ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*
- *ಇಂಜಿಲಗೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ*
- *ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*
- *ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*
- *ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*
- *ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*
- *ಆ.16 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಡಗಿಗೆ ಭೇಟಿ*
- *ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪುವಂತಾಗಬೇಕು : ಮೆಹರೋಜ್ ಖಾನ್*
- *ಓಂಕಾರೇಶ್ವರ ಸನ್ನಿಧಿಯಲ್ಲಿ ನಾಟಿ ಕಾರ್ಯ*
- *ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯವನ್ನು ವಿರೋಧಿಸಬಹುದು, ಆದರೆ ಅವರ ಮಾನವ ಘನತೆಯನ್ನು ಅಲ್ಲ : ವೇದಿಕೆ ಶುದ್ಧೀಕರಣ ನೋವಿನ ವಿಚಾರ : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್*






