ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ, ಫ್ಲೆಕ್ಸ್-ಬ್ಯಾನರ್ಗಳ ಬಳಕೆ ಹಾಗೂ ಅವುಗಳ ಸೂಕ್ತ ವಿಲೇವಾರಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಯಿತು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು, ಗಣೇಶೋತ್ಸವಕ್ಕೆ ಸಂಬ0ಧಿಸಿದ ಮಾರಾಟಗಾರರು ಹಾಗೂ ಬಾಡಿಗೆದಾರರು ಭಾಗವಹಿಸಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಶಬ್ದ ಮಾಲಿನ್ಯ ನಿಯಂತ್ರಿಸುವುದು, ಧ್ವನಿವರ್ಧಕಗಳ ಬಳಕೆಯಲ್ಲಿ ನಿಯಮಗಳನ್ನು ಪಾಲಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದೇ ರೀತಿ ಗಣೇಶೋತ್ಸವದ ಸಂದರ್ಭ ಬಳಸುವ ಫ್ಲೆಕ್ಸ್, ಬ್ಯಾನರ್ಗಳನ್ನು ಕಾರ್ಯಕ್ರಮದ ಬಳಿಕ ಎಲ್ಲೆಂದರಲ್ಲಿ ಎಸೆಯದೆ, ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳು ಹಾಗೂ ಮಾರಾಟಗಾರರಿಗೆ ಸೂಚನೆ…
ಲೇಖಕ: admin
ಬೆಂಗಳೂರು/ಮೈಸೂರು NEWS DESK ಆ.28: ಕೊಡಗಿನ ಜನರ ಪ್ರಮುಖ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾನವ–ಆನೆ ಸಂಘರ್ಷ ಹಾಗೂ ಡಾ. ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಗ್ರ ಪ್ರಸ್ತಾವನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಲ್ಲಿಸಿದ್ದಾರೆ. ಕೊಡಗಿನಲ್ಲಿ ಈ ಎರಡೂ ವಿಚಾರಗಳು ರೈತರು, ತೋಟದ ಮಾಲೀಕರು ಹಾಗೂ ಅರಣ್ಯ ಪ್ರದೇಶಗಳ ಸುತ್ತಮುತ್ತ ವಾಸಿಸುವ ಜನರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಸಮಸ್ಯೆಗಳಿಗೆ ವೈಜ್ಞಾನಿಕ ಮತ್ತು ದೀರ್ಘಕಾಲೀನ ಪರಿಹಾರ ಕಲ್ಪಿಸುವಂತೆ ಸಂಸದರು ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ ನಡೆದ ವಿಶೇಷ ಸಭೆಗೆ ಯದುವೀರ್ ಒಡೆಯರ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮೈಸೂರಿನಲ್ಲಿ ನಡೆಯುತ್ತಿದ್ದ ದಿಶಾ ಸಭೆಯಲ್ಲಿ ಪೂರ್ವನಿಗದಿತ ಅಧಿಕೃತ ಕಾರ್ಯಕ್ರಮವಿದ್ದ ಕಾರಣ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆ ಹಾಗೂ ಪ್ರಸ್ತಾವನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನೇರವಾಗಿ ಸಲ್ಲಿಸಿದ್ದಾರೆ. ಕೊಡಗಿನಲ್ಲಿ ಹೆಚ್ಚುತ್ತಿರುವ ಮಾನವ–ಆನೆ ಸಂಘರ್ಷವನ್ನು ತಾತ್ಕಾಲಿಕ ಕ್ರಮಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಮಾನವ ಜೀವ, ಕೃಷಿ ಹಾಗೂ…
ಮಡಿಕೇರಿ, NEWS DESK ಆ.27: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ತಾಣದ ರಕ್ಷಣೆ ಹಾಗೂ ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ ಕುರಿತು ಕೊಡಗು ಜಿಲ್ಲೆಯ ವಿವಿಧ ಹಾಲಿ-ಮಾಜಿ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಗಣ್ಯರ ಸಭೆ ಮಡಿಕೇರಿಯ ರಾಜ್ಯದರ್ಶನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕೊಡಗು-ಮೈಸೂರು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನ, ಅರಣ್ಯ ಹಾಗೂ ಖಾಸಗಿ ಜಮೀನುಗಳ ರಕ್ಷಣೆ ಮತ್ತು ಜಿಲ್ಲೆಯ ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಡು ಹಾಗೂ ಪರಿಸರವನ್ನು ಉಳಿಸಿ ರಕ್ಷಿಸಿಕೊಂಡು ಬರಲಾಗಿದ್ದು, ಪರಿಸರ ಸಂರಕ್ಷಣೆಗೆ ವಿರೋಧವಿಲ್ಲ. ಆದರೆ ಕಸ್ತೂರಿರಂಗನ್ ವರದಿಯನ್ನು ಕೇರಳ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು: * ಪ್ರತಿ ಗ್ರಾಮದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು…
ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ ‘ಎ’ ವರ್ಗೀಕರಣ ಪಡೆದುಕೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ರೂ.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ತಿಳಿಸಿದರು. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ಕೊಡಗು ಜಿಲ್ಲಾದ್ಯಂತ ಕಾರ್ಯವ್ಯಾಪ್ತಿ ಹೊಂದಿದ್ದು, ಪ್ರಸ್ತುತ 2,165 ಸದಸ್ಯರನ್ನು ಹೊಂದಿದೆ. ರೂ.1.12 ಕೋಟಿ ಪಾಲು ಬಂಡವಾಳ, ರೂ.6.74 ಕೋಟಿ ಠೇವಣಿ ಹಾಗೂ ರೂ.5.73 ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮನೆ ಸಾಲ, ಕೃಷಿ ಸಾಲ, ಕೃಷಿಯೇತರ ದೀರ್ಘಾವಧಿ ಸಾಲ, ಠೇವಣಿಗಳ ಮೇಲಿನ ಸಾಲ ಹಾಗೂ ಆಭರಣ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಶೇ.97ರಷ್ಟು ಸಾಲ ವಸೂಲಾತಿ ಮಾಡಲಾಗಿದ್ದು, ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ ರೂ.3.32 ಕೋಟಿ…
ಚೆಟ್ಟಳ್ಳಿ, ಆ.27 NEWS DESK : ಕೊಡಗಿನ ಸಾಂಪ್ರದಾಯಿಕ ಕೈಲ್ ಪೊವ್ದ್ ಹಬ್ಬದ ಅಂಗವಾಗಿ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ ದೇವಾಲಯದಲ್ಲಿ ಕೈಲ್ ಪೊವ್ದ್ ಧಾರೆ ಪೂಜೆಯನ್ನು ಸಂಪ್ರದಾಯಬದ್ಧವಾಗಿ ನೆರವೇರಿಸಲಾಯಿತು. ತಕ್ಕ ಮುಖ್ಯಸ್ಥರು ಹಾಗೂ ಊರಿನವರ ಸಮ್ಮುಖದಲ್ಲಿ ನಡೆದ ಪೂಜಾ ವಿಧಿವಿಧಾನಗಳಲ್ಲಿ ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಲಾಯಿತು. ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಸೆಪ್ಟೆಂಬರ್ 3ರಂದು ಕೊಡಗಿನಾದ್ಯಂತ ಸಾಂಪ್ರದಾಯಿಕವಾಗಿ ಕೈಲ್ ಪೊವ್ದ್ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ನಾಡಿನ ಜನತೆಗೆ ಒಳಿತಾಗಲಿ, ಸುಖ-ಸಮೃದ್ಧಿ ನೆಲೆಸಲಿ ಎಂದು ಕುಲದೇವರಾದ ಇಗ್ಗುತಪ್ಪ, ಕಾವೇರಮ್ಮೆ ಹಾಗೂ ಗ್ರಾಮ ದೇವರಲ್ಲಿ ಹಿರಿಯರಾದ ಬಟ್ಟಿರ ಕಾವೇರಪ್ಪ ಅವರು ಪ್ರಾರ್ಥಿಸಿದರು. ಪೂಜೆಯ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಹಿರಿಯರು, ತಕ್ಕ ಮುಖ್ಯಸ್ಥರು ಹಾಗೂ ಊರಿನವರು ಸೇರಿದಂತೆ ಹಲವು ಮಂದಿ ಧಾರೆ ಪೂಜೆಯಲ್ಲಿ ಪಾಲ್ಗೊಂಡು ಸಾಂಪ್ರದಾಯಿಕ ಆಚರಣೆಗೆ ಸಾಕ್ಷಿಯಾದರು.
ಮಡಿಕೇರಿ, ಆ.27 NEWS DESK : ರಕ್ಷಾಬಂಧನದ ಪ್ರಯುಕ್ತ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಲಾಯಿತು. ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಸಂಸದ ಯದುವೀರ್ ಒಡೆಯರ್ ಅವರಿಗೆ ರಾಖಿ ಕಟ್ಟಿ, ತಿಲಕವಿಟ್ಟು ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು. ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ಪರಸ್ಪರ ರಕ್ಷಣೆಯ ಸಂಕೇತವಾಗಿರುವ ರಕ್ಷಾಬಂಧನದ ಮಹತ್ವವನ್ನು ಈ ಸಂದರ್ಭದಲ್ಲಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ಹಾಗೂ ಇತರ ಸಹೋದರ-ಸಹೋದರಿಯರಿಗೂ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ರಾಖಿ ಕಟ್ಟಿ ರಕ್ಷಾಬಂಧನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಈ ವೇಳೆ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಸಂಸದರು ಸೇರಿದಂತೆ ಗಣ್ಯರನ್ನು ಶಾಖೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ರಕ್ಷಾಬಂಧನದ ಮೂಲಕ ಸಮಾಜದಲ್ಲಿ ಸಹೋದರತ್ವ, ಸೌಹಾರ್ದತೆ, ಪ್ರೀತಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಸಂದೇಶವನ್ನು…
ವಿರಾಜಪೇಟೆ, NEWS DESK ಆ.27: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ. ಸುಬ್ಬಯ್ಯ ಅವರ ಪುಣ್ಯಸ್ಮರಣೆಯ ಅಂಗವಾಗಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ತಮ್ಮ ಪೂಜನೀಯ ತಾಯಿಯವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಿದರು. ಈ ಸಂದರ್ಭದಲ್ಲಿ ಶಾಸಕರ ಹಿರಿಯ ಸಹೋದರ ಎ.ಎಸ್. ನರೇನ್ ಕಾರ್ಯಪ್ಪ, ಶಾಸಕರ ದೊಡ್ಡಮ್ಮ ಮಾಚಮಾಡ ಗಂಗಮ್ಮ, ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೆಯಡ ಕರುಣ್ ಕಾಳಪ್ಪ, ಶಾಸಕರ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ, NEWS DESK ಆ.27 : ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 63ನೇ ವಾರ್ಷಿಕ ಮಹಾಸಭೆ ನಗರದ ಬಾಲಭವನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಅಪ್ಪಚಟ್ಟೋಳಂಡ ಮನು ಮುತ್ತಪ್ಪ ಅವರು, 1957ರ ಫೆಬ್ರವರಿ 13ರಂದು ಕೊಡಗು ವ್ಯಾಪ್ತಿಯನ್ನು ಒಳಗೊಂಡಂತೆ 25 ಸದಸ್ಯರು ಹಾಗೂ ರೂ.3 ಸಾವಿರ ಷೇರು ಬಂಡವಾಳದೊಂದಿಗೆ ಆರಂಭಗೊಂಡ ಬ್ಯಾಂಕ್ ಇಂದು 2,906 ಸದಸ್ಯರನ್ನು ಹೊಂದಿದ್ದು, ರೂ.184.21 ಲಕ್ಷ ಷೇರು ಬಂಡವಾಳ ಹೊಂದಿದೆ ಎಂದು ತಿಳಿಸಿದರು. ತಾಲೂಕಿನ ಖಾಲಿ ಜಮ್ಮಾ ಬಾಣೆ ಜಮೀನಿಗೆ ಸಾಲ ಸೌಲಭ್ಯ ಒದಗಿಸಿದ ಪ್ರಥಮ ಬ್ಯಾಂಕ್ ಇದಾಗಿದ್ದು, ಇದರ ಮೂಲಕ ಸಾವಿರಾರು ಎಕರೆ ಪ್ರದೇಶಗಳಲ್ಲಿ ಕಾಫಿ, ಕಾಳುಮೆಣಸು, ಅಡಿಕೆ, ತೆಂಗು ಹಾಗೂ ರಬ್ಬರ್ ತೋಟಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಸರ್ಕಾರದ ಆದೇಶದಂತೆ ಶೇ.3ರ ಬಡ್ಡಿದರದಲ್ಲಿ ರೂ.15 ಲಕ್ಷದವರೆಗೆ ವಿವಿಧ ಕೃಷಿ ಉದ್ದೇಶಗಳಿಗೆ ಸಾಲ ನೀಡಲಾಗುತ್ತಿದೆ. ಅಲ್ಲದೆ, ಸಕಾಲದಲ್ಲಿ ಸಾಲದ ಚಾಲ್ತಿ ಕಂತುಗಳನ್ನು ಮರುಪಾವತಿಸುವ…
ಮಡಿಕೇರಿ ಆ.27 NEWS DESK : ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ ‘ಜಾನಪದ ಸಂಗಮ’ ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸ ಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸೆಪ್ಟೆಂಬರ್, 16 ರೊಳಗೆ ತಲುಪಿಸಲು ಕೋರಿದೆ. ಅರ್ಜಿ ನಮೂನೆಯು ಅಕಾಡೆಮಿ ವೆಬ್ಸೈಟ್ ವಿಳಾಸ https://janapada.karnataka.gov.in/ ಇಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿ ಇ-ಮೇಲ್ registrar.janapada@gmail.com ಹಾಗೂ ದೂ.ಸಂ.080-22215509 ನ್ನು ಸಂಪರ್ಕಿಸಬಹುದು. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.27 NEWS DESK : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್, 03 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ…






