ಲೇಖಕ: admin

ಕುಶಾಲನಗರ NEWS DESK ಮೇ 27: ಕೊಡಗು ಜಿಲ್ಲಾ ಸರ್ಕಾರಿ ನೌಕರರ ಪುರುಷರ ಹಾಕಿ ತಂಡವು  ರಾಜ್ಯ ಮಟ್ಟದ ಹಾಕಿ ಟೂರ್ನಿಯಲ್ಲಿ   ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಆಶ್ರಯದಲ್ಲಿ ಬೆಂಗಳೂರು ನಗರದ ಫೀಲ್ಡ್ ಮಾರ್ಷಲ್ ಕೆ. ಎಂ.ಕಾರ್ಯಪ್ಪ ಹಾಕಿ ಕ್ರೀಡಾಂಗಣದಲ್ಲಿ  ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ  ಹಾಕಿ ಟೂರ್ನಿಯಲ್ಲಿ ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪುರುಷರ ಹಾಕಿ ತಂಡವು  ತಂಡದ ನಾಯಕ ಬಿ.ಟಿ.ಪೂರ್ಣೇಶ್ ನೇತೃತ್ವದಲ್ಲಿ  7-1 ಗೋಲುಗಳಿಂದ  ಮೈಸೂರು ಜಿಲ್ಲಾ ತಂಡವನ್ನು ಮಣಿಸಿ ರಾಷ್ಟ್ರೀಯ ಟೂರ್ನಿಗೆ ಅರ್ಹತೆ ಪಡೆಯಿತು. ಕೊಡಗು ಜಿಲ್ಲಾ ತಂಡದ ಆಟಗಾರರಾದ ಜಾಗೃತ್ -2 , ಬಿ.ಟಿ.ಪೂರ್ಣೇಶ್, ಡಿ.ಸಿ.ಸಂಜಿತ್, ಹರ್ಷಲ್, ಚಂದ್ರಶೇಖರ್ ಹಾಗೂ ಪಿ.ಎಸ್.ಸತೀಶ್ ತಲಾ ಒಂದು ಗೋಲು ಪಡೆದು ಗೆಲುವಿನ ನಗೆ ಬೀರಿದರು.    ಟೂರ್ನಿಯಲ್ಲಿ ಡ್ಯಾನಿ ಈರಪ್ಪ, ಮೌನ್ ಮೊಣ್ಣಪ್ಪ, ಜಿ.ಕೆ.ಮಂಜುನಾಥ್, ಪೂಣಚ್ಚ, ಸುಬ್ಬಯ್ಯ,  ಮಾಚಯ್ಯ, ರತೀಶ್, ಶ್ರೀನಿವಾಸ ರೈ, ದಯಾನಂದ…

Read More

ಮಡಿಕೇರಿ NEWS DESK ಮೇ 27 : ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ ಹಾಗೂ ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಮಡಿಕೇರಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮಹಮದ್ ಇಮ್ರಾನ್, ಎಂ.ಎನ್.ಮುಜೀಬ್, ಮೊಹಮ್ಮದ್ ನಾಸಿರ್ ಹುಸೇನ್, ಸಾಧಿಕ್ ಅಹಮದ್, ಇಮ್ರಾನ್ ಯು, ಸೈಯದ್ ಮಾಸೂಮ್ ಅಲಿ, ಎಂ.ಎಚ್.ಅಬ್ದುಲ್ ಹನೀಫ್, ಅಬ್ದುಲ್ ರಜಾಕ್, ಯೂನುಸ್ ಎಂ.ಎo, ನಝೀರ್ ಅಹ್ಮದ್ ಹಾಗೂ ಸಫಿಯಾ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಮೇ 26 NEWS DESK : ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಅಪಾಯ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಬಾರದ ರೀತಿಯಲ್ಲಿ ನೋಡಿಕೊಳ್ಳಲು ನಿರ್ದೇಶನ ನೀಡಿದರು. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು. ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ…

Read More

ಮಡಿಕೇರಿ ಮೇ 26 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು, ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮರಗೋಡು ಗೌಡ ಸಮಾಜದ ಆವರಣದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡದ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸಿದಲ್ಲಿ ಕನ್ನಡ ಭಾಷೆಯನ್ನೂ ಸಹ ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಮಕ್ಕಳು ಮತ್ತು ಯುವಜನರಿಗೆ ಕಲಿಸುವಂತಾಗಬೇಕು ಎಂದು ಅವರು ನುಡಿದರು. ಅರೆಭಾಷೆಯು ಒಂದು ವಿಶಿಷ್ಟ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಹತ್ತಿರವಾಗಿದೆ. ಆ ದಿಸೆಯಲ್ಲಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಪರಂಪರೆ, ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು. ಬಳಿಕ…

Read More

​ಬೆಂಗಳೂರು ಮೇ 26 NEWS DESK :  “AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ” ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ ಮೂಲಕ ಕರ್ನಾಟಕವನ್ನು AI ತಂತ್ರಜ್ಞಾನದ ಹಬ್ ಮಾತ್ರವಲ್ಲದೆ, ‘AI-ಸಕ್ರಿಯ ಆಡಳಿತ ರಾಜ್ಯ’ವನ್ನಾಗಿ ಮಾಡುವುದು ಸರ್ಕಾರದ ದೂರದೃಷ್ಟಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು. ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದಿಂದ ವತಿಯಿಂದ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾದ “AI CoE (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೆಂಟರ್ ಆಫ್ ಎಕ್ಸಲೆನ್ಸ್) ಅನುಷ್ಠಾನ ಕಾರ್ಯಾಗಾರ” ವನ್ನು ಉದ್ಘಾಟಿಸಿ ಮಾತನಾಡುತ್ತಾ, ಆಡಳಿತದಲ್ಲಿ ಸ್ಕೇಲೆಬಲ್, ಸುರಕ್ಷಿತ ಮತ್ತು ನಾಗರಿಕ-ಕೇಂದ್ರಿತ AI ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಕುರಿತು ಚರ್ಚಿಸಲು ವಿವಿಧ ರಾಜ್ಯಗಳ ಹಿರಿಯ ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು, ಉದ್ಯಮದ ಮುಖಂಡರು, ಶಿಕ್ಷಣ ತಜ್ಞರು, ನವೋದ್ಯಮಗಳು (Startups) ಮತ್ತು ಪರಿಸರ ವ್ಯವಸ್ಥೆಯ…

Read More

ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯು ಪ್ರವಾಸಿಗರಿಗೆ ಸುರಕ್ಷಿತವಾಗಿದ್ದು, ಆತಿಥ್ಯಕ್ಕೆ ಎಂದಿನಂತೆ ಹೆಸರುವಾಸಿಯಾಗಿದೆ.   ವದಂತಿಗಳಿಗೆ ಪ್ರವಾಸಿಗರು ಕಿವಿಗೊಡಬಾರದು ಎಂಬ ಸಂದೇಶವನ್ನು ಪ್ರವಾಸಿಗರಿಗೆ ಮನದಟ್ಟು ಮಾಡುವ  ನಿಟ್ಟಿನಲ್ಲಿ  ನಾಡಿನ ಪ್ರವಾಸೋದ್ಯಮಿಗಳು, ಸಂಘಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಕೂಗ್೯  ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೊಳಂಡ ದಿನೇಶ್ ಕಾಯ೯ಪ್ಪ ಮನವಿ ಮಾಡಿದ್ದಾರೆ. ನಗರದ ವ್ಯಾಲಿವ್ಯೂ  ಹೋಟೇಲ್ ಸಭಾಂಗಣದಲ್ಲಿ  ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್   ವತಿಯಿಂದ ಆಯೋಜಿತ  ಪ್ರವಾಸೋದ್ಯಮ ಸಂಬಂಧಿತ ವಿವಿಧ ಸಂಘಸಂಸ್ಥಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. ಕೆಲವರು ಅನಗತ್ಯವಾಗಿ ಕೊಡಗಿನ ಪ್ರವಾಸೋದ್ಯಮದ ಬಗ್ಗೆ ಇಲ್ಲಸಲ್ಲದ ಟೀಕೆ, ದೂರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿಸುತ್ತಾ ಕೊಡಗಿನ ಆತಿಥ್ಯ ಸಂಸ್ಕೖತಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಆಧಾರ ರಹಿತ ಹೇಳಿಕೆಗಳನ್ನು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡ ಸವ೯ರೂ ಖಂಡಿಸಲೇಬೇಕಾಗಿದೆ ಎಂದು ದಿನೇಶ್ ಹೇಳಿದರು.  ಕಳೆದ ವಷ೯ ಕೊಡಗಿಗೆ 25 ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡಿದ್ದರಾದರೂ 45 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ…

Read More

ಮಡಿಕೇರಿ ಮೇ 26 NEWS DESK : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಮಾತ್ರವಲ್ಲದೇ ತನ್ನ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ವೇದಿಕೆ ನೀಡಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ವಾರ್ಷಿಕೋತ್ಸವ, ಕ್ರೀಡೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂತಹ ಮಹಾನ್ ಕಾಲೇಜನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ಕೆಲಸವನ್ನು ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. :: ವಿದ್ಯಾರ್ಥಿಗಳು ದೇಶದ ಶಕ್ತಿ ::  ಹಿರಿಯ ಪತ್ರಕರ್ತ, ಕೊಡಗು ಚಾನಲ್ ಪ್ರಧಾನ ಸಂಪಾದಕ ಜಿ.ವಿ ರವಿಕುಮಾರ್ ಮಾತಾಡಿ, ವಿದ್ಯಾರ್ಥಿಗಳಿಗೆ ಗುರಿ ಮತ್ತು ಪರಿಶ್ರಮ ಅತೀ ಮುಖ್ಯ. ಸೋಮಾರಿತನ ಬಿಟ್ಟು ಸಮಾಜದ ತಿಳುವಳಿಕೆ ಹೊಂದಬೇಕು.…

Read More

ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಸುಂಟಿಕೊಪ್ಪದ ಎಸ್.ಎಸ್.ಇಂಟರ್‍ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಸಮ್ಮೇಳನದ ವಿವರಗಳನ್ನು ನೀಡುತ್ತಾ, ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಅಬ್ದುಲ್ ರಶೀದ್ ಅವರ ಘನ ಉಪಸ್ಥಿತಿಯಲ್ಲಿ ಎರಡು ದಿನಗಳ ಕಾಲ ಕನ್ನಡ ನುಡಿ ಹಬ್ಬ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆಯೆಂದು ತಿಳಿಸಿದರು. :: ವಿವಿಧ 19 ದ್ವಾರಗಳ ಉದ್ಘಾಟನೆ :: ಆರಂಭಿಕ ದಿನವಾದ ಮೇ 29 ರಂದು ಬೆಳಗ್ಗೆ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಪರಿಷತ್ತಿನ ಧ್ವಜದ ಆರೋಹಣದೊಂದಿಗೆ ಸಮ್ಮೇಳನ ಪ್ರಾರಂಭವಾಗಲಿದೆ. ಇದೇ ಸಂದರ್ಭ ಸುಂಟಿಕೊಪ್ಪ ವ್ಯಾಪ್ತಿಯ 19 ಮಂದಿ ಹಿರಿಯ ಚೇತನಗಳನ್ನು ಸ್ಮರಿಸುವ ದ್ವಾರಗಳನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು. :: ಮೆರವಣಿಗೆ :: ಅಂದು…

Read More

ಮಡಿಕೇರಿ ಮೇ 26 NEWS DESK : ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನಸಾಮಾನ್ಯರನ್ನು ವಂಚಿಸಿರುವುದಾಗಿ ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಟಿ.ಪಿ.ರಮೇಶ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ನಗರಸಭಾ ಕಚೇರಿಯವರೆಗೆ ಕಾಂಗ್ರೆಸ್ ಪ್ರಮುಖರು ಮತ್ತು ಸದಸ್ಯರು ಷೆÉೂೀಷಣೆಗಳ ಸಹಿತ ಪ್ರತಿಭಟನೆ ನಡೆಸಿ, ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆಯ ಮುಂಭಾಗ ಕೆಲ ಕಾಲ ಪ್ರತಿಭಟನೆ ನಡೆದ ಬಳಿಕ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಆಡಳಿತ ಪಕ್ಷದೊಳಗಿನ ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.ಉತ್ತಮ ಆಡಳಿತದ ನಿರೀಕ್ಷೆಯಲ್ಲಿ ಬಹುಮತ ನೀಡಿದ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು  ಆರೋಪಿಸಿದರು. ಮಡಿಕೇರಿ ಕ್ಷೇತ್ರದ ಶಾಸಕರು ಒದಗಿಸಿರುವ ವಿಶೇಷ ಅನುದಾನದಿಂದಷ್ಟೆ…

Read More

ಮಡಿಕೇರಿ ಮೇ 26 NEWS DESK  : ಕುಶಾಲನಗರ ತಾಲೂಕಿನಲ್ಲಿ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. `ನಮ್ಮೂರ ಶಾಲೆ ನಮ್ಮದು ನಮ್ಮೂರಲ್ಲೆ ಉಳಿಯಲಿ’ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಎಐಡಿಎಸ್‍ಓ ನೇತೃತ್ವದಲ್ಲಿ ಚಿಕ್ಕತ್ತೂರು, ಮದಲಾಪುರ ಶಾಲೆಗಳ ಮುಂದೆ ಬ್ಯಾನರ್ ಕಟ್ಟಿ ಶಾಲೆ ಮುಚ್ಚುವ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ, ಸ್ವಾತಂತ್ರ್ಯ ಬಂದು 78  ವರ್ಷ ಕಳೆದರೂ ಸರ್ಕಾರಿ ಶಾಲೆ ಉಳಿಸಿ ಎಂದು ಹೋರಾಟ ಮಾಡುವ ದುಸ್ಥಿತಿ ಬಂದಿದೆ. ಕರ್ನಾಟಕ ಯಾವುದೇ ಪಕ್ಷದ ಶಾಸಕರು ಸರ್ಕಾರಿ ಶಾಲೆ ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿಲ್ಲ. ಸದನದಲ್ಲಿ ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಮಗು ಇರುವ ಶಾಲೆಗಳ ಪಟ್ಟಿಯನ್ನು ಸರ್ಕಾರ ನೀಡಲಿ. ತಾಲೂಕಿನ ಕೆಲ ಗ್ರಾಮಗಳಲ್ಲಿ ಮೋಸದಿಂದ ಸರ್ಕಾರಿ ಶಾಲೆಗಳನ್ನು…

Read More