ಮಡಿಕೇರಿ ಡಿ.20 NEWS DESK : ಅಪರಾಧ ತಡೆ ಮಾಸಾಚರಣೆ ಸಂಬಂಧವಾಗಿ ಸುಂಟಿಕೊಪ್ಪ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಗರಗಂದೂರಿನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.
ಲೇಖಕ: admin
ಮಡಿಕೇಡಿ ಡಿ.20 NEWS DESK : ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹೊದವಾಡದ ಸರ್ಕಾರಿ ಪ್ರೌಢ ಶಾಲೆ, ಪಾರಾಣೆ ಸರ್ಕಾರಿ ಪ್ರೌಢ ಶಾಲೆ ಹಾಗೂ ರಾಫೆಲ್ ಪಿ.ಯು. ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಮುಂತಾದ ವಿಚಾರಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
ಗುವಾಹಟಿ ಡಿ.20 NEWS DESK : ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್ಎಫ್ಆರ್) ವಕ್ತಾರರು ತಿಳಿಸಿದ್ದಾರೆ. ರೈಲು ಸೈರಾಂಗ್ನಿಂದ ನವದೆಹಲಿಗೆ ತೆರಳುತ್ತಿದ್ದ ವೇಳೆ ಅಂದರೆ ಶನಿವಾರ ಬೆಳಗಿನ ಜಾವ 2.17ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಜಮುನಾಮುಖ್-ಕಂಪುರ ವಿಭಾಗದ ಮೂಲಕ ಸಂಚರಿಸಬೇಕಿದ್ದ ರೈಲುಗಳು ಉತ್ತರಪ್ರದೇಶದ ಮೂಲಕ ಕಾರ್ಯ ನಿರ್ವಹಿಸುತ್ತಿವೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ತಿಳಿಸಿದ್ದಾರೆ. ಘಟನೆಯನ್ನು ದೃಢಪಡಿಸಿರುವ , ಎನ್.ಎಫ್. ರೈಲ್ವೆ ವಿಭಾಗೀಯ ಪ್ರಧಾನ ಕಚೇರಿಯ ಅಧಿಕಾರಿಗಳು, ಅಪಘಾತ ಪರಿಹಾರ ರೈಲುಗಳು ಸ್ಥಳಕ್ಕೆ ತಲುಪಿವೆ ಎಂದು…
ಸುಂಟಿಕೊಪ್ಪ ಡಿ.18 NEWS DESK : ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣಪ್ರಾಂತ್ಯದ ಸುಂಟಿಕೊಪ್ಪದ ಇಮ್ಮಾನುವೇಲ್ ಚರ್ಚ್ ಕ್ರಿಸ್ಮಸ್ ಆಚರಣೆಯ ಅಂಗವಾಗಿ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಇಮ್ಮಾನುವೇಲ್ ದೇವಾಲಯ ಹೊರಾಂಗಣವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದ್ದು, ಒಳಾಂಗಣವನ್ನು ಕ್ರಿಸ್ಮಸ್ ಟ್ರೀ ಸೇರಿದಂತೆ ಅಲಂಕಾರಿಕ ವಸ್ತುಗಳನ್ನು ಇರಿಸಿ ಸಿಂಗರಿಸಲಾಗಿದೆ. ಡಿ.24 ರಿಂದ ಆರಂಭಗೊಳ್ಳಲಿರುವ ಪ್ರಾರ್ಥನೆಯನ್ನು ಇಮ್ಮಾನುವೇಲ್ ದೇವಾಲಯದ ಸುಂಟಿಕೊಪ್ಪ ಸಭಾಪಾಲಕರಾದ ಜೈಸನ್ ಅಯ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ-ಆರ್ಶಿವಚನ ನೀಡಲಿದ್ದಾರೆ.
ನಾಪೋಕ್ಲು ಡಿ.20 NEWS DESK : ಇತಿಹಾಸ ಪ್ರಸಿದ್ಧ ಸತ್ಯ ಸಂಧತೆಯ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವರ ಹಬ್ಬವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ಸಾಂಪ್ರದಾಯಿಕವಾಗಿ ಭಕ್ತಾದಿಗಳು ಹಾಗೂ ದೇವಾಲಯದ ತಕ್ಕ ಮುಖ್ಯಸ್ಥರು ದೇವರಿಗೆ ಹರಕೆ ರೂಪದಲ್ಲಿ ಮಣ್ಣಿನ ಪ್ರತಿಕೃತಿ ನಾಯಿ ಒಪ್ಪಿಸುವ ಕಾರ್ಯಕ್ರಮದ ಮುಖಾಂತರ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ದೇವಾಲಯದ ಆವರಣದಲ್ಲಿ ತಕ್ಕ ಮುಖ್ಯಸ್ಥರು ಸೇರಿ ಕೊಟ್ಟಿ ಹಾಡುವ ಕಾರ್ಯಕ್ರಮ ನಡೆಸಲಾಯಿತು. ರಾತ್ರಿ ಅಂಧಿಬೊಳ್ಕ್ (ದೀಪಾರಾಧನೆ) ಕಾರ್ಯಕ್ರಮ ನಡೆಯಿತು. ನಂತರ ಬೆಳಗ್ಗಿನ ವರೆಗೆ ವಿವಿಧ ದೈವಗಳ ಕೋಲ ನಡೆದು, ಕಲ್ಯಾಟ ಅಜ್ಜಪ್ಪ ದೈವದ ಕೋಲ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ, ಅಪರಾಹ್ನ ಶ್ರೀ ವಿಷ್ಣು ಮೂರ್ತಿ ಮೇಲೇರಿ (ಚೌಂಡಿ ಅಗ್ನಿ ಪ್ರವೇಶ) ನೆರವೇರಿತು. ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. :: ವಿಶೇಷತೆ :: ಮಕ್ಕಿ ಶ್ರೀ ಶಾಸ್ತವು ದೇವರ…
ಮಡಿಕೇರಿ NEWS DESK ಡಿ.20 : ಪೊನ್ನಂಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದಲ್ಲಿ ತಪ್ಪತಸ್ಥ ವ್ಯಕ್ತಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದ ತನಿಖೆಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಡಿಕೇರಿಯ ಕವಾಯತು ಮೈದಾನದಲ್ಲಿ ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.
ನಾಪೋಕ್ಲು ಡಿ.21 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಗೌಡ ವಿಕಾಸ ವೇದಿಕೆ ವತಿಯಿಂದ ಶಾಲಾ ಮಕ್ಕಳ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ-2025 ಅನ್ನು ಡಿ.25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಸುದರ್ಶನ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ ಕುಂದಲ್ಪಾಡಿ ವಹಿಸಲಿದ್ದಾ ಮುಖ್ಯ ಅತಿಥಿಗಳಾಗಿ ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕ ಪ್ರಹ್ಲಾದ್ ಪೊಕ್ಕೋಳಂಡ್ರ ಪಾಲ್ಗೊಳ್ಳಲಿದ್ದಾರೆ. ಅರೆಭಾಷೆ ಹಿರಿಯ ಸಾಹಿತಿ ಬೈತಡ್ಕ ಜಾನಕಿ ಬೆಳ್ಳಪ್ಪ, ಹಾಕತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತೆಕ್ಕಡೆ ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕಿ ಪುದಿಯನೆರವನ ರೇವತಿ ರಮೇಶ್…
ಮಡಿಕೇರಿ ಡಿ.20 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಕುಡೆಕಲ್ ಗಣೇಶ್ ಹಾಗೂ ಚೈತನ್ಯ ಚಂದ್ರಮೋಹನ್ ಅವರನ್ನು ನೇಮಿಸಲಾಗಿದೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ನಡೆಯಿತು. ವಿವಿಧ ಸಮಿತಿಗಳ ಸಂಚಾಲಕರ ನೇಮಕ ಮಾಡಲಾಯಿತು. ಕ್ಷೇಮಾಭಿವೃದ್ಧಿ ಸಮಿತಿಯ ಸಂಚಾಲಕರಾಗಿ ಕೆ.ಕೆ.ನಾಗರಾಜ ಶೆಟ್ಟಿ, ಸಾಂಸ್ಕ್ರತಿಕ ಸಮಿತಿಯ ಸಂಚಾಲಕರಾಗಿ ಜಯಪ್ರಕಾಶ್, ಕ್ರೀಡಾ ಸಮಿತಿಯ ಸಂಚಾಲಕರಾಗಿ ಕೆ.ಜೆ.ಶಿವರಾಜ್, ಪತ್ರಿಕಾ ಭವನದ ನಿವೇಶನ ಹಾಗೂ ಕಟ್ಟಡ ಸಮಿತಿಯ ಸಂಚಾಲಕರಾಗಿ ಎಂ.ಎನ್.ಚಂದ್ರಮೋಹನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ಸಭೆ ನಿರ್ಣಯ ಕೈಗೊಂಡಿದೆ. ಮುಂಬರುವ ಜನವರಿ 2 ನೇ ತಾರೀಖಿನಂದು ಕುಶಾಲನಗರದಲ್ಲಿ ವಾಸವಿ ಸಪ್ತಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಮತ್ತು ಅಪರಾಧ ತಡೆಗಟ್ಟುವ ಕುರಿತು ಪೊಲೀಸ್ ಇಲಾಖೆಯೊಂದಿಗೆ ನಡೆಯುವ ಕಾರ್ಯಕ್ರಮಕ್ಕೆ ಸಂಘದ ಸಹಯೋಗ ನೀಡುವುದು ಮತ್ತು ಆಗಸ್ಟ್ ತಿಂಗಳವರೆಗೆ…
ಮಡಿಕೇರಿ ಡಿ.20 NEWS DESK : ಮದ್ರಾಸ್ ರೆಜಿಮೆಂಟ್ ಅಭಿಲೇಖಾಲಯವು(ರೆಕಾರ್ಡ್ ದಿ ಮದ್ರಾಸ್ ರೆಜಿಮೆಂಟ್) ಮದ್ರಾಸ್ ರೆಜಿಮೆಂಟ್ನ ಮಾಜಿ ಸೈನಿಕರು ಹಾಗೂ ಇತರರೊಂದಿಗೆ ಪರಸ್ಪರ ಸಂಪರ್ಕ ಸುಗಮಗೊಳಿಸುವ ಗುರಿಯೊಂದಿಗೆ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದೆ. ಈ ಮೂಲಕ ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಸಂಬಂಧಿಸಿದ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕುಂದುಕೊರತೆ ಪರಿಹರಿಸಲಾಗುವುದು.ಈ ರ್ಯಾಲಿಯು ಜ.6 ರಂದು ಮಡಿಕೇರಿಗೆ ಆಗಮಿಸಲಿದ್ದು, ಮದ್ರಾಸ್ ರೆಜಿಮೆಂಟ್ನ ಮಾಜಿ ಸೈನಿಕರು ಹಾಗೂ ವೀರನಾರಿಯರು ಈ ರ್ಯಾಲಿಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಪಿಂಚಣಿ ಹಾಗೂ ಇತರೆ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.
ಕೊಚ್ಚಿ NEWS DESK ಡಿ.20 : ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಶ್ರೀನಿವಾಸನ್ (69) ಅವರು ಇಂದು ನಿಧನರಾಗಿದ್ದಾರೆ. ಶ್ರೀನಿವಾಸನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದ ಹಿನ್ನೆಲೆ ತ್ರಿಪ್ಪುನಿತುರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಉದಯಂಪೀರೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು ಐದು ದಶಕಗಳ ಕಾಲ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶ್ರೀನಿವಾಸನ್ ಅವರು ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿ ಚಿತ್ರಪ್ರೇಮಿಗಳ ಅಚ್ಚುಮೆಚ್ಚಿನ ನಟನಾಗಿ ಖ್ಯಾತಿ ಗಳಿಸಿದ್ದರು. ಕೇರಳದ ತಲಶ್ಶೇರಿ ಬಳಿಯ ಪಟ್ಯಂನಲ್ಲಿ 1956ರ ಏಪ್ರಿಲ್ 6 ರಂದು ಜನಿಸಿದ ಶ್ರೀನಿವಾಸನ್, ಕದಿರೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 1977ರಲ್ಲಿ ಪಿ.ಎ. ಬ್ಯಾಕರ್ ಅವರ ‘ಮಣಿಮುಳಕ್ಕಂ’ ಚಿತ್ರದ ಮೂಲಕ ಶ್ರೀನಿವಾಸನ್ ನಟನೆ ಆರಂಭಿಸಿದರು.






