ಲೇಖಕ: admin

ಮಡಿಕೇರಿ ಮೇ 28 NEWS DESK :  ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯ ಸಂರಕ್ಷಣೆಯ ಪ್ರಚಾರದ ಮೂಲಕ ಮಾರುಕಟ್ಟೆ ವ್ಯಾಪಿಸುತ್ತಿರುವ ಈ ದಿನಗಳಲ್ಲಿ ಎಲ್ಲಾ ರೀತಿಯ  ಪ್ರಚಾರವನ್ನೂ ನಂಬುವ ಬದಲಿಗೆ ಸೂಕ್ತ ವೈದ್ಯರ ಸಲಹೆಯಂತೆ   ಚಿಕಿತ್ಸೆ ಪಡೆಯಬೇಕೆಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ವೈದ್ಯೆ ಡಾ ಕೆ.ಟಿ.ರಾಜಶ್ರೀ ಸಲಹೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ರಾಜಶ್ರೀ,  ಹಿಂದಿನ ಕಾಲದಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆ ಮತ್ತು ಹಳೇ ಆರೋಗ್ಯ ಪದ್ದತಿಯನ್ನೇ ನಂಬಿಕೊಂಡಿರಬಾರದು. ಆರೋಗ್ಯ ಪದ್ದತಿ ಕೂಡ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ ಎಂದರು.  ಇಂದಿನ ನವ ತಂತ್ರಜ್ಞಾನದ ಕಾಲದಲ್ಲಿ   ಸಾಮಾಜಿಕ ಜಾಲತಾಣಗಳ ಮೂಲಕ ಆರೋಗ್ಯ ಚಿಕಿತ್ಸೆ ಸಂಬಂಧಿತ ಪ್ರಚಾರ ನಡೆಯುತ್ತಿದೆ ಆದರೆ ಇಂಥ ಪ್ರಚಾರವನ್ನು ನಂಬುವ ಬದಲಿಗೆ ಸೂಕ್ತ ವೈದ್ಯರನ್ನು ಮುಖತ ಭೇಟಿಯಾಗಿ ಚಿಕತ್ಸೆ ಪಡೆಯುವುದು ಅಗತ್ಯ ಎಂದೂ ಅವರು ಹೇಳಿದರು. ರೋಟರಿ ಜಿಲ್ಲೆ 3181 ನ…

Read More

ಮಡಿಕೇರಿ ಮೇ 29 NEWS DESK : ಕನ್ನಡ ಭಾಷೆಯ ಅಭಿವೃದ್ಧಿಗೆ ಸಣ್ಣ ಸಣ್ಣ ಭಾಷೆಗಳ ಕೊಡುಗೆ ಅಪಾರವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಹಾಗೂ ಶಿಕ್ಷಣಕ್ಕೆ ಒತ್ತು ನೀಡುವಲ್ಲಿ ಸರಕಾರದ ಶಿಕ್ಷಣ ನೀತಿಯಲ್ಲಿ ಶಾಲಾ ಗ್ರಂಥಾಲಯಗಳ ಪಾತ್ರ ಪ್ರಮುಖವಾಗಿದೆ ಎಂದು ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಸಾಹಿತಿ ಹಾಗೂ ಕಥೆಗಾರ ಅಬ್ದುಲ್ ರಶೀದ್ ಬಣ್ಣಿಸಿದ್ದಾರೆ. ಸುಂಟಿಕೊಪ್ಪದ ಎಸ್.ಎಸ್.ಇಂಟರ್‍ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ಶುಕ್ರವಾರ ನಡೆದ ಕೊಡಗು ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗನ್ನು ಕರ್ನಾಟಕದ ಕಾಶ್ಮೀರ ಎಂದು ಹೇಳುತ್ತಾರೆ. ಆದರೆ ಈ ಹೋಲಿಕೆ ಯಾಕೋ ಸರಿ ಬರುತ್ತಿಲ್ಲ ಕಾಶ್ಮೀರದ ಕಷ್ಟ ಕಾರ್ಪಣ್ಯಗಳ ಅರಿವು ಇರುವವರು ಮತ್ತು ಕೊಡಗಿನ ಚೆಲುವನ್ನು ಚೆನ್ನಾಗಿ ಬಲ್ಲವರು ಯಾರೂ ಸಹ ಈ ಹೋಲಿಕೆ ಸರಿಯಲ್ಲ ಎಂದು ಹೇಳುತ್ತಾರೆ. ಈ ನೆಲದ ಮಣ್ಣು, ಗಾಳಿ, ಇಲ್ಲಿನ ಗುಡಿಗಳು, ಭಗವತಿ, ಈಶ್ವರ,…

Read More

ಮಡಿಕೇರಿ NEWS DESK ಮೇ 29 : ಕೊಡಗು ಜಿಲ್ಲೆಯಲ್ಲಿ ಸ್ವಂತ ಸೂರಿಲ್ಲದೆ ಸಂಕಷ್ಟದ ಬದುಕು ಸಾಗಿಸುತ್ತಿರುವ ಸುಮಾರು 60 ಸಾವಿರಕ್ಕೂ ಅಧಿಕ ನಿವೇಶನ ರಹಿತ ಬಡವರಿಗೆ ತಲಾ 5 ಸೆಂಟ್ ನಿವೇಶನ ಹಂಚಿಕೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮತ್ತು ನವ ಕರ್ನಾಟಕ ನಿರ್ಮಾಣ ಆಂದೋಲನ ಸಮಿತಿಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೇಡಿಕೆ ಈಡೇರಿಸಲು ಸರಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪ್ರತಿಭಟನಾಕಾರರು, ಸೂಕ್ತ ಸ್ಪಂದನೆ ದೊರೆಯದೇ ಇದ್ದಲ್ಲಿ ರಾಜ್ಯ ಮಟ್ಟದ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಭೂಕಬಳಿಕೆದಾರರ ಬಳಿ ಇರುವ ಸರಕಾರಿ ಭೂಮಿಯ ಒತ್ತುವರಿಯನ್ನು ತಕ್ಷಣ ತೆರವು ಮಾಡಬೇಕು. ಬಡವರಿಗೆ ನಿವೇಶನ ಹಂಚಿಕೆ ಮಾಡಲು ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ 50 ಎಕರೆ ಭೂಮಿ ಕಾಯ್ದಿರಿಸಬೇಕು. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಪೊನ್ನತ್ ಮೊಟ್ಟೆ ಭಾಗದಲ್ಲಿ ಮತ್ತು ಮಾದಾಪುರದ ಕುಂಬೂರು…

Read More

ಮಡಿಕೇರಿ NEWS DESK ಮೇ 29 : ಚೆನ್ನೈನ ಮನೋಗಾನಂ ಸಂಗೀತ ವಿದ್ಯಾ ಸಂಸ್ಥೆ ಮಡಿಕೇರಿ ಹಾಗೂ ತಲಕಾವೇರಿಯಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮೇ 30ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 8.30 ಕ್ಕೆ ಹಾಗೂ ಮೇ 31ರಂದು ಮಡಿಕೇರಿಯ ಗೌಳಿ ಬೀದಿಯ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಕಾರ್ಯಕ್ರಮಗಳು ನಡೆಯಲಿದೆ. ಈ ಸಂಗೀತ ವಿದ್ಯಾ ಸಂಸ್ಥೆ ಪ್ರತಿ ವರ್ಷ ತನ್ನ ವಿದ್ಯಾರ್ಥಿಗಳನ್ನು ದೇಶದ ವಿವಿಧ ದೇವಾಲಯಗಳಿಗೆ ಕರೆದುಕೊಂಡು ಹೋಗಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಸಂಸ್ಥೆಯ ಆರು ಮತ್ತು ಏಳನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೊಡಗಿನಲ್ಲಿ ಸಂಗೀತ ಸುಧೆ ನಡೆಯಲಿದ್ದು, ಮಕ್ಕಳ ಸಂಗೀತದೊoದಿಗೆ ಪಿಟೀಲು ವಾದನ ಕೂಡ ಇರಲಿದೆ. ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಅವರ ಸಹಕಾರದಿಂದ ಈ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರಮಶ್ರೀ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮೇ 28 : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಮೇ 30 ರಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ರೂಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ…

Read More

ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ ಗುತ್ತಿಗೆದಾರರೇ ಪಡೆಯಬೇಕು ಎಂದು ಈಗಾಗಲೇ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಸಂಘಗಳಿಗೆ ಮನವಿ ಮಾಡಿದೆ. ಇದರೊಂದಿಗೆ ಹೊರ ಜಿಲ್ಲೆಯ ಗುತ್ತಿಗೆದಾರರ ಮನವೊಲಿಸುವ ಪ್ತಯತ್ನ ಮಾಡಲಾಗುತ್ತದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ಸಂಕಷ್ಟ್ಟದ ಪರಿಹಾರಕ್ಕೆ ಪೂರಕವಾಗಿ, ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ 50 ಲಕ್ಷ ರೂ. ಮೊತ್ತದ ಕಾಮಗಾರಿಯ ಟೆಂಡರನ್ನು ಇತರ ತಾಲ್ಲೂಕು ಮತ್ತು ಜಿಲ್ಲೆಯವರು ಪಡೆಯದಂತೆ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬoಧಿಸಿದoತೆ, ಹೊರ ಜಿಲ್ಲೆಯ ಗುತ್ತಿಗೆದಾರರು ಶೇ.25 ರಿಂದ 30 ರಷ್ಟು ಕಡಿಮೆ ಮೊತ್ತಕ್ಕೆ ಟೆಂಡರ್‌ಗಳನ್ನು ಕರೆಯುತ್ತಿರುವುದು ಸಮಸ್ಯೆಯನ್ನು ಸೃಷ್ಟಿಸಿದೆ. ಇಷ್ಟು ಕಡಿಮೆ…

Read More

ಮಡಿಕೇರಿ NEWS DESK ಮೇ 28 : ಸರಕಾರ ವಿಧಿಸುತ್ತಿರುವ ತೆರಿಗೆ ಹೊರೆ ದೇಶದ ಜನಸಾಮಾನ್ಯರನ್ನು ಕಂಗಾಲಾಗಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮಧ್ಯ ಪ್ರಾಚ್ಯದ ಯುದ್ಧದ ಹಿನ್ನೆಲೆ ತೈಲದ ಕೊರತೆ ಇರುವುದರಿಂದ ಬೆಲೆ ಹೆಚ್ಚಳವೆನ್ನಲಾಗುತ್ತ್ತಿದೆ. ಬೆಲೆ ಹೆಚ್ಚಳ ಮಾಡಿದರೆ ಕೊರತೆ ಇರುವ ತೈಲ ಲಭ್ಯವಾಗುತ್ತದೆಯೇ ಎಂದು ಲೇವಡಿ ಮಾಡಿದರು. ತೈಲ ಬೆಲೆ ಹೆಚ್ಚಳದಿಂದ ಬೃಹತ್ ತೈಲ ಕಂಪೆನಿಗಳು ಲಾಭ ಪಡೆಯುತ್ತಿವೆ, ಇಂತಹ ವಿಚಾರಗಳನ್ನು ಜನಸಾಮಾನ್ಯರು ಪ್ರಶ್ನಿಸಬೇಕಿದೆ. ಒಂದು ಟೂತ್ ಪೇಸ್ಟ್ ಕೊಳ್ಳುವಾಗ ಅದಾನಿ ನೀಡುವಷ್ಟೆ ತೆರಿಗೆಯನ್ನು ಸಮಾಜದ ಕೆಳ ಸ್ತರದಲ್ಲಿರುವ ಜನಸಾಮಾನ್ಯರು ಕೂಡ ನೀಡುತ್ತಾರೆ. ಪ್ರಸ್ತುತ ಅತ್ಯಧಿಕ ತೆರಿಗೆ ಪಾವತಿಸುತ್ತಿರುವವರು ಜನಸಾಮಾನ್ಯರೇ ಆಗಿದ್ದಾರೆ. ಇಂದಿನ ತೆರಿಗೆಗಳು ಹೆಚ್ಚಿನ ಹೊರೆಯಾಗುತ್ತಿರುವುದು ಕಳವಳಕಾರಿ ಎಂದರು. ಪ್ರಮುಖ ರಾಜಕೀಯ ಪಕ್ಷಗಳು ಜನ ಹಿತಕ್ಕೆ ಪೂರಕವಾಗಿ ಕಾರ್ಯನಿರ್ವಹಿಸದೆ ಸ್ವಹಿತಾಸಕ್ತಿ ಮತ್ತು ಕುಟುಂಬ ರಾಜಕಾರಣದಲ್ಲಿ…

Read More

ಮಡಿಕೇರಿ NEWS DESK ಮೇ 28 : ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕರಿಕೆ ಗ್ರಾಮದ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕರಿಕೆ ವಲಯ ಅರಣ್ಯಾಧಿಕಾರಿಗಳು ಅರಣ್ಯದಲ್ಲಿ ಬೀಟ್ ತೆರಳುತ್ತಿದ್ದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಕರಿಕೆ ಉಪ ಠಾಣಾ ಪೊಲೀಸ್ ಸಿಬ್ಬಂದಿಗಳು, ಭಾಗಮಂಡಲ ಪೊಲೀಸ್ ಠಾಣಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರಿಕೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಸಮೀಪ ನೀಲಿ ಬಣ್ಣದ ಶರ್ಟ್ ಇದ್ದು, ಕಾವಿ ಬಣ್ಣದ ಪಂಚೆಯಲ್ಲಿ ನೇಣು ಕುಣಿಕೆ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಮೇ 27 : ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಶ್ವೇತಪತ್ರವನ್ನು ಶಾಸಕರು ತಕ್ಷಣ ಬಿಡುಗಡೆ ಮಾಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತೇ ಹೊರತು ಇಲ್ಲಿಯವರೆಗೆ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಾಮಾಜಿಕ ಜಾಲಾತಾಣಗಳಲ್ಲಿ ಮಾತ್ರ ಕೋಟಿಗಟ್ಟಲೆ ಅನುದಾನದ ಸುಳ್ಳು ಪ್ರಚಾರ ನೀಡಿ ಜನರ ಹಾದಿ ತಪ್ಪಿಸಲಾಗುತ್ತಿದೆ. ಇದೀಗ 150 ಕೋಟಿ ರೂ.ಗಳ ಅನುದಾನದ ಬಗ್ಗೆ ಪ್ರಚಾರ ನೀಡಲಾಗುತ್ತಿದೆಯಾದರೂ ಮಳೆಯ ನೆಪವೊಡ್ಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಮತ್ತು ಗುಂಪುಗಾರಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಸರಕಾರ ಕಳೆದ ಮೂರು ವರ್ಷಗಳಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅಧಿಕಾರವನ್ನು ಅನುಭವಿಸುತ್ತಾ ಕಾಲಹರಣ ಮಾಡುತ್ತಿದೆ. ಇದರ ಪರಿಣಾಮ ವಿರಾಜಪೇಟೆ ಕ್ಷೇತ್ರದ…

Read More

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ ಬರಬೇಕೆನ್ನುವುದು ರಾಜಕೀಯ ಪಕ್ಷಗಳ ಹಂಬಲವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಮಹದೇವಪೇಟೆಯ ಎ.ವಿ ಶಾಲೆಯ ಬಳಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಆಮ್ ಆದ್ಮಿ ಪಾರ್ಟಿ” ಹೆಸರೇ ಸೂಚಿಸುವಂತೆ ಈ ಪಕ್ಷಕ್ಕೆ ಸಾಮಾನ್ಯ ಜನರೇ ಮುಖ್ಯವಾಗಿದ್ದಾರೆ. ಇಲ್ಲಿ ಕುಟುಂಬ ರಾಜಕಾರಣವಿಲ್ಲ, ಇದು ಪಾರ್ಟಿಯ ಸಿದ್ಧಾಂತವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಈ ದೇಶದ ಅಭಿವೃದ್ದಿಯಾಗುತ್ತದೆ ಎನ್ನುವ ಬಗ್ಗೆ ನನಗೆ ನಂಬಿಕೆ ಇಲ್ಲ. ಕಳೆದ 10 ದಿನಗಳ ಅವಧಿಯಲ್ಲಿ 4 ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದ್ದು, ಜನ ಸಾಮಾನ್ಯರಿಗೆ ಇಂಧನವೂ ದೊರಕದ ಪರಿಸ್ಥಿತಿ ಕಾಣುತ್ತಿದ್ದೇವೆ. ಸಾಮಾನ್ಯರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ…

Read More