ಲೇಖಕ: admin

ಮಡಿಕೇರಿ ನ.19 NEWS DESK : ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯ ಮಟ್ಟದ ‘ಸಹಕಾರ ರತ್ನ’ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆಯ ನಿವಾಸಿ ಹಾಗೂ ಹಿರಿಯ ಸಹಕಾರಿಗಳಾದ ಬಲ್ಲಡಿಚಂಡ ಬಿ. ನಾಣಯ್ಯ ಅವರು ಭಾಜನರಾಗಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ವಾಸವಿರುವ ಇವರು 86 ವಸಂತಗಳನ್ನು ಕಂಡಿದ್ದು, ವೃತ್ತಿಯಲ್ಲಿ ವಕೀಲರಾಗಿರುತ್ತಾರೆ. ಶ್ರೀಯುತರು ವಿರಾಜಪೇಟೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಈ ಸಂಸ್ಥೆಗೆ 1967 ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಇವರು ಇದೇ ಸಂಸ್ಥೆಯಲ್ಲಿ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರದಲ್ಲಿ ವಿರಾಜಪೇಟೆ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನಲ್ಲಿ 1970 ರಿಂದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಸುಮಾರು 10 ವರ್ಷಗಳ ಕಾಲ, ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳದಲ್ಲಿ 3 ವರ್ಷ ನಿರ್ದೇಶಕರಾಗಿ, ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘ, ಮಡಿಕೇರಿಯಲ್ಲಿ 15 ವರ್ಷ ನಿರ್ದೇಶಕರಾಗಿ ಹಾಗೂ 4 ವರ್ಷ…

Read More

ಮಡಿಕೇರಿ ನ.19 NEWS DESK : ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್ ಆಚಾರ್ಯ ಅವರ 101ನೇ ಜನ್ಮದಿನಾಚರಣೆಯನ್ನು ಪುತ್ತೂರುನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‍ಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್ ನ ಆಡಳಿತ ನಿರ್ದೇಶಕ ಜಿ.ಎಲ್.ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ ಕಾರ್ಯದರ್ಶಿ ವತ್ಸಲ ರಾಜ್ನಿ ಹಾಜರಿದ್ದರು.

Read More

ಕುಶಾಲನಗರ ನ.19 NEWS DESK : ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಡಿಕೇರಿಯ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ.ಕುಶ್ವಂತ್ ಕೋಳಿ ಬೈಲು ಮಾತನಾಡಿ, ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸವಿದೆ, ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಭಾಷೆಯು ತನ್ನದೇ ಇತಿಹಾಸ, ಸ್ಥಾನ ಹಾಗೂ ಮನ್ನಣೆ ಹೊಂದಿದೆ. ಮಾತೃಭಾಷೆ ಕನ್ನಡ ಭಾಷೆಯನ್ನು ಪ್ರೀತಿಸಿ ಗೌರವಿಸಿ ಬಳಸಬೇಕೆಂದು ವಿದ್ಯಾರ್ಥಿಗಳಲ್ಲಿ ಅವರು ಬಿನ್ನವಿಸಿದರು. ಜೊತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವರ ಆರೋಗ್ಯ ಸಮಸ್ಯೆಗಳ ಕುರಿತಾಗಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಎಸ್.ಎಸ್.ಶ್ರೀದೇವಿ ಮಾತನಾಡಿ, ಪ್ರತಿ ಮಗು ಕೂಡ ಶ್ರೇಷ್ಠ ಸಾಧಕನಾಗಬೇಕು ಎಂಬುದು ಸರ್ಕಾರ, ಶಿಕ್ಷಕರು ಹಾಗೂ ಪೋಷಕರ ಮಹದಾಶಯವಾಗಿರುತ್ತದೆ ಅದನ್ನು ಈಡೇರಿಸುವ ನಿಟ್ಟಿನಲ್ಲಿ ವಸತಿ ಶಾಲೆಗಳು ಬಹಳ ಅಮೂಲ್ಯವಾದ ಪಾತ್ರ ನಿರ್ವಹಿಸುತ್ತಿವೆ ಎಂದರು. ವಸತಿ ಶಾಲೆಯ ಕನ್ನಡ ಶಿಕ್ಷಕರಾದ ರಮೇಶ್…

Read More

ಮಡಿಕೇರಿ ನ.19 NEWS DESK : ಕೊಡಗಿನ ವಿಶಿಷ್ಟ ಮತ್ತು ಸಂಭ್ರಮದ ಹಬ್ಬಗಳಲ್ಲಿ ಒಂದಾಗಿರುವ ಪುತ್ತರಿ (ಹುತ್ತರಿ) ಯನ್ನು ಡಿಸೆಂಬರ್ 4 ರಂದು ಆಚರಿಸಲು ಸಂಪ್ರದಾಯದಂತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ಬುಧವಾರದಂದು ದಿನ ಮತ್ತು ಗಳಿಗೆಯನ್ನು ಗೊತ್ತುಪಡಿಸಲಾಯಿತು. ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ದೇವಾಲಯ ಸಮಿತಿ ಪ್ರಮುಖರು, ಮುಜರಾಯಿ ಇಲಾಖಾ ಪ್ರಮುಖರು, ದೇಶ ತಕ್ಕರು, ನಾಡ ತಕ್ಕರ ಸಮ್ಮುಖದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬಂದಂತೆ ಕಣಿಯ ಸಮೂಹದ ಪ್ರಮುಖರು ಪುತ್ತರಿ (ಹುತ್ತರಿ) ಮತ್ತು ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಕಲಾಡ್ಚ ಹಬ್ಬಕ್ಕೆ ದಿನ ನಿಗದಿ ಮಾಡಿದರು. ದೇವಾಲಯದಲ್ಲಿ ದಿನ ನಿಗದಿ ಪಡಿಸಿದಂತೆ ಡಿ.4 ರಂದು ರೋಹಿಣಿ ನಕ್ಷತ್ರದಲ್ಲಿ ಹುತ್ತರಿ ಹಬ್ಬ ನಡೆಯಲಿದೆ. ಅಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು ಮತ್ತು ಭೋಜನಕ್ಕೆ 10.10 ಗಂಟೆ ಸಮಯವನ್ನು ನಿಗದಿಪಡಿಸಲಾಗಿದೆ. :: ಸಾರ್ವಜನಿಕ ಹಬ್ಬಾಚರಣೆ :: ಸಾರ್ವಜನಿಕವಾಗಿ ರಾತ್ರಿ 8.40…

Read More

ಸೋಮವಾರಪೇಟೆ ನ.19 NEWS DESK : ಸಾರ್ವಜನಿಕರಿಗೆ ಅತಿ ಅವಶ್ಯವಿರುವ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತೆ ದಿನವಾದ ಸೋಮವಾರದಂದು ಕಡ್ಡಾಯವಾಗಿ ಕಛೇರಿಯಲ್ಲಿ ಹಾಜರಿರಬೇಕು. ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿದ್ದು. ಸಮಯ ಪಾಲನೆ ಮಾಡದ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದೆಂದು ಶಾಸಕರು ಹೇಳಿದರು. ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುತ್ತಿಲ್ಲ.ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ಎಂದು ಕೆಡಿಪಿ ನಾಮನಿರ್ದೆಶಿತ ಸದಸ್ಯರಾದ ಸಬಿತಾ ಚನ್ನಕೇಶವ ಸಭೆಯ ಗಮನಕ್ಕೆ ತಂದರು.ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೃಷ್ಣಮೂರ್ತಿ ಮಧ್ಯವರ್ತಿಗಳಿಂದ ಕೆಲಸ ಮಾಡಿಸಬೇಡಿ.ಏನಾದರೂ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದರು. ಕಂದಾಯ, ತೋಟಗಾರಿಕೆ ಮತ್ತು ಕಾಫಿಮಂಡಳಿ ಅಧಿಕಾರಿಗಳು ಅವಧಿಗೆ ಮುನ್ನವೇ ಬೆಳೆ ನಷ್ಟ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ನೀಡಿದ್ದಾರೆ.ಅಕ್ಟೋಬರ್ ತಿಂಗಳ ಅಂತ್ಯದವರೆಗೂ ಅಕಾಲಿಕ ಮಳೆ ಸುರಿದಿದೆ.ಇದರಿಂದ ರೈತರಿಗೆ ಅನ್ಯಾಯವಾಗಿದೆ. ಅಧಿಕಾರಿಗಳು ತಾಲೂಕಿನಲ್ಲಿ ಎಷ್ಟು ಹೋಬಳಿ ಇದೆ.ಎಷ್ಟು…

Read More

ನಾಪೋಕ್ಲು ನ.19 NEWS DESK  : ಕುಂಜಿಲ ಗ್ರಾಮದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಕ್ಕಬೆ ಕ್ಲಸ್ಟರ್ ನ 2025-26ನೇ ಸಾಲಿನ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ವ್ಯವಸ್ಥಾಪಕ ಶಾಹಿದ್ ಅಲಿ, ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಅದು ಮಕ್ಕಳ ಆತ್ಮ ವಿಶ್ವಾಸವನ್ನು ಹೆಚ್ಚಿಸುವ, ಮಕ್ಕಳ ಕಾರ್ಯಕ್ರಮದ ಅಡಗಿರುವ ಕಲೆಯನ್ನು ಹೊರತರುವ, ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಮಹಾಯಜ್ಞ ಎಂದರು. ಜಿಲ್ಲಾ ಯೋಜನ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ಮಕ್ಕಳಿಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಸಲಹೆ ನೀಡಿದರು. ವಿಷಯ ಪರಿವೀಕ್ಷರಾದ ಬಿಂದು ಮಾತನಾಡಿ, ಎಲ್ಲರೂ ವೇದಿಕೆಗೆ ಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಧೈರ್ಯವೇ ದೊಡ್ಡ ಗೆಲುವು ಎಂಬುದನ್ನು ಅರಿತು, ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದು, ಉಳಿದ ವಿದ್ಯಾರ್ಥಿಗಳಿಗೆ ಇದು ಮಾರ್ಗದರ್ಶಕವಾಗಿದೆ ಎಂದರು. ಉತ್ಸಾಹದಿಂದ ಭಾಗವಹಿಸಿದ ವಿದ್ಯಾರ್ಥಿಗಳು ವಿಶಿಷ್ಟ ಶೈಲಿಯಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಹೊರಹಾಕಿದರು. ಕಾರ್ಯಕ್ರಮದಲ್ಲಿ ಪರಿವೀಕ್ಷಕರೂ, ಸಹ ಸಂಯೋಜಕರಾದ ಎಸ್.ಬಿ.ಶರ್ಮಿಳಾ,…

Read More

ನಾಪೋಕ್ಲು ನ.19 NEWS DESK : ದೇವಾಲಯದ ಜೀರ್ಣೋದ್ಧಾರಕ್ಕಾಗಿ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಕಕ್ಕುಂದಕಾಡಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು ದೇವಾಲಯದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳೊಂದಿಗೆ ಮಾತನಾಡಿ, ಗ್ರಾಮದ ದೇವಾಲಯದ ಅಭಿವೃದ್ಧಿಗೆ ನಮ್ಮ ಸಹಕಾರ ಇದ್ದೇ ಇರುತ್ತದೆ. ಗ್ರಾಮಸ್ಥರು ಒಗ್ಗೂಡಿ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು. ದೇವಾಲಯದ ಪುನರ್ ನಿರ್ಮಾಣಕ್ಕೆ ನಮ್ಮ ಕೊಡುಗೆ ನೀಡುತ್ತೇನೆ. ಮಾತ್ರವಲ್ಲದೆ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ನಾವೆಲ್ಲರೂ ಭೇಟಿ ಮಾಡಿ ಹೆಚ್ಚಿನ ಹಣ ಕ್ರೂಡೀಕರಣಕ್ಕೆ ಶ್ರಮಿಸಿ, ಜೊತೆಗೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಎ.ಹಂಸ, ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಜೀರ್ಣೋದ್ಧಾರ ಆಡಳಿತ ಮಂಡಳಿ ಅಧ್ಯಕ್ಷ ಎಂ.ಪಿ.ಗೋಪಾಲ, ಖಜಾಂಜಿ ಟಿ.ಕೆ.ಸೂರ್ಯ ಕುಮಾರ್, ಉಪಾಧ್ಯಕ್ಷ ಟಿ.ವಿ.ಭವಾನಿ, ಗೌರವ ಅಧ್ಯಕ್ಷ ಟಿ.ಎನ್.ರಮೇಶ್, ಕಾರ್ಯದರ್ಶಿ ಟಿ.ಎಂ.ವಸಂತಕುಮಾರ್, ಕುಮಾರ ಸಿ, ದೇವಾಲಯದ ಮುಖ್ಯ ಅರ್ಚಕ…

Read More

ಬೆಂಗಳೂರು, ನ.19 NEWS DESK :  ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಸಂಘವು ಎರಡು ದಿನಗಳಿಂದ ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರವು ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಸೂಚನೆ ಮೇರೆಗೆ ಭೇಟಿ ನೀಡಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ನೇತೃತ್ವದ ನಮ್ಮ ಕರ್ನಾಟಕ ಸರ್ಕಾರ ಬಡವರ ಪರವಾಗಿ ದೀನ ದಲಿತರ, ಕಾರ್ಮಿಕರ,ರೈತರ ಪರವಾದ ಸರ್ಕಾರ. ಖಂಡಿತವಾಗಿಯೂ ನಿಮ್ಮ ಬೇಡಿಕೆಗಳು ಈಡೇರಲಿದೆ. ಪ್ರಮುಖ ಮೂರು ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂ ಗಳಿಸುವುದು, ಹೊರಗುತ್ತಿಗೆಯನ್ನು ರದ್ದು ಪಡಿಸುವುದು, ದಿನಗೂಲಿ ಸೇವಾ ಅವಧಿ, ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ…

Read More

ಮಡಿಕೇರಿ ನ.19 NEWS DESK : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Read More

ಬೆಂಗಳೂರು NEWS DESK ನ.18 : ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Read More