ಲೇಖಕ: admin

ಮಡಿಕೇರಿ, NEWS DESK ಫೆ.16:-ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‍ಲಾವುಡ್ ಇಂಡಿಯಾ ಫೌಂಡೇಶನ್ ಮತ್ತು ವಕೀಲರ ಸಂಘ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 18 ರಿಂದ 21 ರವರೆಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ. ಫೆಬ್ರವರಿ 18 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧಿಶರಾದ ಹೊಸಮನಿ ಪುಂಡಲಿಕ ಅವರು ಉದ್ಘಾಟಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅಧ್ಯಕ್ಷತೆ ವಹಿಸಲಿದ್ದು, 1 ನೇ ಅಪರ ಜಿಲ್ಲಾ ಮತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಸಿ.ವೀರಭದ್ರಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಡಿ.ಎಸ್.ವಿನುತ ಪಾಲ್ಗೊಳ್ಳಲಿದ್ದಾರೆ. ತರಬೇತುದಾರರಾದ ಮೀಮಾನ್ಸ ಸಿಂಗ್, ಶಮಾ ಡಿ., ನಿಹಾರಿಕಾ ನಾಯ್ಡು…

Read More

ಕುಶಾಲನಗರ, NEWS DESK ಫೆ.16 : ಕುಶಾಲನಗರ ತಾಲ್ಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13 ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭ ಈ ತಿಂಗಳ 19ರಂದು ನಡೆಯಲಿದ್ದು, ಸುತ್ತೂರು ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಆಗಮಿಸಲಿದ್ದಾರೆ ಎಂದು ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ತಿಳಿಸಿದ್ದಾರೆ. ಕುಶಾಲನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ತೊರೆನೂರು ವಿರಕ್ತ ಮಠ ಶ್ರೀ ಮರುಳ ಸಿದ್ದೇಶ್ವರ ಸ್ವಾಮೀಜಿಯವರ ತಪೋಕ್ಷೇತ್ರವಾಗಿದ್ದು, ಶ್ರೀ ಮಠಕ್ಕೆ ಪುರಾತನ ಐತಿಹ್ಯ ವಿದೆ. ವಿರಕ್ತಮಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗಳು ಹಾಗೂ ನಿಕಟ ಪೂರ್ವ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಯವರ 13ನೇ ವರ್ಷದ ಸಂಸ್ಮರಣೋತ್ಸವ 19 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ. ಸುತ್ತೂರು ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮವನ್ನು ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಲಿದ್ದು ಮಡಿಕೇರಿ ಶಾಸಕ…

Read More

ಮಡಿಕೇರಿ NEWS DESK ಫೆ. 16 – ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ನಿಮಿ೯ಸಲಾದ  ಫಾಮಾ೯ ಭವನವು ಫೆಬ್ರವರಿ 19 ರಂದು ಗುರುವಾರ ಬೆಳಗ್ಗೆ 9.30  ಗಂಟೆಗೆ ಚೈನ್ ಗೇಟ್ ಬಳಿ ಉದ್ಘಾಟನೆಯಾಗಲಿದೆ. ಕನಾ೯ಟಕ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಆರ್. ರಘುನಾಥ ರೆಡ್ಡಿ ಅವರು ಫಾಮಾ೯ಭವನವನ್ನು ಉದ್ಘಾಟಿಸಲಿದ್ದು,  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಅಂಬೆಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಆಯೋಜಿತ ಸಮಾರಂಭದಲ್ಲಿ  ಮೈಸೂರು  ಪ್ರಾದೇಶಿಕ ಔಷಧ ನಿಯಂತ್ರಕರ ಕಛೇರಿಯ  ಉಫ ಆಯುಕ್ತ  ಬಿ.ಪಿ. ಅರುಣ್,  ಕೊಡಗು ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಾದ   ಅಜಯ್ ರಾಜ್ ಷಾ, ಕನಾ೯ಟಕ ಔಷದಿ ವ್ಯಾಪಾರಿಗಳ ಸಂಘದ ಖಜಾಂಜಿ ಬಿ. ಉಮೇಶ್,   ಸಂಘದ ರಾಜ್ಯ ಕಾನೂನು ಸಲಹೆಗಾರ ಕೆ.ಹರೀಶ್,, ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ್, ಉಪಾಧ್ಯಕ್ಷರುಗಳಾದ ಅಂಬೆಕಲ್ ವಿನೋದ್,  ಮೇವಿ೯ನ್ ಫನಾ೯ಂಡೀಸ್, ಜಂಟಿ ಕಾಯ೯ದಶಿ೯ ಕೆ.ವಸಂತ್ ಕುಮಾರ್, ಖಜಾಂಚಿ ಪ್ರಸಾದ್ ಗೌಡ ವೇದಿಕೆಯಲ್ಲಿರುತ್ತಾರೆ. ಫಾಮಾ೯ ಭವನದ…

Read More

ಮಡಿಕೇರಿ NEWS DESK ಫೆ.16 : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಪತ್ರ ಬಂದಿದೆ. ಇಂದು ಮಧ್ಯಾಹ್ನ 12:30ಕ್ಕೆ ನ್ಯಾಯಾಲಯವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇ ಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ನ್ಯಾಯಾಲಯದಿಂದ ಹೊರಬಂದಿದ್ದಾರೆ. ಬಾಂಬ್ ನಿಗ್ರಹದಳ ಪರಿಶೀಲನೆ ನಡೆಸುತ್ತಿದೆ. ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ಮೂಡಿದೆ.

Read More

ಪೊನ್ನಂಪೇಟೆ NEWS DESK ಫೆ.15 : ಪೊನ್ನಂಪೇಟೆ ತಾಲ್ಲೂಕು ಬಿರುನಾಣಿಯ ಪರಕಟಗೇರಿ ಶ್ರೀ ಧಾರಮಹೇಶ್ವರ ದೇವಾಲಯಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಭೇಟಿ ನೀಡಿದರು. ಶಾಸಕರ ಅನುದಾನ ರೂ.5 ಲಕ್ಷಗಳಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನು ಉದ್ಘಾಟಿಸಿದರು. ಬ್ಲಾಕ್ ಅಧ್ಯಕ್ಷ ಮಿದೇರೀರ ನವೀನ್, ವಲಯ ಅಧ್ಯಕ್ಷ ಕುಪ್ಪಣ್ಣಮಾಡ ಪ್ರೀತಮ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಮೊಟ್ಟಯ್ಯ, ಬುಟಿಯಂಡ ತಂಬಿ ನಾಣಯ್ಯ, ಗಣಪತಿ, ಬೊಳೇರ ಅಪ್ಪುಟು, ಕಳಕಂಡ ಜಿತ್ತು, ಚೇತು, ಅಣ್ಣಳ್ಳಮಾಡ ಶನ್ನಿ,ಕಾಳಿಮಾಡ ರಾಶಿಕ, ಕರ್ತಮಾಡ ಸುನಂದ, ನೆಲ್ಲಿರ ಸೋಮಣ್ಣ, ಬೊಟ್ಟಂಗಡ ಜಗದೀಶ್, ಅಣ್ಣಳ್ಳಮಾಡ ಅಮನ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.

Read More

ವಿರಾಜಪೇಟೆ NEWS DESK  ಫೆ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿಯಲ್ಲಿರುವ ಸಿದ್ಧಾರೂಢ ಆಶ್ರಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಪತ್ನಿ ಕಾಂಚನ್ ಪೊನ್ನಣ್ಣ ಅವರು ಭೇಟಿ ನೀಡಿದರು. ಮಹಾಶಿವರಾತ್ರಿ ಪ್ರಯುಕ್ತ ಆಶ್ರಮದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಶಾಸಕರು  ಮಹಾಶಿವರಾತ್ರಿಯ ಶುಭಾಶಯಗಳನ್ನು ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷ ತೀತಿರ ಪ್ರಭು, ಪ್ರಮುಖರಾದ ಮೋಟಯ್ಯ, ಸೋಮಣ್ಣ, ಉದಯ, ಪರ್ಮಲೆ ಗಣೇಶ್, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಫೆ.15 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪತ್ರಿಕಾರಂಗದ ಭೀಷ್ಮ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೊಡಗು ಪತ್ರಕತ೯ರ ಸಂಘದ ಸಹಯೋಗದಲ್ಲಿ ಫೆ.19 ರಂದು ಸಂಜೆ 6 ಗಂಟೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಮಡಿಕೇರಿಯ ವೈದ್ಯ, ಸಾಹಿತಿ ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಅಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಹಿರಿಯ ಸಾಹಿತಿ ಬಿ.ಎ.ಷಂಶುದ್ದೀನ್ ಉದ್ಘಾಟಿಸಲಿದ್ದಾರೆ. ದಿ.ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಬಾಲಸುಬ್ರ್ರಹ್ಮಣ್ಯ ಕಂಜಪ೯ಣೆ ಅವರು ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಪ್ರದಾನ ಮಾಡಲಿದ್ದಾರೆ. ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಆಯೋಜಿತ   ಕಾಯ೯ಕ್ರಮದಲ್ಲಿ ಹಿರಿಯ  ಪತ್ರಕತ೯ರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ,  ಟಿ.ಪಿ. ರಮೇಶ್, ಕೊಡಗು  ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಡಿಕೇರಿ  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಪ್ರಕಟಣೆ…

Read More

ಮಡಿಕೇರಿ, NEWS DESK ಫೆ.15 – ನಗರದ : ಕೊಡಗು ವಿದ್ಯಾಲಯದ ಪ್ಲೇ ಹೋಂ, ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳ ವತಿಯಿಂದ  ಅಜ್ಜ-ಅಜ್ಜಿಯರ ದಿನವನ್ನು  ಸಂಭ್ರಮದಿಂದ ಆಚರಿಸಲಾಯಿತು. ಶನಿವಾರ ಆಯೋಜಿತ ಕಾರ್ಯಕ್ರಮದಲ್ಲಿ   ಕೊಡಗು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್  ಪಾಲ್ಗೊಂಡು ಮಾತನಾಡಿ, , ಅಜ್ಜ-ಅಜ್ಜಿಯರ ಮಹತ್ವವನ್ನು ಮಕ್ಕಳ ಜೀವನದಲ್ಲಿ ವಿವರಿಸಿದರು. ಕುಟುಂಬ ಮೌಲ್ಯಗಳನ್ನು ಬೆಳೆಸುವಲ್ಲಿ ಹಿರಿಯರ ಪಾತ್ರ ಅತ್ಯಂತ ಮುಖ್ಯವೆಂದು ಅವರು ತಮ್ಮ ಮೌಲ್ಯಯುತ ಮಾತುಗಳಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಮನಮುಟ್ಟುವ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದರು. ವಿಶೇಷ ಆಕರ್ಷಣೆಯಾಗಿ ಮೊಮ್ಮಕ್ಕಳು ತಮ್ಮ ಅಜ್ಜ-ಅಜ್ಜಿಯರೊಂದಿಗೆ ಸೇರಿ ಕೈ ಗುರುತು   ಚಟುವಟಿಕೆಯಲ್ಲಿ ಭಾಗವಹಿಸಿ ಸ್ಮರಣೀಯ ಕ್ಷಣಗಳನ್ನು ರೂಪಿಸಿದರು. ನಂತರ ಅಜ್ಜ-ಅಜ್ಜಿಯರಿಗಾಗಿ ವಿಶೇಷ ಆಟವನ್ನು ಆಯೋಜಿಸಲಾಗಿದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಯ೯ಕ್ರಮದಲ್ಲಿ  ಉತ್ಸಾಹದಿಂದ ಭಾಗವಹಿಸಿದರು.   ಶಿಕ್ಷಕರೂ ಸಂಭ್ರಮದಿಂದ   ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ  ಪ್ರಾಂಶುಪಾಲರಾದ ಸುಮಿತ್ರ ಕೆ ಎಸ್, ಆಡಳಿತ ನಿರ್ವಹಣಾಧಿಕಾರಿ ರವಿ…

Read More

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಭಾನುವಾರ ಉದ್ಘಾಟಿಸಿದರು. ಸುಂಟಿಕೊಪ್ಪದಲ್ಲಿ ವಸತಿ ಗೃಹ ಉದ್ಘಾಟಿಸಿ ಮಾತನಾಡಿದ ಸಚಿವರು ಪೊಲೀಸರಿಗಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಿಸಲಾಗಿದ್ದು, ಇನ್ನೂ 60 ಸಾವಿರ ವಸತಿ ಗೃಹ ನಿರ್ಮಿಸಬೇಕಿದೆ ಎಂದು ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕೆಳಸ್ತರದಲ್ಲಿ ಕೆಲಸ ನಿರ್ವಹಿಸುವ ಕಾನ್ಸ್ಟೇಬಲ್ ಗಳಿಗೆ ವೇತನ ಹೆಚ್ಚಿಸಲಾಗಿದೆ. ಸಣ್ಣ ಸಣ್ಣ ಮನೆಯಲ್ಲಿ ವಾಸ ಮಾಡುವುದನ್ನು ಮನಗಂಡು ಪೊಲೀಸರಿಗೆ ವಸತಿ ಸೌಕರ್ಯ ‌ಒದಗಿಸಲಾಗುತ್ತಿದೆ. ಅದರಂತೆ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದಿಂದ 2030 ರ ವರೆಗೂ ಹಂತ ಹಂತವಾಗಿ ವಸತಿ ಕಲ್ಪಿಸಲಾಗುತ್ತದೆ ಎಂದು‌ ಜಿ.ಪರಮೇಶ್ವರ ಅವರು ವಿವರಿಸಿದರು. ಹಿಂದೆ 18 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿತ್ತು, ಈಗ 33 ಲಕ್ಷ ರೂ ವೆಚ್ಚ ಆಗಲಿದೆ. ಪೊಲೀಸರು…

Read More