ಲೇಖಕ: admin

ಮಡಿಕೇರಿ ನ.19 NEWS DESK : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನ.25 ರವರೆಗೆ ನಡೆಯುವ ವಿಶ್ವ ಪಾರಂಪರ ಸಪ್ತಾಹ ಹಾಗೂ ಶಾಶ್ವತ ಛಾಯಾಚಿತ್ರ ಪ್ರದರ್ಶನ, ಗ್ಯಾಲರಿ ಸಹಿತ ವ್ಯಾಖ್ಯಾನ ಕೇಂದ್ರವನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದ ಕೋಟೆ ಆವರಣದಲ್ಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಂಸದರು, ಕೊಡಗು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದ್ದು, 1600 ವರ್ಷಗಳ ಹಿಂದೆಯೇ ಕೊಡಗನ್ನು ಹಲವರು ಆಡಳಿತ ಮಾಡಿದ್ದು, ಕೊಡಗಿನ ಇತಿಹಾಸ, ಪರಂಪರೆ ಮತ್ತು ಸಂಸ್ಕøತಿ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.  ಕೊಡಗಿನ ಇತಿಹಾಸ, ಸಂಸ್ಕøತಿ, ಪರಂಪರೆ ಕಲೆಗಳು ಶ್ರೀಮಂತಿಕೆ ಹೊಂದಿದ್ದು, ಅದನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಂತಾಗಬೇಕು. ಆ ನಿಟ್ಟಿನಲ್ಲಿ ಕೋಟೆಯಲ್ಲಿ ಇತಿಹಾಸದ ಪರಂಪರಿಕ ಛಾಯಾಚಿತ್ರ ಪ್ರದರ್ಶನ ಮತ್ತಿತರ ಕಲಾ ಚಟುವಟಿಕೆಗಳು ನಡೆಯುವಂತಾಗಬೇಕು ಎಂದು ಸಂಸದರು ಹೇಳಿದರು.  ನಗರದ ಕೋಟೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ…

Read More

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ಸಾಹಿತಿಗಳು, ಪತ್ರಕರ್ತರು ಆದ ರಜಿತ ಕಾರ್ಯಪ್ಪ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೋಣಿಕೊಪ್ಪದ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಹಿನ್ನಲೆ ರಜಿತ ಕಾರ್ಯಪ್ಪ ಅವರನ್ನು ಅತಿಥಿ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಗ್ರಾ.ಪಂ ಮಾಜಿ ಅಧ್ಯಕ್ಷೆ ಸೌಮ್ಯ ಬಾಲ ಕೃಷ್ಣ, ಗ್ರಾಮಾಭಿವೃದ್ಧಿ ಯೋಜಾನಾಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ, ಗೋಣಿಕೊಪ್ಪ ಪೋಲಿಸ್ ಇಲಖೆಯ ಕಾವೇರಮ್ಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮುದಾಯ ಇಲಾಖೆಯ ವೈದ್ಯಾಧಿಕಾರಿ ಡಾ. ಗ್ರೀಷ್ಮಾ, ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಚಂದನ ಹಾಗೂ ಇತರರು ಇದ್ದರು.

Read More

ಮೂರ್ನಾಡು ನ.19 NEWS DESK : ಶ್ರೀ ಗಜಾನನಯುವಕ ಸಂಘದ ವತಿಯಿಂದ ನ.26 ರಂದು ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಮೂರ್ನಾಡಿನ ಅಯ್ಯಪ್ಪ ದೇವಾಲಯದಲ್ಲಿ ಭಕ್ತಾಧಿಗಳು ಮತ್ತು ಸಾರ್ವಜನಿಕರಿಗೆ 3ನೇ ವರ್ಷದ ಅನ್ನ ಸಂತರ್ಪಣೆ ಸೇವೆಯನ್ನು ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟಂಗಡ ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು  

Read More

ಮಡಿಕೇರಿ ನ.19 NEWS DESK : ಮುಕ್ಕಾಟಿರ(ದೇವಣಗೇರಿ) ಕುಟುಂಬದ ವತಿಯಿಂದ ಕೊಡವ ಕುಟುಂಬಗಳ ನಡುವಣ 5ನೇ ವರ್ಷದ ‘ಕೊಡವ ಫುಟ್ಬಾಲ್ ಉತ್ಸವ’ವು 2026ರ ಏ.7 ರಿಂದ 12ರವರೆಗೆ ಗೋಣಿಕೊಪ್ಪಲುವಿನಲ್ಲಿ ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿಯ ಅಧ್ಯಕ್ಷ ಮುಕ್ಕಾಟಿರ ಸಿ.ಕರುಂಬಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೌಟುಂಬಿಕ ಹಾಕಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾಕೂಟಗಳು ಪ್ರಸ್ತುತ ದೊಡ್ಡ ಮಟ್ಟದಲ್ಲಿ ಬೆಳೆದು, ಪ್ರತಿಭಾವಂತ ಕ್ರೀಡಾಪಟುಗಳನ್ನು ಉತ್ತೇಜಿಸುತ್ತಿವೆ. ಅದೇ ರೀತಿ ಫುಟ್ಬಾಲ್ ಪ್ರತಿಭೆಗಳನ್ನು ಗುರುತಿಸಲು ಹಾಗೂ ಕೊಡವ ಸಮುದಾಯದವರನ್ನು ಒಂದಾಗಿ ಬೆಸೆಯುವ ಚಿಂತನೆಗಳಡಿ ಫುಟ್ಬಾಲ್ ಉತ್ಸವವನ್ನು ಆಯೋಜಿಸುತ್ತಿರುವುದಾಗಿ ಹೇಳಿದರು. ಗೋಣಿಕೊಪ್ಪಲು ಸಮೀಪದ ಅಥ್ಲಾನ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ. ಕಳೆದ ಬಾರಿಯ ಪಂದ್ಯಾವಳಿಯಲ್ಲಿ 74 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿ 100 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿ ಐವರು ಆಟಗಾರರ ತಂಡಗಳ ನಡುವೆ ನಡೆಯಲಿದೆ. ಪ್ರತಿ ತಂಡದಲ್ಲಿ ಇಬ್ಬರು ಅತಿಥಿ ಆಟಗಾರರು ಪಾಲ್ಗೊಳ್ಳುವ ಅವಕಾಶವನ್ನು ಒದಗಿಸಲಾಗಿದೆ. ಈ ಅತಿಥಿ ಆಟಗಾರರು…

Read More

ಮಡಿಕೇರಿ ನ.19 NEWS DESK : ಮಡಿಕೇರಿಯ ಸಂತ ಮೈಕಲರ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ “ಸಮಾಗಮ” ನ.22 ರಂದು ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಮೈಸೂರು ಬಿಷಪ್ ಮತ್ತು ಎಂಡಿಇಎಸ್ ಅಧ್ಯಕ್ಷರಾದ ವಂದನೀಯ ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಪಾಲ್ಗೊಳ್ಳಲಿದ್ದು, ಅತಿಥಿಗಳಾಗಿ ಮೈಸೂರು ಡಯಾಸಿಸ್ ವಿಕಾರ್ ಜನರಲ್ ಆಲ್ಫ್ರೆಡ್ ಜಾನ್ ಮೆಂಡೋನ್ಸಾ, ಎಂಡಿಇಎಸ್ ಕಾರ್ಯದರ್ಶಿ ಫಾದರ್ ಎಡ್ವರ್ಡ್ ವಿಲಿಯಂ ಸಲ್ಡಾನಾ, ಖಜಾಂಚಿ ಫಾ. ನವೀನ್ ಕುಮಾರ್ ಎ, ಮಡಿಕೇರಿ ಸೇಂಟ್ ಮೈಕೆಲ್ಸ್ ಚರ್ಚ್‍ನ ಫಾ. ಜಾರ್ಜ್ ದೀಪಕ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Read More

ಪುತ್ತೂರು ನ.19 NEWS DESK : ಕನ್ನಡ ಎಂದಾಗ ನಮ್ಮ ನಾಡು ನುಡಿ ಮತ್ತು ಸಮುದಾಯ ಎನ್ನುವ ಭಾವನೆ ಬರುತ್ತದೆ. ಈ ಸುಂದರ ಭಾಷೆಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಗೀತಾಕುಮಾರಿ.ಟಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಎಸ್.ಎಲ್.ಭೈರಪ್ಪನವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿವಿಧ ಸಾಹಿತ್ಯಿಕ ಚಟುವಟಿಕೆಗಳು ನಮ್ಮ ಯಾಂತ್ರೀಕೃತ ಬದುಕಿಗೆ ಚೈತನ್ಯವನ್ನು ನೀಡುತ್ತದೆ. ಯಾವುದೇ ಭಾಷೆಯನ್ನಾಗಲಿ ನಿರಂತರವಾಗಿ ಬಳಸಿದರೆ ಮಾತ್ರ ಅದರ ಉಳಿವು ಸಾಧ್ಯವಾಗುತ್ತದೆ. ಹಾಗಾಗಿ ಕನ್ನಡ ಭಾಷೆಯನ್ನು ಬಳಸುವಲ್ಲಿ ಮತ್ತು ಉಳಿಸುವಲ್ಲಿ ನಾವು ಶಕ್ತಿವಂತರಾಗಬೇಕು ಎಂದರು. ಎಸ್.ಎಲ್.ಭೈರಪ್ಪನವರ ಕೃತಿಗಳ ಹೆಸರನ್ನು ಬಳಸಿ ಬರೆದ ಸ್ವರಚಿತ…

Read More

ಕುಶಾಲನಗರ ನ.19 NEWS DESK : ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ  (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ  ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ  ಸ್ವಚ್ಛ ಭಾರತ್ ಅಭಿಯಾನ ಹಾಗೂ  ‘ ಗೋ ಗ್ರೀನ್ ಅಭಿಯಾನ’ದಡಿ  ಎಲ್ಲರಿಗೂ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಧ್ಯೇಯದೊಂದಿಗೆ  ” ವಿಶ್ವ ಶೌಚಾಲಯ ದಿನ”-2025 ದ ಅಂಗವಾಗಿ ಶೌಚಗೃಹ ಬಳಕೆ ಕುರಿತು ಜನಜಾಗೃತಿ ನಡೆಸಲಾಯಿತು. “ವಿಶ್ವ ಶೌಚಾಲಯ ದಿನ*ದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ಶೌಚಾಲಯಗಳು ಸಾರ್ವಜನಿಕ…

Read More

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಯುವಕವಿ ಲವಿನ್ ಲೋಪೇಸ್ ಬರೆದಿರುವ ಮೌನದ ಮನಸ್ಸಿನಲ್ಲಿ ಚೊಚ್ಚಲ ಕೃತಿಯು ನ.23 ರಂದು ವಿರಾಜಪೇಟೆಯ ಮೊಗರಗಲ್ಲಿಯಲ್ಲಿನ ಕಲಾ ಉತ್ಸವ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಲವಿನ್ ಅವರು ತಮ್ಮ ಸ್ವಂತ ಪ್ರಕಾಶನದ ಮೂಲಕ ಹೊರತಂದಿರುವ ತಮ್ಮ ಕನಸಿನ ಕೂಸು ಮೌನದ ಮನಸ್ಸಿನಲ್ಲಿ ಕೃತಿಯನ್ನು ಸಾದಿಕ್ ಆರ್ಟ್ಸ್ ವತಿಯಿಂದ ಮೊಗರಗಲ್ಲಿಯಲ್ಲಿ ನಡೆಯುತ್ತಿರುವ ಕಲಾ ಉತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಾಹಿತಿ ವಿ.ಎನ್. ರಜಿತ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯ ಕುರಿತು ಸಾಹಿತಿ ಪುಷ್ಪಲತಾ ಶಿವಪ್ಪ ಮಾತನಾಡಲಿದ್ದಾರೆ. ಪ್ರಾದ್ಯಾಪಕರಾದ ಡಾ.ಕಾವೇರಿ ಪ್ರಕಾಶ್ ಮುನ್ನುಡಿ ಬರೆದು ಹರಸಿದರೆ, ಸಾಹಿತಿ ವಿ.ಎನ್.ರಜಿತ ಅವರು ಬೆನ್ನುಡಿ ಬರೆದಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಕರಾದ ಮಹಮ್ಮದ್ ಶಾಫಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ. ಲವಿನ್ ಲೋಪೆಸ್ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಬರವಣಿಗೆಯನ್ನು ಕರಗತ ಮಾಡಿಕೊಂಡು, ತಮ್ಮ ಮನಸ್ಸಿನ ಭಾವನೆಗಳನ್ನು ಕವಿತೆ ಮೂಲಕ ಹೊರಹಾಕಿ ಸಂಕಲನ ರೂಪದಲ್ಲಿ ಹೊರತಂದಿದ್ದಾರೆ.

Read More

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ತೆಲುಗು ಶೆಟ್ಟರ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ನ.26 ರಂದು ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಪೂಜೆ, ಮಾರಿಯಮ್ಮ ದೇವಿಗೆ ಅಭಿಷೇಕ ಹಾಗೂ ಅಲಂಕಾರ ಪೂಜೆ, ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ ಮತ್ತು ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೋಳ್ಳುವಂತೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ವಕೀಲರು ಆಗಿರುವ ಟಿ.ಪಿ ಕೃಷ್ಣ ತಿಳಿಸಿದ್ದಾರೆ.

Read More

ಮಡಿಕೇರಿ ನ.19 NEWS DESK : ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯ ಮಟ್ಟದ ‘ಸಹಕಾರ ರತ್ನ’ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆಯ ನಿವಾಸಿ ಹಾಗೂ ಹಿರಿಯ ಸಹಕಾರಿಗಳಾದ ಬಲ್ಲಡಿಚಂಡ ಬಿ. ನಾಣಯ್ಯ ಅವರು ಭಾಜನರಾಗಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ವಾಸವಿರುವ ಇವರು 86 ವಸಂತಗಳನ್ನು ಕಂಡಿದ್ದು, ವೃತ್ತಿಯಲ್ಲಿ ವಕೀಲರಾಗಿರುತ್ತಾರೆ. ಶ್ರೀಯುತರು ವಿರಾಜಪೇಟೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಈ ಸಂಸ್ಥೆಗೆ 1967 ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಇವರು ಇದೇ ಸಂಸ್ಥೆಯಲ್ಲಿ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರದಲ್ಲಿ ವಿರಾಜಪೇಟೆ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನಲ್ಲಿ 1970 ರಿಂದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಸುಮಾರು 10 ವರ್ಷಗಳ ಕಾಲ, ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳದಲ್ಲಿ 3 ವರ್ಷ ನಿರ್ದೇಶಕರಾಗಿ, ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘ, ಮಡಿಕೇರಿಯಲ್ಲಿ 15 ವರ್ಷ ನಿರ್ದೇಶಕರಾಗಿ ಹಾಗೂ 4 ವರ್ಷ…

Read More