ಲೇಖಕ: admin

ಮಡಿಕೇರಿ ನ.19 NEWS DESK : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರ ಸಂಬಂಧ ಕ್ರಮವಹಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ಮಾಹಿತಿ ನೀಡಿದರು. ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುವುದು ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ರಾಜಾಸೀಟಿನಲ್ಲಿ ಜಿಪ್‍ಲೈನ್ ನಿರ್ವಹಣೆಯನ್ನು ಕನ್ನಡ ಭಾಷೆ ಬರದಿರುವವರು ನಡೆಸುತ್ತಿದ್ದು, ಈ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಜನರ ಜೊತೆ ಸಂವಾದ ನಡೆಸುವವರನ್ನು ನಿಯೋಜಿಸುವಂತೆ ಸಲಹೆ ಮಾಡಿದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಮಾತನಾಡಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ತಿಳಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ…

Read More

ಮಡಿಕೇರಿ ನ.18 NEWS DESK : ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಮತ್ತು ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿವಿಧ ರೀತಿಯ ಸ್ಲೋಗನ್‍ಗಳನ್ನು ಬರೆಸಿ ಮಕ್ಕಳಿಂದ ಗ್ರಾಮಸ್ಥರಿಗೆ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಬಗ್ಗೆ ಮಾಹಿತಿ ಕೊಡಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರಕ್ಷಿತ್, ತಾಲೂಕು ಹಿಂದುಳಿದ ವರ್ಗದ ವಿಸ್ತರಣಾಧಿಕಾರಿ ಶ್ರೀಕಾಂತ್, ತಾಲೂಕು ಪಂಚಾಯಿತಿ ಸಾಮಾಜಿಕ ಲೆಕ್ಕ ಪರಿಶೋಧನಾಧಿಕಾರಿ ಸುಂದರೇಶ್, ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್, ಅರಣ್ಯ ಸಂರಕ್ಷಣಾಧಿಕಾರಿ ಪ್ರೇಮ್‍ನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ, ಸದಸ್ಯರಾದ ಪುಷ್ಪ, ಮುತ್ತಮ್ಮ, ಅನಿಫ್, ದಿನೇಶ್, ಸುಶೀಲಾವತಿ, ಕೀರ್ತನ್ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಹೇಮಲತಾ, ರಮ್ಯಾ ಸಹಾಯಕಿ ಬೇಬಿ ರವರು ಉತ್ತಮವಾಗಿ ನಡೆಸಿಕೊಟ್ಟರು.

Read More

ಮಡಿಕೇರಿ ನ.18 NEWS DESK : ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿನಾಯಿಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಕನಿಷ್ಠ 1 ಎಕರೆ ಜಾಗ ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸುವಂತೆ ನಿರ್ದೇಶನ ನೀಡಿದರು. ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು,…

Read More

ಮಡಿಕೇರಿ ನ.18 NEWS DESK : ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಆದರೆ ಇಂದು ಜನಗಣತಿಯೂ ಸೇರಿದಂತೆ ರಾಜ್ಯದ ದಾಖಲೆಗಳ ಎಲ್ಲಾ ಕಾಲಂಗಳು ಈ ದೇಶದ ಬಹುಧರ್ಮ, ಪ್ರಬಲಧರ್ಮ ಮತ್ತು ಬಲಾಢ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿಸಲ್ಪಟ್ಟಿದೆ. ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆನಿಮಿಸ್ಟಿಕ್ ನಂಬಿಕೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಕುಟ್ಟದಲ್ಲಿ ನಡೆದ 20ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್…

Read More

ವಿರಾಜಪೇಟೆ ನ.18 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿ ಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ  ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಪೋಷಕರ ಸಭೆ 2025-26 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆಯನ್ನು ಮಾಡಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆ ಗೂ ಪೋಷಕರಿಗೂ ಕೀರ್ತಿಯನ್ನು ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಆಗಲು ಸಾಧ್ಯ ಎಂದರು. ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುತ್ತಿರಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪೋಷಕರು ಆಗಿಂದಾಗೆ ವಿದ್ಯಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಪೋಷಕರು ಎಚ್ಚರವಹಿಸಬೇಕು ಎಂದು ಹೇಳಿದರು. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರುಗಳನ್ನು ಅಭಿನಂದಿಸಿದ ಅವರು, ನೂತನ ಪ್ರಶ್ನೆ ಪತ್ರಿಕೆ ನೀಲಿ…

Read More

ಮಡಿಕೇರಿ ನ.18 NEWS DESK : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆಯು ಶೋಚನೀಯವಾದ ಸ್ಥಿತಿಯನ್ನು ತಲುಪುತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು ನಾಮಕರಣ ಮಾಡಿದ ಸುದಿನವನ್ನು ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ. ಕನ್ನಡ ಭಾಷೆ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಭಾಷೆ. ಈ ನಾಡಿನ ರಾಜರ ಪರಾಕ್ರಮ ಉತ್ತರ ಭಾರತದವರಿಗೂ ಹರಡಿತ್ತು ಇಮ್ಮಡಿ ಪುಲಕೇಶಿ, ಮುಮ್ಮಡಿ ಗೋವಿಂದರಂತಹ ರಾಜರ ಇತಿಹಾಸಗಳು ಇದಕ್ಕೆ ಸಾಕ್ಷಿಯಾಗಿ ನಿಂತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಶ್ರೇಷ್ಠತೆಯನ್ನು ಹೊಂದಿರುವ ಕನ್ನಡ ಭಾಷೆಯ ಅನನ್ಯತೆ, ಹಿರಿಮೆ, ಸುಲಲಿತತೆ ತಿಳಿಯದೆ ಇರುವುದರಿಂದ ಹೆಚ್ಚಿನವರು ಭಾಷೆಯನ್ನು…

Read More

ಮಡಿಕೇರಿ ನ.18 NEWS DESK : ಕೊಡಗು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿ ಬಿ.ಜಿ.ಮಂಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಂ.ವಿನೋದ್, ಸಹ ಕಾರ್ಯದರ್ಶಿಯಾಗಿ ಲೋಹಿತ್ ಮಾಗುಲುಮನೆ, ಹಾಗೂ ನಿದೇರ್ಶಕರಾಗಿ ಬಾಚರಣಿಯಂಡ ಅನುಕಾರ್ಯಪ್ಪ, ಮನೋಜ್ ಕುಮಾರ್, ಸ್ಟ್ಯಾನ್ಲಿ.ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಶಾಲನಗರ ನ.18 NEWS DESK : ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಪೂಂಪ್ ಹಾರ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪವಿತ್ರ ಕಾವೇರಿಯನ್ನು ಸಮುದ್ರ ಸಂಗಮದಲ್ಲಿ ವಿಸರ್ಜನೆ ಗೊಳಿಸುವ ಮೂಲಕ ಸಮಾಪ್ತಿ ಗೊಂಡಿತು. ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ನಮಾಮಿ ಕಾವೇರಿ ಸಹಯೋಗದೊಂದಿಗೆ ತಲಕಾವೇರಿ ಕ್ಷೇತ್ರದಿಂದ ಆರಂಭಗೊಂಡ ರಥಯಾತ್ರೆ ಪವಿತ್ರ ಕಾವೇರಿ ತೀರ್ಥಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾವೇರಿ ನದಿ ಮತ್ತು ಬಂಗಾಳ ಕೊಲ್ಲಿ ಸಮುದ್ರ ಸಂಗಮದಲ್ಲಿ ವಿಶೇಷ ಪೂಜಾ ಸಲ್ಲಿಸಿ ದಕ್ಷಿಣ ಭಾರತದ ಸಾಧುಸಂತರ ಸಮ್ಮುಖದಲ್ಲಿ ಯಾತ್ರೆ ವಿದ್ಯುಕ್ತವಾಗಿ ಸಮಾಪ್ತಿಗೊಂಡಿತು. ಅಕ್ಟೋಬರ್ ತಿಂಗಳ 24ರಂದು ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಚಾಲನೆಗೊಂಡ ರಥ ಯಾತ್ರೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನದಿ ತಟಗಳಲ್ಲಿ ಕಾವೇರಿ ಮಾತೆಯನ್ನು ಹೊತ್ತ ರಥ ಮೂಲಕ ಸಾಗಿ ಜನರಿಗೆ ಕಾವೇರಿ ನದಿ ಸಂರಕ್ಷಣೆಯ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕಾರ್ಯ…

Read More

ಮಡಿಕೇರಿ ನ.18 NEWS DESK : ಮಕ್ಕಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪ್ರತಿಷ್ಠಿತ ಸಿಸ್ಕೋ ಕಂಪೆನಿ ಹಾಗೂ ಜಾಗೃತಿ ಸಂಸ್ಥೆ ( NGO) ಸಹಯೋಗದಲ್ಲಿ ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕಲಿಕಾ ಹಾಗೂ ವೈಯುಕ್ತಿಕ ಆರೈಕೆ ಉತ್ಪನ್ನಗಳ ಕಿಟ್ ವಿತರಿಸಲಾಯಿತು. ಬೆಂಗಳೂರಿನ ಜಾಗೃತಿ ಸಂಸ್ಥೆಯು ರಾಜ್ಯಾದ್ಯಂತ ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಕುಂದು ಕೊರತೆಗಳಿಗೆ ಸ್ಪಂದಿಸುತ್ತಾ, ಅವರಿಗೆ ಅತ್ಯವಶ್ಯಕ ಇರುವ ವಸ್ತುಗಳನ್ನು ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನ ಅನೇಕ ಶಾಲೆಗಳನ್ನು ಗುರುತಿಸಿ ಅವರಿಗೆ ಸಹಾಯ ಹಸ್ತ ನೀಡುತ್ತಿರುವುದಾಗಿ ಸಂಸ್ಥೆಯ ಕಾರ್ಯನಿರ್ವಾಹಕ ಸದಸ್ಯರುಗಳಾದ ನೋಯಲ್ ಹಾಗೂ ಕಣ್ಣನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಸ್ಕೋ ಕಂಪನಿ ಉದ್ಯೋಗಿಗಳಾದ ನಾಗೇಶ್ ಹಾಗೂ ಜಯ, ಸಂಸ್ಥೆಯ ಕಾರ್ಯಕರ್ತರುಗಳು, ಸ್ಥಳೀಯರಾದ ಬಿ.ಟಿ.ದಿನೇಶ್, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರವಿಕುಮಾರ್ ಬಿ.ಎನ್ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಉಪಾಧ್ಯಾಯನಿಯರಾದ ರಮ್ಲತ್ ಅವರು ಕಾರ್ಯಕ್ರಮ ನಿರೂಪಿಸಿ ಕೊನೆಗೆ ಎಲ್ಲರನ್ನು ವಂದಿಸಿದರು.…

Read More

ಸೋಮವಾರಪೇಟೆ ನ.18 NEWS DESK : ಗ್ರಾಮ ಪಂಚಾಯ್ತಿಗಳು ಹಾಗೂ ಗ್ರಾಮ ಸಭೆಗಳು ಬಲಿಷ್ಟವಾದವು ಅವುಗಳಿಗೆ ಇರುವ ಅಧಿಕಾರಗಳನ್ನು ತಿಳಿದುಕೊಳ್ಳಬೇಕೆಂದು ಶಾಸಕ ಮಂತರ್ ಗೌಡ ತಿಳಿಸಿದರು.  ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ  ತಾಲ್ಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಿದೆ ಎಂದರು. ಗ್ರಾಮ ಪಂಚಾಯತಿ ಹಾಗೂ ಗ್ರಾಮ ಸಭೆಗಳು ಅತ್ಯಂತ ಪ್ರಭಾವ ಶಾಲಿಯಾಗಿದೆ. ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರು ತಮ್ಮ ಅಧಿಕಾರವನ್ನು ಅರಿತು ಕರ್ತವ್ಯ ನಿರ್ವಹಿಸಿ, ನೀವುಗಳು ಮಾಡಿದ ನಿರ್ಣಯಗಳನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ  ಎಂದರು. ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ 25,686.56 ಲಕ್ಷ  ರೂಪಾಯಿಗಳ ಕ್ರಿಯಜೋಜನೆಗೆ ಅನುಮೋದನೆ ನೀಡಲಾಯಿತು.ಸಭೆಯಲ್ಲಿ  ತಹಶೀಲ್ದಾರ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸದಸ್ಯರುಗಳಾದ ನಿಡ್ತಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್, ಬ್ಯಾಡಗೊಟ್ಟಾ ಅಧ್ಯಕ್ಷೆ ಪಾವನ,…

Read More