ಲೇಖಕ: admin

ಬೆಂಗಳೂರು ನ.18 NEWS DESK : ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ನ 28ನೇ ಆವೃತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.18 NEWS DESK : ಬೊಟ್ಟಿಯತ್ ನಾಡಿನ ಆರು ಗ್ರಾಮಗಳಾದ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಈಚೂರು, ಅರ್ವತೋಕ್ಲುವಿಗೆ ಸೇರಿದ ಕುಂದಾ ಬೆಟ್ಟದ ಶ್ರೀ ಈಶ್ವರ ದೇವಸ್ಥಾನದಲ್ಲಿ (ಬೊಟ್ಲಪ್ಪ) ಕಾರ್ತಿಕಾ ಸೋಮವಾರದ ಕೊನೆಯ ದಿನವಾದ ಇಂದು ಮನೆಯಪಂಡ ಹಾಗೂ ಸಣ್ಣುವಂಡ ಕುಟುಂಬದ ತಕ್ಕಾಮೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ದೇವಸ್ಥಾನ ತಕ್ಕಮುಖ್ಯಸ್ಥರು ಸೇರಿದಂತೆ ವಿವಿಧ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪಾಂಡವರ ಕಾಲದ ಇತಿಹಾಸವಿರುವ ಈ ದೇವಾಲಯವನ್ನು ವನವಾಸದಲ್ಲಿದ್ದ ಪಾಂಡವರೇ ನಿರ್ಮಿಸಿದರು ಎಂಬ ಪ್ರತೀತಿ ಇದೆ. ಇಲ್ಲಿ ತೀರ್ಥೋದ್ಭವ ಮರುದಿನ ಕಾವೇರಿ ತೀರ್ಥವನ್ನು ತಂದು ಅಭಿಷೇಕ ಮಾಡುವುದರ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆತರೆ, ನಂತರ ಕಾರ್ತಿಕ ಮಾಸದಲ್ಲಿ ನಾಲ್ಕು ಸೋಮವಾರ ಪೂಜೆ ಹೊರತುಪಡಿಸಿದರೆ ಇಲ್ಲಿ ನಿತ್ಯ ಪೂಜೆಗೆ ಅವಕಾಶ ಇಲ್ಲ. ಕಾರ್ತಿಕ ಮಾಸದಲ್ಲಿ ಕೊನೆಯ ಸೋಮವಾರ ಶ್ರದ್ಧಾಭಕ್ತಿಯಿಂದ ಪೂಜೆ  ಹಾಗೂ ಅನ್ನದಾನ ನಡೆಯುತ್ತದೆ.

Read More

ಕುಶಾಲನಗರ ನ.18 NEWS DESK : ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಆಶ್ರಯದಲ್ಲಿ 14 ಮತ್ತು 17ರ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕೂಡಿಗೆ ಕ್ರೀಡಾಶಾಲಾ ಮೈದಾನದಲ್ಲಿ  ನಡೆಯಿತು. ಓಟದ ಸ್ಪರ್ಧೆ, ಉದ್ದ ಜಿಗಿತ, ಭಾರದ ಗುಂಡು ಎಸೆತ, ಜವಲಿಂಗ್ ಹಾಗೂ ತಟ್ಟೆ ಎಸೆತ ಸೇರಿದಂತೆ ಇನ್ನಿತರ ಮೇಲಾಟ ಸ್ಪರ್ಧೆಗಳು ನಡೆದವು. 17ರ ವಯೋಮಿತಿಯ ಬಾಲಕರ ವಿಭಾಗದ ಮೂರು ಸಾವಿರ ಮೀಟರ್ ಓಟ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಸೆಂಟ್ ಥಾಮಸ್ ಹೈಸ್ಕೂಲ್ ನ ವಿದ್ಯಾರ್ಥಿ ನಿಖಿಲ್ ಬಿ.ಕೆಟ್ಟಿ ಪ್ರಥಮ ಸ್ಥಾನ, ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಎಚ್.ಕಾರ್ತಿಕ್ ದ್ವಿತೀಯ ಸ್ಥಾನ, ಮಡಿಕೇರಿ ಸೆಂಟ್ ಮೈಕಲ್ ಹೈಸ್ಕೂಲ್ ನ ಎಚ್.ಎಸ್.ತರುಣ್ ತೃತೀಯ ಸ್ಥಾನ ಗಳಿಸಿದರು. ಬಾಲಕಿಯರ ವಿಭಾಗದಲ್ಲಿ ಕಳಾತ್ಮಾಡು ಲಯನ್ಸ್ ಹೈಸ್ಕೂಲ್ ನ ವಿದ್ಯಾರ್ಥಿನಿ ಎಂ.ವಿ.ವಿದ್ಯಾಪೊನ್ನಮ್ಮ ಪ್ರಥಮ ಸ್ಥಾನ,ಪೊನ್ನಂಪೇಟೆ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಕೆ.ಎಸ್.ಧನ್ಯ ದ್ವಿತೀಯ ಸ್ಥಾನ ಹಾಗೂ ಭಾಗಮಂಡಲ ಅಟಲ್ ಬಿಹಾರಿ…

Read More

ದೆಹಲಿ ನ.18 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವರು ಮತ್ತು ಶಾಸಕ ಪೊನ್ನಣ್ಣ ಅವರಿಂದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಅವರನ್ನು ಭೇಟಿಯಾಗಿ ಹಲವು ಮಹತ್ವದ ಮಾತುಕತೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಮದುರ್ಗ ಶಾಸಕರು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ಪ್ರಮುಖರು ಉಪಸಿತರಿದ್ದರು.

Read More

ವಿರಾಜಪೇಟೆ ನ.18 NEWS DESK : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಫಾತಿಮಾ ಉದ್ಘಾಟಿಸಿದರು. ಸುಮಾರು 11 ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 40 ಶಿಕ್ಷಕರು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 24 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕಂಠಪಾಠ, ಧಾರ್ಮಿಕ ಪಠಣ, ಚಿತ್ರಕಲೆ ಕ್ಲೇ ಮಾಡಲಿಂಗ್, ದೇಶಭಕ್ತಿ ಗೀತೆ, ಪ್ರಬಂಧ, ರಸಪ್ರಶ್ನೆ ಇನ್ನಿತರ ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರು ಹಾಗು ದಾನಿಗಳು ಆದ ಸಲಾಂ ಎಂ.ಕೆ. ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಬಹುಮಾನಕ್ಕಿಂತ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಗಳು ಉತ್ತಮ ವೇದಿಕೆಯಾಗಿದ್ದು, ಇದನ್ನು ಸದುಪಯೋಗ ಪಡೆಯಬೇಕಾಗಿದೆ ಎಂದು ನುಡಿದರು. ಚೆಯ್ಯಂಡಾಣೆ ಪ್ರಾರ್ಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಕೆ.ಎಂ.ವಿಮಲಾ ಮತ್ತು  ಮೂರ್ನಾಡು ಶಾಲಾ…

Read More

ಮಡಿಕೇರಿ ನ.18 NEWS DESK : ಶ್ರೀಮಂಗಲ ಜೆ.ಸಿ.ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳು 2025-26 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟ ದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಟ್ ಪುಟ್  ಅನನ್ಯ ಎಂ. ಪ್ರಥಮ, ಎತ್ತರ ಜಿಗಿತ ಹರ್ಷಿತ ಕೆ. ಹೆಚ್ ಪ್ರಥಮ, ಕರಾಟೆ ವೈಷ್ಣವ್ ಪಿ. ಎಸ್. ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪದ್ಯಾಯರು, ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ನ.18 NEWS DESK : ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಶಿಕ್ ಮಂದಣ್ಣ ಕೆ. ಪಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಶರಣ್ ಚಂಗಪ್ಪ ಪಿ. ಸಿ ತಟ್ಟೆ ಎಸೆತದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಶಾಲಾ ವ್ಯವಸ್ಥಾಪಕಿ ನಾಟೋಳಂಡ ಶ್ರೀಮತಿ ಸರೋಜಿನಿ, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ವರೂಪ ಕೆ. ಬಿ. ದೈಹಿಕ ಶಿಕ್ಷಣ ಶಿಕ್ಷಕಿ ಕರವಂಡ ಸೀಮಾ ಗಣಪತಿ ಇದ್ದಾರೆ.

Read More

ಸೋಮವಾರಪೇಟೆ, ನ.18 NEWS DESK : ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಹಾಸಭಾದ ಸೋಮವಾರಪೇಟೆ ಘಟಕ ಹಾಗೂ ಜಿಲ್ಲಾ ಯುವ ಘಟಕದ ಸಹಯೋಗದೊಂದಿಗೆ ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಬಿ.ಜಿ.ಎಸ್.ಶಾಲಾ‌ ಮೈದಾನದಲ್ಲಿ  ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಮುದಾಯದ ಕ್ರೀಡಾಕೂಟಗಳ ಮಹತ್ವ ಕುರಿತು ಮಾತನಾಡಿದ ಅರಮೇರಿ- ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ , ಪರಸ್ಪರ ಪ್ರೀತಿ- ವಿಶ್ವಾಸ , ಉತ್ತಮ ನಾಯಕತ್ವ ಗುಣ ಬೆಳೆಸಲು ಹಾಗೂ ಸಹಬಾಳ್ವೆ ಜೀವನಕ್ಕೆ ಕ್ರೀಡೆಗಳು ತುಂಬಾ ಸಹಕಾರಿಯಾಗಿವೆ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ‌ ಪಿ.ಚಂದ್ರಶೇಖರ್ ಮಾತನಾಡಿ, ಯುವ ಜನಾಂಗ ಕ್ರೀಡಾ ಸ್ಪೂರ್ತಿ ಬೆಳೆಸಿಕೊಂಡು ಉತ್ತಮ ಜೀವನ ಕಂಡುಕೊಳ್ಳಬೇಕು. ಇಂತಹ ಕ್ರೀಡಾಕೂಟಗಳು ಪರಸ್ಪರ ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು. ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಮಾತನಾಡಿ,ಗ್ರಾಮೀಣ ಕ್ರೀಡೆಗಳನ್ನು ಉಳಿಸಲು ಮತ್ತು ಪರಸ್ಪರ ಪ್ರೀತಿ, ವಿಶ್ವಾಸ…

Read More

ಮಡಿಕೇರಿ ನ.18 NEWS DESK  : ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವು ನ.19 ರಿಂದ 25 ರವರೆಗೆ ನಡೆಯಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಕೆ ಸಂದೀಪ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ನ.17 : ವಿರಾಜಪೇಟೆ ಗೌಡ ಸಮಾಜಕ್ಕೆ ಭೂಮಿಯನ್ನು ದಾನವಾಗಿ ನೀಡಿದ ಸಮಾಜ ಸೇವಕ ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಹಾಗೂ ಜಾನಕಿ ದಂಪತಿಗಳ ಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ವಿರಾಜಪೇಟೆ ಗೌಡ ಸಮಾಜದಲ್ಲಿ ನಡೆಯಿತು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಡಾ.ಚಿದಾನಂದ ಅವರು ಸುಮಾರು 20 ವರ್ಷಗಳಿಂದ ಬಾಕಿ ಉಳಿದಿದ್ದ ಭೂಮಿಯ ನೋಂದಣಿ ಪ್ರಕ್ರಿಯೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ ಅವರ ತಂಡವು ನಮ್ಮೊಂದಿಗೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ. ಇದೀಗ ಜಾಗ ಗೌಡ ಸಮಾಜದ ಅಧೀನದಲ್ಲಿದ್ದು, ಶೀಘ್ರ ಉತ್ತಮವಾದ ಗೌಡ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ನೂತನ ಕಟ್ಟಡ ನಿರ್ಮಾಣದ ಸಂದರ್ಭ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಸನ್ಮಾನವನ್ನು ತಂದೆ, ತಾಯಿಯರಿಗೆ ಅರ್ಪಿಸುವುದಾಗಿ ಹೇಳಿದರು. ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು ಮಾತನಾಡಿ ಗೌಡ ಸಮಾಜಕ್ಕೆ ದೊರೆತ್ತಿರುವ  ಜಾಗದಲ್ಲಿ ಸುಂದರವಾದ ಸಮಾಜ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ…

Read More