ಮಡಿಕೇರಿ ಡಿ.22 NEWS DESK : ಕೊಡಗು ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ ವಲಸಿಗ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಐದು ವರ್ಷದೊಳಗಿನ ಮಕ್ಕಳು ಪೋಲಿಯೊ ಲಸಿಕೆಯಿಂದ ಬಿಟ್ಟುಹೋಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು. ಪ್ರವಾಸಿಗರು ಸಹ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಪ್ರವಾಸಿ ಕೇಂದ್ರಗಳು ಸೇರಿದಂತೆ ಎಲ್ಲೆಡೆ ಐದು ವರ್ಷದೊಳಿನ ಮಕ್ಕಳಿಗೆ ಲಸಿಕೆ ನೀಡುವಂತೆ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯ ಶಿಶುವಿಹಾರ ಕೇಂದ್ರದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಗುವಿಗೆ ಪೋಲಿಯೊ ಲಸಿಕೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಲೇಖಕ: admin
ಮಡಿಕೇರಿ NEWS DESK ಡಿ.21 : ಕೊಡಗು ಜಿಲ್ಲೆಯ ದೇವರಕೊಲ್ಲಿ ಶ್ರೀಚಾಮುಂಡೇಶ್ವರಿ ದೇವಾಲಯದಿಂದ ಹೊರಟ ಆದಿಯೋಗಿ ರಥ ಇಂದು ಸಂಜೆೆ ಮದೆನಾಡು ತಲುಪಿತು. ದೇವರಕೊಲ್ಲಿ ಸ್ವಯಂಸೇವಕರು ರಥ ಎಳೆಯುವ ಪುಣ್ಯ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಡಿ.22 ರಂದು ಮದೆನಾಡಿನಿಂದ ಮಡಿಕೇರಿವರೆಗೆ ಕಡಿದಾದ ಬೆಟ್ಟಗುಡ್ಡ ದಾರಿಯಲ್ಲಿ ರಥ ಸಾಗಲಿದೆ. ಸಂಜೆ 5 ಘಂಟೆಯ ನಂತರ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಥವನ್ನು ಬರಮಾಡಿಕೊಂಡು ಮುಖ್ಯಬೀದಿಯಲ್ಲಿ ಭಜನೆಯೊಂದಿಗೆ ಕೊಂಡೊಯ್ಯಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಗುಂಡ್ಲುಪೇಟೆ NEWS DESK ಡಿ.21 : ಹುಲಿಗಳ ನಡುವಿನ ಕಾದಾಟದ ಸಂದರ್ಭ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಗಂಡು ಹುಲಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮುಕ್ತಿ ಕಾಲೋನಿಯ ರೈತರೊಬ್ಬರ ಬಾಳೆ ತೋಟದಲ್ಲಿ ಸೆರೆ ಹಿಡಿದಿದ್ದಾರೆ. ಮುಕ್ತಿ ಕಾಲೋನಿಯ ಲೋಕೇಶ್ ಎಂಬುವವರ ಬಾಳೆ ತೋಟದಲ್ಲಿ ಬೆಳ್ಳಂಬೆಳಗ್ಗೆ ಹುಲಿ ಕಾಣಿಸಿಕೊಂಡು ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಬಾಳೆ ತೋಟದಲ್ಲಿ ವಿಶ್ರಾಂತಿಗೆ ಜಾರಿದ್ದ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು. ಸೆರೆಯಾದ ಹುಲಿಯ ಮೈಮೇಲೆ ಗಾಯಗಳು ಗೋಚರಿಸಿದೆ. ಕಾರ್ಯಾಚರಣೆಯಲ್ಲಿ ಬಂಡೀಪುರ ಸಿಎಫ್ ಪ್ರಭಾಕರನ್, ಎಸಿಎಫ್ ಸುರೇಶ್, ಆರ್.ಎಫ್.ಓ ಪುನೀತ್, ಡಿ.ಆರ್.ಎಫ್.ಓ ಶಿವಕುಮಾರ್ ಮತ್ತಿತರ ಅರಣ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಡಿ.20 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಅಂದಾಜು ರೂ.15 ರಿಂದ 18 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮುಖಮಂಟಪವು(ತೀರ್ಥ) ಡಿ.25 ರಂದು ಲೋಕಾರ್ಪಣೆಗೊಳಿಸಲಾಗುವುದೆಂದು ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ. ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992 ಮೇ 8 ರಂದು ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀಕನ್ನಿಮೂಲ ಗಣಪತಿ, ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ಕಳೆದ ವರ್ಷ ದುರ್ಗಾ ದೇವಿಯ ದೇವಸ್ಥಾನವನ್ನು ಬಿ.ಎಂ.ಸುರೇಶ್ ನೇತೃತ್ವದ ದೇವಸ್ಥಾನ ಆಡಳಿತ ಮಂಡಳಿ ತಂಡವು ದೇವಾಲಯವನ್ನು ನಿರ್ಮಿಸಿ ಜೀರ್ಣೊದ್ಧಾರಗೊಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಈ ಬಾರೀ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ತೀರ್ಥ ಮಂಟಪದ ಅವಶ್ಯಕತೆಯನ್ನು ಮನಗಂಡ ಬಿ.ಎಂ.ಸುರೇಶ್ ಆಡಳಿತ ಮಂಡಳಿಯವರು ನಿರ್ಮಿಸುವ ಕಾರ್ಯಕ್ಕೆ ಮುಂದಾಗಿ ಊರಿನ ದಾನಿಗಳು, ಭಕ್ತಾದಿಗಳು ಸೇರಿದಂತೆ ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ಸರಿಸುಮಾರು ಅಂದಾಜು ರೂ. 15 ರಿಂದ 18 ಲಕ್ಷ ವೆಚ್ಚದಲ್ಲಿ…
ಮಡಿಕೇರಿ ಡಿ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯು ಡಿಸೆಂಬರ್, 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಡಿಸೆಂಬರ್, 29 ರಂದು ಬೆಳಗ್ಗೆ 10 ಗಂಟೆಗೆ ಗಣ್ಯರಿಂದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದ ಪಕ್ಕದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…
ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರದ ಯೋಜನೆಯಂತೆ ಸೋಮವಾರಪೇಟೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಹೋಬಳಿಗಳ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಿಗೆ ಸಂಬಂಧಿಸಿದಂತೆ ಇ-ಪೌತಿ ಖಾತೆ ಬದಲಾವಣೆ ಸಂಬಂಧ ಆಂದೋಲನ ನಡೆಯಲಿದೆ. ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರರ ಮರಣ ದೃಢೀಕರಣ ಪತ್ರ, ಒಂದು ವೇಳೆ ಮರಣ ದೃಢೀಕರಣ ಲಭ್ಯವಿಲ್ಲದಿದ್ದಲ್ಲಿ ಆಧಾರ ಮತ್ತು ಪಡಿತರ ಚೀಟಿ ದಾಖಲೆಗಳಂತೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡೆವಿಟ್ ಪಡೆದುಕೊಳ್ಳುವುದು, ಆರ್ಡಿ ಸಂಖ್ಯೆಯುಳ್ಳ ವಂಶ ವೃಕ್ಷ ದೃಢೀಕರಣ ಪತ್ರ, ಚಾಲ್ತಿ ಸಾಲಿನ ಪಹಣಿ ಹಾಗೂ ಆಧಾರ್ ಪ್ರತಿ ಮತ್ತು ದೂರವಾಣಿ ಸಂಖ್ಯೆ ಈ ದಾಖಲಾತಿಗಳೊಂದಿಗೆ ಮನವಿಯನ್ನು/ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.20 NEWS DESK : ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು ಎಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮತ್ತು ಡಾ. ಹರೀಶ್ ಕುಮಾರ್ ಅವರು ಪ್ರತಿಪಾದಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು ಅಧಿಕಾರಿಗಳಿಗೆ ಪಾಠ ಮಾಡಿದರು. ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯು ಸರಳವಾಗಿದ್ದರೂ ಸಹ ಗಂಭೀರವಾಗಿದೆ. ಅದನ್ನು ಅರ್ಥಮಾಡಿಕೊಂಡು ಕಚೇರಿಗೆ ಸಲ್ಲಿಕೆಯಾದ ಅರ್ಜಿಗೆ ನಿಯಮಾನುಸಾರ 30 ದಿನದೊಳಗೆ ಮಾಹಿತಿ ಒದಗಿಸಬೇಕು ಎಂದು ಸಲಹೆ ಮಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಉತ್ತರದಾಯಿತ್ವ ಹೊಂದಿರಬೇಕು. ಜೊತೆಗೆ ಪಾರದರ್ಶಕತೆ ಇದ್ದಲ್ಲಿ ವಿಚಲಿರಾಗುವ ಅಗತ್ಯವಿಲ್ಲ. ಆ ದಿಸೆಯಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ಬದ್ರುದ್ದೀನ್…
ಮಡಿಕೇರಿ ಡಿ.20 NEWS DESK : ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ವ್ಯಾಪ್ತಿಯ ಹೆಗ್ಗಳ, ಬೂದಿಮಾಳ, ಬೇಟೋಳಿ, ರಾಮನಗರ, ನೀಮಲಗಿರಿ ಭಾಗದಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿದೆ. 2024-25ನೇ ಸಾಲಿನ ಮಳೆ ಹಾನಿ ಪರಿಹಾರ ನಿಧಿ ಕಾಮಗಾರಿ ಸುಮಾರು 24 ಲಕ್ಷ ಅನುದಾನ ಒದಗಿಸಿ 8 ಕಡೆ ರಸ್ತೆ ಡಾಂಬರೀಕರಣ ಹಾಗೂ ಕಾಂಕ್ರೀಟ್ ಅಳವಡಿಸುವ ಕಾಮಗಾರಿ ಚಾಲನೆ ದೊರೆತಿದೆ. ರಾಮನಗರ, ಕೊಡುಂಗಲ್ಲೂರು ದೇವಸ್ಥಾನಕ್ಕೆ ಹೋಗುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ವಲಯ ಕಾಂಗ್ರೆಸ್ ಅಧ್ಯಕ್ಷ ವರ್ಗೀಸ್ ಲೆನಿನ್ ಹಾಗೂ ರಾಮನಗರ ಭಾಗದ ಕಾರ್ಯಕರ್ತರಾದ ತೀರೇಶ್, ರಾಜೇಶ್, ಸುಮಂತ್, ಕಿಶೋರ್ ಸೇರಿ ಇತರ ಕಾರ್ಯಕರ್ತರೊಂದಿಗೆ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಈ ಕಾಮಗಾರಿಗೆ ಅನುದಾನ ಒದಗಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಹಾಗೂ ಸಹಕರಿಸಿದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರಿಗೆ ಹೆಗ್ಗಳ ಬೂದಿಮಾಳ ಹಾಗೂ ಬೇಟೋಳಿ ರಾಮನಗರ ಗ್ರಾಮಸ್ಥರು ಧನ್ಯವಾದ…
ಮಡಿಕೇರಿ ಡಿ.20 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ- ಭಾಗಮಂಡಲ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಅತಿ ಮಳೆಯಿಂದ ಹೊಂಡ ಗುಂಡಿಗಳಾಗಿದ್ದ ರಸ್ತೆಯ ಅಭಿವೃದ್ಧಿಗೆ ಭಕ್ತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಅನುದಾನವನ್ನು ಒದಗಿಸಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಮತ್ತೊಂದೆಡೆ ವಿರಾಜಪೇಟೆ – ಮಾಕುಟ್ಟ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಶಾಸಕರ ಪ್ರಯತ್ನಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಳಿದಿರುವ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.20 NEWS DESK : ರಾಜ್ಯದ ಶೈಕ್ಷಣಿಕ ಸ್ಥಿತಿಗತಿಗಳನ್ನು ಸುಧಾರಿಸುವುದು ಸೇರಿದಂತೆ ಪ್ರಮುಖ ನಾಲ್ಕು ನಿರ್ಣಯಗಳನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದ್ದು, ಇವುಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಎಬಿವಿಪಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಗೋಪಿ ರಂಗನಾಥ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಲೇಜುಗಳಲ್ಲಿನ ಉಪನ್ಯಾಸಕರ ಕೊರತೆ, ನೂತನ ವಿಶ್ವ ವಿದ್ಯಾನಿಲಯಗಳಿಗೆ ಅಗತ್ಯ ಅನುದಾನ ದೊರಕದಿರುವ ಅಂಶಗಳ ಬಗ್ಗೆಯೂ ಸಮ್ಮೇಳನದಲ್ಲಿ ವಿಸ್ತೃತವಾಗಿ ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಒಳಗೊಂಡ ನಿರ್ಣಯಗಳನ್ನು ಕಾರ್ಯಗತಗೊಳಿಸುವಂತೆ ಸರ್ಕಾರವನ್ನು ಕೋರಲಾಗುತ್ತದೆಂದು ತಿಳಿಸಿದರು. ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವಂತೆ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯ ನೈತಿಕ ಹಾಗೂ ನ್ಯಾಯಯುತ ಸಂಯೋಜನೆಗಳ ಕುರಿತಾಗಿಯು ನಿರ್ಣಯಗಳನ್ನು ಕೈಗೊಂಡಿರುವುದಾಗಿ ಮಾಹಿತಿಯನ್ನಿತ್ತರು. :: ಯಶಸ್ವಿ ಸಮ್ಮೇಳನ :: ಇದೇ ಡಿ.17ರಿಂದ ಮೂರು ದಿನಗಳ ಕಾಲ ಮಡಿಕೇರಿಯಲ್ಲಿ ನಡೆದ ಎಬಿವಿಪಿ ಸಮ್ಮೇಳನದಲ್ಲಿ ಎಬಿವಿಪಿಯ 9 ಸಂಘಟನಾತ್ಮಕ ವಿಭಾಗಗಳಿಂದ 400 ಕ್ಕೂ ಹೆಚ್ಚಿನ…






