ಲೇಖಕ: admin

ಮಡಿಕೇರಿ ಆ.27 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಸೆ.14 ರಂದು ನಡೆಯಲಿರುವ ಗಣೇಶೋತ್ಸವ’ ಹಬ್ಬದ ಪ್ರಯುಕ್ತ ಭಕ್ತಾದಿಗಳು ಒಡೆದ ಈಡುಗಾಯಿಗಳನ್ನು ದೇವಾಲಯದ ವತಿಯಿಂದ ಸಾರ್ವಜನಿಕರ ಸಮ್ಮುಖದಲ್ಲಿ ಆಸಕ್ತ ಬಿಡ್ಡುದಾರರಿಂದ ಬಹಿರಂಗ ಹರಾಜು ಮಾಡಲಾಗುವುದು. ಈಡುಗಾಯಿ ಬಹಿರಂಗ ಹರಾಜು ಸೆ.8 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಸಾರ್ವಜನಿಕ ಬಿಡ್ಡುದಾರರು ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಈಡುಗಾಯಿ ಬಹಿರಂಗ ಹರಾಜಿನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಆಸಕ್ತ ಬಿಡ್ಡುದಾರರು ರೂ.10,000 ಮುಂಗಡ ಠೇವಣಿ ಹಣವನ್ನು “ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಓಂಕಾರೇಶ್ವರ ದೇವಾಲಯ, ಮಡಿಕೇರಿ” (Executive Officer, Sri Omkareshwara Temple, Madikeri) ಅವರ ಹೆಸರಿನಲ್ಲಿ ಡಿ.ಡಿ. ಅಥವಾ ನಗದು ಮೂಲಕ ಪಾವತಿಸಿ ಈಡುಗಾಯಿ ಬಹಿರಂಗ ಹರಾಜಿನಲ್ಲಿ ಭಾಗವಹಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಎ.ಸಿ.ದೇವಯ್ಯ ಅಧ್ಯಕ್ಷರು, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ…

Read More

ಮಡಿಕೇರಿ ಆ.27 NEWS DESK : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆ.28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಆ.28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಆ.27 NEWS DESK :  ಪ್ರಸಕ್ತ ಸಾಲಿನಲ್ಲಿ ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೆಂಕಟೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎ.ಮಂಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ನೀರಾವರಿ ಇಲಾಖೆಯ ಎಂಜಿನಿಯರ್‍ಗಳು ಇತರರು ಇದ್ದರು.

Read More

ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ರೌಳತುಲ್ ಉಲೂಂ ದರ್ಸ್ ಕುಂಜಿಲದ ವಿದ್ಯಾರ್ಥಿ ಹಾಶೀರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗಾಗಿ SSF ಚಿಟ್ಟಾಡೆ ಯುನಿಟ್ ವತಿಯಿಂದ ಹಾರ್ದಿಕ ಅಭಿನಂದನೆಗಳು ಸಲ್ಲಿಸಲಾಗಿದೆ.

Read More

ರಾಜ್ಯಾದಂತ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್” (ಗ್ರಾಮೀಣ)(VB-G RAM G )* ಯೋಜನೆಯಾಗಿ ಜುಲೈ 01ರಿಂದ ಪ್ರಾರಂಭವಾಗಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ, ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶ್ ಕುಮಾರ್ ವಿ ರವರು ಮಾತನಾಡಿ, *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್”(ಗ್ರಾಮೀಣ)(VB-G RAM G )* *ಯೋಜನೆ ಜನರಿಗೆ 125 ದಿನಗಳ ಕೂಲಿ ಖಾತ್ರಿಯ ಉದ್ಯೋಗ ಒದಗಿಸುವುದರ ಜೊತೆಗೆ ಪ್ರತಿ ದಿನದ ಕೂಲಿಯ ಮೊತ್ತವನ್ನ 382/-ರೂ ಗೆ ಹೆಚ್ಚಿಸಿ ಜನರ ಜೀವನ ಮಟ್ಟವನ್ನ ಉತ್ತಮ ಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಯೋಜನೆಯಡಿ ಹೆಚ್ಚು ಅರ್ಹ ಕುಟುಂಬಗಳನ್ನು ಸೇರ್ಪಡೆಗೊಳಿಸಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುಲು ಹೆಚ್ಚಿನ ಅವಕಾಶಗಳಿದ್ದು ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕೋಳಿಗೂಡು, ಮೇಕೆ ಶೇಡ್, ಹಂದಿ ಶೇಡ್, ಇಂಗು ಗುಂಡಿ, ತೆರೆದ ಬಾವಿ, ಕೃಷಿ ಹೊಂಡ, ಅಡಿಕೆ, ಕಾಫಿ, ಕಾಳುಮೆಣಸು, ಸೇರಿದಂತೆ ವೈಯಕ್ತಿಕ…

Read More

ಕುಶಾಲನಗರ, NEWS DESK ಆ. 27: ಮಹಿಳೆಯು ತನ್ನ ಅನುಭವವನ್ನು ಮಾತ್ರ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವುದಿಲ್ಲ. ಸಂಸ್ಕೃತಿಗೆ ದಾಖಲೆಯನ್ನು, ಪ್ರಕೃತಿಗೆ ಕಾವ್ಯವನ್ನು, ಬದುಕಿಗೆ ಹೊಸ ಅರ್ಥವನ್ನು, ಎಲ್ಲಕ್ಕಿಂತ ಮಿಗಿಲಾಗಿ ತನ್ನ ಗಟ್ಟಿ ಸಾಹಿತ್ಯದ ಧ್ವನಿಯನ್ನು ನೀಡುತ್ತಾಳೆ ಎಂದು ಕವಯಿತ್ರಿ, ಸಾಹಿತಿ ಲೀಲಾಕುಮಾರಿ ತೊಡಿಕಾನ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ, ದಿ. ಪಾಣತ್ತಲೆ ಶ್ರೀ ಅಣ್ಣಯ್ಯ ಮತ್ತು ಶ್ರೀಮತಿ ಚಿನ್ನಮ್ಮ ಅವರ ಸ್ಮರಣಾರ್ಥ ಏರ್ಪಡಿಸಿದ್ದ “ಕೊಡಗಿನಲ್ಲಿ ಕನ್ನಡ ಸಾಹಿತ್ಯ ಬೆಳವಣಿಗೆಗೆ ಮಹಿಳಾ ಸಾಹಿತಿಗಳ ಕೊಡುಗೆಗಳು” ಎಂಬ ದತ್ತಿ ಉಪನ್ಯಾಸ ಮಾಲಿಕೆಯಲ್ಲಿ ಅವರು ಮಹಿಳಾ ಸಾಹಿತಿಗಳ ಸಾಹಿತ್ಯ ರಚನೆ ಕುರಿತು ಮಾತನಾಡಿದರು. ಕೊಡಗಿನ ಮಹಿಳಾ ಸಾಹಿತಿಗಳ ಪರಿಚಯದೊಂದಿಗೆ ಕನ್ನಡ ಸಾಹಿತ್ಯಕ್ಕೆ ಅವರದೇ ಆದ ವಿಶೇಷ ಕೊಡುಗೆಗಳನ್ನು ಸ್ಮರಿಸಿಕೊಂಡು ಮಾತನಾಡಿದ ಅವರು, ಕನ್ನಡದ ಮೊದಲ ಕಥೆಗಾರ್ತಿ ಎನಿಸಿದ ಕೊಡಗಿನ ಗೌರಮ್ಮ ಅವರು ಸ್ತ್ರೀವಾದಿ ಹಾಗೂ ಭಾರತೀಯ ಸ್ವಾತಂತ್ರ್ಯ…

Read More

ಮಡಿಕೇರಿ, NEWS DESK ಆ.27 : ಗ್ರಾಮೀಣ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಆತಂಕವನ್ನು ಸೃಷ್ಟಿಸಿರುವ ಕಸ್ತೂರಿ ರಂಗನ್ ವರದಿ ಇದೀಗ ಮಡಿಕೇರಿ ನಗರಸಭೆಯನ್ನು ಕೂಡ ಕಾಡಿದೆ. ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಪಿ. ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು. ಕಸ ವಿಲೇವಾರಿಗಾಗಿ 2ನೇ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಗುರುತಿಸಿರುವ 10 ಎಕರೆ ಪ್ರದೇಶವು ಕಸ್ತೂರಿ ರಂಗನ್ ವರದಿಯಲ್ಲಿ ಸೇರ್ಪಡೆಗೊಂಡಿರುವುದರಿಂದ ನಗರಸಭೆ ಪರ್ಯಾಯ ಜಾಗದಲ್ಲಿ ಕಸ ವಿಲೇವಾರಿಗೆ ಮುಂದಾಗಬೇಕಾದ ಅನಿವಾರ್ಯತೆ ಎದುರಾಗಿದೆ. ನಗರಸಭೆಯ ವಿರೋಧ ಪಕ್ಷದ ನಾಯಕ ಅಮಿನ್ ಮೊಹಿಸಿನ್ ಮಾತನಾಡಿ, 2ನೇ ಮೊಣ್ಣಂಗೇರಿಯಲ್ಲಿ ಕಸ ವಿಲೇವಾರಿ ಘಟಕಕ್ಕಾಗಿ ಗುರುತಿಸಲಾಗಿದ್ದ 10 ಎಕರೆ ಜಾಗಕ್ಕೆ ಈಗಾಗಲೇ ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಆದರೆ ಇದೀಗ ಆ ಜಾಗವನ್ನು ಕೈಬಿಟ್ಟು ಕಾಟಗೇರಿಯಲ್ಲಿ 5 ಎಕರೆ ಜಾಗ ಗುರುತಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯ ಕಾಳಚಂಡ ಅಪ್ಪಣ್ಣ ಮಾತನಾಡಿ,…

Read More

ನೇಪಾಳ ಹಾಗೂ ಟಿಬೇಟ್ ದೇಶದಲ್ಲಿ ಪ್ರಕೃತಿ ವಿಕೋಪದಿಂದ ಭಾರೀ ಪ್ರಮಾಣದ ಪ್ರವಾಹ, ಭೂಕುಸಿತ ಸಂಭಾವಿಸಿದ್ದು . ಕೊಡಗು ಜಿಲ್ಲೆಯ ಯಾರಾದರೂ ಈ ಪ್ರದೇಶದಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದೂ:- 08272-221077 08272-221099 ವಾಟ್ಸಾಪ್ ಸಂಖ್ಯೆ:- 8550001077

Read More

ಮಡಿಕೇರಿ, NEWS DESK ಆ.27 – ನಗರದ ಶ್ರುತಿ-ಲಯ ತಂಡದ ವತಿಯಿಂದ  ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸಹಯೋಗದೊಂದಿಗೆ ವಿಶ್ವ ಸಂಗೀತ ದಿನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆಯ    ಪ್ರಯುಕ್ತ ಆ.30 ರಂದು ಭಾನುವಾರ  ದಾಸರ ಕೀರ್ತನೆ ಗಾಯನ ಕಾರ್ಯಕ್ರಮ  ಆಯೋಜಿತವಾಗಿದೆ. ನಗರದ  ,ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪ ದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ  ದಾಸರ ಕೀತ೯ನೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನಾ  ಕಾರ್ಯಕ್ರಮದಲ್ಲಿ  ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ  ರಾಮಚಂದ್ರ ಮೂಗೂರು  ಮಡಿಕೇರಿಯ ವೈದ್ಯಸಾಹಿತಿ ಡಾ. ನಡಿಬೈಲು ಉಯಶಂಕರ್ , ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್,  ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್. ಟಿ., ಶೖತಿಲಯ ತಂಡದ ಪ್ರಧಾನ ಕಾಯ೯ದಶಿ೯ ಗೀತಾ ಎಸ್.ಸಂಪತ್ ಕುಮಾರ್   ಪಾಲ್ಗೊಳ್ಳಲಿದ್ದಾರೆ ೆ ಎಂದು ಶೖತಿಲಯ ತಂಡದ ಅಧ್ಯಕ್ಷೆ ವೀಣಾ ಎಸ್. ಹೊಳ್ಳ…

Read More

ಮಡಿಕೇರಿ, NEWS DESK, ಆ.27: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ಮಾಡಿದ್ದು, ರೂ.75.35 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ನೀಡುವ ಪ್ರಸ್ತಾವನೆಯನ್ನು ವಾರ್ಷಿಕ ಮಹಾಸಭೆಯ ಅನುಮೋದನೆಗೆ ಮಂಡಿಸಲು ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಮಾರ್ಚ್ 31ರ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 1,203 ‘ಎ’ ತರಗತಿಯ ಸದಸ್ಯರಿದ್ದು, ಸದಸ್ಯರಿಂದ ರೂ.89.26 ಲಕ್ಷ ಪಾಲು ಬಂಡವಾಳ ಸಂಗ್ರಹವಾಗಿದೆ. ಕ್ಷೇಮ ನಿಧಿ ಸೇರಿದಂತೆ ಇತರೆ ನಿಧಿಗಳಲ್ಲಿ ರೂ.3.95 ಕೋಟಿ ಹಾಗೂ ನಿರಖು ಠೇವಣಿ, ಸಂಚಯ ಠೇವಣಿ ಸೇರಿದಂತೆ ಒಟ್ಟು ರೂ.22.71 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು. ಸಂಘದ ಬಂಡವಾಳದ ಪೈಕಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ, ನಿರಖು ಠೇವಣಿ ಹಾಗೂ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಾಲು ಮತ್ತು ಠೇವಣಿ ರೂಪದಲ್ಲಿ…

Read More