ಮಡಿಕೇರಿ NEWS DESK ಜು.31 : ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ.1 ರಂದು ರಜೆ ಘೋಷಿಸಲಾಗಿದೆ. ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿಯಿಂದ ಉತ್ತಮವಾಗಿ ಮಳೆೆಯಾಗುತ್ತಿದ್ದು, “ತ್ರಿವೇಣಿ” ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದೊಂದು ದಿನದ ಅವಧಿಯಲ್ಲಿ ಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ 73 ಮಿ.ಮೀ. ಮಳೆ ದಾಖಲಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕಾವೇರಿ ನದಿ ಪಾತ್ರದ ನಾಪೋಕ್ಲು, ಬಲಮುರಿ, ಮೂರ್ನಾಡು, ಸಿದ್ದಾಪುರ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ-ವಿರಾಜಪೇಟೆ ಮುಖ್ಯ ರಸ್ತೆಯ ನಡುವಿನ ಬೇತ್ರಿಯಲ್ಲಿ ಕಾವೇರಿ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರುದ್ರರಮಣೀಯ ದೃಶ್ಯ ಗೋಚರಿಸುತ್ತಿದೆ. ನಾಪೋಕ್ಲು ವಿಭಾಗದಲ್ಲು ಉತ್ತಮ ಮಳೆಯಾಗುತ್ತಿದ್ದು, ನಾಪೋಕ್ಲು ಮತ್ತು ಹಳೇ ತಾಲ್ಲೂಕು ನಡುವಿನ ರಸ್ತೆಯ ಮೇಲೆ ಕಾವೇರಿ ನದಿ ನೀರು ಹರಿಯುತ್ತಿದೆ.…
ಲೇಖಕ: admin
ಮಡಿಕೇರಿ NEWS DESK ಜು.31 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬoಧಿಸಿದoತೆ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ವಿರುದ್ಧ ಹೂಡಲಾಗಿರುವ ಎಫ್ಐಆರ್ ನ್ನು ತಕ್ಷಣ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಪಕ್ಷದ ಪ್ರಮುಖರು ಹಾಗೂ ಸದಸ್ಯರು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆ ಈ ದೇಶದ ಭವಿಷ್ಯವಾಗಿದ್ದು, ಅವರ ಮೇಲೆ ಹೂಡಲಾಗಿರುವ ಎಲ್ಲಾ ಕೇಸ್ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬoಧಿಸಿದoತೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡು ಹಾರಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರಕಾರ ಮಾಡಿದೆ. ವಿದ್ಯಾರ್ಥಿಗಳ ಭವಿಷ್ಯದ ಆತಂಕಗಳನ್ನು ಕೇಂದ್ರ ಸರಕಾರ ಮನಗಾಣುವಲ್ಲಿ ವಿಫಲವಾಗಿದೆ. ದೇಶದಲ್ಲಿ ನಿರಂಕುಶ ಆಡಳಿತ ನಡೆಯುವುದನ್ನು ಯುವ…
ಕುಶಾಲನಗರ NEWS DESK ಜು.31 : ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಕುಶಾಲನಗರ, ಪುತ್ತೂರು, ಸುಳ್ಯ, ಮೂಡಬಿದ್ರೆ ಹಾಗೂ ಹಾಸನ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ. ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂ.ಗೆ ರೂ.500 ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ.6,000 ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ ರೂ.7,000ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಹಳೆಯ ಗೋ ಡೈಮಂಡ್ಸ್ ಆಭರಣಗಳಿಗೆ ಶೇ.90 ಬೈಬ್ಯಾಕ್ ಸೌಲಭ್ಯವೂ ಲಭ್ಯವಿದೆ. ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಗೆ ಇದು ಸೂಕ್ತ ಸಮಯವಾಗಿದ್ದು 8% VA ಶುಲ್ಕದಿಂದ ಆರಂಭವಾಗುವ ಹಳದಿ ಟ್ಯಾಗ್ ಆಭರಣಗಳು, ನವೀನ ವಿನ್ಯಾಸದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗೆ ಲಭ್ಯವಿದೆ. ಸೀಮಿತ ಅವಧಿಗೆ ಮಾತ್ರ ನಡೆಯುತ್ತಿರುವ ಈ ವಿಶೇಷ…
ಮಡಿಕೇರಿ NEWS DESK ಜು.31 : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮಡಿಕೇರಿ ನಗರ ಠಾಣೆಯಲ್ಲಿ ದೂರು ನೀಡಿದೆ. ದೂರು ನೀಡಿದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು. ವಿಳ0ಬವಿಲ್ಲದೆ ಎಫ್ಐಆರ್ ದಾಖಲಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಂಸತ್ ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಬ್ಬ ಸಜ್ಜನ ರಾಜಕಾಣಿಯಾಗಿದ್ದಾರೆ. ಆದರೆ ಇವರ ಕುರಿತು ಶಾಸಕ ಯಶಪಾಲ್ ಅವರು ದ್ವೇಷ ಭಾಷಣ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ವಂಶವನ್ನು ನಾಶ ಮಾಡುವುದಾಗಿ ಬೆದರಿಕೆ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಿಗೆ ವಿರುದ್ಧವಾದ ಆಕ್ಷೇಪಾರ್ಹ…
ಮಡಿಕೇರಿ ಜು.30 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಗೃಹಲಕ್ಷ್ಮಿ ಯೋಜನೆ: ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆಯಲ್ಲಿ 1,05,392 ಫಲಾನುಭವಿಗಳಿಗೆ ಒಟ್ಟುರೂ. 2,10,78,400 ಹಣ ಬಿಡುಗಡೆಯಾಗಿದ್ದು ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಧನಸಹಾಯದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಸರ್ಕಾರದ ಖಾತೆಗೆ ಜಮೆ ಮಾಡುವ ಕುರಿತು ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 10.07.2026 ರಂದು ಬಿಎಲ್ಬಿಸಿ ಸಭೆ ಏರ್ಪಡಿಸಲಾಯಿತು. ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 711 ಗೃಹಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿರುವ ಮಾಹಿತಿ ಲಭ್ಯವಾಗಿದ್ದು, ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಪ್ರತಿ ಮರಣ ಫಲಾನುಭವಿಯ ಬ್ಯಾಂಕ್ ಖಾತೆಯ ಐಎಫ್ಎಸ್ಸಿ ಕೋಡ್ ನೀಡುವಂತೆ ತಿಳಿಸಿದರು. ಅದರಂತೆ ಆಹಾರ ಶಾಖೆಯವರಿಗೆ ಪತ್ರ ಮುಖೇನ ಗ್ರಾಮವಾರು ಮಾಹಿತಿ ಕೇಳಿದ್ದು,ಮಾಹಿತಿ ಪಡೆದ ನಂತರ ಐಎಫ್ಎಸ್ಸಿ ಕೋಡ್ ಮಹಿತಿಯನ್ನು ಕಲೆ…
ಮಡಿಕೇರಿ ಜು.30 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಎಸ್ಐಆರ್ ಪ್ರಕ್ರಿಯೆ ಸಂಬಂಧ ಶಾಶ್ವತವಾಗಿ ಸ್ಥಳಾಂತರ, ಎರಡು ಕಡೆ ಹೆಸರು ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೆ(ಎಎಸ್ಡಿಡಿಒ) ಇರುವ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ಹಸ್ತಾಂತರಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 4,68,657 ಮತದಾರರಲ್ಲಿ 4,68,657 ಮತದಾರರಿಗೂ ಎಸ್ಐಆರ್ ನಮೂನೆ ವಿತರಿಸಿ, 4,03,576 ಡಿಜಿಟಲೀಕರಣ ಮಾಡಿ ಶೇ.86 ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದ್ದು, ಈ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಹಂತದಲ್ಲಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಮರಣ, ಸ್ಥಳಾಂತರ, ಗೈರು ಅಥವಾ ಎರಡು ಕಡೆ ಹೆಸರು ಹೊಂದಿರುವ, ಇತರೆ ಕಾರಣದಿಂದ ಗಣತಿ ನಮೂನೆ ಸಲ್ಲಿಸದೇ ಇರುವ 65,018 ಮತದಾರರಿದ್ದು, ಈ ಬಗ್ಗೆಯೂ ಸಹ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು…
ವಿರಾಜಪೇಟೆ ಜು.30 NEWS DESK : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಪರಿಪಾಠವು ಪ್ರತಿಯೊಂದು ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದರೆ ಸಮಾಜದಲ್ಲೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು. ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ಎಸ್ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳ ಪಾಲನೆ-ಪೋಷಣೆ ಮಾಡುವುದೂ ಅಷ್ಟೇ ಮುಖ್ಯ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ,…
ಮಡಿಕೇರಿ, ಜು.30 NEWS DESK : ಬ್ರಹ್ಮಗಿರಿ ಸಹೋದಯ ಕೊಡಗು ವತಿಯಿಂದ ಸಿಬಿಎಸ್ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆಯು ಮಡಿಕೇರಿಯ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆಯಿತು. ಕೊಡಗು ಸೇರಿದಂತೆ ವಿವಿಧ ಭಾಗಗಳ ಸಿಬಿಎಸ್ಇ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾತ್ಮಕ ಪ್ರತಿಭೆ, ಸೃಜನಶೀಲತೆ ಹಾಗೂ ಸಾಮಾಜಿಕ ಅರಿವನ್ನು ಪ್ರತಿಬಿಂಬಿಸುವ ಪೋಸ್ಟರ್ಗಳನ್ನು ರಚಿಸುವ ಮೂಲಕ ಗಮನ ಸೆಳೆದರು. ಸ್ಪರ್ಧೆಯನ್ನು ಕಿರಿಯ (ಜೂನಿಯರ್) ಹಾಗೂ ಹಿರಿಯ (ಸೀನಿಯರ್) ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಕಿರಿಯ ವಿಭಾಗದಲ್ಲಿ ಎಎಲ್ಜಿ ಕ್ರೆಸೆಂಟ್ ಶಾಲೆಯ ಅರ್ಹಾನ್ ಅಹ್ಮದ್ ಪ್ರಥಮ, ಕೆವಿಜಿ ಐಪಿಎಸ್, ಸುಳ್ಯದ ಲಿಕೇಶ್ ಪಿ.ಜೆ. ದ್ವಿತೀಯ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಹೇಶ್ವಿ ಪೊನ್ನಮ್ಮ ತೃತೀಯ ಸ್ಥಾನ ಪಡೆದರು. ಹಿರಿಯ ವಿಭಾಗದಲ್ಲಿ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯದ ಪ್ರತೀಕ್ಷಾ ಪ್ರಥಮ, ಎಎಲ್ಜಿ ಕ್ರೆಸೆಂಟ್ ಶಾಲೆಯ ರಿಷಾ ಫಾತಿಮಾ ದ್ವಿತೀಯ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಲಿಪಿ ಮಾದಪ್ಪ ತೃತೀಯ ಬಹುಮಾನಕ್ಕೆ ಭಾಜನರಾದರು. ಸ್ಪರ್ಧೆಗೆ ಜನರಲ್ ತಿಮ್ಮಯ್ಯ ಶಾಲೆಯ…
ಸೋಮವಾರಪೇಟೆ ಜು.30 NEWS DESK : ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್ನ ಎರಡನೇ ವರ್ಷದ ವಾರ್ಷಿಕ ಸಭೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಸಭಯನ್ನು ಈರಮ್ಮ ನಿಂಗೇಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಕಾಮನಹಳ್ಳಿ ಕೆ.ಟಿ. ವೀರೇಶ್ ಗೌಡ ವಹಿಸಿದ್ದರು. ಸಭೆಯಲ್ಲಿ ಕುಟುಂಬದ ಹಿರಿಯ ಸದಸ್ಯರಾದ ಕೂತಿ ಗ್ರಾಮದ ಜಯಮ್ಮ ಜೋಯಪ್ಪ, ಕರಡಿಕೊಪ್ಪ ಗ್ರಾಮದ ಅಕ್ಕಮ್ಮ ಪುಟ್ಟಪ್ಪ ಅವರುಗಳನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಮುಖರಾದ ಕೆ.ಟಿ.ಜೋಯಪ್ಪ ಪಟ್ಟೆದಾರ್, ಗೌರವ ಅಧ್ಯಕ್ಷ ಕಾಮನಹಳ್ಳಿ ಬೆಳ್ಳಿಗೌಡ, ಉಪಾಧ್ಯಕ್ಷ ಸಿ.ಕೆ.ಮಲ್ಲಪ್ಪ, ಕಾರ್ಯದರ್ಶಿ ಟಿ.ಕೆ. ರಾಜಶೇಖರ್, ಖಜಾಂಚಿ ಎಸ್.ಡಿ. ಪರಮೇಶ್, ಮಂಜೂರು ವಸಂತ ಇದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆ ಜು.30 NEWS DESK : ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಶಾಲಾ ಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎನ್. ಪಾಪಯ್ಯ ಅವರು ಟ್ರ್ಯಾಕ್ ಸೂಟ್ಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ರಾಜೇಶ್ವರಿ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನಕುಮಾರ್, ಶಿಕ್ಷಕರಾದ ಎ.ಬಿ. ತೇಜಾಕ್ಷಿ, ಎಚ್.ಕೆ. ಉಮೇಶ್, ಎಚ್.ಎನ್. ರತೀಶ್, ಸಿ.ಜೆ. ಆಶಾ, ಬಿ.ಆರ್. ಲಿಖಿತ ಹಾಗೂ ಎ.ಎಸ್. ಭಾನುಮತಿ ಇದ್ದರು.






