ಮಡಿಕೇರಿ ನ.17 NEWS DESK : ಶತ ಶತಮಾನಗಳಿಂದ ತಾರತಮ್ಯ, ದೌರ್ಜನ್ಯಕ್ಕೆ ಒಳಗಾಗಿ, ಅಭಿವೃದ್ಧಿಯನ್ನೇ ಕಾಣದಿರುವ ಸಮುದಾಯಗಳಿಗೆ ಇರುವ ಎಸ್ಸಿ ಮತ್ತು ಎಸ್ಟಿ ಪಟ್ಟಿಯಲ್ಲಿ ಬಲಾಢ್ಯ ಸಮುದಾಯಗಳು ಸೇರ್ಪಡೆಗೊಳ್ಳಲು ಮುಂದಾಗುತ್ತಿರುವ ಪ್ರಯತ್ನಗಳು ಅವೈಜ್ಞಾನಿಕ ಮತ್ತು ಅಸಂಬದ್ಧವೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಡಾ.ಎಸ್.ವೈ.ಗುರುಶಾಂತ್ ಅಭಿಪ್ರಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕುರುಬ ಮತ್ತು ಕೊಡವ ಸಮುದಾಯದ ಕೆಲವರು ತಮ್ಮ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರ್ಪಡೆಮಾಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಕೊಡವ ಸಮುದಾಯವನ್ನು ಎಸ್ಟಿ ಪಟ್ಟಿಯೊಂದಿಗೆ ಭೌಗೋಳಿಕ ರಾಜಕೀಯ ಸ್ಥಾನಮಾನವನ್ನು ಮತ್ತು ಸ್ವಾಯತ್ತತೆಯನ್ನು ಕಲ್ಪಿಸಲು ಆಯೋಗ ರಚಿಸುವಂತೆ ಸಿಎನ್ಸಿ ಸಂಘಟನೆ ರಾಜ್ಯ ಉಚ್ಚನ್ಯಾಯಾಲಯದಲ್ಲಿ ಮನವಿಯನ್ನು ಸಲ್ಲಿಸಿದೆಯೆಂದು ಮಾಹಿತಿ ನೀಡಿದರು. ಕೊಡವ ಸಮುದಾಯದ ಈ ಕೋರಿಕೆಯ ಬಗ್ಗೆ ಕೊಡಗಿನ ದಲಿತ, ಆದಿವಾಸಿ ಸಂಘಟನೆಗಳು ಹಾಗೂ ಕೊಡವ ಭಾಷಿಕ ಸಮುದಾಯಗಳು ತಮ್ಮ ಸ್ಪಷ್ಟ ವಿರೋಧವನ್ನು ವ್ಯಕ್ತಪಡಿಸಿವೆ ಮಾತ್ರವಲ್ಲ, ಈ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಆಕ್ಷೇಪವನ್ನು ವ್ಯಕ್ತಪಡಿಸಿರುವುದಾಗಿ ಸ್ಪಷ್ಟಪಡಿಸಿದರು.…
ಲೇಖಕ: admin
ಮಡಿಕೇರಿ ನ.17 NEWS DESK : ಇದೇ ನ.21 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಾಗೂ ನ.22 ರಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಧಿಕಾರಿಗಳು ಅಂಕಿ ಅಂಶಗಳ ಸಹಿತ ನಿಖರ ಮಾಹಿತಿ ಒದಗಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಪೂರ್ವಸಿದ್ಧತೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಈ ಕಾರ್ಯಕ್ರಮಗಳು ಸರ್ಕಾರದ ಮಹತ್ವಾಕಾಂಕ್ಷೆ ಆಗಿದೆ. ಈ ಸಂಬಂಧ ಅಂಕಿ ಅಂಶಗಳ ಸಹಿತ ಮಾಹಿತಿ ಒದಗಿಸಬೇಕು. ಅಂಕಿ ಅಂಶಗಳು ತಾಳೆಯಾಗುವಂತೆ…
ಮಡಿಕೇರಿ ನ.17 NEWS DESK : ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ‘ಕಲಾಜಾಥಾ ಪ್ರಚಾರ ಆಂದೋಲನ’ ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಮತ್ತು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಪ್ರತ್ಯೇಕವಾಗಿ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪಂಚಾಯಿತಿ ಭವನದ ಆವರಣದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಹಾಗೂ ಜಿ.ಪಂ.ಸಿಇಒ ಅವರು ಚಾಲನೆ ನೀಡಿದರು. ಈ ಸಂದರ್ಭ ಗ್ಯಾರಂಟಿ ಯೋಜನೆ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್, ಪಿ.ಆರ್.ಪಂಕಜ, ಸದಸ್ಯರಾದ ಬಿ.ಒ.ಅಣ್ಣಯ್ಯ, ಸುಂದರ, ಕೆ.ಎಂ.ಬಶೀರ್, ಧನ್ಯ, ಕೆ.ಜಿ.ಫೀಟರ್, ಮಂದ್ರಿರ ಮೋಹನ್ ದಾಸ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್,…
ಮಡಿಕೇರಿ ನ.17 NEWS DESK : ಉತ್ತರ ಕನ್ನಡ ಕಿವುಡರ ಸಂಘದ ವತಿಯಿಂದ ನ.20 ಮತ್ತು 21 ರಂದು ನಡೆಯಲಿರುವ 15ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟದಲ್ಲಿ ಕೊಡಗು ತಂಡ ಭಾಗವಹಿಸಲಿದ್ದು, ದಾನಿಗಳು ಸಹಕರಿಸುವಂತೆ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಕನ್ನಡ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘ ಕೊಡಗು ಜಿಲ್ಲೆಯನ್ನು ಪ್ರತಿಧಿಸಲಿದೆ. ಈ ನಿಟ್ಟಿನಲ್ಲಿ ಅನುದಾನದ ಅಗತ್ಯ ಇದ್ದು, ದಾನಿಗಳು ಸಹಕರಿಸುವಂತೆ ಸಂಘದ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಆಸಕ್ತರು ಸಂಘದ ಖಾತೆ ಸಂಖ್ಯೆ AAGAK2464F, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಖಾತೆ ಸಂಖ್ಯೆ : 520101254608758, ಐಎಫ್ಎಸ್ಸಿ : UBIN0900087 ಹಣ ಪಾವತಿಸಬಹುದಾಗಿದೆ.
ಮಡಿಕೇರಿ ನ.17 NEWS DESK : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮ್ಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಗ್ರಾಮ ಪಂಚಾಯತಿಯಲ್ಲಿ ಈಗಾಗಲೇ ಸಭೆ ನಡೆಸಿ ತೀರ್ಮಾನಿಸಿದಂತೆ ಕಾಲೂರು ಗ್ರಾಮಕ್ಕೆ ತಂಬಾಕು ಕೋಶದ ತಂಡ ಭೇಟಿ ನೀಡಿ ಮಹಿಳಾ ಸಂಘದ ಸದಸ್ಯರುಗಳಿಗೆ ಈ ಕುರಿತು ಮಾಹಿತಿ ನೀಡಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಮಾತನಾಡಿ ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಸಾಕಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ಮತ್ತು ದುಷ್ಪರಿಣಾಮಗಳ ಕುರಿತು ವಿವರಣೆ ನೀಡಿದರು. ಮನೆಗಳಿಂದಲೇ ತಂಬಾಕು ಮುಕ್ತಗೊಳಿಸಲು ಮಹಿಳೆಯರು ಮುಂದೆ ಬರುವಂತೆ ತಿಳಿಸಿ, ಮುಂದಿನ ಪೀಳಿಗೆಗಳಿಗೆ ಆರೋಗ್ಯಕರ ವಾತಾವರಣ ಸೃಷ್ಟಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಲಾಯಿತು. ಗ್ರಾಮದಲ್ಲಿ ಎಲ್ಲರ ಸೇರಿ ತಂಬಾಕು ಮಾರಾಟ ಮತ್ತು ಉತ್ಪನ್ನಗಳಿಗೆ ಅವಕಾಶ ನೀಡದೆ ಮಾದರಿ ಗ್ರಾಮವನ್ನಾಗಿಸಲು ಎಲ್ಲರ ಸಹಕಾರ ಕೋರಿದರು. ಜಿಲ್ಲಾ…
ಮಡಿಕೇರಿ ನ.17 NEWS DESK : ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025ರಲ್ಲಿ ನೀಡಿರುವ ನಿರ್ದೇಶನದಂತೆ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ತಕ್ಷಣ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮಡಿಕೇರಿ ನಗರಸಭೆ ಆರೋಗ್ಯ ಶಾಖೆ, ಆರೋಗ್ಯ ನಿರೀಕ್ಷಕರು ಮೊಬೈಲ್ ಸಂಖ್ಯೆ 9900526762 ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡುವಂತೆ ನಗರಸಭೆಯ ಪೌರಾಯುಕ್ತ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ. ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು. ಮಡಿಕೇರಿ ನಗರಸಭೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ…
ಮಡಿಕೇರಿ ನ.17 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 4ನೇ ವರ್ಷದ ಐಪಿಎಲ್ ಮಾದರಿಯ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಂಜಿಗೇರಿ ನಾಡ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಕೊಡವ ನೈಟ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ, ಎಂಟಿಬಿ ರಾಯಲ್ಸ್ ತೃತೀಯ ಮತ್ತು ಕೊಡವ ಬಂಬಂಗ ತಂಡ ನಾಲ್ಕನೇ ಸ್ಥಾನ ಪಡೆದವು. ಪ್ರಥಮ ವಿಜೇತ ತಂಡಕ್ಕೆ ರೂ.2 ಲಕ್ಷ, ದ್ವಿತೀಯ ರೂ.1 ಲಕ್ಷ, ತೃತೀಯ ರೂ.50 ಸಾವಿರ, ನಾಲ್ಕನೇ ವಿಜೇತ ತಂಡಕ್ಕೆ 25 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ಸೇರಿದಂತೆ ವೈಯುಕ್ತಿಕ ಬಹುಮಾನ ನೀಡಲಾಯಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕ್ರೀಡಾ ಜಿಲ್ಲೆ ಕೊಡಗಿನಲ್ಲಿ ಈ ರೀತಿಯ ಕ್ರೀಡಾಕೂಟಗಳು ಹೆಚ್ಚು ಹೆಚ್ಚಾಗಿ ನಡೆಯುತ್ತಿರುವುದು ಶ್ಲಾಘನೀಯ. ಜಿಲ್ಲೆಯ ಕ್ರೀಡಾ ಕ್ಷೇತ್ರದ…
ಮಡಿಕೇರಿ ನ.17 NEWS DESK : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26. ಭಾಗಮಂಡಲ ಶ್ರೀ ಆದಿಚುಂಚನಗಿರಿ ಸಂಸ್ಥಾನ ಆಶ್ರಯದ ಕಾವೇರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಏಳು ಪ್ರಥಮ ಬಹುಮಾನಗಳ ಸಮಗ್ರ ಪ್ರಶಸ್ತಿ ಯೊಂದಿಗೆ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ವಿಜೇತರೊಂದಿಗೆ ಪ್ರಾಂಶುಪಾಲರಾದ ಕೆ.ಜೆ.ದಿವಾಕರ್ ಮತ್ತು ಆಡಳಿತ ಮೇಲ್ವಿಚಾರಣ ಅಧಿಕಾರಿ ಕೀರ್ತಿ ಮತ್ತು ಗುರು ವೃಂದದವರು ಹಾಜರಿದ್ದರು. :: ಪ್ರಥಮ ಸ್ಥಾನ ವಿಜೇತರು :: ಭಾವಗೀತೆ :: ಸುಮಿತ್, ಜನಪದ ಗೀತೆ -ಲಾವಣ್ಯ, ಧಾರ್ಮಿಕ ಪಠಣ ಸಂಸ್ಕೃತ- ಪುನೀತ ಬಿಜೆ, ಧಾರ್ಮಿಕ ಪಠಣ ಅರೇಬಿಕ್- ನಜಾ ಫಾತಿಮಾ, ಕವನ ವಾಚನ- ಫೌಜಾನ, ಚರ್ಚಾ ಸ್ಪರ್ಧೆ -ಲಕ್ಷ್ಮಿ ಹೆಚ್ ಆರ್, ಚಿತ್ರಕಲೆ- ಅಭಿಷೇಕ್. :: ದ್ವಿತೀಯ ಬಹುಮಾನ ವಿಜೇತರು :: ಗಜಲ್- ಮಹಮ್ಮದ್ ಮಿಸ್ಹಬ್. ಆಶುಭಾಷಣ ಅರಸಿ ಡಿಜೆ, ರಸಪ್ರಶ್ನೆ -ಭುವನ ಮತ್ತು ಪುಣ್ಯ ಎಸ್ ಜಿ. ಕವ್ವಾಲಿ- ಮಹಮ್ಮದ್ ಮಿಸ್ಹಬ್ ತಂಡ. ::…
ಪೊನ್ನಂಪೇಟೆ ನ.17 NEWS DESK : ಕ್ರೀಡೆಯಲ್ಲಿ ಸಾಧಿಸಿದ ಸಾಧನೆಗಾಗಿ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ.ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಾಧನೆಗಾಗಿ ಮನೋಜ್ ಅವರನ್ನು ಬಿರ್ಸಾಮುಂಡಾ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸನ್ಮಾನಿಸಲಾಯಿತು. ಹಾಡಿಯಲ್ಲಿ ಹುಟ್ಟಿ ಬೆಳೆದು, ಇದೀಗ ತಿತಿಮತಿಯ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮನೋಜ್ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಯೋಗೇಶ್ ಅವರು ಸರ್ಕಾರದ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಗೋಣಿಕೊಪ್ಪ ನ.17 NEWS DESK : ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆ ಎಫ್ಕೆಸಿಸಿಐ ನೀಡುವ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿಗೆ ಗೋಣಿಕೊಪ್ಪದ ಚೇದಂಡ ಸುಮಿ ಸುಬ್ಬಯ್ಯ ಆಯ್ಕೆಯಾಗಿದ್ದಾರೆ. ನ.19 ರಂದು ಬೆಂಗಳೂರಿನ ಎಫ್ಕೆಸಿಸಿಐ ಆಚರಿಸುವ ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಸುಮಿ ಸುಬ್ಬಯ್ಯ ಅವರು, ಕಳೆದ 40 ವರ್ಷಗಳಿಂದ ವ್ಯಾಪಾರ ಉದ್ಯಮದಲ್ಲಿ ತೊಡಗಿಸಿಕೊಂಡ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸುಮಿ ಸುಬ್ಬಯ್ಯ, ಸಮಾಜಕ್ಕೆ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಪ್ರಭಾವ ಬೀರಿದ್ದಾರೆ.






