ಮಡಿಕೇರಿ ನ.15 NEWS DESK : ಕೊಡಗು ವಿದ್ಯಾಲಯದ ಯೂತ್ ಕ್ಲಬ್ ವತಿಯಿದ ಸಾಲು ಮರದ ತಿಮ್ಮಕ್ಕ ಅವರ ಪ್ರೀತಿಯ ಸ್ಮರಣಾರ್ಥವಾಗಿ ನಗರದ ‘ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನ ವನ’ದಲ್ಲಿ ಅರ್ಥಪೂರ್ಣವಾಗಿ ವೃಕ್ಷಾರೋಪಣಾ ಜರುಗಿತು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ, ಆಡಳಿತಾಧಿಕಾರಿ ರವಿ ಪಿ., ಕ್ಲಬ್ ಇನ್ಚಾರ್ಜ್ ಶಿಕ್ಷಕರು, ಹಾಗೂ ಡಿಆರ್ಎಫ್ಒ ಸುನಿಲ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ತಿಮ್ಮಕ್ಕ ಅವರು ಜೀವನಪರ್ಯಂತ ಮರಗಳನ್ನು ನೆಟ್ಟು ಪೋಷಿಸಿದ ಮಹತ್ತರ ಸೇವೆಯನ್ನು ಸ್ಮರಿಸುವುದರೊಂದಿಗೆ , ಪರಿಸರ ಸಂರಕ್ಷಣೆಯ ಜವಾಬ್ದಾರಿ, ಪ್ರಕೖತ್ತಿಯ ಮೌಲ್ಯಗಳನ್ನು ಈ ಕಾರ್ಯಕ್ರಮ ತಿಳಿಸಿತ್ತು. ವಿದ್ಯಾರ್ಥಿಗಳು ಉದ್ಯಾನವನದಲ್ಲಿ ಸಸಿಗಳನ್ನು ಉತ್ಸಾಹದಿಂದ ನೆಟ್ಟರು. ಜೊತೆಗೆ, ಶಾಲಾ ಆವರಣದಲ್ಲೂ ಮತ್ತೊಂದು ಸಸಿಯನ್ನು ಸಾಲು ಮರದ ಮ್ಮಕ್ಕ ಸ್ಮರಣೆಯಲ್ಲಿ ನೆಡುವ ಮೂಲಕ ಹಸಿರು ಮತ್ತು ಆರೋಗ್ಯಕರ ಪರಿಸರ ನಿರ್ಮಾಣದತ್ತ ಸಂಸ್ಥೆಯ ಬದ್ಧತೆಯನ್ನು ಸ್ಪಷ್ಟಪಡಿಸಿದರು. ಜೂ.5 ರಂದು ನೆಡಲಾದ ಸಸಿಗಳ ಸಂರಕ್ಷಣೆಯ ಭಾಗವಾಗಿ, ವಿದ್ಯಾರ್ಥಿಗಳು ಉದ್ಯಾನವನ ವ್ಯಾಪ್ತಿಯನ್ನು ಸ್ವಚ್ಛಗೊಳಿಸಿ ಸಂರಕ್ಷಣೆ ಕೈಗೊಂಡರು.…
ಲೇಖಕ: admin
ಮಡಿಕೇರಿ ನ.15 NEWS DESK : ಕೊಡಗಿನ ಪತ್ರಕರ್ತ ಪ್ರಶಾಂತ್.ಟಿ.ಆರ್ “ವಿರಚಿತ ಬಾಳ ಹಾದಿಯಲಿ ಬೆಳ್ಳಿಚುಕ್ಕಿ” ಕಾದಂಬರಿಗೆ ಯುನೈಟೆಡ್ ಕಿಂಗ್ಡಮ್ನ ಕೊವೆಂಟ್ರಿ ಕನ್ನಡಿಗರು ನೀಡುವ ಪ್ರಶಸ್ತಿಗೆ ಭಾಜನವಾಗಿದೆ. ಇದೇ ತಿಂಗಳು ಕೊವೆಂಟ್ರಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಹಳ್ಳಿಯಲ್ಲಿ ಬೆಳೆದ ಬಡಹುಡುಗ ಪುಟ್ಬಾಲ್ನಲ್ಲಿ ವಿಶ್ವಖ್ಯಾತಿ ಗಳಿಸುವ ಕಥನಾ ಈ ಕಾದಂಬರಿಯ ಕಥಾವಸ್ತವಾಗಿದೆ. ಖ್ಯಾತ ನಟ, ನಿರ್ದೇಶಕ ಅನಿರುದ್ದ್ ಕಾದಂಬರಿಗೆ ಬೆನ್ನುಡಿ ಬರೆದಿದ್ದು, ಬಾಲಿವುಡ್ ನಟ ಭಾಸ್ಕರ್ ಮುನ್ನುಡಿ ಬರೆದಿದ್ದಾರೆ. ಈ ಹಿಂದೆ ಬಾಳ ಹಾದಿಯಲಿ ಬೆಳ್ಳಿಚುಕ್ಕಿ ಕಾದಂಬರಿಗೆ ಇಂಡಿಯನ್ ಐ ಕಾನ್ ಅವಾರ್ಡ್ ಸಂದಿತ್ತು. ಅಲ್ಲದೆ, ಪ್ರಶಾಂತ್ ವಿರಚಿತ ಹೊನ್ನಮ್ಮನ ಕನಸು ಕಾದಂಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಸಂದಿತ್ತು. ಸದ್ಯ ಪ್ರಶಾಂತ್ ರಚಿಸಿರುವ ವಿಲೇಜ್ ಡಾಕ್ಟರ್ ಕಾದಂಬರಿ, ಶಾಂತಿಯ ಸಾಧನೆಯ ಹಾದಿ ಬಯೋಪಿಕ್ ಹಾಗೂ ಮುಳುಗದ ನೌಕೆ ಕಥಾಸಂಕಲನ ಬಿಡುಗಡೆಗೆ ಸಿದ್ದವಾಗಿದೆ. ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಅವರು ಸಾಹಿತ್ಯ ಕೃಷಿಯ ಜತೆಗೆ ಸಿನಿಮಾರಂಗದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಆರ್ಟಿಕಲ್…
ಮಡಿಕೇರಿ ನ.15 NEWS DESK : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಡಿ ಮಡಿಕೇರಿ ತಾಲ್ಲೂಕಿನಲ್ಲಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯನ್ನು ರಚಿಸಲಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಧ್ಯಕ್ಷರಾಗಿರುವ ಸಮಿತಿಯ ಉಪಾಧ್ಯಕ್ಷರಾಗಿ ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ನ.15 NEWS DESK : ವಿದ್ಯಾರ್ಥಿಗಳು ಪ್ರವಾಸದ ಸಂದರ್ಭದಲ್ಲಿ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿ ಅವುಗಳ ಇತಿಹಾಸ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ಪ್ರಾಚ್ಯ ಪ್ರಜ್ಞೆ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ಸ್ಮಾರಕಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಸೋಮವಾರಪೇಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ ಹೇಳಿದರು. ಕರ್ನಾಟಕ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಸೋಮವಾರಪೇಟೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಶನಿವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಪ್ರಾಚ್ಯ ಪ್ರಜ್ಞೆ” ಕುರಿತು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇಂದು ನಾವು ಪ್ರಾಚೀನ ಕಾಲದ ಕಲೆ, ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಾಚ್ಯ ವಸ್ತು ಸ್ಮಾರಕಗಳು, ಸಂಗ್ರಹಾಲಯಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಕರ್ನಾಟಕದ ಪ್ರಾಚೀನ ಸ್ಮಾರಕಗಳ ಉಳಿಸುವಿಕೆಯಲ್ಲಿ ಇರುವ ಸವಾಲುಗಳ ಬಗ್ಗೆ ನಾವು ಜಾಗ್ರತರಾಗುವ…
ಮಡಿಕೇರಿ ನ.15 NEWS DESK : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 20ನೇ ಮಾನವ ಸರಪಳಿ ಕಾರ್ಯಕ್ರಮವನ್ನು ನ.18 ರಂದು ಕುಟ್ಟದಲ್ಲ್ಲಿ ನಡೆಸಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಕುಟ್ಟದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು ಮತ್ತು ಕೊಡವರ ಪರವಾದ ಸಿಎನ್ಸಿಯ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು ಸೇರಿದಂತೆ ಕೊಡವರ…
ವಿರಾಜಪೇಟೆ ನ.15 NEWS DESK : ಕ್ರೀಡಾಕೂಟಗಳಿಂದ ಪರಸ್ಪರ ಸಾಮರಸ್ಯ ಬೆಳೆಯುದರ ಜೊತೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ವ್ಯಕ್ತಿಯು ಸದೃಢರಾಗಲು ಸಾಧ್ಯ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಪಿ.ಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಗೋಣಿಕೊಪ್ಪಲಿನ ಕೂರ್ಗ್ ಪಿ ಯು ಕಾಲೇಜಿನ ಸಹಯೋಗದಲ್ಲಿ ಸಂತ ಅನ್ನಮ್ಮ ಕಾಲೇಜಿನ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾಸಂಸ್ಥೆಗಳ ನಡುವೆ ಜರುಗುವ ಕ್ರೀಡಾಕೂಟಗಳಿಂದ ಪರಸ್ಪರ ಸಹಕಾರ, ಅನ್ಯೋನ್ಯತೆ ಬೆಳೆಯುತ್ತದೆ. ಓದಿನ ಜೊತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಕ್ರೀಡಾಕೂಟಗಳು ಭಾಂದವ್ಯದ ಸಂಕೇತಗಳಾಗಿವೆ ಎಂದರು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಸ್ಫೂರ್ತಿಯನ್ನು ಮೆರೆಯಬೇಕು ಎಂದು ಹೇಳಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಶಿಕ್ಷಣದ…
ಮಡಿಕೇರಿ ನ.15 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನ.23ರಿಂದ 29ರವರೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ ಡೈಮಂಡ್ ಜ್ಯೂಬಿಲಿ ಜಂಬೂರಿ ಹಾಗೂ 19ನೇ ರಾಷ್ಟ್ರೀಯ ಜಂಬೂರಿಗೆ ನಾಪೋಕ್ಲುವಿನ 6 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ನಾಪೋಕ್ಲುವಿನ ಅಂಕೂರ್ ಪಬ್ಲಿಕ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಮಹೇಶ್ ಅವರನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆಯ ಅಧ್ಯಕ್ಷ ಧನಂಜಯ ಎಂ. ಹಾಗೂ ಕಾರ್ಯದರ್ಶಿ ಉಷಾರಾಣಿ ಕೆ.ಬಿ ಅವರು ಅಭಿನಂದಿಸಿದರು. ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಅಂಕೂರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ರತ್ನ ಚರ್ಮಣ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ನ.15 NEWS DESK : ಪ್ರಸಕ್ತ 2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೂಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ರೂ 25000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲ್ಲೂಕಿನ 5 ರೈತರಿಗೆ ತಲಾ ರೂ10000/-ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವ್ಯೆಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ ಇತ್ಯಾದಿ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಮತ್ತಿತರ…
ಮಡಿಕೇರಿ ನ.15 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ…
ಮಡಿಕೇರಿ ನ.15 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಟ್ಟಕಡೆಯ ಗ್ರಾಮವಾದ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ ಕಡಮಕಲ್ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮದ ಸಂಕ್ಷಿಪ್ತ ವರದಿಯನ್ನು ವಾರದ ಒಳಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಅರಣ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸೇರಿ ಕಡಮಕಲ್ ನಿವಾಸಿಗಳೊಂದಿಗೆ ಕುಂದುಕೊರತೆ ಸಭೆ ನಡೆಸಿ ಜನರಿಂದ ಮಾಹಿತಿ ಪಡೆದ ಶಾಸಕರು ಮನೆ ಮತ್ತು ಜಮೀನಿನ ದಾಖಲೆಗಳು, ಕುಡಿಯುವ ನೀರು ಸರಬರಾಜು, ಟ್ಯಾಂಕ್ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಉನ್ನತೀಕರಣ, ರಸ್ತೆ ನಿರ್ಮಾಣ,ಅರಣ್ಯ ಇಲಾಖೆ ಮತ್ತು ಗ್ರಾಮದ ಗಡಿ ಗೊಂದಲಗಳ ನಿವಾರಣೆ ಹಾಗೂ ಪಡಿತರ ವಿತರಣೆಯ ಬಗ್ಗೆ ಚರ್ಚೆ ಮಾಡಿ ನಿಯಮಾನುಸಾರ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಡಾ.ಮಂತರ್ ಗೌಡ ನಿರ್ದೇಶನ ನೀಡಿದರು. ಇದೇ ಪ್ರಪ್ರಥಮ ಬಾರಿಗೆ ಶಾಸಕರೊಬ್ಬರು ತಮ್ಮ ಬಳಿ ಅಧಿಕಾರಿಗಳೊಂದಿಗೆ ಬಂದು ಕುಂದು ಕೊರತೆ ನಿವಾರಣೆ ಸಭೆ…






