ಲೇಖಕ: admin

ಮಡಿಕೇರಿ ನ.17 NEWS DESK : ಬಿಹಾರ ಚುನಾವಣಾ ಹಂತದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನೀಡಿದ ಹೇಳಿಕೆಗೆ ವಿರುದ್ಧವಾಗಿ, ಅವರನ್ನು ಮತ್ತು ಅವರ ಕಟುಂಬದವರನ್ನು ಸಾಮಾಜಿಕ ಜಾಲ ತಾಣದಲ್ಲಿ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಜನಾನುರಾಗಿಯಾಗಿರುವ ಶಾಸಕರನ್ನು ಮುಂದಿನ ದಿನಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಘಟನೆ ಮುಂದುವರಿದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಅವರು ನೀಡಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ ಮಾತನಾಡಿ, ಎಲ್ಲಾ ಸಮುದಾಯವರನ್ನು ಸಮಾನವಾಗಿ ಕಾಣುವ ಮೂಲಕ, ಅವರ ಬೇಡಿಕೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಿಸಿ ನಿಂದಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪರವಂಡ ಸಿರಾಜ್ ಮಾತನಾಡಿ,…

Read More

ಮಡಿಕೇರಿ ನ.16 NEWS DESK : ಮುಲ್ಲೇಂಗಡ ಕೊಡವ ಕುಟುಂಬದ ವತಿಯಿಂದ ಇದೇ ಪ್ರಥಮ ಬಾರಿಗೆ ಕೊಡವ ಕುಟುಂಬಗಳ ನಡುವಣ ‘ಕಬಡ್ಡಿ ನಮ್ಮೆ-2026’, ದಕ್ಷಿಣ ಕೊಡಗಿನ ಕಂಡಂಗಾಲ ಗ್ರಾಮದಲ್ಲಿ ಮುಂದಿನ ಸಾಲಿನ ಏ.2ರಿಂದ 4ರವರೆಗೆ ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿ ಸಂಚಾಲಕರಾದ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡವ ಕುಟುಂಬಗಳ ನಡುವೆ ಆರಂಭಿಕವಾಗಿ ಹಾಕಿ ಪಂದ್ಯಾವಳಿ ಆರಂಭವಾದ ಬಳಿಕ, ಕ್ರಿಕೆಟ್, ಹಗ್ಗಜಗ್ಗಾಟ, ಬೊಡಿ ನಮ್ಮೆ ಆರಂಭಗೊಂಡಿತು. ಇದೀಗ ಮೊದಲ ಪ್ರಯತ್ನವಾಗಿ ಕೊಡವ ಕುಟುಂಬಗಳ ನಡುವಿನ ಕಬಡ್ಡಿ ಪಂದ್ಯಾವಳಿಯನ್ನು ಕಂಡಂಗಾಲದ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗುತ್ತಿದೆಯೆಂದು ಮಾಹಿತಿ ನೀಡಿದರು. 50 ತಂಡಗಳ ನಿರೀಕ್ಷೆ :: ಕೊಡವ ಕುಟುಂಬಗಳ ನಡುವಣ ಕಬಡ್ಡಿ ಪಂದ್ಯಾವಳಿಯಲ್ಲಿ ಸುಮಾರು 50 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿ ‘ಮ್ಯಾಟ್’ನ್ನು ಬಳಸಲಾಗುತ್ತದೆ ಮತ್ತು ಪಂದ್ಯಗಳನ್ನು ನೋಂದಾಯಿತ ಕಬಡ್ಡಿ ತೀರ್ಪುಗಾರರು ನಡೆಸಿಕೊಡಲಿದ್ದಾರೆಂದು ಸ್ಪಷ್ಟಪಡಿಸಿದರು. ಕೊಡವ ಕುಟುಂಬದ ಕಬಡ್ಡಿ ಪಂದ್ಯಾವಳಿಯ ಪ್ರತಿ…

Read More

ಮಡಿಕೇರಿ ನ.17 NEWS DESK : ಕಲೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಹೆಚ್ಚಿಸಬೇಕು ಮತ್ತು ಪರಿಸರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀಸದಾಶಿವ ಸ್ವಾಮಿ ಕರೆ ನೀಡಿದ್ದಾರೆ. ಮಡಿಕೇರಿ ನಗರದ ಮಹದೇವಪೇಟೆಯ ಎಸ್.ಎಸ್ ಆಸ್ಪತ್ರೆ ಮತ್ತು ಆರ್‍ಕೆ ಲ್ಯಾಬ್ ವತಿಯಿಂದ ವಿದ್ಯಾರ್ಥಿಗಳಿಗಾಗಿ 3ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 3 ವಿಭಾಗಗಳಲ್ಲಿ ನಡೆಯಿತು. ಎಎಲ್‍ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆದ ಸ್ಪರ್ಧೆಯ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಸ್ವಾಮೀಜಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಚಟುವಟಿಕೆಗಳಿಂದ ಮಕ್ಕಳಲ್ಲಿ ಕಲೆ ಮತ್ತು ಸಾಹಿತ್ಯದ ಬಗ್ಗೆ ಅಭಿರುಚಿ ಹೆಚ್ಚಾಗುತ್ತದೆ, ಅಲ್ಲದೆ ಪ್ರಕೃತಿಯ ಮೇಲೆ ಪ್ರೀತಿ ಮೂಡುತ್ತದೆ ಎಂದರು. ದಿನದಿಂದ ದಿನಕ್ಕೆ ಪ್ರಕೃತಿಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ, ಅದೇ ರೀತಿ ನಮ್ಮ ಜೀವನ ಶೈಲಿಯೂ ಬದಲಾವಣೆಯಾಗುತ್ತಿದೆ. ಅದು ಸಹಜ ಪ್ರಕ್ರಿಯೆ, ಆದರೆ ಬದಲಾವಣೆಗಳು ಮಾದರಿಯುಕ್ತವಾದಾಗ ಮಾತ್ರ ಒಂದು ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು…

Read More

ಸೋಮವಾರಪೇಟೆ ನ.17 NEWS DESK : ದೆಹಲಿಯಲ್ಲಿ ಬಾಂಬ್ ಸ್ಪೋಟಿಸಿ ಅಮಾಯಕರ ಸಾವಿಗೆ ಕಾರಣರಾದ ಭಯೋತ್ಪಾದಕರ ನಡೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು  ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ್ ಬೋಜೇಗೌಡ ಅವರು, ದೇಶದೊಳಗಿನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದರೊಂದಿಗೆ ಭವಿಷ್ಯದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು. ಭಯೋತ್ಪಾದಕ ಕೃತ್ಯಗಳು ನಡೆದಾಗ ಅದನ್ನು ಸಂಭ್ರಮಿಸುವ ಪಾಕಿಸ್ತಾನಿ ಪ್ರೇರಿತ ಮೂಲಭೂತವಾದಿ ಭಯೋತ್ಪಾದಕರು ದೇಶದೊಳಗೂ ಇದ್ದಾರೆ. ಇವರುಗಳನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ. ಇಲಾಖೆಯೊಂದಿಗೆ ಪ್ರಜ್ಞಾವಂತ ಸಮಾಜ ಕೈಜೋಡಿಸಬೇಕಿದೆ ಎಂದರು. ದೆಹಲಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಅಮಾಯಕರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಈ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕದ ಸುಭಾಷ್ ತಿಮ್ಮಯ್ಯ, ತಾಲೂಕು ಸಂಯೋಜಕ್ ಎಂ.ಬಿ.…

Read More

ನಾಪೋಕ್ಲು ನ.17 NEWS DESK : ಚೆರಿಯ ಪರಂಬುವಿನ ಕಕ್ಕುಂದ ಕಾಡಿನ ಕರಿ ಚಾಮುಂಡಿ ದೇವಾಲಯಕ್ಕೆ ತೆರಳುವ ರಸ್ತೆಯ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಚಾಲನೆ ನೀಡಿದರು. ಶಾಸಕರ 5 ಲಕ್ಷ ರೂ.ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕರ ಕಾಳಜಿಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಡಿಸಿಸಿ ಉಪಾಧ್ಯಕ್ಷ ಎಮ್.ಹೆಚ್ ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯತಿ ಸದಸ್ಯ ಕೆ.ಎ.ಇಸ್ಮಾಯಿಲ್, ಮಾಚೇಟಿರ ಕುಸು ಕುಶಾಲಪ್ಪ, ತಿಮ್ಮಯ್ಯ, ಯುವಕರು ಕಾಂಗ್ರೆಸ್ಸಿನ ಅನುಷ್ಠಾನ ಸಮಿತಿ ಸದಸ್ಯ ಸಿರಾಜ್,  ಎಮ್ ಎಚ್ ಉಭೈದು.  ಟಿ.ಎ.ಇಬ್ರಾಹಿಂ.   ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲ, ಖಜಾಂಚಿ ಸೂರ್ಯಕುಮಾರ್, ಭವಾನಿ, ಆಶಾಲತಾ, ವಸಂತ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ನ.19 NEWS DESK : ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಸಮಾಜ ಸೇವಕ ಹರಪಳ್ಳಿ ರವೀಂದ್ರ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು. ಸೋಮವಾರಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಮಾಜಿ ಸಚಿವ ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಪಕ್ಷದ ನಾಯಕರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Read More

ನಾಪೋಕ್ಲು ನ.17 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಯಿತು. ವಿದ್ಯಾ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಯವ್ವ ಜ್ಞಾಪಕಾರ್ಥ ಆಯೋಜಿಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ.ಜಗತ್ ತ್ತಿಮ್ಮಯ್ಯ ವಹಿಸಿದ್ದರು. ಕಾರ್ಯಕ್ರಮಕ್ಕೆ ಜಿಲ್ಲೆಯ ಒಟ್ಟು 14 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಆರು ತಂಡಗಳು ಅಂತಿಮವಾಗಿ ಆಯ್ಕೆಯಾದರು. ಇದರಲ್ಲಿ ಪ್ರಥಮ ಬಹುಮಾನವನ್ನು ಕಳತ್ಮಾಡು ಲೈನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು, ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ತೃತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಮುಖ್ಯ ಅತಿಥಿಗಳಾಗಿ ಬಹುಮಾನ ಪ್ರಾಯೋಜಕರು ಕುಂಬಳದಾಳು ಗ್ರಾಮಸ್ಥರಾದ ನೇರವಂಡ ಮುತ್ತಪ್ಪ, ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ ಹಾಗೂ ಮೂರ್ನಾಡು ವಿದ್ಯಾ ಸಂಸ್ಥೆಯ ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ ಪುದಿಯೋಕ್ಕಡ ಹರೀಶ್ ದೇವಯ್ಯ ಹಾಜರಿದ್ದರು.…

Read More

ನಾಪೋಕ್ಲು ನ.17 NEWS DESK : ಬೇತು ಗ್ರಾಮದ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪೊರುಕೊಂಡ ರಯಾನ್ ಪೆಮ್ಮಯ್ಯ ರಾಜ್ಯ ಮಟ್ಟದ ಕೊಡಗು ತಂಡದ ಪರವಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ಪ್ರೌಢಶಾಲಾ ಅಂಡರ್-17 ವಯೋಮಿತಿಯ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಪರ ಆಡಿ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಅಂಡರ್ – 17 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇವರು ಹಳೆ ತಾಲೂಕು ನಿವಾಸಿ ಪೊರುಕೊಂಡ ಸುನಿಲ್ ಮತ್ತು ದಮಯಂತಿ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ನ.17 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಸಿತು. ಮಾಜಿ ಸಚಿವ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಪಟ್ಟಣದ ವಿವೇಕಾನಂದ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಜೇಸಿ ವೇದಿಕೆಯಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಗೌಡ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮಾದಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್, ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷೆ ಅನಿತಾ, ತಾಲೂಕು ಅಧ್ಯಕ್ಷೆ ಕವಿತಾ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ತಿತರಿದ್ದರು.

Read More

ಮಡಿಕೇರಿ ನ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕಾನುನು ಸೇವ ಪ್ರಾಧಿಕಾರ, ಶಿಶು ಅಭಿವೃದ್ದಿ ಯೋಜನೆ ಹಾಗೂ ಮಡಿಕೇರಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ವಾತ್ಸಲ್ಯ ಶಿಶು ಪಾಲನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ನ್ಯಾಯಾಧೀಶರು, ಮಕ್ಕಳ ಬಗ್ಗೆ ಪೋಷಕರಿಗೆ ಕಾಳಜಿ ಅಗತ್ಯ, ಇಂದು ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗುತ್ತಿದ್ದಾರೆ. ಮೊಬೈಲ್‌ನಿಂದ ದೂರವಿರುವಂತೆ ಪೋಷಕರು ಎಚ್ಚರ ವಹಿಸಿಬೇಕು. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡುವುದು ಮುಖ್ಯವಾಗಿದೆ. ಶಿಶುಪಾಲನ ಕೇಂದ್ರದ ಸಿಬ್ಬಂದಿಗಳು ಇಲ್ಲಿನ ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ ಅದು ಶ್ಲಾಘನೀಯ ಎಂದರು. ಮಕ್ಕಳ ರಕ್ಷಣಾಧಿಕಾರಿ ಸಚಿನ್ ಸುವರ್ಣ ಮಾತನಾಡಿ, ಮಕ್ಕಳಿಲ್ಲದ ದಂಪತಿಗಳು ಕಾನೂನಾತ್ಮಕವಾಗಿ ಮಗುವನ್ನು ದತ್ತು ಪಡೆಯುವ ಅಧಿಕಾರವಿದೆ. ಒಂದು…

Read More