಗನವಾಡಿಗಳನ್ನು ವಿದ್ಯಾರ್ಥಿಗಳಿಗೆ ಪೂರಕವಾಗುವ ಗ್ರಂಥಾಲಯವನ್ನಾಗಿ ಮಾರ್ಪಾಡು ಮಾಡಬೇಕು ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಮಾ ಮಹಾದೇವನ್ ಅಭಿಪ್ರಾಯಪಟ್ಟರು. ಹೊದ್ದೂರು ಗ್ರಾ.ಪಂ ಮತ್ತು ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಮತ್ತು  ಕಾನ್ಸಿರಾಂಜೀ ನಗರ ಪಾಲೆಮಾಡಿನ ಸಾವಿತ್ರಿ ಬಾಯಿ ಫುಲೆ ಗ್ರಂಥಾಲಯಕ್ಕೆ ಭೇಟಿ ನೀಡಿದ  ಉಮಾ ಮಹಾದೇವನ್  ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಪ್ರಸಂಶಿಸಿದರು. ಬಳಿಕ ಮಾತನಾಡಿದ ಅವರು ಗ್ರಂಥಾಲಯಗಳಲ್ಲಿ ದೇಶದ ಗಣ್ಯ ವ್ಯಕ್ತಿಗಳು, ಗ್ರಾಮೀಣ ಮಟ್ಟದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು  ಮತ್ತು ಗ್ರಾಮೀಣ ಮಟ್ಟದ ಸಾಧಕರ  ಭಾವಚಿತ್ರಗಳನ್ನು ಅಳವಡಿಸಬೇಕು. ಇದರಿಂದ ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯುತ್ತಾರೆ. ದೇಶದ ಅಭಿವೃದ್ಧಿ ಎಂದರೆ ಇಂದಿನ ವಿದ್ಯಾರ್ಥಿಗಳನ್ನು ಭವಿಷ್ಯ ಭಾರತಕ್ಕೆ ಉತ್ತಮ ಪ್ರಜೆಗಳನ್ನಾಗಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗುವಂತೆ ಮಕ್ಕಳಿಗೆ ಉತ್ತಮ ಬೋಧಕರನ್ನು ಒದಗಿಸಬೇಕು ಮತ್ತು ಕೌಶಲ್ಯ…

Read More

ಮಡಿಕೇರಿ, ಜ.3: ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  ಗಮನ ಸೆಳೆಯಿತು. “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು. ಸಮಾವೇಶದ ಕೇಂದ್ರ ವಿಷಯದಡಿ ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು, ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭ್ಯಾಸಗಳು, ಸ್ವಾವಲಂಬನೆಗಾಗಿ ಪರಿಸರ ವ್ಯವಸ್ಥೆ ಆಧಾರಿತ ವಿಧಾನಗಳು ಹಾಗೂ ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವೀನ್ಯತೆ’ ಎಂಬ ಉಪ…

Read More

ಮಡಿಕೇರಿ ಜ.3 : ನಗರದ ತ್ಯಾಗರಾಜ ಕಾಲೋನಿಯಲ್ಲಿರುವ ‘ತಣಲ್’ ಆಶ್ರಮದ ಪ್ರಯತ್ನದ ಫಲವಾಗಿ ಮಹಿಳೆಯೊಬ್ಬರು 9 ವರ್ಷಗಳ ನಂತರ ತನ್ನ ಪತಿಯ ಜೊತೆಯಾಗಿದ್ದಾರೆ. ಮಾನಸಿಕ ಸಮಸ್ಯೆಯಿಂದಾಗಿ ಕುಟುಂಬದವರಿಂದ ದೂರವಾಗಿದ್ದ ಹರಿಯಾಣ ಮೂಲದ ದರ್ಶನ ಕಳೆದ ನಾಲ್ಕು ವರ್ಷಗಳಿಂದ ‘ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ 32 ವರ್ಷಗಳ ಹಿಂದೆ ದೆಹಲಿ ಮೂಲಕ ಲೆಹರ್ ಸಿಂಗ್ ಎಂಬವರೊಂದಿಗೆ ವಿವಾಹವಾಗಿದ್ದ ದರ್ಶನ. ಸಮಸ್ಯೆಗಳ ನಡುವೆ ದೆಹಲಿಯಲ್ಲಿ ತನ್ನ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದರ್ಶನ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ಪೊಲೀಸ್ ಠಾಣೆಗೆ ದೂರು ನೀಡದರೂ ಯಾವುದೇ ಸುಳಿವು ದೊರೆತ್ತಿರಲಿಲ್ಲ. 2018ರ ಜುಲೈನಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ದರ್ಶನ ಅವರನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು. ಸಾಮಾಜಿಕ ಸಂಸ್ಥೆಯಾಗಿರುವ ತಣಲ್ ಆಕೆಯನ್ನು ಕರೆದುಕೊಂಡು ಬಂದು ಪೋಷಣೆಗೆ ಮುಂದಾಯಿತು. ಇದೀಗ ದರ್ಶನ ಆರೋಗ್ಯದಲ್ಲಿ ಶೇ.80…

Read More

ಮಡಿಕೇರಿ ಜ.3  : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವತೋಮುಖ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಶ್ರೇಯಾಂಕ ನೀಡುವ ಸಲುವಾಗಿ  ಜ.4 ಮತ್ತು 5 ರಂದು  ನ್ಯಾಕ್ ಸಂಸ್ಥೆಯು ಕಾಲೇಜಿನ ಭೇಟಿ ನೀಡುತ್ತಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಕೆ.ಸಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜ.4 ರಂದು  ಮಧ್ಯಾಹ್ನ 12 ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ವತಿಯಿಂದ 8ನೇ ವಾರ್ಷಿಕ ಗ್ರಾಮೀಣ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಎಂ.ಎಸ್.ಕಾಂತಿ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಪರಮೇಶ್ವರ ಪರಿಶಿಷ್ಟ ಪಂಗಡದ ಜನಾಂಗ ಬಾಂಧವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಗ್ರಾಮೀಣ ಕೂಟವನ್ನು ಆಯೋಜಿಸಲಾಗಿದೆ. ಇದು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು. ಯುವಕರು ಯುವತಿಯರು ಸಂಘಟನಾತ್ಮಕವಾಗಿ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಸರ್ಕಾರ ಪರಿಶಿಷ್ಟ ಪಂಗಡದವರಿಗೆ ಹಲವು ಯೋಜನೆಗಳನ್ನು ಜಾರಿಗೆ…

Read More

ಮಡಿಕೇರಿ, ಜ.3 :  ವಿದ್ಯಾರ್ಥಿಗಳು ವಿಜ್ಞಾನಿಗಳ ಅನ್ವೇಷಣೆ ಹಾಗೂ ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಅಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭಾಶಯ ತಿಳಿಸಿದರು. ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ…

Read More

ಮಡಿಕೇರಿ ಜ.3 : ಕೊಡಗು ಜಿಲ್ಲೆಯ ಹೆಚ್ಚುವರಿ ಎಸ್.ಪಿ.ಆಗಿ ಕೆ.ಎಸ್.ಸುಂದರರಾಜ್ ನೇಮಕಗೊಂಡಿದ್ದಾರೆ. ಚಾಮರಾಜ ನಗರದ ಎ.ಎಸ್.ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸುಂದರರಾಜ್ ಅವರು ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಆಗಿ, ಡಿವೈಎಸ್‍ಪಿ ಆಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಪತಿ ಪದಕ ಪಡೆದ ಅಧಿಕಾರಿಯಾಗಿರುವ ಇವರನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Read More

ವಿರಾಜಪೇಟೆ ಜ.3 :  : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಡಾಂಬರಿಕರಣ, ಚರಂಡಿ, ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ರೂ, 3.5 ಕೋಟಿ ಅನುದಾನದಲ್ಲಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ನಗರದ ಜನತೆಗೆ ಕುಡಿಯುವ ನೀರು ಹೆಚ್ಚಿನ ಪೂರೈಕೆಗಾಗಿ ರೂ,65 ಕೋಟಿ ಅನುದಾನ ಮಂಜುರಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂ, 25 ಲಕ್ಷ ಅನುದಾನದಲ್ಲಿ ವಿರಾಜಪೇಟೆಯ ಸುಂಕದಕಟ್ಟೆ ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ  ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿ ಈಗಾಗಲೇ ನಗರದ ಎಲ್ಲಾ ಮನೆ ಮನೆಗಳಿಗು ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದ್ದರು ಮುಂದೆಯು ಕುಡಿಯುವ ನೀರಿನ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ 65 ಕೋಟಿ ರೂ, ಅನುದಾನ ಮಂಜೂರು ಮಾಡಲಾಗಿದ್ದು ಮುಂದಿನ ದಿನದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದ ಶಾಸಕ ಬೋಪಯ್ಯ ಅವರು ಸರಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳು ಕಳಪೆಯಾಗದಂತೆ ಸ್ಥಳಿಯರು ಗಮನ ಹರಿಸಬೇಕು ಹಾಗೂ ಗುತ್ತಿಗೆದಾರರು…

Read More