ಮಡಿಕೇರಿ ಡಿ.20 NEWS DESK : 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್ಗಳಲ್ಲಿ ಡಿಸೆಂಬರ್, 21 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಡಿ.20 NEWS DESK : ಮಹಾಲೇಖಪಾಲರ ಕಚೇರಿಯ ಮುಖ್ಯ ಮಹಾಲೇಖಪಾಲರು, ಡೆಪ್ಯೂಟಿ ಅಕೌಂಟೆಂಟ್ ಜನರಲ್, ಹಿರಿಯ ಲೆಕ್ಕಾಧಿಕಾರಿಗಳು, ಬ್ಯಾಂಕುಗಳು ಹಾಗೂ ಖಜಾನೆ ಇಲಾಖೆಯಿಂದ ಅಪರ ನಿರ್ದೇಶಕರು, ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ, ಬೆಂಗಳೂರು ಇವರ ಸಮನ್ವಯದೊಂದಿಗೆ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಡಿಸೆಂಬರ್, 26 ರಂದು ಬೆಳಗ್ಗೆ 10.30 ಗಂಟೆಗೆ ಮೈಸೂರು ವಿಭಾಗ ಮಟ್ಟದ ಪಿಂಚಣಿ ಅದಲಾತ್ ಹಾಗೂ ಜಿಪಿಎಫ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಆಯಾಯ ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಈ ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನು ನಿವಾಹಿಸಿಕೊಳ್ಳಬಹುದು ಎಂದು ಚಿಕ್ಕಮಗಳೂರು ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಡಿ.20 NEWS DESK : ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು 2015 ರ ಏಪ್ರಿಲ್, 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಅದರಂತೆ ಜನನ ಮರಣ ನೋಂದಣಿ(ತಿದ್ದುಪಡಿ-2023) ಅಧಿನಿಯಮ 1960, ಕರ್ನಾಟಕ ಜನನ ಮರಣ ನೋಂದಣಿ (ತಿದ್ದುಪಡಿ 2024) ರಂತೆ ನಿಯಮಗಳಲ್ಲಿ ಕೆಲವು ಮಾರ್ಪಾಡಾಗಿದ್ದು, ಅದರಂತೆ ನಿಯಮಗಳನ್ನು ಪಾಲಿಸಬೇಕಾಗಿ ಕೋರಿದೆ. ಜನನ ಮರಣ ನೋಂದಣಿಯಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಪ್ರಮುಖ ಅಂಶಗಳು; ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನಮೂನೆ-1 ರ ಕಾಲಂ 4 ಮತ್ತು 5 ರಲ್ಲಿ ತಂದೆ ತಾಯಿಗಳ ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ…
ಮಡಿಕೇರಿ ಡಿ.20 NEWS DESK : ಜಿಲ್ಲೆಯಾದ್ಯಂತ ಡಿ.21 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತೆ ಬಗ್ಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಿ, ಹಲವು ಸಲಹೆ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 0 ತಿಂಗಳಿನಿಂದ 05 ವರ್ಷದ ಒಳಗಿನ ಒಟ್ಟು 32,702 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 3,275 ಗ್ರಾಮೀಣ ವ್ಯಾಪ್ತಿಯಲ್ಲಿ 29,427 ಮಕ್ಕಳಿರುತ್ತಾರೆ. ಇವರಲ್ಲಿ ಸ್ಥಿರವಾಸಿತ ವಲಸೆ ಒಟ್ಟು 15,788 ಮಕ್ಕಳು, ವಲಸೆ ಕಾರ್ಮಿಕರ 4,112 ಮಕ್ಕಳು ಇದ್ದಾರೆ ಎಂದರು. ಜಿಲ್ಲೆಯಲ್ಲಿ ಒಟ್ಟು 470 ಬೂತ್, 32 ಸಂಚಾರಿ ಬೂತ್, ಒಂದು ಸಂಚಾರಿ ಬೂತ್ನ್ನು ಮಾಡಲಾಗಿದೆ. ಬೂತ್ಗಳಲ್ಲಿ ಲಸಿಕೆ ನೀಡಲು 1,946 ಲಸಿಕೆದಾರರು, 85 ಮೇಲ್ವಿಚಾರಕರು 973 ಮನೆ ಭೇಟಿ ನೀಡುವ…
ಮಡಿಕೇರಿ ಡಿ.20 NEWS DESK : ಬೇಸಿಗೆ ಅವಧಿಯಲ್ಲಿ ನವೋದಯ ಶಾಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆಬ್ರವರಿಯಿಂದಲೇ ನವೋದಯ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬನಗೊಳ್ಳುವುದರಿಂದ ಪರೀಕ್ಷೆ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆ ಸಂಬಂಧ ಎಚ್ಚರವಹಿಸುವಂತೆ ಸಿಇಒ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಕೂಟುಹೊಳೆಯಿಂದ ಪೂರೈಕೆಯಾಗುವ ಮಾರ್ಗದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವೋದಯ ಶಾಲೆಗೂ ಕುಡಿಯುವ ನೀರು ಪೂರೈಸುವಂತೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಯೋಜನಾ…
ಮಡಿಕೇರಿ ಡಿ.19 NEWS DESK : ‘ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ’ ಎನ್ನುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಧ್ಯೇಯ ವಾಕ್ಯದ ಸಾಕಾರವಾಗಬೇಕಿದ್ದಲ್ಲಿ, ನಮ್ಮಲ್ಲಿ ನಾವು ಪರಿವರ್ತನೆಯನ್ನು ಕಾಣುವುದು ಅವಶ್ಯ. ಇಂತಹ ಪರಿವರ್ತನೆಗಾಗಿ ‘ಅಧ್ಯಯನ’ಕ್ಕೆ ಮಹತ್ವವನ್ನು ನೀಡಬೇಕೆಂದು ಖ್ಯಾತ ವಾಗ್ಮಿ ಹಾಗೂ ಮೀಡಿಯಾ ಮಾಸ್ಟರ್ ಯೂ ಟ್ಯೂಬ್ ಸಂಸ್ಥಾಪಕ ಎಂ.ಎಸ್.ರಾಘವೇಂದ್ರ ಯುವ ಸಮೂಹಕ್ಕೆ ಕರೆ ನೀಡಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 45ನೇ ದಕ್ಷಿಣ ಪ್ರಾಂತ ಸಮ್ಮೇಳನದ ಕೊನೆಯ ಹಾಗೂ ಮೂರನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ರಿಟಿಷರ ಆಳ್ವಿಕೆಯ ಅವಧಿಯಲ್ಲಿ ಜಾರಿಗೆ ಬಂದ ಮೆಕಾಲೆ ಶಿಕ್ಷಣ ಪದ್ಧತಿ ನಮ್ಮಲ್ಲಿ ‘ಪ್ರಶ್ನಿಸುವ’ ಮನೋಭಾವವನ್ನು ಮರೆಸಿ, ಗುಲಾಮಗಿರಿತನವನ್ನಷ್ಟೆ ತುಂಬಿತು. ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ನಾವು ಅಂದಿನ ಶಿಕ್ಷಣ ಪದ್ಧತಿಗಳಡಿಯಲ್ಲೇ ಸಾಗುತ್ತಿದ್ದೇವೆ ಎಂದು ವಿಷಾದಿಸಿದರು. ಸ್ವಾತಂತ್ರ್ಯ ಬಂದ ಅವಧಿಯಲ್ಲಿಯೂ ಗುಲಾಮಗಿರಿತನದ ಮನೋಭಾವವೆ ನಮ್ಮನ್ನು ಆವರಿಸಿತ್ತು. ಇವುಗಳ ನಡುವೆ ಕೆಲವರು ಯುವ ಸಮೂಹದಲ್ಲಿ ರಾಷ್ಟ್ರಾಭಿಮಾನವನ್ನು, ಸ್ವಾಭಿಮಾನವನ್ನು ತುಂಬುವ ಮೂಲಕ, ವ್ಯಕ್ತಿಯಿಂದ ರಾಷ್ಟ್ರ…
ಮಡಿಕೇರಿ ಡಿ.19 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ವತಿಯಿಂದ ಪರಿಷತ್ತಿನ ಕೇಂದ್ರ ಸಮಿತಿಯ ನಿರ್ದೇಶನದಂತೆ ನಡೆದ “ನನ್ನ ಕಲ್ಪನೆಯ ಸ್ವಚ್ಛ ಕೊಡಗು” ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎಂ.ರುಶೀಲ್ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾಳೆ. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಎಂ.ಎಸ್.ಸಮನ್ವಿ ರಾವ್ ದ್ವಿತೀಯ ಹಾಗೂ ವಿರಾಜಪೇಟೆ ತ್ರಿವೇಣಿ ಶಾಲೆಯ ಸನ್ನಧಿ ಆರ್.ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರು ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಕೊಡಗು ವಿದ್ಯಾಲಯದ ಎಂ.ರುಶೀಲ್, ಕೆ.ಪಿ ವರ್ಣಬೋಜಮ್ಮ, ಅರಮೇರಿ ಎಸ್.ಎಂ.ಎಸ್ ಶಾಲೆಯ ವಿ.ಎಸ್.ಅಮೃತ, ಎ.ಹೆಚ್.ಇಶಿತ ಕಾವೇರಮ್ಮ, ಚಾಮೆರ ನಕ್ಷ ದೇಚಮ್ಮ, ವಿರಾಜಪೇಟೆ ಕಾವೇರಿ ಶಾಲೆಯ ಪುಗ್ಗೆರ ಗದಿನ್ ಬೋಪಣ್ಣ, ಟಿ.ಡಿ.ಹಂಸಿಕ, ಮಡಿಕೇರಿ ಜ.ತಿಮ್ಮಯ್ಯ ಶಾಲೆಯ ಎಂ.ಕಾವೇರಿ ಮನೋಜ್, ಸಮನ್ವಿ ರಾವ್, ಬಿ.ಡಿ.ಕುಷಿ, ಕೆ.ವಿ.ಗ್ರೀಷ್ಮ , ಪಿ.ಪ್ರತಿಕ್ಷ, ಸಮನ್ವಿತ ಉತ್ತಮ್, ಜಿ.ವಿ.ಲಿಖಿತ್,…
ಬೆಳಗಾವಿ ಡಿ.19 NEWS DESK : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು. :: ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ :: …
ಉಡುಪಿ ಡಿ.19 NEWS DESK : ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣ ಪುರದ ತ್ರಿಶಾ ಪ.ಪೂ.ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ ಶೇ.100 ಗಳಿಸುವುದರ ಜೊತೆಗೆ ಪಿ.ಯು. ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. :: ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ ::…
ಮಡಿಕೇರಿ ಡಿ.19 NEWS DESK : ಇತಿಹಾಸದ ಘಟನೆಗಳನ್ನು ನೆನಪಿಸಿ, ಹೋರಾಟಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಯುನೈಟೆಡ್ ಕೊಡವ ಆರ್ಗನೈಸೇಷನ್ ಯುಕೋ ಸಂಘಟನೆಯಿಂದ ’ನೆಪ್ಪ್ರ ನಳತ್ ಮಾಂಜತ ಮೊಟ್ಟ್’ (ನೆನಪಿನ ಅಂಗಳದಲ್ಲಿ ಮರೆಯದ ಹೆಜ್ಜೆ) ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯ ಮತ್ತು ಕೊಡಗು ‘ಫ್ಯೂಜನ್ ಆಫ್ ಹಿಸ್ಟರಿ, ಮ್ಯೂಸಿಕ್ ಅಂಡ್ ಪೇಟ್ರಿಯಾಟಿಸಮ್’ ಎಂಬ ಘೋಷವಾಕ್ಯದಲ್ಲಿ ನಗರದ ಕೋಟೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವ ನಿಟ್ಟಿನಲ್ಲಿ ಭಾವಚಿತ್ರ ಪ್ರದರ್ಶನ ಗಮನ ಸೆಳೆಯಿತು. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕೊಡಗಿನ ನೂರಾರು ಹೋರಾಟಗಾರರ ಭಾವಚಿತ್ರವನ್ನು ಕೋಟೆಯೊಳಗೆ ಪ್ರದರ್ಶನಕ್ಕಿಡಲಾಗಿತ್ತು. ಇದರೊಂದಿಗೆ ಹೋರಾಟದ ಸಂದರ್ಭ ಕೊಡಗಿನಲ್ಲಾದ ಘಟನೆಗಳ ಅಪರೂಪದ ಛಾಯಾಚಿತ್ರಗಳು ವೀಕ್ಷಕರಲ್ಲಿ ರೋಮಾಂಚನ ಮೂಡಿಸಿತು. ಅಲ್ಲದೇ ಹೋರಾಟಗಾರರಿಗೆ ನುಡಿ ಹಾಗೂ ಗಾಯನದ ಮೂಲಕ ನಮನ ಸಲ್ಲಿಸಲಾಯಿತು. ಮಲ್ಲೇಂಗಡ ಚಂಗಪ್ಪ, ಪಂದ್ಯಂಡ ಬೆಳ್ಯಪ್ಪ, ಚೆಕ್ಕೆರ ಮೊಣ್ಣಯ್ಯ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಜೀವ ಹಾಗೂ ಜೀವನ ತ್ಯಾಗ ಮಾಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜ.ತಿಮ್ಮಯ್ಯ ಶಾಲಾ ವಿದ್ಯಾರ್ಥಿಗಳು ನೃತ್ಯ ರೂಪಕದ ಮೂಲಕ…






