ಲೇಖಕ: admin

ಕುಶಾಲನಗರ ನ.17 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ “ನಾಳಿನ ರಕ್ಷಕರು – ಶಾಶ್ವತ ಭವಿಷ್ಯಕ್ಕಾಗಿ ಯುವ ಮನಸ್ಸುಗಳ ಪೋಷಣೆ” ಎಂಬ ಪ್ರೇರಣಾ ವಾಕ್ಯದಡಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ -ಬೋಧಕೇತರ ವರ್ಗ, ಶಾಲೆಯ ಅಧಿಕಾರಿ ವೃಂದ ಹಾಗೂ ಕುಟುಂಬ ಸದಸ್ಯರು ಒಂದೇ ವೇದಿಕೆಯಲ್ಲಿ ಸೇರಿ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸುವುದರೊಂದಿಗೆ, ಜವಾಬ್ದಾರಿಯುತ, ಭವಿಷ್ಯೋನ್ಮುಖ ನಾಗರೀಕರನ್ನು ರೂಪಿಸುವ ಶಾಲೆಯ ದೃಷ್ಟಿಕೋನವನ್ನು ಮತ್ತೊಮ್ಮೆ ಸಾಭೀತುಪಡಿಸಿದರು. ಕಾರ್ಯಕ್ರಮವನ್ನು ಶಾಲೆಯ ಕಿರಿಯ ವಿದ್ಯಾರ್ಥಿಗಳಾದ 6ನೇ ತರಗತಿಯ ಕೆಡೆಟ್ ಅನ್ವಿತಾ ಮತ್ತು ಕೆಡೆಟ್ ಪುನೀತ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್‌ ಜೀತ್ ಸಿಂಗ್ ಮಾತನಾಡಿ, ವಿದ್ಯಾರ್ಥಿಗಳು “ಭವಿಷ್ಯದ ರಕ್ಷಕರು” ಎಂದು ನೆನಪಿಸಿದರು. ಶಿಕ್ಷಕರು ಅವರ ಜೀವನಯಾತ್ರೆಯಲ್ಲಿ ಅಲ್ಕೆಮಿಸ್ಟ್‌ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಾರೆ ಎಂದರು. ಕೃತಜ್ಞತೆ, ಮಾರ್ಗದರ್ಶನ ಮತ್ತು ಸಮತೋಲನ ಎಂಬ ತತ್ವಗಳನ್ನು ಅಳವಡಿಸಿಕೊಂಡು ಅರ್ಥಪೂರ್ಣ, ಶಾಶ್ವತ ಮತ್ತು ಯಶಸ್ವಿಯಾದ ಭವಿಷ್ಯವನ್ನು ನಿರ್ಮಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

Read More

ಮಡಿಕೇರಿ ನ.17 NEWS DESK : ಚೇರಂಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 19 ಪ್ರಥಮ ಬಹುಮಾನ, 11 ದ್ವಿತೀಯ ಬಹುಮಾನ ಹಾಗೂ 6 ತೃತೀಯ ಬಹುಮಾನಗಳನ್ನು ಗಳಿಸುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ  ಕಥೆ ಹೇಳುವುದು – ತನ್ವಿತ ರಾಜೇಶ್ ಕೆ, ಧಾರ್ಮಿಕ ಪಠಣ -ತನ್ವಿತ ರಾಜೇಶ್ ಕೆ, ದೇಶಭಕ್ತಿ ಗೀತೆ – ಲಿಪಿ ಆಳ್ವ ಬಿ.ಎ,  ಚಿತ್ರಕಲೆ – ಯೋಗಿತ್ ಪಿ.ವಿ ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ. ಕನ್ನಡ ಕಂಠಪಾಠ – ಅನ್ವಿತ ಸುದೀಪ್ ಕೆ, ಅಭಿನಯಗೀತೆ – ಮೊನಾಲಿ ಎಂ.ಕೆ ದ್ವಿತೀಯ ಬಹುಮಾನ  ಪಡೆದುಕೊಂಡರು. ಛದ್ಮವೇಷ – ಓಶಿನ್ ಮುತ್ತಮ್ಮ ಬಿ.ಎ., ಕ್ಲೇ ಮಾಡೆಲ್ – ಪುನರ್ವಿ ಹೊಸೂರು ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. 5…

Read More

ಸೋಮವಾರಪೇಟೆ ನ.14 NEWS DESK : ಓಣಂ ಎಂದರೆ ಕೇವಲ ಹಬ್ಬವಲ್ಲ ಅದು ಸಮಾನತೆಯ ಸಂಕೇತ, ಪ್ರೀತಿ–ಸೌಹಾರ್ದದ ಪರಂಪರೆ, ಪ್ರಕೃತಿ, ಕೃಷಿ ಮತ್ತು ಮಾನವೀಯ ಮೌಲ್ಯಗಳ ಆಚರಣೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ಸೋಮವಾರಪೇಟೆ ತಾಲ್ಲೂಕು ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಜಾನಕಿ ಕನ್ವೆನಸನ್ ಹಾಲ್‍ನಲ್ಲಿ ನಡೆದ ಓಣಂ ಉತ್ಸವದ ಸಭಾ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ವಿಶೇಷ ಸಂಸ್ಕೃತಿಯನ್ನು ಮಲೆಯಾಳಿ ಸಮುದಾಯವು ಸೋಮವಾರಪೇಟೆಯಲ್ಲಿಯೂ ಹೀಗೇ ಉಳಿಕೊಂಡಿರುವುದು ಶ್ಲಾಘನೀಯ ಎಂದು ಪ್ರಶಂಸೆ ಸಲ್ಲಿಸಿದರು. ಇಂತಹ ಸಾಂಸ್ಕೃತಿಕ ಹಬ್ಬಗಳು ನಾಡಿನ ಒಗ್ಗಟ್ಟು ಹೆಚ್ಚಿಸುತ್ತವೆ. ಮಕ್ಕಳಲ್ಲಿ ಕಲೆ-ಸಂಸ್ಕೃತಿಯ ಅರಿವು ಬೆಳೆಸುತ್ತವೆ. ನಾವು ಸದಾ ಸಮಾಜದ ಒಳ್ಳೆಯ ಕಾರ್ಯಗಳಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಹರಪಳ್ಳಿ ರವೀಂದ್ರ, ಹಿಂದೂ ಮಲೆಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ತಾಲ್ಲೂಕು ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಡಿ.ಪ್ರಕಾಶ್ ಮಾತನಾಡಿದರು. ಸಮಾರಂಭದ ದಿವ್ಯಸಾನಿಧ್ಯವನ್ನು ಸೋಲೂರು ಆರ್ಯ ಈಡಿಗಾ ಮಹಾಸಂಸ್ಥಾನದ…

Read More

ಮಡಿಕೇರಿ ನ.17 NEWS DESK : ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕನ್ರ್ನಂಡ ಕೃತಿಕಾ ಅಕ್ಕಮ್ ಪ್ರಥಮ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಪ್ರಥಮ, 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಂಡ ಶತಕ ದ್ವಿತೀಯ, 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕುಲ್ಲಚಂಡ ಭೂಮಿಕಾ ಭೋಜಮ್ಮ, ಕರ್ನಂಡ ಶತಕ ಕಾವೇರಮ್ಮ, ಕರ್ನಂಡ ಕೃತಿಕಾ ಅಕ್ಕಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ಅಥ್ಲೆಟಿಕ್ ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಶಾಲೆಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದಂತಹ ವಿನೋದ್ ಪಿ. ಎನ್ ಉಪಸ್ಥಿತರಿದ್ದು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದಾರೆ. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕ,…

Read More

ಮಡಿಕೇರಿ ನ.17 NEWS DESK : ನವ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸದರಾದ ಕಪಿಲ್ ಸಿಬಲ್ ರವರ, “ದಿಲ್ ಸೇ ವಿತ್ ಕಪಿಲ್ ಸಿಬಲ್” ಕಾರ್ಯಕ್ರಮದ 100ನೇ ಸಂಚಿಕೆಯ ಸಂಭ್ರಮಾಚರಣೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಗಣ್ಯರೊಂದಿಗೆ ಭಾಗವಹಿಸುವ ಅವಕಾಶ ನನಗೆ ಲಭಿಸಿದ್ದು ನನ್ನ ಭಾಗ್ಯ ಎಂದು ಶಾಸಕ ಪೊನ್ನಣ್ಣ ಅವರು ಹೇಳಿದರು. ಈ ಸಂಚಿಕೆಯ ತಂಡದ ಎಲ್ಲಾ ಸದಸ್ಯರಿಗೆ ಶುಭಾಶಯಗಳು ಕೋರುತ್ತಾ, ಇನ್ನು ಮುಂದೆಯೂ ಸಹ ಮತ್ತಷ್ಟು ಅರ್ಥಪೂರ್ಣ ಹಾಗೂ ಸ್ಪೂರ್ತಿದಾಯಕ ಸಂಚಿಕೆಗಳು ಹೊರಬರುವಂತಾಗಲಿ ಎಂದು ಆಶಿಸಿದರು. ಈ ಸಂದರ್ಭ ಸಚಿವರುಗಳಾದ ಕೆ.ಜೆ ಜಾರ್ಜ್, ಎಚ್.ಸಿ ಮಹದೇವಪ್ಪ, ಬೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ಎಂ.ಸಿ ಸುಧಾಕರ್, ಶಾಸಕರು ಅಶೋಕ್ ಪಟ್ಟಣ್, ಹಾಗೂ ಮತ್ತಿತರರು ಪ್ರಮುಖರು ಭಾಗವಹಿಸಿದ್ದರು.

Read More

ಮಡಿಕೇರಿ ನ.17 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ವಿರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನವೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಗೋಣಿಕೊಪ್ಪ ನ.17 NEWS DESK : ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿಯನ್ನು ತಿತಿಮತಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಆದಿವಾಸಿಗಳು ಮರೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಂಭಾಗದಿಂದ ತಿತಿಮತಿ ಶಾಲೆಯವರೆಗೆ ಮೆರವಣಿಗೆ ನಡೆಸಿ ಬಿರ್ಸಾಮುಂಡಾ ಜಯಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಂತರ ಬುಡಕಟ್ಟು ಸಮುದಾಯದ ಸಂಸ್ಕøತಿಗಳನ್ನ ಅನಾವರಣಗೊಳಿಸಲಾಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಜಾನ್ಸನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತನ್ನ ಸಣ್ಣ ಪ್ರಾಯದಲ್ಲೇ ಬಿರ್ಸಾಮುಂಡಾ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ ಸಮುದಾಯದ ಉಳಿವಿಗಾಗಿ ಶ್ರಮಿಸಿದ ಜೀವಿ. ಆತನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ. ಬ್ರಿಟಿಷರ ಕ್ರೈಸ್ತ ಪಾದ್ರಿಗಳಾಗಿ ಬುಡಕಟ್ಟು ಸಮುದಾಯವನ್ನು ಮತಾಂತರ ಮಾಡುವ ಹುನ್ನಾರದ ವಿರುದ್ದ ಹೋರಾಡಿದ ವೀರ. ಆತನ ನಡೆ ನುಡಿಗಳು ಮತ್ತು ಸಾಹಸ…

Read More

ಸುಂಟಿಕೊಪ್ಪ NEWS DESK ನ.17 : ಸಹಕಾರ ಕ್ಷೇತ್ರದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳ ಆಯ್ಕೆಗೆ ಕೂಡ ಮೀಸಲಾಯಿತಿಯನ್ನು ಅಳವಡಿಸಿದಲ್ಲಿ ಅದು ಸಹಕಾರ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಅಲ್ಲದೆ ಸಹಕಾರಿ ಕ್ಷೇತ್ರ ಕುಂಠಿತಗೊಳ್ಳಲು ಕಾರಣವಾಗುತ್ತದೆ ಎಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ.ಪಿ.ಬಾಂಡ್ ಗಣಪತಿ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ದಿನಾಚರಣೆಯು ಸುಂಟಿಕೊಪ್ಪದ ಮಂಜುನಾಥಯ್ಯ ಸಹಕಾರ ಭವನದಲ್ಲಿ  ಭಾನುವಾರದಂದು ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ ಸಹಕಾರ ಇಲಾಖೆ ಕೊಡಗು ಜಿಲ್ಲೆ ಸುಂಟಿಕೊಪ್ಪ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಮತ್ತು ಸುಂಟಿಕೊಪ್ಪ ಮಹಿಳಾ ಸಹಕಾರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು  ಸಹಕಾರ ಕ್ಷೇತ್ರ ಏಕಸೇವಾ ಕ್ಷೇತ್ರವಾಗಿ…

Read More

ಮಡಿಕೇರಿ NEWS DESK ನ.16 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಅತ್ಯುತ್ತಮ ವಿದ್ಯಾ ಸಂಸ್ಥೆಯಾಗಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಸಾಕಷ್ಟು ಸಾಧಕರನ್ನು ನೀಡಿದೆ. ಈ ಕಾಲೇಜ್ ನ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹಳೇ ವಿದ್ಯಾರ್ಥಿ ಸಂಘ ಆಂದೋಲನದ ರೂಪದಲ್ಲಿ ಶ್ರಮ ವಹಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜ್ ನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಪ್ರಾಕೃತಿಕವಾಗಿ ಅತ್ಯಂತ ಶ್ರೀಮಂತ ಮತ್ತು ಮನೋಹರವಾದ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸೃಜನಶೀಲತೆ ರಕ್ತಗತವಾಗಿ ಬಂದಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಬಹಳ ಹಿಂದಿನಿಂದಲೂ ಅತ್ಯಂತ ಹೆಸರು ಮಾಡಿದ ವಿದ್ಯಾಸಂಸ್ಥೆಯಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಕಾಲೇಜು ಇಂದು ನೋವಿನಲ್ಲಿರುವಾಗ ಕಾಲೇಜ್ ನ ಅಭಿವೃದ್ಧಿಗೆ…

Read More

ಮಡಿಕೇರಿ NEWS DESK ನ.16 : ಬ್ಲೂ ಬ್ಯಾಂಡ್ ಎಫ್‌ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಹಕಾರದೊಂದಿಗೆ ರೋಬಸ್ಟಾ 2025 ರ‍್ಯಾಲಿ ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ ನಡೆಯಿತು. ಕರ್ನಾಟಕ, ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ, ಗೋವಾ, ಪೂನಾ, ಚಂಡೀಗಡ್, ಕಲ್ಕತ್ತಾ ಸೇರಿದಂತೆ ವಿವಿಧ ರಾಜ್ಯಗಳ 58 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನ ಸ್ಪರ್ಧೆ ಟಾಟಾ ಕಾಫಿ ಸಂಸ್ಥೆಯ ಕಾಫಿ ಎಸ್ಟೇಟ್‌ನಲ್ಲಿ ನಡೆಯಿತು. ಕೊಡಗಿನಲ್ಲಿ ಸತತ ಮೂರನೇ ಬಾರಿಗೆ ನಡೆದ ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್‌ನ ಜವಾಬ್ದಾರಿಯನ್ನು ತಿಮ್ಮಣ್ಣ, ಮಾಚಯ್ಯ ಮ್ಯಾಕ್ಸ್, ಸೋಮಣ್ಣ ಮತ್ತಿತರರು ವಹಿಸಿಕೊಂಡಿದ್ದರು. ಮೊದಲನೇ ದಿನದಲ್ಲಿ ಸಂಚರಿಸಿದ 58 ಕಾರುಗಳ ಪೈಕಿ 10ಕ್ಕೊ ಹೆಚ್ಚು ಕಾರುಗಳು ತಾಂತ್ರಿಕ ದೋಷ ಅನುಭವಿಸಿದವು. ಜಿಲ್ಲೆಯ ಸುತ್ತಮುತ್ತಲ ಸಾರ್ವಜನಿಕರು, ಕ್ರೀಡಾಪಟುಗಳು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರ‍್ಯಾಲಿಪಟುಗಳನ್ನು ಹುರಿದುಂಬಿಸಿದರು. ಸವಾಲಿನೊಂದಿಗೆ ಗುರಿ…

Read More