ಮಡಿಕೇರಿ ಡಿ.20 NEWS DESK : ರಾಜ್ಯದ ಶೈಕ್ಷಣಿಕ ಸ್ಥಿತಿಗತಿಗಳನ್ನು ಸುಧಾರಿಸುವುದು ಸೇರಿದಂತೆ ಪ್ರಮುಖ ನಾಲ್ಕು ನಿರ್ಣಯಗಳನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದ್ದು, ಇವುಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಎಬಿವಿಪಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಗೋಪಿ ರಂಗನಾಥ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಲೇಜುಗಳಲ್ಲಿನ ಉಪನ್ಯಾಸಕರ ಕೊರತೆ, ನೂತನ ವಿಶ್ವ ವಿದ್ಯಾನಿಲಯಗಳಿಗೆ ಅಗತ್ಯ ಅನುದಾನ ದೊರಕದಿರುವ ಅಂಶಗಳ ಬಗ್ಗೆಯೂ ಸಮ್ಮೇಳನದಲ್ಲಿ ವಿಸ್ತೃತವಾಗಿ ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಒಳಗೊಂಡ ನಿರ್ಣಯಗಳನ್ನು ಕಾರ್ಯಗತಗೊಳಿಸುವಂತೆ ಸರ್ಕಾರವನ್ನು ಕೋರಲಾಗುತ್ತದೆಂದು ತಿಳಿಸಿದರು. ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವಂತೆ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯ ನೈತಿಕ ಹಾಗೂ ನ್ಯಾಯಯುತ ಸಂಯೋಜನೆಗಳ ಕುರಿತಾಗಿಯು ನಿರ್ಣಯಗಳನ್ನು ಕೈಗೊಂಡಿರುವುದಾಗಿ ಮಾಹಿತಿಯನ್ನಿತ್ತರು. :: ಯಶಸ್ವಿ ಸಮ್ಮೇಳನ :: ಇದೇ ಡಿ.17ರಿಂದ ಮೂರು ದಿನಗಳ ಕಾಲ ಮಡಿಕೇರಿಯಲ್ಲಿ ನಡೆದ ಎಬಿವಿಪಿ ಸಮ್ಮೇಳನದಲ್ಲಿ ಎಬಿವಿಪಿಯ 9 ಸಂಘಟನಾತ್ಮಕ ವಿಭಾಗಗಳಿಂದ 400 ಕ್ಕೂ ಹೆಚ್ಚಿನ…
ಲೇಖಕ: admin
ಮಡಿಕೇರಿ ಡಿ.20 NEWS DESK : ಮಾಂಸದ ಆಸೆಗಾಗಿ ಕಾಡು ಹಂದಿ, ಜಿಂಕೆ, ಕಡವೆ, ಮೊಲ ಸೇರಿದಂತೆ ಮತ್ತಿತರ ವನ್ಯಜೀವಿಗಳಿಗೆ ಉರುಳು ಹಾಕಿ ಬೇಟೆಯಾಡಿದರೆ ಕನಿಷ್ಟ 3 ವರ್ಷ, ಗರಿಷ್ಠ 7 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತದೆ ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಚೆಟ್ಟಳ್ಳಿ ಗ್ರಾಮದಲ್ಲಿ ಉರುಳಿಗೆ ಸಿಲುಕಿ ಹುಲಿಯೊಂದು ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿಗಳನ್ನು ಬೇಟೆಯಾಡದಂತೆ ಪತ್ರಿಕಾ ಪ್ರಕಟಣೆ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಉರುಳುಗಳನ್ನು ಬಳಸಿ ವನ್ಯಜೀವಿಗಳನ್ನು ಬೇಟೆಯಾಡುವುದು ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ಅಪರಾಧವಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಉರುಳುಗಳನ್ನು ಹಾಕುವುದು ಮತ್ತು ವನ್ಯ ಪ್ರಾಣಿಗಳನ್ನು ಹಿಡಿಯುವ ಪ್ರಯತ್ನ ಮಾಡುವುದೂ ಅಪರಾಧವಾಗಿದೆ. ಈ ರೀತಿಯ ಅಪರಾಧ ಮಾಡಿದಲ್ಲಿ ಕನಿಷ್ಟ 3 ವರ್ಷ ಮತ್ತು ಗರಿಷ್ಠ 7 ವರ್ಷಗಳ ಜೈಲು ಹಾಗೂ 5 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತದೆ…
ಮಡಿಕೇರಿ ಡಿ.20 NEWS DESK : ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ ಗಭಿ೯ಣಿ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿ ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿ, ಮಕ್ಕಳು ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಶಿಕ್ಷಣದ ಕಡೆ ಮಾತ್ರ ಗಮನ ಹರಿಸಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗೆ ಒಳಗಾಗಬಾರದು. ಅಲ್ಲದೆ ಸಮಾಜದಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ಮಾತುಕತೆಯಾಗಲೀ ಒಡನಾಟವನ್ನು ಇಟ್ಟುಕೊಳ್ಳಬಾರದು. ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಆಕರ್ಷಣೆಗೆ ಒಳಗಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಶಾಲೆಗೆ ಹೋಗುವ ಮಕ್ಕಳ ಬಗ್ಗೆ ಅವರ ತಂದೆ, ತಾಯಿಗಳು ಮಕ್ಕಳ ಆಗುಹೋಗುಗಳ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರಾದ ರೇವತಿ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕುರಿತು ಮಾತನಾಡಿ, ಹೆಣ್ಣು ಮಕ್ಕಳು…
ಗೋಣಿಕೊಪ್ಪ ಡಿ.20 NEWS DESK : ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಅಮೀನಾ ಎಂ.ಎಂ ಆಯ್ಕೆಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿ ನಚೆನ್ನಂಗೊಲ್ಲಿ ನಿವಾಸಿಯಾಗಿರುವ ಇವರು ಅವಿನಾ ಡ್ರಿಮ್ಸ್ ವಲ್ರ್ಡ್ ಸೇವ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ಸರಕಾರಿ ಶಾಲೆಗಳಿಗೆ ಸಿ.ಸಿ.ಕ್ಯಾಮರ ಮತ್ತು ಇನ್ನಿತರ ಪೀಠೋಪಕರಣಗಳ ಅವಶ್ಯಕತೆಯನ್ನು ಪೂರೈಸುವುದರ ಜತೆಗೆ ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರಂತರಾಗಿ ತೊಡೆಸಿಕೊಂಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ, ಕಾರುಣ್ಯಾಶ್ರಮದ ಸಂಸ್ಥಾಪಕ ಅಮರಯ್ಯ ಸ್ವಾಮಿ ಹಿರೇಮಠ ಹರೇಟನೂರು ಅವರು ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಂಪರ್ಕಧಿಕಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ ಮಾಹಿತಿ ನೀಡಿದ್ದಾರೆ.
ಮಡಿಕೇರಿ ಡಿ.20 NEWS DESK : ಹೆರವನಾಡು ಗ್ರಾಮದ ಕಲ್ಲಂಬಿಮನೆ ರಾಜ ಎಂಬುವರರ ಮನೆಯ ಶೆಡ್ನಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಬೆಂಗಳೂರು, ಡಿ.20 NEWS DESK : ಬೆಳಗಾವಿ ಅಧಿವೇಶನ ಮುಗಿಸಿ ಬೆಂಗಳೂರಿಗೆ ಹಿಂತಿರುಗಿ ಬರುವಾಗ ಹೃದಯಾಘಾತದಿಂದ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ (63) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದರು.ಮನೆಗೆ ತೆರಳಲು ಬಿಎಂಟಿಸಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲೇ ಬೊಮಯ್ಯ ಅವರಿಗೆ ಹೃದಯಘಾತವಾಗಿ ನಿಧನರಾಗಿದ್ದಾರೆ. ಮೃತರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಹುಟ್ಟೂರು ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು,…
ವಿರಾಜಪೇಟೆ ಡಿ.20 NEWS DESK : ಬಿಳುಗುಂದ ಸರಕಾರಿ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷರೂ ಹಾಗೂ ಸಮಾಜ ಸೇವಕರಾದ ಐನಂಡ ಪ್ರಕಾಶ್ ಗಣಪತಿ, ಲೀನಾ ಗಣಪತಿ ಹಾಗೂ ನಿವೃತ ಶಿಕ್ಷಕಿ ಸಾವಿತ್ರಿ ಹೆಚ್.ಜಿ. ಪಾಲ್ಗೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಡಾ. ರವಿ ಆರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಜ್ವಾಲಾಮುಖಿಯ ಮಾದರಿಯಲ್ಲಿ ಲಾವಾ ಹೊರಹೊಮ್ಮಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಗಣಿತದ ಆಕೃತಿಗಳನ್ನು ಮತ್ತು ವಿಜ್ಞಾನದ ಹಲವು ಮಾದರಿಗಳನ್ನು, ರಂಗೋಲಿಗಳನ್ನು ರಚಿಸಿ ಪ್ರದರ್ಶಿಸಿ, ಅದರ ಕಾರ್ಯ ವೈಖರಿಯನ್ನು ವೇದಿಕೆಯಲ್ಲಿ ಪ್ರದರ್ಶಿಸಿ ವಿವರಿಸಿದರು. ಅತಿಥಿಗಳು ವಿದ್ಯಾರ್ಥಿಗಳಿಗೆ ಪ್ರಯೋಗಗಳಲ್ಲಿ ಹಾಗೂ ಮಾದರಿಗಳ ನಿರ್ಮಾಣದಲ್ಲಿ ಇರುವ ಆಸಕ್ತಿಯನ್ನು ಕಂಡು ಅಭಿನಂದಿಸಿ, ಪ್ರೋತ್ಸಾಹಿಸಿದರು. ಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜಾ ಹಾಗೂ ವಿಜ್ಞಾನ ಶಿಕ್ಷಕಿ ರೂಪ ಕಡೇಮನಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಲೀಲಾವತಿ ವಿ.ಕೆ., ಭವ್ಯ…
ಮಡಿಕೇರಿ ಡಿ.20 NEWS DESK : ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಮೈಸೂರಿನಿಂದ ಆರಂಭಗೊಂಡ ರಥಯಾತ್ರೆ ಮಡಿಕೇರಿಗೆ ಆಗಮಿಸಿತು. ಗೌಡ ಸಮಾಜ, ಜೂನಿಯರ್ ಕಾಲೇಜು ಹಾಗೂ ಸಂತ ಮೈಕಲರ ಶಾಲೆಗೆ ರಥಯಾತ್ರೆ ತೆರಳಿ ಅಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳಿಂದಾಗುವ ಅಪಾಯ, ದೇಶದ ಮೇಲಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಗರದ ಜೂನಿಯರ್ ಕಾಲೇಜಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜು, ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು, ವಿವಿಧ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಕಿರು ನಾಟಕದ ಮೂಲಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಗಾಂಜಾ ಸೇವನೆ ಮಾಡುವವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಜೀವನ ಹಾಳುಮಾಡಿಕೊಳ್ಳುವುದು, ಕುಡಿತದ ಚಟದಿಂದ ಕುಟುಂಬ ನಾಶವಾಗುವುದು, ತಂಬಾಕು ಸೇವನೆಯಿಂದ ಶ್ವಾಸಕೋಶ ಮತ್ತು ಬಾಯಿಯ ಕ್ಯಾನ್ಸರ್ ಉಂಟಾಗಿ ಬದುಕು ಸರ್ವನಾಶವಾಗುವುದನ್ನು ನಾಟಕದ ಮೂಲಕ ಪ್ರಸ್ತುತಪಡಿಸಲಾಯಿತು. ಇಂತಹ ಚಟಕ್ಕೆ ಒಳಗಾದವರಿಗೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೊಠಡಿ ಸಂಖ್ಯೆ 11ರ…
ಮಡಿಕೇರಿ ಡಿ.20 NEWS DESK : ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಯತ್ತ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು, ಶೈಕ್ಷಣಿಕವಾಗಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್. ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿತ ‘ಡಿಜಿಟಲ್ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದತ್ತ ಹೆಚ್ಚಿನ ಕಾಳಜಿ ತೋರುವ ಮೂಲಕ ತಮ್ಮನ್ನು ತಾವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. ಪೊಲೀಸ್ ಇಲಾಖೆಯ ಮಕ್ಕಳ ವಿಶೇಷ ಘಟಕದ ಪ್ರಮುಖರಾದ ಸುಮತಿ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ…
ಕಣಿವೆ ಡಿ.20 NEWS DESK : ಅತ್ತೂರು ಗ್ರಾಮದ ಜ್ಞಾನಗಂಗಾ ವಸತಿ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಿಸುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕ್ರಿಸ್ಮಸ್ ಟ್ರೀ, ಗುಡಿಸಲು ಹಾಗೂ ಸಾಂತಾ ಕ್ಲಾಸ್ ಮಾದರಿಗಳನ್ನು ಸಜ್ಜುಗೊಳಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲೆ ಸತ್ಯ ಸುಲೋಚನ, ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಆಚರಣೆಗಳ ಮಹತ್ವಗಳನ್ನು ತಿಳಿಯಪಡಿಸುವ ಸಲುವಾಗಿ ಎಲ್ಲಾ ಧರ್ಮಗಳ ಪ್ರಮುಖ ಆಚರಣೆಗಳು, ರಾಷ್ಟ್ರೀಯ ಹಬ್ಬಗಳು ಹಾಗೂ ನಾಡು ಕಟ್ಟಿದ ಮಹನೀಯರ ಸ್ಮರಣೆ ಗಳನ್ನು ಕಾಲ ಕಾಲಕ್ಕೆ ಆಚರಿಸಲಾಗುತ್ತಿದೆ ಎಂದು ಹೇಳಿದರು. ಶಾಲೆಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಹಾಗೂ ಶಾಲಾ ಶಿಕ್ಷಕರಾದ ಭಾವನಾ ಹಾಗೂ ಪ್ರೇಮ ಇದ್ದರು.






