ನಾಪೋಕ್ಲು ಡಿ.19 NEWS DESK : ಕೋಕೇರಿ ಗ್ರಾಮದ ನೀಲಿಯಟ್ ಶ್ರೀ ಶಾಸ್ತವು ದೇವರ ಕೊಂಬಾಟ್ ವಾರ್ಷಿಕ ಉತ್ಸವವು ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದಲ್ಲಿ ಕೊಂಬಾಟ್, ಪೀಲಿಯಟ್, ಬಿಲ್ಲಾಟ್, ಕತ್ತಿಯಟ್, ತೇಲಾಟ್ ಸೇರಿದಂತೆ 18 ತರದ (ಆಟ್) ಪೂರ್ವ ಪದ್ಧತಿ ಕುಣಿತ ವಿಶೇಷವಾಗಿ ಆಕರ್ಷಣೆಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮೊದಲು ನೀಲಿಯಟ್ ಶ್ರೀ ಶಾಸ್ತವು ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರು ಎತ್ತು ಹೇರಟ ಹಾಗೂ ವಿಶೇಷ ಪ್ರಾರ್ಥನೆಯ ಸಲ್ಲಿಸಿದ ಬಳಿಕ ಸಮೀಪದ ಶ್ರೀ ಭಗವತಿ ದೇವಾಲಯಕ್ಕೆ ಬರಲಾಯಿತು. ನಂತರ ಸನ್ನಿಧಿಗೆ ಸಂಬಂಧಪಟ್ಟ ವೃತದಾರಿ ಗ್ರಾಮಸ್ಥರು ವಿಶೇಷ ರೀತಿಯಲ್ಲಿ ಕೆಂಪು ಮತ್ತು ಶ್ವೇತ ವಸ್ತ್ರಗಳನ್ನು, ಗೆಜ್ಜೆ ತೊಟ್ಟುಕೊಂಡು ದೇವಾಲಯದ ಪ್ರಣಾಂಗಣದಲ್ಲಿ ವೃತ್ತಾಕಾರವಾಗಿ ಪಡುವ ಎಂಬ ಚರ್ಮ ವಾದ್ಯಕ್ಕೆ ತಕ್ಕಂತೆ ಲಯಬದ್ಧವಾಗಿ ಹೆಜ್ಜೆ ಹಾಕುವುದು ಅತ್ಯಾಕರ್ಷಕವಾಗಿದ್ದು, ನೆರೆದ ಭಕ್ತಾದಿಗಳು ವೀಕ್ಷಿಸಿ ತನ್ಮಯರಾದರು. ಉತ್ಸವಕ್ಕೆ ಈ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮಸ್ಥರು 20 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆಯೊಂದಿಗೆ ಪೂರ್ವ ತಯಾರಿ ನಡೆಸಲಾಗುತ್ತದೆ. ಹಬ್ಬದ ದಿನ ನವಿಲು…
ಲೇಖಕ: admin
ಸೋಮವಾರಪೇಟೆ ಡಿ.19 NEWS DESK : ಮಾದಕ ವಸ್ತುಗಳು ದೇಶದ ಆಂತರಿಕ ಭಯೋತ್ಪಾದಕ ಎಂದು ಪತ್ರಿಕಾ ಭವನದ ಅಧ್ಯಕ್ಷ, ಪತ್ರಕರ್ತ ಎಸ್.ಮಹೇಶ್ ಹೇಳಿದರು. ಪರಿವರ್ತನಾ ಟ್ರಸ್ಟ್ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಾದಕ ವಸ್ತು ವ್ಯಸನ ಜನಜಾಗೃತಿ ರಥಯಾತ್ರೆ ಸೋಮವಾರಪೇಟೆಗೆ ಆಗಮಿಸಿದ ಸಂದರ್ಭ ಜೆ.ಸಿ.ವೇದಿಕೆ ಬಳಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ದೇಶದಲ್ಲಿ ಬಂದೂಕು ಹಿಡಿದು, ಬಾಂಬ್ ಹಾಕಿ ಜನರ ಜೀವ ತೆಗೆಯತ್ತಿರುವ ಭಯೋತ್ಪಾದನೆ ಒಂದೆಡೆಯಾದರೆ ಯುವಕರಿಗೆ ಮಾದಕ ವಸ್ತುಗಳನ್ನು ನೀಡುವ ಮೂಲಕ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವುದರೊಂದಿಗೆ ಮಾಡುವಸ್ತುಗಳನ್ನು ಕಳ್ಳಸಾಗಾಣಿಕೆ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪ್ರಸಕ್ತ ವರ್ಷ ಮಾದಕವಸ್ತುಗಳಿಗೆ ಸಂಬಂಧಿಸಿದಂತೆ 5930 ಪ್ರಕರಣಗಳು ದಾಖಲಾಗಿದ್ದು, 77,99,12,94 ರೂ. ಮೌಲ್ಯದ 6073.069 ಕಿ.ಗ್ರಾಂ ಗಾಂಜಾ ಹಾಗೂ 116, 09, 81, 712 ರೂ.ಮೌಲ್ಯದ 1272.9376.ಕಿ.ಗ್ರಾಂ ಸಿಂಥೆಟಿಕ್ ವಶಪಡಿಸಿಕೊಂಡು 2898 ಮಂದಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತು ಪ್ರಕರಣದಲ್ಲಿ ಕೊಡಗು ಜಿಲ್ಲೆಯು ಹೊರತಾಗಿಲ್ಲ ವರ್ಷ ಜಿಲ್ಲೆಯಲ್ಲಿ 130…
ಮಡಿಕೇರಿ ಡಿ.19 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ ಸಮ್ಮೇಳನದ ದ್ವಿತೀಯ ದಿನವಾದ ಶುಕ್ರವಾರ ಸಂಜೆ, ನಗರದ ಮುಖ್ಯ ಬೀದಿಗಳಲ್ಲಿ ಸಮ್ಮೇಳನದ ಪ್ರತಿನಿಧಿಗಳ ಬೃಹತ್ ಶೋಭಾಯಾತ್ರೆ ನಡೆಯಿತು. ಎಬಿವಿಪಿ ದಕ್ಷಿಣ ಪ್ರಾಂ ಅಧ್ಯಕ್ಷ ಡಾ.ರವಿ ಮಂಡ್ಯ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಈಶ್ವರ ಭಟ್ ಅವರ ನೇತೃತ್ವದಲ್ಲಿ ನಗರದ ಗೌಡ ಸಮಾಜದ ಸಮ್ಮೇಳನದ ಸಭಾಂಗಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಭಾರತ ಮಾತೆ, ದೇವಿ ಶಾರದೆಯ ಪಟ ಚಿತ್ರ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸಮ್ಮೇಳನದ ಪ್ರತಿನಿಧಿಗಳು, ಸಂಘಟನೆಯ ಪದಾಧಿಕಾರಿಗಳು ಶಿಸ್ತುಬದ್ಧವಾಗಿ ಮೆರವಣಿಗೆ ನಡೆಸಿದರು. ಸೇನಾಧಿಕಾರಿಗಳಿಗೆ ಗೌರವಾರ್ಪಣೆ- ಶೋಭಾಯಾತ್ರೆ ಹಾದು ಹೋಗುವ ಸಂದರ್ಭ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ, ಮೇಜರ್ ಮಂಗೇರಿರ ಮುತ್ತಣ್ಣ, ಜನರಲ್ ತಿಮ್ಮಯ್ಯ ವೃತ್ತಗಳಲ್ಲಿ ಸೇನಾಧಿಕಾರಿಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಶೋಭಾಯಾತ್ರೆಯಲ್ಲಿ ಎಬಿವಿಪಿ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಗೋಪಿ ಅರವಿಂದ್, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮಂಧಾರ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್…
ವಿರಾಜಪೇಟೆ ಡಿ.19 NEWS DESK : ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಶಾರೀರಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಮತ್ತು ಶಿಸ್ತುಬದ್ಧ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಭಾರತೀಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ ಹೇಳಿದರು. ವಿರಾಜಪೇಟೆ ಕೊಡವ ಸಮಾಜದ ಪೂಮಾಲೆ ಮಂದ್ ಮೈದಾನದಲ್ಲಿ ತ್ರಿವೇಣಿ ಶಾಲೆಯ ವಾರ್ಷಿಕ ಕ್ರೀಡಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣದ ಹಾವಳಿಯಿಂದ ಒಂದು ಹಂತದವರೆಗೆ ತಡೆಗಟ್ಟಲು ಕ್ರೀಡೆಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಲ್ಲಿ ಉಂಟಾಗುತ್ತಿರುವ ನೈತಿಕ ಮೌಲ್ಯಗಳ ಕುಸಿತದ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಸದಾ ಜಾಗೃತರಾಗಿರಬೇಕು. ಶಿಕ್ಷಣ ಸಂಸ್ಥೆಗಳು ವಾರ್ಷಿಕ ಕ್ರೀಡಾ ದಿನಾಚರಣೆಯಂತೆ ಸಾಂಸ್ಕøತಿಕ ದಿನಾಚರಣೆಯನ್ನು ಏರ್ಪಡಿಸಿದಲ್ಲಿ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕøತಿ-ಪರಂಪರೆ ಬಗ್ಗೆ ಅರಿವು ಮೂಡಲು ಸಹಕಾರಿಯಾಗುತ್ತದೆ ಎಂದರು. ರಾಷ್ಟ್ರೀಯ ಹಾಕಿ ಪಟು ಮೇಕೇರಿರ ನಿತಿನ್ ತಿಮ್ಮಯ್ಯ ಕ್ರೀಡಾ ಜ್ಯೋತಿ ಬೆಳಗುವುದರೊಂದಿಗೆ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಆಪಾಡಂಡ ಕಾರ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ…
ಮಡಿಕೇರಿ ಡಿ.19 NEWS DESK : ಕರಾವಳಿಯ ಸಾಂಸ್ಕೃತಿಕ ನಗರಿ ಪುತ್ತೂರಿನ ಹೃದಯಭಾಗದಲ್ಲಿರುವ ಜಿ.ಎಲ್. ಮಾಲ್ ಇದೀಗ ಚಳಿಗಾಲದ ಸಂಭ್ರಮಕ್ಕೆ ಸಜ್ಜಾಗಿದೆ. ಶಾಪಿಂಗ್ ಪ್ರಿಯರಿಗಾಗಿ ಹಾಗೂ ಆಹಾರ ಪ್ರೇಮಿಗಳಿಗಾಗಿ ಇದೇ ಡಿಸೆಂಬರ್ 20ರಿಂದ ಜನವರಿ 04ರವರೆಗೆ ಅದ್ಧೂರಿ ‘ಜಿ.ಎಲ್.ಮಾಲ್ ಉತ್ಸವ’ ಹಾಗೂ ‘ಫುಡ್ ಫೆಸ್ಟಿವಲ್’ ಆಯೋಜಿಸಲಾಗಿದೆ. ಹದಿನಾರು ದಿನಗಳ ಕಾಲ ನಡೆಯಲಿರುವ ಈ ಮೇಳವು ರಿಯಾಯಿತಿಗಳ ಮಹಾಪೂರವನ್ನೇ ಹರಿಸಲಿದ್ದು, ಗ್ರಾಹಕರಿಗೆ ಮನರಂಜನೆಯ ಜೊತೆಗೆ ಅದೃಷ್ಟ ಪರೀಕ್ಷೆಗೂ ವೇದಿಕೆ ಕಲ್ಪಿಸಿದೆ. :: ನೋಡೋಕೆ ಎರಡು ಕಣ್ಣು ಸಾಲದು : ಏನೆಲ್ಲಾ ವಿಶೇಷತೆಗಳಿವೆ..? :: ಲಕ್ಕಿ ಡ್ರಾ ಸೌಭಾಗ್ಯ: ಮಾಲ್ನಲ್ಲಿ ಶಾಪಿಂಗ್ ಮಾಡುವ ಅದೃಷ್ಟಶಾಲಿ ಗ್ರಾಹಕರಿಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ ಗೆಲ್ಲುವ ಬಂಪರ್ ಅವಕಾಶವಿದೆ. ಆಕರ್ಷಕ ರಿಯಾಯಿತಿಗಳು: ಮಾಲ್ನ ಎಲ್ಲಾ ಪ್ರಮುಖ ಮಳಿಗೆಗಳಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರ ಕಡಿತ ಹಾಗೂ ಶಾಪಿಂಗ್ ಕೂಪನ್ಗಳು ಲಭ್ಯವಿವೆ. :: ರೀಲ್ಸ್ ಚಾಲೆಂಜ್ : : ಸಾಮಾಜಿಕ ಜಾಲತಾಣ ಪ್ರಿಯರಿಗಾಗಿ ವಿಶೇಷ ‘ರೀಲ್ಸ್ ಚಾಲೆಂಜ್’ ಆಯೋಜಿಸಲಾಗಿದ್ದು, ಸೃಜನಶೀಲತೆಗೆ ಬಹುಮಾನದ…
ಮಡಿಕೇರಿ ಡಿ.19 NEWS DESK : ಶಿವನ ಆರಾಧನೆಯ ಭಕ್ತಿ ಮಾರ್ಗದ ಮೂಲಕ ಆತ್ಮ ಪರಿವರ್ತನೆಯ ಮಹಾನ್ ಚಿಂತನೆಯೊಂದಿಗೆ ಉಡುಪಿಯಿಂದ ಆರಂಭಗೊಂಡಿರುವ ‘ಆದಿಯೋಗಿ ರಥ ಯಾತ್ರ್ರೆ’ಯು ಡಿ.22ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮದೆನಾಡಿನ ಮೂಲಕ ಕೊಡಗನ್ನು ಪ್ರವೇಶಿಸಲಿದ್ದು, ಅಂದು ನಗರದಲ್ಲಿ ನಡೆಯಲಿರುವ ಭಕ್ತಿ ಭಾವದ ರಥ ಯಾತ್ರೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಕೊಯಂಬತ್ತೂರಿನ ಈಶಾ ಯೋಗ ಕೇಂದ್ರದ ವತಿಯಿಂದ ಶಿವರಾತ್ರಿಯ ಹಿನ್ನೆಲೆಯಲ್ಲಿ ಇದೇ ಡಿ.7ರಿಂದ ಶ್ರೀ ಕೃಷ್ಣನ ನಗರಿ ಉಡುಪಿಯಿಂದ ಆದಿಯೋಗಿ ರಥ ಯಾತ್ರೆಗೆ ಚಾಲನೆ ದೊರಕಿದೆ. ಯಾತ್ರೆ ಫೆ.13ರಂದು ಕೊಯಂಬತ್ತೂರಿನ ಈಶಾ ಕೇಂದ್ರವನ್ನು ತಲುಪಲಿದ್ದು, ಒಟ್ಟು 1 ಸಾವಿರ ಕಿ.ಮೀ. ಅಂತರವನ್ನು 70 ದಿನಗಳ ಕಾಲ ಕ್ರಮಿಸಲಿದೆ. ಈ ಸಂದರ್ಭ ನೂರಕ್ಕೂ ಹೆಚ್ಚಿನ ಗ್ರಾಮಗಳನ್ನು ಹಾದು ಹೋಗಲಿದೆಯೆಂದು ಈಶಾ ಯೋಗ ಕೇಂದ್ರ್ರದ ಸ್ವಯಂ ಸೇವಕರಾದ ಎಂ.ಧನಂಜಯ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. :: ಮಡಿಕೇರಿಯಲ್ಲಿ ರಥ ಯಾತ್ರೆ :: ರಥ ಯಾತ್ರೆ ಪ್ರಸ್ತುತ ಪುತ್ತೂರನ್ನು ಹಾದು ಸುಳ್ಯದತ್ತ ಬರುತ್ತಿದ್ದು,…
ಮಡಿಕೇರಿ ಡಿ.19 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ, ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. “ಮಾನಸಿಕ ಅಸ್ವಸ್ಥತೆ ಮಹಾಮಾರಿ: ಆರೈಕೆ ನೀಡುವವರ ದೃಷ್ಟಿಕೋನ” ಎಂಬ ವಿಷಯದ ಮೇಲೆ ಟೆಕ್ಸಿಲಾ ಅಮೆರಿಕನ್ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಸಿನ್, ಗಯಾನಾ, ಇಲ್ಲಿನ ಮುಖ್ಯ ಶೈಕ್ಷಣಿಕ ಅಧಿಕಾರಿ ಹಾಗೂ ಡೀನ್ ಆಗಿರುವ ಡಾ.ಧೀರಜ್ ಬನ್ಸಾಲ್ (ಎಂ.ಡಿ.,ಎಂ.ಪಿ.ಎಚ್.) ಅವರು ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಮಾನಸಿಕ ಅಸ್ವಸ್ಥತೆಗಳ ಹೆಚ್ಚುತ್ತಿರುವ ಪ್ರಮಾಣ, ಆರೋಗ್ಯ ವ್ಯವಸ್ಥೆಯ ಮೇಲಿನ ಪರಿಣಾಮ, ಹಾಗೂ ರೋಗಿಗಳಿಗೆ ಸಮಗ್ರ ಆರೈಕೆ ನೀಡುವಲ್ಲಿ ಆರೈಕೆದಾರರ ಪಾತ್ರದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಅವರು ಸ್ವಾಗತವನ್ನು ನೀಡಿದರು. ಮಾನಸಿಕ ಆರೋಗ್ಯವು ಸಾರ್ವಜನಿಕ ಆರೋಗ್ಯದ ಪ್ರಮುಖ ಅಂಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು, ಬೋಧಕ…
ಮಡಿಕೇರಿ ಡಿ.19 NEWS DESK : ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು 2,553 ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳು 12,297, ಒಟ್ಟು 14,850 ಪ್ರಕರಣಗಳು ರಾಜಿ ತೀರ್ಮಾನವಾಗಿರುತ್ತದೆ. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನದ ಒಟ್ಟು ಮೊತ್ತ ರೂ.53,75,54,248. ಜಿಲ್ಲೆಯಾದ್ಯಂತ ಒಟ್ಟು 14 ಪೀಠಗಳು ಕಾರ್ಯನಿರ್ವಹಿಸಿದ್ದವು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ನ್ಯಾಯಾಧೀಶರುಗಳು, ವಕೀಲರುಗಳು, ಸಿಬ್ಬಂದಿ ವರ್ಗ, ವಿಮಾ ಕಂಪನಿ ಮತ್ತು ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದರು. ಕೊಡಗು ಜಿಲ್ಲೆಯಾದ್ಯಂತ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ 2025 ನವೆಂಬರ್, 30 ರಂದು ಒಟ್ಟು 18,049 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 6,361 ಸಿವಿಲ್ ಪ್ರಕರಣಗಳು ಹಾಗೂ 11,688 ಕ್ರಿಮಿನಲ್ ಪ್ರಕರಣಗಳಿದ್ದು, ಈ ಪ್ರಕರಣಗಳಲ್ಲಿ 5,754 ರಾಜಿಯಾಗಬಹುದಾದ ಪ್ರಕರಣಗಳಾಗಿರುತ್ತದೆ. ಅವುಗಳ ಪೈಕಿ 3,321 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ…
ಕುಶಾಲನಗರ NEWS DESK : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಬುಧವಾರ ಕುಶಾಲನಗರ ಪಿಎಂಶ್ರೀ ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಂಡಿತು. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಅಂದರೆ ಕೇವಲ ಓದು,ಬರಹ,ಪರೀಕ್ಷೆ ,ಅಂಕ,ತೇರ್ಗಡೆ ಇಷ್ಟಕ್ಕೆ ಸೀಮಿತವಾಗದೆ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಹೊರತರುವುದು.ಜೊತೆಗೆ ಬೇರೆ…
ಮಡಿಕೇರಿ NEWS DESK ಡಿ.18 : ಆದಿಮ ಸಂಜಾತ ಆನಿಮಿಸ್ಟಿಕ್ ನಂಬಿಕೆಯ ಏಕಜನಾಂಗೀಯ ಕೊಡವರ ಧಾರ್ಮಿಕ ಸಂಸ್ಕಾರವಾದ ತೋಕ್ – ಗನ್ ಹಕ್ಕಿಗೆ ಸಿಖ್ಖರ ಕಿರ್ಪಾಣ್ ಮಾದರಿಯಲ್ಲಿ ಸಂವಿಧಾನದ 25-26 ನೇ ವಿಧಿ ಪ್ರಕಾರ ಎಸೆನಿಶಿಯಲ್, ರಿಲೀಜಿಯಸ್ ಅಕ್ಟಿವಿಟೀಸ್ ಆಕ್ಟ್ ನಡಿಯಲ್ಲಿ ಶಾಶ್ವತ ರಾಜ್ಯಾಂಗ ಭದ್ರತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಸಿಎನ್ಸಿ ವತಿಯಿಂದ ಮೂರ್ನಾಡಿನ ಬಲಂಬೇರಿಯ ರಸ್ತೆಯ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ನಲ್ಲಿ ನಡೆದ 16ನೇ ವರ್ಷದ ಗನ್ ಕಾರ್ನಿವಲ್ – ತೋಕ್ ನಮ್ಮೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 2026- 27ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರು ಎಂದೇ ಎಲ್ಲಾ ಕಾಲಂನಲ್ಲೂ ದಾಖಲಿಸಬೇಕು, ಇಲ್ಲದಿದ್ದರೆ 2029ರ ನಂತರ ತೋಕ್ ಹಕ್ಕು ಸೇರಿದಂತೆ ಕೊಡವರು ಎಲ್ಲಾ ಹಕ್ಕುಗಳನ್ನು ಕಳೆದುಕೊಳ್ಳುವ ಅಪಾಯವಿದೆ. ಆದ್ದರಿಂದ ಜನಗಣತಿಯಲ್ಲಿ ‘ಕೊಡವ’ ಎಂದೇ ದಾಖಲೀಕರಣಗೊಳ್ಳುವ ಮೂಲಕ ನಮ್ಮ ಭವಿಷ್ಯತ್ತು ನಿರ್ಣಯಕ್ಕೆ ಬುನಾದಿ ಹಾಕಬೇಕೆಂದು…






