ಮಡಿಕೇರಿ ಡಿ.19 NEWS DESK : ಇತಿಹಾಸದ ಘಟನೆಗಳನ್ನು ನೆನಪಿಸಿ, ಹೋರಾಟಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಯುನೈಟೆಡ್ ಕೊಡವ ಆರ್ಗನೈಸೇಷನ್ ಯುಕೋ ಸಂಘಟನೆಯಿಂದ ’ನೆಪ್ಪ್ರ ನಳತ್ ಮಾಂಜತ ಮೊಟ್ಟ್’ (ನೆನಪಿನ ಅಂಗಳದಲ್ಲಿ ಮರೆಯದ ಹೆಜ್ಜೆ) ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯ ಮತ್ತು ಕೊಡಗು ‘ಫ್ಯೂಜನ್ ಆಫ್ ಹಿಸ್ಟರಿ, ಮ್ಯೂಸಿಕ್ ಅಂಡ್ ಪೇಟ್ರಿಯಾಟಿಸಮ್’ ಎಂಬ ಘೋಷವಾಕ್ಯದಲ್ಲಿ ನಗರದ ಕೋಟೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವ ನಿಟ್ಟಿನಲ್ಲಿ ಭಾವಚಿತ್ರ ಪ್ರದರ್ಶನ ಗಮನ ಸೆಳೆಯಿತು. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕೊಡಗಿನ ನೂರಾರು ಹೋರಾಟಗಾರರ ಭಾವಚಿತ್ರವನ್ನು ಕೋಟೆಯೊಳಗೆ ಪ್ರದರ್ಶನಕ್ಕಿಡಲಾಗಿತ್ತು. ಇದರೊಂದಿಗೆ ಹೋರಾಟದ ಸಂದರ್ಭ ಕೊಡಗಿನಲ್ಲಾದ ಘಟನೆಗಳ ಅಪರೂಪದ ಛಾಯಾಚಿತ್ರಗಳು ವೀಕ್ಷಕರಲ್ಲಿ ರೋಮಾಂಚನ ಮೂಡಿಸಿತು. ಅಲ್ಲದೇ ಹೋರಾಟಗಾರರಿಗೆ ನುಡಿ ಹಾಗೂ ಗಾಯನದ ಮೂಲಕ ನಮನ ಸಲ್ಲಿಸಲಾಯಿತು. ಮಲ್ಲೇಂಗಡ ಚಂಗಪ್ಪ, ಪಂದ್ಯಂಡ ಬೆಳ್ಯಪ್ಪ, ಚೆಕ್ಕೆರ ಮೊಣ್ಣಯ್ಯ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಜೀವ ಹಾಗೂ ಜೀವನ ತ್ಯಾಗ ಮಾಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜ.ತಿಮ್ಮಯ್ಯ ಶಾಲಾ ವಿದ್ಯಾರ್ಥಿಗಳು ನೃತ್ಯ ರೂಪಕದ ಮೂಲಕ…
ಲೇಖಕ: admin
ಕುಶಾಲನಗರ ಡಿ.19 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿಯ ವಾರ್ಷಿಕ ಮಹಾಸಭೆ ಡಿ.21 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಗೌಡ ಸಮಾಜದ ಮುಂಭಾಗ ಇರುವ ಪಾಳ್ಯಂ ಎಮರಾಲ್ಡ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಟಿ.ಪಿ.ರಮೇಶ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚೇಂಬರ್ ಜಿಲ್ಲಾ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಮತ್ತು ಸಂಘಟನಾ ಕಾರ್ಯದರ್ಶಿ ಟಿ.ಆರ್.ಶರವಣಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಈ ಸಂದರ್ಭ ಕುಶಾಲನಗರದಲ್ಲಿ ಚೇಂಬರ್ ಆರಂಭವಾಗಲು ಪ್ರಮುಖ ಕಾರಣಕರ್ತರಾದ ವಿ.ವಿ.ನಾಗೇಂದ್ರ ಹಾಗೂ ಸ್ಥಾಪಕ ಅಧ್ಯಕ್ಷರಾದ ಪಿ.ಪಿ.ಸತ್ಯನಾರಾಯಣ, ಸ್ಥಾಪಕ ಕಾರ್ಯದರ್ಶಿ ಬಿ.ಜಿ.ಅನಂತಶಯನ ಸೇರಿದಂತೆ ಇದುವರೆಗಿನ ಮಾಜಿ ಅಧ್ಯಕ್ಷರು ಮಾಜಿ ಕಾರ್ಯದರ್ಶಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಕುಶಾಲನಗರ ಚೇಂಬರ್ ಸದಸ್ಯರಾಗ ಬಯಸುವ ಉದ್ಯಮಿಗಳು ಮಹಾಸಭೆಗೆ…
ಮಡಿಕೇರಿ ಡಿ.19 NEWS DESK : “ತೆರೆದ ಮನೆ” ಪರಿಕಲ್ಪನೆಯಡಿ ಮಡಿಕೇರಿ ನಗರದ ಟಿಟ್ಟೂಸ್ ಶಾಲೆಯ ಮಕ್ಕಳನ್ನು ಮಡಿಕೇರಿ ಗ್ರಾಮಾಂತರ ಠಾಣೆಗೆ ಬರ ಮಾಡಿಕೊಂಡು ಠಾಣೆಯ ಕಾರ್ಯ ನಿರ್ವಹಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ತೋರಿಸಿಕೊಡಲಾಯಿತು.
ಮಡಿಕೇರಿ NEWS DESK ಡಿ.19 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಡಿ.23 ರಿಂದ 28 ರವರೆಗೆ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದಲ್ಲಿ ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ವಿವಿಧ ಪೂಜಾ ವಿಧಿವಿಧಾನಗಳ ಕುರಿತು ಮಾಹಿತಿ ನೀಡಿದರು. ಡಿ.23 ರಂದು ಗಣಪತಿ ಹೋಮ, ಬ್ರಹ್ಮರಾಕ್ಷಸನಿಗೆ ನೈವೇದ್ಯ ಸಮರ್ಪಣೆ, ದುರ್ಗಾಪೂಜೆ, ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ ಮತ್ತು ಧ್ವಜಾರೋಹಣ, ಡಿ.24 ಮತ್ತು 25 ರಂದು ನೈರ್ಮಲ್ಯ ಬಲಿ, ಧ್ವಜಸ್ತಂಭ ಪೂಜೆ, ಭೂತಬಲಿ ಹಾಗೂ ಮಹಾಪೂಜೆ ಜರುಗಲಿದೆ. ಡಿ.26 ರಂದು ತುಲಭಾರ ಸೇವೆ, ಧ್ವಜಸ್ತಂಭ ಪೂಜೆ, ನೃತ್ಯ ಬಲಿ, ವಸಂತ ಪೂಜೆ, ದೇವರ ಶಯನೋತ್ಸವ ಮತ್ತು ಮಹಾಪೂಜೆ ನಡೆಯಲಿದೆ. ಡಿ.27 ರಂದು ಕವಟ ಪೂಜೆ, ತೈಲಾಭ್ಯಂಜನ, ಪಂಚಭೂತ ಅಭಿಷೇಕ, ಧ್ವಜಸ್ತಂಭ…
ಮಡಿಕೇರಿ NEWS DESK ಡಿ.19 : ಅಕಾಲಿಕವಾಗಿ ನಿಧನರಾದ ಕಾರ್ಮಿಕರೊಬ್ಬರ ಪತ್ನಿಗೆ ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡಿಂಗ್ ಯೂನಿಯನ್ (ಎಸ್ಡಿಟಿಯು) ಸಂಘಟನೆಯು ಕಾರ್ಮಿಕ ಇಲಾಖೆಯಿಂದ ಸಹಾಯಧನವನ್ನು ದೊರಕಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದೆ. ನಗರದ ತ್ಯಾಗರಾಜ ಕಾಲೋನಿಯ ನಿವಾಸಿ ಕಟ್ಟಡ ಕಾರ್ಮಿಕರ ಮಹಮದ್ ಅಲಿ ಅವರು ಕಳೆದ ಒಂದು ವರ್ಷದ ಹಿಂದೆ ಅಕಾಲಿಕವಾಗಿ ನಿಧನಹೊಂದಿದ್ದರು.ಅವರ ಪತ್ನಿ ಅಸೀನ ಅವರಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಮೃತ ಪಟ್ಟವರ ಕಟುಂಬಕ್ಕೆ ನಿಡಲಾಗುವ ಸಹಾಯಧನ ಲಭ್ಯವಾಗಿರಲಿಲ್ಲ. ಈ ಹಿನ್ನೆಲೆ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡಿಂಗ್ (ಎಸ್ಡಿಟಿ) ಸಂಘಟನೆ ಸಂಬಂಧಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ನಿರಂತರವಾಗಿ ಸಂಪರ್ಕಿಸಿ, ಇಲಾಖೆಯ ಸಹಾಯಧನವನ್ನು ತೋಟ ಕಾರ್ಮಿಕರಾದ ಅಸೀನ ಅವರಿಗೆ ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿದೆ. ಈ ಮಾನವೀಯ ಕಾರ್ಯದಲ್ಲಿ ಸಂಘಟನೆಗೆ ಸಹಕಾರ ನೀಡಿದ ಕಾರ್ಮಿಕ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಹಾಗೂ ಮಡಿಕೇರಿಯ ಕಾರ್ಮಿಕ ನಿರೀಕ್ಷಕರಾದ ಯತ್ನಟ್ಟಿ ಮತ್ತು ಝರೀನಾ, ಕಾರ್ಮಿಕ ಇಲಾಖೆಯ ಎಲ್ಲಾ ಅಧಿಕಾರಿ ವೃಂದ ಹಾಗೂ ಸಿಬ್ಬಂದಿಗಳಿಗೆ…
ಮಡಿಕೇರಿ ಡಿ.19 NEWS DESK : ಕೊಡಗು ಜಿಲ್ಲೆಯ ಮರಗೋಡುವಿನಲ್ಲಿ ಹಿಂದೂ ರುದ್ರ ಭೂಮಿ ಸ್ಥಾಪನ ಸಮಿತಿ ಹಾಗೂ ಮರಗೋಡು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ನಿರ್ಮಿಸಲಾದ ನೂತನ ಹಿಂದೂ ರುದ್ರಭೂಮಿಯನ್ನು ಅಧಿಕೃತವಾಗಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ಹಲವು ವರ್ಷಗಳಿಂದ ವ್ಯಕ್ತಪಡಿಸುತ್ತಿದ್ದ ಅಗತ್ಯ ಮತ್ತು ಕೋರಿಕೆಯ ಹಿನ್ನೆಲೆಯಲ್ಲಿ ಈ ಮಹತ್ವದ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಈವರೆಗೆ ಅಂತ್ಯಸಂಸ್ಕಾರ ನೆರವೇರಿಸಲು ಸಮರ್ಪಕ ಸ್ಥಳದ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದ ಗ್ರಾಮಸ್ಥರಿಗೆ ಇದೀಗ ಶಾಶ್ವತ ಪರಿಹಾರ ದೊರೆತಿದೆ. ನೂತನ ರುದ್ರ ಭೂಮಿಯಲ್ಲಿ ಸಂಸ್ಕಾರ ವೇದಿಕೆ, ಮೂಲಭೂತ ಸೌಕರ್ಯ, ರಸ್ತೆ ಸಂಪರ್ಕ, ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಯೋಜನೆಯೂ ಇದೆ. ಕಾರ್ಯಕ್ರಮದಲ್ಲಿ ಮರಗೋಡುವು ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಹಿಂದೂ ರುದ್ರ ಭೂಮಿ ಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ…
ವಿರಾಜಪೇಟೆ ಡಿ.19 NEWS DESK : ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು, ಜವಾನರನ್ನು ಸರಕಾರಿ ನೌಕರರೆಂದು ಘೋಷಿಸಬೇಕು. ಬೆಲೆ ಏರಿಕೆ ಆಧಾರದಲ್ಲಿ ಕನಿಷ್ಟ ವೇತನ ರೂ. 36,000 ನಿಗದಿ ಜಾರಿಗೊಳಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.20 ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್ ಭರತ್ ಹೇಳಿದರು. ವಿರಾಜಪೇಟೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ, ಭರತ್ ಅವರು, ಇಡೀ ರಾಜ್ಯದಲ್ಲಿ ಸುಮಾರು 63,000 ಮಂದಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಲ್ಲಿ ನೌಕರರಾಗಿ ಕಳೆದ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಇವರ ಹಲವಾರು ಪ್ರಮುಖವಾಗಿರುವ ಬೇಡಿಕೆಗಳನ್ನು ಪಡೆಯಲು ನಿರಂತರ ಹೋರಾಟ ಮಾಡುತ್ತ ಸರಕಾರಕ್ಕೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸುತ್ತಾ ಬರಲಾಗಿದೆ. ಇದುವರೆಗೂ ಸರಕಾರ ಪ್ರತಿಕ್ರಿಯೆ ನೀಡಿಲ್ಲ.…
ನಾಪೋಕ್ಲು ಡಿ.19 NEWS DESK : ಕೋಕೇರಿ ಗ್ರಾಮದ ನೀಲಿಯಟ್ ಶ್ರೀ ಶಾಸ್ತವು ದೇವರ ಕೊಂಬಾಟ್ ವಾರ್ಷಿಕ ಉತ್ಸವವು ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದಲ್ಲಿ ಕೊಂಬಾಟ್, ಪೀಲಿಯಟ್, ಬಿಲ್ಲಾಟ್, ಕತ್ತಿಯಟ್, ತೇಲಾಟ್ ಸೇರಿದಂತೆ 18 ತರದ (ಆಟ್) ಪೂರ್ವ ಪದ್ಧತಿ ಕುಣಿತ ವಿಶೇಷವಾಗಿ ಆಕರ್ಷಣೆಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮೊದಲು ನೀಲಿಯಟ್ ಶ್ರೀ ಶಾಸ್ತವು ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರು ಎತ್ತು ಹೇರಟ ಹಾಗೂ ವಿಶೇಷ ಪ್ರಾರ್ಥನೆಯ ಸಲ್ಲಿಸಿದ ಬಳಿಕ ಸಮೀಪದ ಶ್ರೀ ಭಗವತಿ ದೇವಾಲಯಕ್ಕೆ ಬರಲಾಯಿತು. ನಂತರ ಸನ್ನಿಧಿಗೆ ಸಂಬಂಧಪಟ್ಟ ವೃತದಾರಿ ಗ್ರಾಮಸ್ಥರು ವಿಶೇಷ ರೀತಿಯಲ್ಲಿ ಕೆಂಪು ಮತ್ತು ಶ್ವೇತ ವಸ್ತ್ರಗಳನ್ನು, ಗೆಜ್ಜೆ ತೊಟ್ಟುಕೊಂಡು ದೇವಾಲಯದ ಪ್ರಣಾಂಗಣದಲ್ಲಿ ವೃತ್ತಾಕಾರವಾಗಿ ಪಡುವ ಎಂಬ ಚರ್ಮ ವಾದ್ಯಕ್ಕೆ ತಕ್ಕಂತೆ ಲಯಬದ್ಧವಾಗಿ ಹೆಜ್ಜೆ ಹಾಕುವುದು ಅತ್ಯಾಕರ್ಷಕವಾಗಿದ್ದು, ನೆರೆದ ಭಕ್ತಾದಿಗಳು ವೀಕ್ಷಿಸಿ ತನ್ಮಯರಾದರು. ಉತ್ಸವಕ್ಕೆ ಈ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮಸ್ಥರು 20 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆಯೊಂದಿಗೆ ಪೂರ್ವ ತಯಾರಿ ನಡೆಸಲಾಗುತ್ತದೆ. ಹಬ್ಬದ ದಿನ ನವಿಲು…
ಸೋಮವಾರಪೇಟೆ ಡಿ.19 NEWS DESK : ಮಾದಕ ವಸ್ತುಗಳು ದೇಶದ ಆಂತರಿಕ ಭಯೋತ್ಪಾದಕ ಎಂದು ಪತ್ರಿಕಾ ಭವನದ ಅಧ್ಯಕ್ಷ, ಪತ್ರಕರ್ತ ಎಸ್.ಮಹೇಶ್ ಹೇಳಿದರು. ಪರಿವರ್ತನಾ ಟ್ರಸ್ಟ್ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಾದಕ ವಸ್ತು ವ್ಯಸನ ಜನಜಾಗೃತಿ ರಥಯಾತ್ರೆ ಸೋಮವಾರಪೇಟೆಗೆ ಆಗಮಿಸಿದ ಸಂದರ್ಭ ಜೆ.ಸಿ.ವೇದಿಕೆ ಬಳಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ದೇಶದಲ್ಲಿ ಬಂದೂಕು ಹಿಡಿದು, ಬಾಂಬ್ ಹಾಕಿ ಜನರ ಜೀವ ತೆಗೆಯತ್ತಿರುವ ಭಯೋತ್ಪಾದನೆ ಒಂದೆಡೆಯಾದರೆ ಯುವಕರಿಗೆ ಮಾದಕ ವಸ್ತುಗಳನ್ನು ನೀಡುವ ಮೂಲಕ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವುದರೊಂದಿಗೆ ಮಾಡುವಸ್ತುಗಳನ್ನು ಕಳ್ಳಸಾಗಾಣಿಕೆ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪ್ರಸಕ್ತ ವರ್ಷ ಮಾದಕವಸ್ತುಗಳಿಗೆ ಸಂಬಂಧಿಸಿದಂತೆ 5930 ಪ್ರಕರಣಗಳು ದಾಖಲಾಗಿದ್ದು, 77,99,12,94 ರೂ. ಮೌಲ್ಯದ 6073.069 ಕಿ.ಗ್ರಾಂ ಗಾಂಜಾ ಹಾಗೂ 116, 09, 81, 712 ರೂ.ಮೌಲ್ಯದ 1272.9376.ಕಿ.ಗ್ರಾಂ ಸಿಂಥೆಟಿಕ್ ವಶಪಡಿಸಿಕೊಂಡು 2898 ಮಂದಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತು ಪ್ರಕರಣದಲ್ಲಿ ಕೊಡಗು ಜಿಲ್ಲೆಯು ಹೊರತಾಗಿಲ್ಲ ವರ್ಷ ಜಿಲ್ಲೆಯಲ್ಲಿ 130…
ಮಡಿಕೇರಿ ಡಿ.19 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ ಸಮ್ಮೇಳನದ ದ್ವಿತೀಯ ದಿನವಾದ ಶುಕ್ರವಾರ ಸಂಜೆ, ನಗರದ ಮುಖ್ಯ ಬೀದಿಗಳಲ್ಲಿ ಸಮ್ಮೇಳನದ ಪ್ರತಿನಿಧಿಗಳ ಬೃಹತ್ ಶೋಭಾಯಾತ್ರೆ ನಡೆಯಿತು. ಎಬಿವಿಪಿ ದಕ್ಷಿಣ ಪ್ರಾಂ ಅಧ್ಯಕ್ಷ ಡಾ.ರವಿ ಮಂಡ್ಯ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಈಶ್ವರ ಭಟ್ ಅವರ ನೇತೃತ್ವದಲ್ಲಿ ನಗರದ ಗೌಡ ಸಮಾಜದ ಸಮ್ಮೇಳನದ ಸಭಾಂಗಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಭಾರತ ಮಾತೆ, ದೇವಿ ಶಾರದೆಯ ಪಟ ಚಿತ್ರ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸಮ್ಮೇಳನದ ಪ್ರತಿನಿಧಿಗಳು, ಸಂಘಟನೆಯ ಪದಾಧಿಕಾರಿಗಳು ಶಿಸ್ತುಬದ್ಧವಾಗಿ ಮೆರವಣಿಗೆ ನಡೆಸಿದರು. ಸೇನಾಧಿಕಾರಿಗಳಿಗೆ ಗೌರವಾರ್ಪಣೆ- ಶೋಭಾಯಾತ್ರೆ ಹಾದು ಹೋಗುವ ಸಂದರ್ಭ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ, ಮೇಜರ್ ಮಂಗೇರಿರ ಮುತ್ತಣ್ಣ, ಜನರಲ್ ತಿಮ್ಮಯ್ಯ ವೃತ್ತಗಳಲ್ಲಿ ಸೇನಾಧಿಕಾರಿಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಶೋಭಾಯಾತ್ರೆಯಲ್ಲಿ ಎಬಿವಿಪಿ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಗೋಪಿ ಅರವಿಂದ್, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮಂಧಾರ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್…






