ಮಡಿಕೇರಿ ಜು.3 NEWS DESK : ದೇಶದ ಪ್ರಧಾನಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊನ್ನಂಪೇಟೆ ಪೋಲಿಸ್ ಠಾಣೆಯಲ್ಲಿ ಬಿಜೆಪಿ ದೂರು ದಾಖಲಿಸಿದೆ. ಪ್ರಧಾನಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಿಎಸ್ಎನ್ಎಲ್ ನ ಮಾಜಿ ಕೆಲಸಗಾರನೊಬ್ಬನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ದೂರು ದಾಖಲಿಸುವ ಸಂದರ್ಭ ವಿರಾಜಪೇಟೆ ಮಂಡಲ ಕಾರ್ಯದರ್ಶಿ ಕೋಟೆರ ಕಿಶನ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ದಿನೇಶ್ ಚೋಡುಮಾಡ, ರೈತ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಅಲೆಮಾಡ, ಪೊನ್ನಂಪೇಟೆ ಗ್ರಾಮ ಪಂಚಾಯತ್ ಸದಸ್ಯ ಮಧು ಮೂಕೇಳೆರ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜು.3 NEWS DESK : ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ರಶ್ಮಿ ಪ್ರವೀಣ್ ಮತ್ತು ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಅಧಿಕಾರ ಸ್ವೀಕರಿಸಿದರು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿಗೆ ಇನ್ನರ್ ವೀಲ್ ಸಂಸ್ಥೆಯ ಸ್ಥಾಪಕಾಧ್ಯಕ್ಷೆ ಡಾ.ಜಯಲಕ್ಷ್ಮಿ ಪಾಟ್ಕರ್ ಪದಗ್ರಹಣ ನೆರವೇರಿಸಿದರು. ಇನ್ನರ್ ವೀಲ್ ಜಿಲ್ಲಾ ಸಮಿತಿಯ ನಿದೇ೯ಶಕಿ ದಿವ್ಯಮುತ್ತಣ್ಣ, ನಿಕಟಪೂವ೯ ಅಧ್ಯಕ್ಷೆ ಲಲಿತಾ ರಾಘವನ್ , ನಿಕಟಪೂವ೯ ಕಾಯ೯ದಶಿ೯ ನಮಿತಾರೈ ವೇದಿಕೆಯಲ್ಲಿದ್ದರು. ಆರೋಗ್ಯ ಚಿಕಿತ್ಸೆಗಾಗಿ ಸಿ.ಕೆ.ನಂದೀಶ್ ಕುಮಾರ್ ಅವರಿಗೆ 5 ಸಾವಿರ ರು. ಮತ್ತು ಶೈಕ್ಷಣಿಕ ನೆರವಾಗಿ ಬಿ.ಯು. ಹಿತಶ್ರೀ ಅವರಿಗ 5 ಸಾವಿರ ರು ಗಳ ಆಥಿ೯ಕ ನೆರವನ್ನು ಇದೇ ಸಂದಭ೯ ಇನ್ನರ್ ವೀಲ್ ನಿಂದ ನೀಡಲಾಯಿತು. ಮಡಿಕೇರಿ ರೋಟರಿ ಅಧ್ಯಕ್ಷ ಮನೋಹರ್ ಕಾಮತ್ ಅವರು ಇನ್ನರ್ ವೀಲ್ ವಾತಾ೯ಸಂಚಿಕೆ ಗಿರಿಶೖಂಗವನ್ನು ಲೋಕಾಪ೯ಣೆಗೊಳಿಸಿದರು. ವಿಜಯಲಕ್ಷ್ಮಿ ಚೇತನ್, ದೇಚು ಶ್ಯಾಮ್, ರೇಣುಕಾ ಸುಧಾಕರ್ ಪ್ರಾಥಿ೯ಸಿ, ಗುಲಾಬಿ ಜನಾಧ೯ನ್ ವಂದಿಸಿದರು. ಖಜಾಂಜಿ ಡಾ.ಶುಭಾ ರಾಜೇಶ್…
ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಂಪರ್ ಕೊಡುಗೆ ನೀಡಿದೆ. 2026ರ ಸಾಲಿನ ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳ ಪೈಕಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 588 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 234 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 144, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 144 ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 390 ಹುದ್ದೆಗಳನ್ನು ಮೀಸಲಿಡಲಾಗಿದೆ.ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಹೋಲಿಕೆ: ಕಳೆದ ವರ್ಷ ವರ್ಸಸ್ ಈ ವರ್ಷ ಕಳೆದ ವರ್ಷ (2025ರಲ್ಲಿ) ಎಸ್ಬಿಐ ಕೇವಲ 541 ಪಿಒ ಹುದ್ದೆಗಳಿಗೆ ಮಾತ್ರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಹುದ್ದೆಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಒಟ್ಟು 1,500 ಹುದ್ದೆಗಳಿಗೆ (1446 ರೆಗ್ಯುಲರ್ + 54 ಬ್ಯಾಕ್ಲಾಗ್) ನೇಮಕಾತಿ ನಡೆಯುತ್ತಿದೆ. ಇದು ಅಭ್ಯರ್ಥಿಗಳಿಗೆ ಸಿಕ್ಕಿರುವ ಸುವರ್ಣಾವಕಾಶ. ಮುಂಬೈನಂತಹ ಮೆಟ್ರೋ ಸಿಟಿಯಲ್ಲಿ…
ಮಡಿಕೇರಿ NEWS DESK ಜು.3 : ನಗರದ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಣಿಶಾಸ್ತ್ರ ವಿಭಾಗದ ಪ್ರೊ.ಎಂ.ಪಿ.ಕೃಷ್ಣ ಅವರನ್ನು ಕಾಲೇಜ್ ನ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಮೇಜರ್ ರಾಘವ ಬಿ. ಅವರು ತಮ್ಮ ಹುಟ್ಟೂರಿನ ಈ ಕಾಲೇಜ್ ನಲ್ಲಿ ಪದವಿ ಪಡೆದ ಪ್ರೊ.ಎಂ.ಪಿ.ಕೃಷ್ಣ ಅವರು ಇದೇ ಕಾಲೇಜ್ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದುತ್ತಿರುವುದು ಹೆಮ್ಮೆ ಎನಿಸಿದೆ. ಇದು ಇವರಿಗೆ ಲಭಿಸಿದ ಭಾಗ್ಯವಾಗಿದೆ, ಈ ಗೌರವ ಸಿಗುವುದು ಅಪರೂಪ ಎಂದು ಅಭಿಪ್ರಾಯಪಟ್ಟರು. ಕಾಲೇಜ್ ನ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಕೈಜೋಡಿಸುತ್ತಿದ್ದ ಪ್ರೊ.ಎಂ.ಪಿ.ಕೃಷ್ಣ ಅವರ ಸೇವೆ ಶ್ಲಾಘನೀಯ. ಸೇವಾ ಮನೋಭಾವ ಮತ್ತು ಬೋಧಕರೊಂದಿಗಿನ ಒಡನಾಟ ಸದಾ ಹಚ್ಚಹಸಿರಾಗಿರಲಿದೆ. ಇವರ ನಿವೃತ್ತಿ ಜೀವನ ಸುಖಕರ ಹಾಗೂ ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು. ಹಿಂದಿ ವಿಭಾಗದ ಪ್ರೊ.ಶ್ರೀಧರ್ ಆರ್. ಹೆಗ್ಡೆ…
ಮಡಿಕೇರಿ NEWS DESK ಜು.3 : ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮನವಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. 2026ರ ಜೂನ್ 11ರಂದು ಸಂಸದ ಶ್ರೀ ಯದುವೀರ್ ಒಡೆಯರ್ ರವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಶ್ರೀ ಭೂಪೇಂದ್ರ ಯಾದವ್ ರವರನ್ನು ಬೇಟಿ ಯಾಗಿ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಕೊಡಗಿನ ಅರಣ್ಯ ಅಂಚಿನ ಪ್ರದೇಶಗಳಲ್ಲಿ ರೈತರು, ತೋಟಗಾರರು ಮತ್ತು ಸ್ಥಳೀಯ ನಿವಾಸಿಗಳನ್ನು ಕಾಡುತ್ತಿರುವ ಮಾನವ–ಆನೆ ಸಂಘರ್ಷ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವಾಲಯವು ವನ್ಯಜೀವಿ ವಾಸಸ್ಥಳಗಳ ಅಭಿವೃದ್ಧಿ (Development of Wildlife Habitats) ಹಾಗೂ ಪ್ರಾಜೆಕ್ಟ್ ಟೈಗರ್ & ಎಲೆಫೆಂಟ್ (Project Tiger & Elephant) ಸೇರಿದಂತೆ ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ರಾಜ್ಯ ಸರ್ಕಾರಗಳಿಗೆ ಆರ್ಥಿಕ ನೆರವು ನೀಡುತ್ತಿರುವುದಾಗಿ…
ಮಂಗಳೂರು NEWS DESK ಜು.3 : ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ 2026-27 ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಬಿ. ಎ, ಬಿ. ಕಂ, ಬಿಬಿಎ , ಬಿ. ಎಸ್ಸಿ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅಥವಾ ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ ವನ್ನು ಪದವಿ ತರಗತಿಯಲ್ಲಿ ಒಂದು ಕೋರ್ಸ್ ಆಗಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ. ಶಿಕ್ಷಣದ ಜೊತೆಯಲ್ಲಿ ವಿಭಾಗವು ವೃತ್ತಿಪರ ಉದ್ಯೋಗ ತರಬೇತಿ, ಹೂಡಿಕೆ , ಬಂಡವಾಳ, ಹಾಗೂ ಹಣಕಾಸಿನ ವಿಶ್ಲೇಷಣೆ, ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಮಾರ್ಗದರ್ಶನ, ಹಣಕಾಸು ವಲಯದಲ್ಲಿರುವ ಅವಕಾಶಗಳು ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಸಂಬಂಧಿಸಿದ ಶಿಕ್ಷಣಕ್ಕೆ ಮಹತ್ವವನ್ನು ನೀಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಬಗ್ಗೆ ನಿರಂತರವಾಗಿ ವಿಶ್ಲೇಷಣೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿರುತ್ತದೆ.…
ವಿರಾಜಪೇಟೆ ಜು.2 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್-2026)ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಎಸ್.ಪಿ.ರೈಮಂಡ್ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರು ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪವಿತ್ರ ಅವರು, ಎಸ್.ಐ.ಆರ್ ನ ಉದ್ದೇಶಗಳು, ಮತದಾರನು ಪಾಲ್ಗೊಳ್ಳುವ ಹಂತಗಳು ಹಾಗೂ ಮತದಾನದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜು.2 NEWS DESK : ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಚನ ಸಾಹಿತ್ಯವು 12ನೇ ಶತಮಾನದ ಶರಣರ ಚಿಂತನೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಭಂಡಾರವಾಗಿದೆ. ವಿದ್ಯಾರ್ಥಿಗಳು ವಚನಗಳನ್ನು ಮೈಗೂಡಿಸಿಕೊಳ್ಳಬೇಕು. ದಿನಕ್ಕೆ ಒಂದು ವಚನಗಳನ್ನಾದರೂ ಕಲಿತು ಅದರ ಮೆರುಗನ್ನು ಬದುಕಿನಲ್ಲಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಡಾ.ಫ.ಗು.ಹಳಕಟ್ಟಿ ಅವರು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವಚನ ಸಾಹಿತ್ಯದ ಅಧ್ಯಯನದಿಂದ ಅರಿವು ಜಾಗೃತಗೊಂಡು, ಬೆಳಕು ಮೂಡುತ್ತದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಶಿವಪ್ಪ ಅವರು, ಬಸವಾದಿ ಶರಣರು…
ಮಡಿಕೇರಿ ಜು.2 NEWS DESK : ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲವು ಅನಧೀಕೃತ ಮತ್ತು ಪರವಾನಗಿ ರಹಿತ ಮಾರಾಟಗಾರರು ರೈತರಿಗೆ ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ದೂರುಗಳು ಕಂಡು ಬರುತ್ತಿದೆ. ಇಂತಹ ಕೃತ್ಯಗಳಿಂದ ರೈತರು ಆರ್ಥಿಕ ನಷ್ಟ ಅನುಭವಿಸುದಲ್ಲದೆ, ಕೃಷಿ ಉತ್ಪಾದನೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು ಮತ್ತು ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡಬೇಕು. ಅಧಿಕಾರಿಗಳು,…
ಸುಂಟಿಕೊಪ್ಪ ಜು.2 NEWS DESK : ಸಣ್ಣ ಪ್ರಮಾಣದ ಮಳೆ ಮತ್ತು ಗಾಳಿಗೆ ಕೆದಕಲ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಇದ್ದ ಬೃಹತ್ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ 2 ಬದಿಯ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಗುರುವಾರದಂದು ಅಲ್ಪಪ್ರಮಾಣದ ಮಳೆ ಸುರಿಯುತ್ತಿದ್ದು, ಬಿರುಸಿನ ಗಾಳಿಯ ಪರಿಣಾಮ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಪರಿಣಾಮ ಬಾರೀ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಯಿತು. ಕಿಲೋ ಮೀಟರ್ ದೂರದವರೆಗೆ ವಾಹನಗಳು ಸರತಿ ಸಾಲಿನಲ್ಲಿ ಸುಮಾರು 2 ಗಂಟೆಗಳ ಕಾಲಗಳ ಸ್ಥಗಿತಗೊಂಡು ಪ್ರಯಾಣಿಕರು ವಾಹನ ಸವಾರರಿಗೆ ತೀವ್ರ ತೊಂದರೆಯನ್ನು ಉಂಟುಮಾಡಿತು. ಸ್ಥಳಕ್ಕೆ ಅಗ್ನಿಶಾಮಕ ದಳದವರು, ಗ್ರಾಮಸ್ಥರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.






