ಮಡಿಕೇರಿ NEWS DESK ನ.16 : ಕಾಳು ಮೆಣಸು ಕಳ್ಳತನದ ಆರೋಪದಡಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿಗೆ ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ. ಕಿಬ್ಬೆಟ್ಟ ಗ್ರಾಮದ ಕೀರ್ತಿ (32) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಸಮೀಪದ ತೋಟವೊಂದಕ್ಕೆ ಹೋದ ಕೀರ್ತಿ ಊರಿನಲ್ಲಿದ್ದ ಪತ್ನಿಗೆ ಲೈವ್ ವಿಡಿಯೋ ಮಾಡಿ ಮನೆಗೆ ಬರುವಂತೆ ಕರೆದಿದ್ದಾನೆ. ಆಕೆ ಬರಲು ಒಪ್ಪದೆ ಇದ್ದಾಗ ಮರದಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಯಡವಾರೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದ್ದ ಕಾಳು ಮೆಣಸು ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಕೀರ್ತಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ನ.16 : ಕುಶಾಲನಗರ ಸಮೀಪದ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅಂತರಾಷ್ಟ್ರೀಯ ಮಟ್ಟದ ಖೋಖೋ ಕ್ರೀಡಾಪಟು ಚೈತ್ರ ಬಿ. ಅವರು ತಮ್ಮ ಕ್ರೀಡಾಕ್ಷೇತ್ರದ ಯಶೋಗಾಥೆಯನ್ನು ವಿವರಿಸಿದರು. ಸಾಧನೆ ಮಾಡುವಾಗ ಎಡರುತೊಡರುಗಳು ಎದುರಾಗುವುದು ಸಹಜ, ಅವುಗಳನ್ನೆಲ್ಲ ಮೀರಿ ಗುರಿ ಸಾಧನೆಯ ಕಡೆಗೆ ಸಾಗಬೇಕು. ವಿದ್ಯಾರ್ಥಿಗಳಲ್ಲಿರುವ ಕ್ರೀಡಾಸಕ್ತಿಯನ್ನು ಶಿಕ್ಷಕರು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಶಿಕ್ಷಣದ ಜೊತೆಗೆ ಕ್ರೀಡೆ ಕೂಡ ಜೀವನದಲ್ಲಿ ಬಹಳ ಮುಖ್ಯವಾಗಿದೆ ಎಂದರು. ಜ್ಞಾನಗಂಗಾ ವಸತಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ಮಾತನಾಡಿ ಆರೋಗ್ಯವೇ ಭಾಗ್ಯ, ಉತ್ತಮ ಆರೋಗ್ಯ ಮತ್ತು ದೈಹಿಕ ಸದೃಢತೆ ನಮ್ಮದಾಗಬೇಕಾದರೆ ಕ್ರೀಡೆ ಅತೀ ಅವಶ್ಯಕ ಎಂದು ಅಭಿಪ್ರಾಯಪಟ್ಟರು. ಪ್ರಸ್ತುತ ದಿನಗಳಲ್ಲಿ ಮಕ್ಕಳು ಟಿವಿ ಮತ್ತು ಮೊಬೈಲ್ ಗಳಲ್ಲಿ ಬರುವ ಆಟಗಳನ್ನು ಹೆಚ್ಚೆಚ್ಚು ಆಡುತ್ತಾರೆ. ಇಂತಹ ಆಟಗಳನ್ನು ಆಡುವುದರಿಂದ ಮಕ್ಕಳ ಮಾನಸಿಕ ಆರೋಗ್ಯ ಕುಗ್ಗುತ್ತದೆ. ಮೈದಾನದಲ್ಲಿ ಆಡುವ ಕ್ರೀಡೆಗಳಿಂದ ದೈಹಿಕ…
ಮಡಿಕೇರಿ NEWS DESK ನ.16 : ಭಾಗಮಂಡಲದ ಜಾನ್ ಡ್ಯಾನ್ಸ್ ಗ್ಯಾಲರಿ ನೃತ್ಯ ತರಬೇತಿ ಸಂಸ್ಥೆ ಮತ್ತು ಚೈನೀಸ್ ಕೆನ್ ಪೊ ಕರಾಟೆ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾಗಮಂಡಲದಲ್ಲಿ ಕನ್ನಡ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಎಸ್ಎಸ್ಎನ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕಿರುಭಾಷಣ ಸ್ಪರ್ಧೆಯಲ್ಲಿ ಜಿತಿಕಾ ಹೆಚ್.ಎಂ, ಸ್ಪರ್ಷ ಹೆಚ್.ಜಿ, ವಿದ್ಯಾ ಎಂ.ಪಿ, ಡಿಂಪಾ ಎಂ.ಡಿ, ಜೆಶಿಕಾ ಪಿ.ಬಿ ಹಾಗೂ ಜನ್ಯ ಬಿ.ಸಿ ಕನ್ನಡ ನಾಡುನುಡಿಯ ಬಗ್ಗೆ ಭಾಷಣವನ್ನು ಪ್ರಸ್ತುತಪಡಿಸಿ ಬಹುಮಾನ ಪಡೆದರು. ಜಾನ್ ಡ್ಯಾನ್ಸ್ ಗ್ಯಾಲರಿ ಸಂಸ್ಥೆಯ ವಿದ್ಯಾರ್ಥಿಗಳು ನೃತ್ಯದ ಮೂಲಕ ಕನ್ನಡ ನಾಡಿನ ವರ್ಣನೆಯನ್ನು ಮಾಡಿದರು. ನೃತ್ಯ ಮತ್ತು ಕರಾಟೆ ತರಬೇತುದಾರರಾದ ಪೃಥ್ವಿ ನಾಯಕ್, ಬೃಂದಾ ಕವನ್, ಇಮ್ಯಾನ್ವುಲ್ ಕೆ.ಜೆ, ರಾಯ್ ಜೋಸೆಫ್ ಹಾಗೂ ನಾಗರಾಜ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶ ನೀಡಿದರು.
ಮಡಿಕೇರಿ NEWS DESK ನ.16 : ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಪ್ರೌಢಶಾಲಾ ಮತ್ತು ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ಗೆದ್ದಿದ್ದಾರೆ. 200 ಮೀ ಓಟದ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಬೊವ್ವೇರಿಯಂಡ ಹನ್ಸಿಕಾ ಪೊನ್ನಪ್ಪ ಚಿನ್ನದ ಪದಕ , 400 ಮೀ ಓಟದ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕರ್ನಂಡ ಕೃತಿಕಾ ಅಕ್ಕಮ್ಮ ಚಿನ್ನದ ಪದಕ,400 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಕರ್ನಂಡ ಶತಕ ಕಾವೇರಮ್ಮ ಬೆಳ್ಳಿ ಪದಕ, 400 ಮೀ ಓಟದ ಸ್ಪರ್ಧೆಯಲ್ಲಿ ನಡುಮನೆ ಮೋಕ್ಷಿತ ಕಂಚಿನ ಪದಕ, 600 ಮೀ ಓಟದ ಸ್ಪರ್ಧೆಯಲ್ಲಿ 7ನೇ ತರಗತಿ ಹಿತಾರ್ಥ ಕಂಚಿನ ಪದಕ, 4×400 ಮೀ ರಿಲೇ ಪಂದ್ಯಾಟದಲ್ಲಿ ಕರ್ನಂಡ ಕೃತಿಕಾ ಅಕ್ಕಮ್ಮ, ಬೊವ್ವೇರಿಯಂಡ ಹನ್ಸಿಕಾ ಪೊನ್ನಪ್ಪ, ಕರ್ನಂಡ ಶತಕ ಕಾವೇರಮ್ಮ, ಕುಲ್ಲಚಂಡ ಭೂಮಿಕ ಬೋಜಮ್ಮ ಒಳಗೊಂಡ ತಂಡ …
ಮಡಿಕೇರಿ NEWS DESK ನ.15 : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ನಾಲ್ಕನೇ ವರ್ಷದ ಐಪಿಎಲ್ ಮಾದರಿಯ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ನ ಎರಡನೇ ದಿನದ ಪಂದ್ಯಾವಳಿ ರೋಚಕವಾಗಿ ನಡೆಯಿತು. *ಫಲಿತಾಂಶ ಇಲ್ಲಿದೆ*
ಮಡಿಕೇರಿ NEWS DESK ನ.15 : ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಬಿಹಾರ ಚುನಾವಣೆಯ ಫಲಿತಾಂಶದ ಕುರಿತು ಪೊನ್ನಣ್ಣ ಅವರು ಮಾಧ್ಯಮಗಳಿಗೆ ನೀಡಿದ್ದ ಅಭಿಪ್ರಾಯಕ್ಕೆ ಪ್ರತಿಯಾಗಿ ಫೇಸ್ ಬುಕ್ ಖಾತೆಯಲ್ಲಿ ಕೆಲವರು ಅವಾಚ್ಯ ಪದಗಳನ್ನು ಬಳಸಿ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಪೊನ್ನಣ್ಣ ಅವರ ಕುಟುಂಬದ ಸದಸ್ಯರನ್ನು ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ಘಟಕ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದೆ. ದೂರು ಸಲ್ಲಿಸಿ ಮಾತನಾಡಿದ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಅವಹೇಳನಕಾರಿ ಶಬ್ಧಗಳನ್ನು ಬಳಸಿ ಶಾಸಕರನ್ನು ತೇಜೋವಧೆ ಮಾಡಿರುವವರನ್ನು ತಕ್ಷಣ ಪೊಲೀಸರು ವಶಕ್ಕೆ ಪಡೆದು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ದೂರು ಸಲ್ಲಿಸುವ ಸಂದರ್ಭ ಶಾಸಕರ ಮಾಧ್ಯಮ ವಿಭಾಗದ ಪೆಮ್ಮಂಡ ವಿನಿಲ್ ಸೋಮಣ್ಣ, ಯುವ ಕಾಂಗ್ರೆಸ್…
ಸುಂಟಿಕೊಪ್ಪ ನ.15 NEWS DESK : ಛಾಚ ನೆರೆಹರು ಅವರು ದೇಶ ಮತ್ತು ಮಕ್ಕಳನ್ನು ಅತೀವಾಗಿ ಪ್ರೀತಿಸಿದಂತೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿಬರಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ರಫೀಕ್ಖಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಫೀಕ್ಖಾನ್ ಅವರು ಛಾಚ ನೆಹರು ಅವರ ಆದರ್ಶ ಗುಣಗಳನ್ನು ವಾಚಿಸಿ ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳು ಶ್ರದ್ಧೆಯಿಂದ ಈಗಿನಿಂದಲೇ ಪಾಠಪ್ರವಚನಗಳತ್ತ ಚಿತ್ತವನ್ನು ಹರಿಸಿ ವ್ಯಾಸಂಗ ಮಾಡುವುದರಿಂದ ಉನ್ನತ ಶಿಕ್ಷಣಗಳಿಗೆ ಅನುಕೂಲರವಾದ ವಾತರಣ ಸೃಷ್ಟಿಯಾಗÀಲಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಗಳನ್ನು ಪಡೆಯುವ ಮೂಲಕ ದೇಶದ ಉನ್ನತ ಹುದ್ದೆಗಳಲ್ಲಿ ಪಡೆದುಕೊಂಡಾಗ ಮಾತ್ರ ಪೋಷಕರ, ಗ್ರಾಮ, ಶಿಕ್ಷಣ ನೀಡಿದ ಶಾಲೆಗಳ ಕೀರ್ತಿಯನ್ನು ಹೆಚ್ಚಿಸ ಬಹುದಾಗಿದೆ ಎಂದು ಅವರು ನುಡಿದರು. ಇದೇ ಸಂದರ್ಭ ಈ ಶಾಲೆಗೆ ಅಗತ್ಯತೆಗಳು ಮನವರಿಕೆಯಾಗಿದ್ದು ಮುಂದಿನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಾಕೂರು ಶಿರಂಗಾಲ ಗ್ರಾಮ…
ಮಡಿಕೇರಿ ನ.15 NEWS DESK : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಸ್ಪರ್ಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಲಾಂಗ್ ಜಂಪ್ ವಿಭಾಗದಲ್ಲಿ ಕೀರ್ತನ ಹೆಚ್.ಆರ್. ದ್ವಿತೀಯ, ಬಾಲಕರ ವಿಭಾಗದ ಲಾಂಗ್ ಜಂಪ್ ನಲ್ಲಿ ಆಶಿಕ್ ಸುನಿಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲೆ ವಿಭಾಗದ ಬಾಲಕಿಯರ 3000 ಮೀಟರ್ ಸ್ಪರ್ಧೆಯಲ್ಲಿ ಜಿ.ಎಂ.ಧನ್ಯ ತೃತಿಯ, ತ್ರಿಪಲ್ ಜಂಪ್ ನಲ್ಲಿ ಪವನ್ ಪೊನ್ನಣ್ಣ ಪ್ರಥಮ ಸ್ಥಾನ ಮತ್ತು ಹುರ್ಡಲ್ ನಲ್ಲಿ ತೃತಿಯ ಸ್ಥಾನ, ಧ್ಯಾನ್.ಡಿ.ಈ. 110 ಮೀಟರ್ ಹುರ್ಡಲ್ ನಲ್ಲಿ ಪ್ರಥಮ ಮತ್ತು 1500 ಮೀಟರ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಪಿ.ಪವನ್ ಸಾಗರ್ ಸಂತೋಷ ವ್ಯಕ್ತಪಡಿಸಿದರು.
ಕಣಿವೆ ನ.15 NEWS DESK : ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಾಮರ್ಥ್ಯ ಅಭಿವೃದ್ಧಿ ಘಟಕದಡಿಯಲ್ಲಿ ಬೆಂಗಳೂರಿನ ಸ್ವಚ್ಛ ಗೃಹ ಕಲಿಕ ಕೇಂದ್ರಕ್ಕೆ ಕುಶಾಲನಗರದ ಪುರಸಭೆಯ ಪೌರ ಕಾರ್ಮಿಕರ ನಿಯೋಗ ಒಂದು ದಿನದ ಅಧ್ಯಯನ ಪ್ರವಾಸ ಕೈಗೊಂಡಿತ್ತು. ಬೆಂಗಳೂರಿನ ಸ್ವಚ್ಛ ಗೃಹ ಕಲಿಕಾ ಕೇಂದ್ರದಲ್ಲಿ ನಡೆಯುತ್ತಿರುವ ದೇವಸ್ಥಾನದ ಕಸವನ್ನು ಹೇಗೆ ಗೊಬ್ಬರವಾಗಿಸಬೇಕು, ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಗೊಬ್ಬರ ಮಾಡುವ ವಿಧಾನಗಳು, ಕಸವನ್ನು ಯಾವ ರೀತಿ ಮನೆಯಲ್ಲಿ ವಿಂಗಡಣೆ ಮಾಡಬೇಕು, ನಾಗರೀಕರೊಂದಿಗೆ ಸಂವಾದ ಹೇಗೆ ನಡೆಸಬೇಕು, ಮನೆಯಲ್ಲಿಯೇ ಕಸವನ್ನು ಬೇರ್ಪಡಿಸಿ ತರಬೇಕೆಂದು ತಿಳಿಸಲಾಯಿತು. ಎರೆಹುಳು ಗೊಬ್ಬರ ತಯಾರಿಸುವ ವಿಧಾನ, ಪೈಪ್ ಕಾಂಪೋಸ್ಟಿಂಗ್, ಮೆಶ್ ಕಾಂಪೋಸ್ಟಿಂಗ್ ಬಗ್ಗೆ ತಿಳಿಸಿ ಕೊಡಲಾಯಿತು. ನಂತರ ಮಹಿಳೆಯರ ಮಾಸಿಕ ರುತುಚಕ್ರದ ಸಂದರ್ಭ ಬಳಸುವ ಪ್ಯಾಡ್ ಗಳ ಬಳಕೆ ಮತ್ತು ಆರೋಗ್ಯಕಾರಿಯಾಗಿ ನಿರ್ವಹಣೆಯ ವಿಧಾನಗಳು, ಗೃಹಬಳಕೆಯ ಅನುಪಯುಕ್ತ ಪ್ಲಾಸ್ಟಿಕ್ ಗಳ ವಿಂಗಡಣೆ, ಮರು ಬಳಕೆ ಮಾಡಬಹುದಾದ ಬಗ್ಗೆ ಸಮಗ್ರವಾಗಿ ಮಾಹಿತಿ ಕೊಡಲಾಯಿತು. ಇದೇ ಸಂದರ್ಭ ಸ್ವಚ್ಛ ಕಲಿಕಾ ಕೇಂದ್ರದ ಸಂಪನ್ಮೂಲ…
ಕುಶಾಲನಗರ ನ.15 NEWS DESK : ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸದೃಢವಾಗುತ್ತಿದೆ. 35 ವರ್ಷಗಳ ಇತಿಹಾಸವಿರುವುದನ್ನು ಮತ್ತಷ್ಟು ಗಟ್ಟಿಗೊಳಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದರು. ಕುಶಾಲನಗರದ ಬಾಪೂಜಿ ಬಡಾವಣೆಯಲ್ಲಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ನೂತನ ಸ್ಥಾನಿಕ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನದ್ಯಂತ ಸುಮಾರು 13 ಕ್ಕಿಂತ ಅಧಿಕ ಸ್ಥಾನಿಯ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಅದರಲ್ಲಿ ಕುಶಾಲನಗರ ಘಟಕದ ಅಧ್ಯಕ್ಷರಾದ ಕೆ.ಎಸ್.ನಾಗೇಶ್ ಅವರ ನೇತೃತ್ವದಲ್ಲಿ ಸಾಕಷ್ಟು ಜನಪೋಯೋಗಿ ಕೆಲಸಗಳನ್ನು ಮಾಡಿ ಜನರ ವಿಶ್ವಾಸಗಳಿಸಿದೆ ಎಂದು ಶ್ಲಾಘಿಸಿದರು. ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಅಭಿಯಾನ, ಕುಶಾಲನಗರ ಹಬ್ಬ 2025 ಎನ್ನುವ ವಿಶಿಷ್ಠ ಗ್ರಾಹಕ ಮೇಳ, ಕಾರ್ಮಿಕ ಇಲಾಖೆಯಿಂದ ನೋಟಿಸ್ ಜಾರಿಯಾಗಿದ್ದನ್ನು ಪ್ರಶ್ನಿಸಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಂಡಿದ್ದು ಹೀಗೆ ಹಲವು ಯಶಸ್ವಿ ಕಾರ್ಯಕ್ರಮಗಳು ನಡೆದಿರುವ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.…






