ಮಡಿಕೇರಿ NEWS DESK ಏ.2 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತುರ್ತು ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ “ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ” ಕಾರ್ಯಕ್ರಮವು ಗುರುವಾರ ನಡೆಯಿತು. ಉಪ ವಿಭಾಗಧಿಕಾರಿಯಾದ ನಿತಿನ್ ಚಕ್ಕಿ, ಅವರು ಮಾತನಾಡಿ ಸುಟ್ಟ ಗಾಯಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ನೀಡುವುದು, ಸೋಂಕು ನಿಯಂತ್ರಣದ ಮಹತ್ವವನ್ನು ಒತ್ತಿ ಹೇಳಿದರು. ಆರಂಭಿಕ ಚಿಕಿತ್ಸೆಯಿಂದ ಪುನರ್ವಸತಿ ವರೆಗೆ ವ್ಯವಸ್ಥಿತ ರೀತಿಯ ನಿರ್ವಹಣೆ ಬಗ್ಗೆ ಚರ್ಚೆ ಪ್ರಾಯೋಗಿಕವಾಗಿ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಮಿಸ್ ಟೀನ್ ಯೂನಿವರ್ಸ್ ಇಂಡಿಯಾ 2024 ಕರಿಸ್ಸಾ ಬೋಪಣ್ಣ ಅವರು ತಮ್ಮ ಫ್ಯಾಷನ್ ಡಿಸೈನಿಂಗ್ ವಿದ್ಯಾಭ್ಯಾಸದ ಅನುಭವ ಹಂಚಿಕೊoಡು, ವೈದ್ಯಕೀಯ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಜೀವನದಲ್ಲಿ ಮನಸ್ಸು ಕುಗ್ಗಿದಾಗ ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿದ ಉದ್ದೇಶವನ್ನು ನೆನಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಟ್ರಸ್ಟ್ವೆಲ್ ಆಸ್ಪತ್ರೆಯ ಓರೋ-ಫೇಷಿಯಲ್ ಮತ್ತು ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ…
ಲೇಖಕ: admin
ಮಡಿಕೇರಿ, NEWS DESK ಏ.2 : ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯ ಕಂಪ್ಯೂಟರ್ ವಿಭಾಗದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಎಸ್.ತಿಮ್ಮಯ್ಯ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ವಿತರಿಸಿದರು. ಪೊಲೀಸ್ ಇಲಾಖೆಯ ಜಿಲ್ಲಾ ಸಶಸ್ತç ಪೊಲೀಸ್ ಪಡೆ ವಿಭಾಗದಲ್ಲಿ ಎಎಚ್ಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್.ಸುಧೀರ್ ಅವರಿಗೆ ಪೊಲೀಸ್ ವಿಶೇಷ ಘಟಕಗಳ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಪೊಲೀಸ್ ಟ್ರೋಫಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ನೀಡಿದರು. ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪೊಲೀಸ್ ಉಪ ನಿರೀಕ್ಷಕರಾದ ಕೆ.ಬಿ.ಅಚ್ಚಮ್ಮ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ…
ಮಡಿಕೇರಿ, NEWS DESK ಏ.2 – ಚೆಟ್ಟಳ್ಳಿಯ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿತ ಪ್ರಥಮ ವಷ೯ದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡವು ದ್ವಿತೀಯ ಸ್ಥಾನ ಪಡೆಯಿತು. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವಷ೯ದ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯ ಆಕಷ೯ಕ ಫೈನಲ್ ಪಂದ್ಯಾವಳಿಯಲ್ಲಿ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು . ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡದ ವಿರುದ್ದ ಗೆಲವು ಸಾಧಿಸಿತು. ಮೈಸೂರು ಹೂಟಗಳ್ಳಿಯ ಶ್ರೀ ತಲಕಾವೇರಿ ಪೊಮ್ಮಕ್ಕಡ ಕೂಟ ತಂಡವು ತೖತೀಯ ಸ್ಥಾನ ಮತ್ತು ಮಡಿಕೇರಿ ಕೊಡವ ಪೊಮ್ಮಕ್ಕಡ ಕೂಟದ ಬಿ ಟೀಮ್ ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು. ಬೆಂಗಳೂರು ದಾಸರಹಳ್ಳಿಯ ಪೊಮ್ಮಕ್ಕಡ ಕೂಟ ತಂಡವು ಶಿಸ್ತಿನ ತಂಡವಾಗಿ, ಪೊನ್ನಂಪೇಟೆ…
ತಾಲೂಕಿನ ಆಲೂರುಸಿದ್ದಾಪುರ ಸಮೀಪದ ಮನೆಹಳ್ಳಿ ಮಠದ ಆವರಣದಲ್ಲಿ ಇಂದು ಬೆಳಿಗ್ಗೆ ಮಠದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಕ್ಷೇತ್ರದ ಆರಾಧ್ಯ ದೇವರುಗಳಾದ ವೀರಭದ್ರೇಶ್ವರ,ಭದ್ರಕಾಳಿ,ಶ್ರೀ ಗುರುಸಿದ್ದವೀರೇಶ್ವರ ಹಾಗೂ ತಪೋವನೇಶ್ವರಿ ದೇವಿಯವರಿಗೆ ರುದ್ರಾಭಿಷೇಕ,ಅಷ್ಟೋತ್ತರ ನಂತರ ಮಹಾಮಂಗಳಾರತಿ ನೆರವೇರಿಸಿದರು. ಆನಂತರ ಕಲ್ಯಾಣಿ ಸಮೀಪ ಶಟಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ 2026 ರ ಜಾತ್ರಾಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸ್ವಾಮೀಜಿ ಶ್ರೀ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜಾತ್ರಾಮಹೋತ್ಸವ ಶ್ರದ್ಧಾ,ಭಕ್ತಿ ಹಾಗೂ ಸಂಭ್ರಮದಿಂದ ನಡೆಯಲಿದೆ. ಮೂರು ದಿನಗಳು ನಡೆಯಲಿರುವ ಜಾತ್ರಾಮಹೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಪಾಲ್ಗೊಳ್ಳಲಿದ್ದಾರೆ,ಏಪ್ರಿಲ್ 4 ರ ಶನಿವಾರ ಮದ್ಯಾಹ್ನ 3 ಗಂಟೆಗೆ ಧಾರ್ಮಿಕ ಸಮಾರಂಭ ನಡೆಯಲಿದೆ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು,ಜನಪ್ರತಿನಿಧಿಗಳು ಹಾಗೂ ಗಣ್ಯರು ಆಗಮಿಸಲಿದ್ದಾರೆ. ಸಂಜೆ 7 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸ್ವಾಮಿಯವರ ಮಹಾರಥೋತ್ಸವ ನಡೆಯಲಿದೆ ಎಂದರು.
‘ಕೊಡವ ಅಭಿವೃದ್ಧಿ ನಿಗಮ’ ಸ್ಥಾಪನೆಯ ಸಂಕಲ್ಪ ಈಡೇರಿದ ಹಿನ್ನಲೆಯಲ್ಲಿ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸದಸ್ಯರು ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಇಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ, ಅನ್ನದಾನಕ್ಕೆ ಅಕ್ಕಿ ಹಾಗು ದೀಪದ ಎಣ್ಣೆ ದಾನ ನೀಡಿ ಹರಕೆ ಸಲ್ಲಿಸಿದರು. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಮುಂಗಡಪತ್ರದಲ್ಲಿ ನೂತನವಾಗಿ “ಕೊಡವ ಅಭಿವೃದ್ದಿ ನಿಗಮ”ವು ಘೋಷಣೆಯಾಗಿದ್ದು, ಈ ಒಂದು ಪರಿಕಲ್ಪನೆಯನ್ನು ಹುಟ್ಟುಹಾಕಿ, ಇದಕ್ಕಾಗಿ ಕಳೆದ ಒಂದು ದಶಕದಿಂದ ನಿರಂತರ ಪರಿಶ್ರಮಪಟ್ಟಿರುವ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸಂಕಲ್ಪ ಈಡೇರಿದ ಹಿನ್ನಲೆಯಲ್ಲಿ ಸಂಘಟನೆಯ ಸದಸ್ಯರು ಹಾಗು ಹಿತೈಶಿಗಳು ಇಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇವಳಕ್ಕೆ ಬೇಟಿನೀಡಿ ವಿಶೇಷ ಪೂಜೆ ಸಲ್ಲಿಸಿ, ಕೊಡವ ಅಭಿವೃದ್ಧಿ ನಿಗಮ ಘೋಷಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಶಾಸಕ ಹಾಗು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಮತ್ತು ಈ ಒಂದು ಪರಿಕಲ್ಪನೆಯನ್ನು ಯಶಸ್ಸಿನೆಡೆಗೆ ಮುನ್ನಡೆಸಿದ ಯುಕೊ…
ಕಾರ್ಕಳ ಏ.1 NEWS DESK : ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ ‘ಡಿಟೆಕ್ಟಿವ್ ದಿವಾಕರ್’. ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಡಾಕ್ಟರ್ ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿ ಮಾತನಾಡಿ, “ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ “ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ನ ಅಶ್ವತ್ ಎಸ್.ಎಲ್ . “ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ…
ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳೊಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಯೋಜನೆಗಳು ಮನೆ ಮನೆಗೆ ತಲುಪಿದ್ದು, ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿರಲಿದ್ದಾರೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದರು.
ಮಡಿಕೇರಿ ಏ.1 NEWS DESK : ಭಾಗಮಂಡಲ ಮೂಲದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಕೆ.ಬಿ.ರೀಮಾ ಅವರು ಮಂಡಿಸಿದ “ಗ್ರೋಥ್ & ಕ್ಯಾರೆಕ್ಟರೈಷೇಶನ್ ಆಫ್ ಡೈವೆಲೆಂಟ್ ಕ್ಯಾಟ್ಅಯಾನ್ಸ್ ಡೋಪ್ಡ್ ಟಾಟ್ರೇಟ್ ಸಿಂಗಲ್ ಕ್ರಿಸ್ಟಲ್ಸ್ ” ವಿಷಯಕ್ಕೆ ಮಂಗಳೂರು ವಿವಿಯಿಂದ ಪಿಹೆಚ್ ಡಿ ಪದವಿ ಲಭಿಸಿದೆ. ರೀಮಾ ಅವರು ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಂಗಳೂರು ವಿವಿ ಕಾಲೇಜು ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಜಗನ್ನಾಥ ನೆತ್ತಾರ್ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ನಿವೃತ್ತ ಉಪ ತಹಶೀಲ್ದಾರ್ ಕೆದಂಬಾಡಿ ಎಸ್.ಬಾಲಕೃಷ್ಣ , ನಿವೃತ್ತ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ಯು.ಸಾವಿತ್ರಿ ಅವರ ಪುತ್ರಿ. ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನಹಿತ್ಲು ದಿ. ಕೆ.ಡಿ.ಜಯಪ್ರಕಾಶ್ ಅವರ ಪತ್ನಿಯಾಗಿದ್ದಾರೆ.
ಕಣಿವೆ ಏ.1 NEWS DESK : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದ ವತಿಯಿಂದ ಆಚರಿಸಲಾಯಿತು. ಶ್ರೀಗಳ ಭಾವಚಿತ್ರವನ್ನು ಪೂಜಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ದಾಕ್ಷಾಯಿಣಿ, ಸಿದ್ದಗಂಗಾ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಮುಖರಾದ ಶುಭಶೇಖರ, ಉದ್ಯಮಿ ಮೌರ್ಯ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಾಗರ್, ಸಹಕಾರ ಸಂಘದ ಉಪಾಧ್ಯಕ್ಷ ಕಾಶಿ, ಹುಲುಸೆ ವೀರಶೈವ ಸಮಾಜದ ಅಧ್ಯಕ್ಷ ಶಿವನಂಜಪ್ಪ, ಕವಿತಾ, ವೈಶಾಲಿ, ಚಿದಾನಂದ, ಗಣೇಶ, ಚಿಮ್ಮಣ್ಣ, ಶಿಕ್ಷಕ ಪುಟ್ಟರಾಜು, ಸಂಪತ್, ಮೊದಲಾದವರು ಇದ್ದರು. ಕಾರ್ಯಕ್ರಮದ ಪ್ರಯುಕ್ತ ವೃತ್ತವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಮಡಿಕೇರಿ ಏ.1 NEWS DESK : ಬ್ಯಾರಿ ಅಕಾಡಮಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಒಂದು ಸಂಸ್ಥೆಗೆ ಸೀಮಿತ ಅಲ್ಲ ಬದಲಾಗಿ ಬ್ಯಾರಿ ಭಾಷೆ, ಕಲೆ ಸಂಸ್ಕ್ರತಿಯನ್ನು ಬಿಂಬಿಸುವ ವೇದಿಕೆಯಾಗಿದೆ. ಸಾಹಿತ್ಯ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ಸಮ್ಮೇಳನದಲ್ಲಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ, ಸಮ್ಮೇಳನದ ಭಾಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ಕರೆ ನೀಡಿದರು. ಏ.28 ರಂದು ಮಡಿಕೇರಿಯಲ್ಲಿ ಕರ್ನಾಟಕ ಬ್ಯಾರಿ ಅಕಾಡಮಿ ಹಾಗೂ ಕೊಡಗು ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನದ ಭಾಗವಾಗಿ ಮಡಿಕೇರಿಯ ಕಮ್ಯುನಿಟಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾಮಾಜಿಕ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು, ಮಕ್ಕಳು ಹಾಗೂ ಯುವಕರಿಗೆ ವಿವಿಧ ಸ್ಪರ್ದೆಗಳು, ಸಮ್ಮೇಳನದಂದು ಕವಿಗೋಷ್ಟಿ, ವಿಚಾರ ಸಂಕೀರಣ, ವಿಚಾರ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.…






