ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*
- *ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*
- *ಆ.17 ರಂದು ಸಿಎನ್ಸಿ ‘ಕೊಡವ ಜನಸಂಪರ್ಕ ಅಭಿಯಾನ’ ಮರೇನಾಡಿನ ಬಿರುನಾಣಿಯಿಂದ ಆರಂಭ*
- *ಎನ್ಎಂಸಿಯಲ್ಲಿ ಸಂಭ್ರಮದ ಆಟಿ ಆಚರಣೆ : ಸಂಸ್ಕೃತಿ – ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ” : ಕೆ.ಸಿ.ಅಕ್ಷಯ್ *
- *ಆ.15 ರಂದು ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ*
- *ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*
- *ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*
- *ಆ.18 ರಂದು ಮಿನಿ ಉದ್ಯೋಗ ಮೇಳ*
- *ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*
- *ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*






