ಲೇಖಕ: admin

ಮಡಿಕೇರಿ ಜು.4 NEWS DESK : ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶನಿವಾರ ನಗರದ ಮತ್ತು ನಗರದ ಹೊರವಲಯದ ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಪ್ರಸಿದ್ಧ ಓಂಕಾರೇಶ್ವರ ದೇವಾಲಯ ಹಾಗೂ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಲೋಕಾಯುಕ್ತ ಎಸ್ಪಿ ಉದೇಶ್, ಕೊಡಗು ಲೋಕಾಯುಕ್ತ ಡಿವೈಎಸ್‍ಪಿ ದಿನಕರ್ ಶೆಟ್ಟಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ದೇವರಾಜು ಇತರರು ಇದ್ದರು. ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಶೌಚಾಲಯ, ಸ್ವಚ್ಛತೆ, ಔಷದಿ, ಊಟೋಪಚಾರ ನೀಡುವುದು ಸೇರಿದಂತೆ ಮತ್ತಿತರ ಬಗ್ಗೆ ಹೊರ ಹಾಗೂ ಒಳರೋಗಿಗಳಿಂದ ಮಾಹಿತಿ ಪಡೆದರು. ಆಸ್ಪತ್ರೆಯಿಂದಲೇ ಔಷಧಿ ನೀಡುತ್ತಾರೆಯೇ…

Read More

ಸುಂಟಿಕೊಪ್ಪ ಜು.4 NEWS DESK : ಪತ್ರಿಕೆಗಳು ಸಮಾಜದ ಕೈಗನ್ನಡಿಯಾಗಿದ್ದು ಪತ್ರಕರ್ತರ ಮೇಲೆ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ ಎಂದು ಐಶ್ವರ್ಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಅಮ್ಮಾಟಂಡ ಎ.ಜೋಯಪ್ಪ ಅಭಿಪ್ರಾಯ ಪಟ್ಟರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಗುಡ್ಡೆಹೊಸೂರಿನ ಐಶ್ವರ್ಯ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮತ್ತು ಜ್ಞಾನ ಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಇಂದು ಪತ್ರಿಕಾರಂಗ ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗಾಗಿ ಗೌರವಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ವಿವಿಧ ಮಾಧ್ಯಮಗಳು ನೀಡುವ ಸುದ್ದಿಗಳೆಲ್ಲಾ ವಾಸ್ತವ ಎಂದು ನಂಬುವ ಪರಿಸ್ಥಿತಿಯಿದೆ ಆದರೆ ಮುದ್ರಣ ಮಾಧ್ಯಮ ಈ ಪೈಕಿ ಹೆಚ್ಚು ವಿಶ್ವಾಸ ಅರ್ಹತೆಯನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು. ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಎಸ್.ಜಿ.ಉಮೇಶ್ ಮಾತನಾಡಿ, ರಾಷ್ಟ್ರ ಮತ್ತು ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಂಪನ್ಮೂಲ ಆಕರಗಳಾಗಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತ್ತಿವೆ. ಪತ್ರಿಕೆಗೆಗಳು ಕೇವಲ ರಾಜಕೀಯ ಅಥವಾ ವ್ಯಕ್ತಿಗತ ವಿಷಯಾಧಾರಿತವಾಗಿರದೆ ಜೀವನದ ಎಲ್ಲಾ…

Read More

ಮಡಿಕೇರಿ ಜು.3 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ನಾಪೋಕ್ಲು ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ‘ಮಕ್ಕಡ ನಮ್ಮೆ’ಯನ್ನು ಆಯೋಜಿಸಲು ಉಭಯ ಸಂಸ್ಥೆಗಳ ಜಂಟಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಾಪೋಕ್ಲು ಕೊಡವ ಸಮಾಜದಲ್ಲಿ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ನಾಪೋಕ್ಲು ಕೊಡವ ಸಮಾಜ ಅಧ್ಯಕ್ಷರಾದ ಮುಂಡಂಡ ಸಿ.ನಾಣಯ್ಯ ಮುಂದಾಳತ್ವದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವರ್ಷದ ಅಕ್ಟೋಬರ್ 24-25 ರಂದು ಆಯೋಜಿಸಲು ಉದ್ಧೇಶಿಸಿರುವ ‘ಮಕ್ಕಡ ನಮ್ಮೆ’ಯಲ್ಲಿ ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಕೊಡವ ಸಂಸ್ಕøತಿ-ಭಾಷೆಯ ಪಾಲಕರ ಜನಾಂಗಗಳ ಒಗ್ಗೂಡುವಿಕೆಗಳೊಂದಿಗೆ ಎರಡು ದಿನಗಳ ‘ಮಕ್ಕಡ ನಮ್ಮೆ’ಯನ್ನು ನಡೆಸುವಂತೆ ತೀರ್ಮಾನಿಸಲಾಯಿತು. ಎಲ್ಲಾ ಕೊಡವ ಸಮಾಜಗಳು, ಸಂಘ-ಸಂಸ್ಥೆಗಳು ಹಾಗೂ ಕೊಡವ ಭಾಷಿಕ ಸಮಾಜಗಳು, ಸಂಘ-ಸಂಸ್ಥೆಗಳಿಂದ ತಮ್ಮ ಪರಿಮಿತಿಯಲ್ಲಿ ಮಕ್ಕಳ ಸಾಂಸ್ಕøತಿಕ ತಂಡವನ್ನು ‘ಮಕ್ಕಡ ನಮ್ಮೆ’ಯಲ್ಲಿ ಭಾಗವಹಿಸಲು ಅನುವು ಮಾಡಿ ಕೊಡುವಂತೆ ತೀರ್ಮಾನಿಸಲಾಯಿತು. ಮಕ್ಕಳನ್ನು ಒಳಗೊಂಡ ತಂಡದವರಿಂದ ಬಾಳೋಪಾಟ್, ಉಮ್ಮತ್ತಾಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್, ಕಪ್ಪೆಯಾಟ್, ತಾಲಿಪಾಟ್, ಪರಿಯಕಳಿ, ಸಮ್ಮಂದ ಅಡ್‍ಕುವ…

Read More

ಮಡಿಕೇರಿ ಜು.3 NEWS DESK : ಕೊಡಗಿನ ನಿವೃತ್ತ ಸೇನಾಧಿಕಾರಿಗಳು, ವಾಯು ಸೇನೆ ಅಧಿಕಾರಿಗಳು ಹಾಗೂ ಮಾಜಿ ಒಲಂಪಿಯನ್ ಗಳ ನಿಯೋಗವು ಇಂದು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಮನವಿ ಸಲ್ಲಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಭೇಟಿಯಾದ ನಿಯೋಗದಲ್ಲಿ ಪದ್ಮಶ್ರೀ ಪುರಸ್ಕೃತ ಭಾರತ ಹಾಕಿ ತಂಡದ ಮಾಜಿ ನಾಯಕ ಡಾ. ಎಂಪಿ ಗಣೇಶ್, ಸೇನಾಧಿಕಾರಿ ನಿವೃತ್ತ ಬ್ರಿಗೇಡಿಯರ್ ಚೇನಂಡ ಚೀಯಣ್ಣ,ವಾಯು ಸೇನೆಯ ಅಧಿಕಾರಿಗಳು ನಿವೃತ್ತ ಏರ್ ಮಾರ್ಷಲ್ ಬಿ ಯು ಚಂಗಪ್ಪ, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಮಹಾವೀರ ಚಕ್ರ ಪುರಸ್ಕೃತ ಪಿ ಎಸ್ ಗಣಪತಿ, ನಿವೃತ್ತ ಮೇಜರ್ ಜನರಲ್ ಅರ್ಜುನ್ ಮುತ್ತಣ್ಣ, ಒಲಂಪಿಯನ್ ಸೋಮಯ್ಯ, ನಿವೃತ್ತ ಮೇಜರ್ ಜನರಲ್ ಬಾಚಮಾಂಡ ಕಾರ್ಯಪ್ಪ, ಬಾಳೇಯಡ ಸುಬ್ರಮಣಿ, ನಿವೃತ್ತ ಬ್ರಿಗೇಡಿಯರ್ ಮಾಳೇಟೀರ ಎ ದೇವಯ್ಯ, ನಿವೃತ್ತ ಕರ್ನಲ್ ಸಿಪಿ ಮುತ್ತಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.3 NEWS DESK : ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ ರೂ.36.60 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯ ಮತ್ತು ಬಟ್ಟೆ ಬದಲಿಸುವ ಕೊಠಡಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಓಂಕಾರೇಶ್ವರ ದೇವಾಲಯದ ಭಾಗದಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬೇಡಿಕೆ ಇತ್ತು. ಈ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ರೂ.36.60 ಲಕ್ಷ ವೆಚ್ಚದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಲಾಗಿದೆ ಎಂದು ತಿಳಿಸಿದರು. ದೇವಾಲಯಕ್ಕೆ ಹಲವಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದು, ಶೌಚಾಲಯದ ಕೊರತೆ ಇತ್ತು. ಆದ್ದರಿಂದ ದೇವಾಲಯ ಸಮಿತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಕಾರದಲ್ಲಿ ಜಾಗ ನೀಡಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸರ್ಕಾರಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳದೆ ಲಭ್ಯವಾದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅದರ ಸ್ವಚ್ಛತೆ ಕಾಪಾಡಬೇಕು, ವ್ಯವಸ್ಥಿತ ನೀರು…

Read More

ಮಡಿಕೇರಿ ಜು.3 NEWS DESK : ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ 4.83 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕರಾದ ಡಾ.ಮಂತರ್‍ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಸುಮಾರು 4.83 ಕೋಟಿ ವೆಚ್ಚದಲ್ಲಿ 2.12 ಎಕರೆ ಜಾಗದಲ್ಲಿ ಕಾಮಗಾರಿ ನಿರ್ಮಾಣವಾಗಲಿದೆ ಎಂದರು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ವಾಹನ ಚಾಲನೆ ಮಾಡಲು ಸಹಕಾರವಾಗುತ್ತದೆ. ಈ ಕಾಮಗಾರಿಯು ಘನ ಸರ್ಕಾರದಿಂದ ಅನುಮೋದನೆ ಪಡೆಯಲಾಗಿದ್ದು, ಇದಕ್ಕೆ ಸಹಕರಿಸಿದ ಮಾನ್ಯ ಸಾರಿಗೆ ಸಚಿವರಿಗೆ ಧನ್ಯವಾದ ತಿಳಿಸಿದರು. ಈ ಸಂದರ್ಭ ಕಾಮಗಾರಿಯ ವಿವರಣೆಯನ್ನು ಎಂಜಿನಿಯರ್, ಮೈಸೂರು ವಿಭಾಗ ಅವರು ವಿವರಣೆ ನೀಡುತ್ತಾ, ಈ ಕಾಮಗಾರಿಯನ್ನು ಕೆ.ಎಸ್.ಆರ್.ಟಿ.ಸಿ. (ಸಿ.ಇ. ವಿಭಾಗ) ಬೆಂಗಳೂರು, ಇವರು ನಿರ್ವಹಿಸಲಿದ್ದು, ಮಳೆಯನ್ನು ಹೊರತುಪಡಿಸಿ, 12 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ತೆನ್ನಿರಾ…

Read More

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಿಂದ ಲೋಕಾಯುಕ್ತಕ್ಕೆ 207 ಪ್ರಕರಣಗಳು ಬಾಕಿ ಇದ್ದು, 80 ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬಂಧಿಸಿದ ಅಧಿಕಾರಿಗಳು ಹಾಗೂ ದೂರುದಾರರ ವಿಚಾರಿಸಿ ಇತ್ಯರ್ಥಕ್ಕೆ ಮುಂದಾಗಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹೇಳಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗು ಪ್ರಕರಣಗಳ ವಿಲೇವಾರಿ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ನಡೆದ ವಿಚಾರಣಾ ಸಭೆಗೂ ಮೊದಲು ಅವರು ಮಾತನಾಡಿದರು. ಕಾನೂನಾತ್ಮಕವಾಗಿ ಕರ್ತವ್ಯ ನಿರ್ವಹಿಸಬೇಕು. ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸಮಾಜದಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಉತ್ತಮ ಜೀವನ ನಡೆಸುವ ಹಕ್ಕು ಇದೆ. ಆ ನಿಟ್ಟಿನಲ್ಲಿ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು ಎಂದರು. ಪ್ರತಿಯೊಬ್ಬರಿಗೂ ಸಾಮಾನ್ಯ ಬದುಕು ನಡೆಸಲು ಬೇಕಿರುವ ಕನಿಷ್ಠ ಸೌಲಭ್ಯವನ್ನಾದರೂ ಕಲ್ಪಿಸಬೇಕು. ತಾಯಿ ಗರ್ಭದಲ್ಲಿ ಇರುವ ಮಗು ಯಾವುದು ಎಂದು ನೋಡುವಂತಿಲ್ಲ, ತಾಯಿ ಮಗುವಿನ ರಕ್ಷಣೆ ಅತೀವ ಮುಖ್ಯವಾಗಿದೆ ಎಂದರು. ಸಾಮಾನ್ಯ ಜನರಿಗೆ ಸರ್ಕಾರದ…

Read More

ಮಡಿಕೇರಿ ಜು.3 NEWS DESK : ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಸಂಗ್ರಹಿಸಲಾಗುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಸ ವಿಲೇವಾರಿ ಘಟಕ ಕೇಂದ್ರ ನಿರ್ವಹಣೆ ತುಂಬಾ ಕಳಪೆಯಿಂದ ಕೂಡಿದ್ದು, ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡುತ್ತಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಿಟ್ಟಾದರು. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕಸ ವಿಲೇವಾರಿ ಮಾಡಬೇಕು. ಆ ಕೆಲಸ ಇಲ್ಲಿ ಆಗುತ್ತಿಲ್ಲ. ಕಸದಿಂದ ಸೋರುವ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದೆಯೇ ಎಂದು ಪ್ರಶ್ನಿಸಿದರು. ಈ ಪ್ರದೇಶದಲ್ಲಿ…

Read More

ಸೋಮವಾರಪೇಟೆ ಜು.3 NEWS DESK : ಭಾರತೀಯ ಸೇನೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೆಗ್ಗುಳ ಗ್ರಾಮದ ಎಚ್.ಎ.ಸತೀಶ್ ಅವರಿಗೆ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು. ಗ್ರಾಮದ ಪ್ರವೇಶದ್ವಾರದಲ್ಲಿ ಅವರನ್ನು ಬರಮಾಡಿಕೊಂಡ ಗ್ರಾಮಸ್ಥರು, ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿ ಪುಷ್ಪವೃಷ್ಠಿ ಮಾಡುವ ಮೂಲಕ ಗೌರವ ಸಲ್ಲಿಸಿದರು. ಹೆಗ್ಗುಳ ಗ್ರಾಮದ ಕೃಷಿಕರಾದ ಅಪ್ಪಸ್ವಾಮಿ ಹಾಗೂ ಜಯಮ್ಮ ಅವರ ಪುತ್ರರಾದ ಸತೀಶ್, ಯುವಕರಿಗೆ ದೇಶಸೇವೆಯ ಮಾದರಿಯಾಗಿ ಭಾರತೀಯ ಭೂಸೇನೆಗೆ ಸೇರ್ಪಡೆಗೊಂಡು ವಿವಿಧ ಗಡಿಭಾಗಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಉರಿ ಸೆಕ್ಟರ್, ಕಾರ್ಗಿಲ್, ರಾಜಸ್ಥಾನ, ಅಸ್ಸಾಂ, ಮಣಿಪುರ ಸೇರಿದಂತೆ ವಿದೇಶದ ಸುಡಾನ್‍ನಲ್ಲಿಯೂ ಸೇವೆ ಸಲ್ಲಿಸಿ ದೇಶರಕ್ಷಣೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸ್ವಗ್ರಾಮಕ್ಕೆ ಮರಳಿದ ಸತೀಶ್ ಅವರನ್ನು ಗ್ರಾಮಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರು ಅಭಿನಂದಿಸಿ, ಅವರ ಸೇವೆಯನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು, ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ದೇಶಕ್ಕಾಗಿ ಸೇವೆ…

Read More

ಮಡಿಕೇರಿ ಜು.3 NEWS DESK :  ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದೆ. ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಸೇತುವೆಯ ಕೆಳಭಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ಸುಮಾರು ಐದು ಅಡಿಗಳಷ್ಟು ಏರಿಕೆ ಗೋಚರಿಸಿದೆ. ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಗುರುವಾರ 33.2 ಮಿಲಿ ಮೀಟರ್ ಪ್ರಮಾಣದ ಮಳೆಯಾದ ಬಗ್ಗೆ ವರದಿಯಾಗಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ ಕುಶಾಲನಗರ ಕಾವೇರಿ ಸೇತುವೆ ಕೆಳಭಾಗ 23 ಅಡಿಗಳಷ್ಟು ಎತ್ತರದಲ್ಲಿ ನೀರು ಹರಿಯುವುದರೊಂದಿಗೆ ನದಿ ತಟದ ವ್ಯಾಪ್ತಿಯ ನಾಗರಿಕರು ಆತಂಕಕ್ಕೆ ಒಳಗಾಗಿದ್ದ ಪರಿಸ್ಥಿತಿ ಎದುರಾಗಿದ್ದನ್ನು ಸ್ಮರಿಸಬಹುದು. ಕುಶಾಲನಗರ ತಾಲೂಕಿನ ವ್ಯಾಪ್ತಿಯಲ್ಲಿ ಸರಾಸರಿ ಈ ಸಾಲಿನಲ್ಲಿ ಇದುವರೆಗೆ ಒಟ್ಟು 205.69 ಮಿಲಿ ಮೀಟರ್ ಪ್ರಮಾಣದ ಮಳೆ ಸುರಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 796.54 ಮಿಲಿ ಮೀಟರ್ ಪ್ರಮಾಣದ ಮಳೆ ಆಗಿತ್ತು.

Read More