ಕುಶಾಲನಗರ ನ.15 NEWS DESK : ಕುಶಾಲನಗರದ ರಥಬೀದಿಯಲ್ಲಿ ನಡೆಯುವ ರಂಗೋಲಿ ಸ್ಪರ್ಧೆಗೆ ತನ್ನದೇ ಆದ ವಿಶೇಷ ಆಕರ್ಷಣೆಯಿದೆ. ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ನ.23 ರಂದು ರಂಗೋಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು ಮನವಿ ಮಾಡಿದೆ. ಮೊದಲು ಬಂದ 70 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಕಸಾಪ ದ ಅಧ್ಯಕ್ಷ ಕೆ.ಎಸ್.ನಾಗೇಶ್ 9986073949 ಅವರಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ. ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ 6000, ದ್ವಿತೀಯ, 4000, ತೃತೀಯ 2000 ಮತ್ತು ಆಕರ್ಷಕ ಪಾರಿತೋಷಕಗಳನ್ನು ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.
ಲೇಖಕ: admin
ಕುಶಾಲನಗರ ನ.15 NEWS DESK : ಮಕ್ಕಳಿಗೆ ಸೃಜನಶೀಲ ಚಟುವಟಿಕೆಗಳೊಂದಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ನವೀನ ವಿಧಾನಗಳನ್ನು ಪರಿಚಯಿಸಿ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೋಷಕರ ಮತ್ತು ಉಪನ್ಯಾಸಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರೊಂದಿಗೆ ಪೋಷಕರ ಜವಬ್ದಾರಿ ತುಂಬ ಮಹತ್ವದಾಗಿದೆ. ಮಕ್ಕಳು ಮೊಬೈಲ್ ಗೀಳು ಬೆಳೆಸಿಕೊಳ್ಳದಂತೆ ಎಚ್ಚರಿಕೆ ವಹಿಸಿ, ಮೊಬೈಲ್ ನಮ್ಮ ಬದುಕು ಎಂಬ ವ್ಯಸನ ಆಗಬಾರದು. ಈ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಬೇಕು. ಸೃಜನಶೀಲ ಚಟುವಟಿಕೆಗಳಿಗೆ ಪ್ರೇರಣೆ ನೀಡಬೇಕು. ಅವರಲ್ಲಿರುವ ಸೂಪ್ತ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಿಕೊಡಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಮಾತನಾಡಿ,ಸರ್ಕಾರಿ ಶಾಲೆ ಓದಿದ ಬಹುತೇಕ ಮಂದಿ ಸಮಾಜದಲ್ಲಿ ಉನ್ನತ…
ಮಡಿಕೇರಿ ನ.15 NEWS DESK : ನಮ್ಮ ಇತಿಹಾಸ ನೋಡಿದಾಗ ಕೇವಲ ಪರಕೀಯರ ದಾಳಿ ಅವರ ಆಳ್ವಿಕೆಯನ್ನು ವೈಭವೀಕರಿಸಿ ಹೇಳಲಾಗಿದೆ ಹೊರತು ಸ್ಥಳೀಯ ವೀರರ ಕುರಿತು ಮಾಹಿತಿ ನೀಡಲಾಗುತಿಲ್ಲ ಎಂದು ವನವಾಸಿ ಕಲ್ಯಾಣ, ಕರ್ನಾಟಕ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಮತ್ತು ವಿರಾಜಪೇಟೆ ಕಾವೇರಿ ಕಾಲೇಜು ಜಂಟಿ ಆಶ್ರಯದಲ್ಲಿ ನಡೆದ ಅಬ್ಬಕ್ಕ@500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ- ಎಸಳು 91 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶದ ಮೇಲೆ ದಾಳಿ ನಡೆಸಿ ಆಕ್ರಮಣ ಮಾಡಿಕೊಂಡು ಆಡಳಿತವನ್ನು ನಡೆಸಿದ ಮೊಘಲರಿಂದ ಹಿಡಿದು ಬ್ರಿಟಿಷರವರೆಗಿನ ಎಲ್ಲಾ ಇತಿಹಾಸವನ್ನು ನಾವು ತಿಳಿದುಕೊಳ್ಳುತ್ತೇವೆ. ಇದಕ್ಕೆ ಕಾರಣ ಬ್ರಿಟಿಷರು ಶೈಕ್ಷಣಿಕವಾಗಿ ದೈಹಿಕ ಮತ್ತು ಮಾನಸಿಕ ಗುಲಾಮರನ್ನಾಗಿ ಮಾಡಿಕೊಂಡದ್ದು, ಆದರೆ ಸ್ಥಳೀಯವಾಗಿ ಹೋರಾಟವನ್ನು ನಡೆಸಿದ ವೀರರ ಮೇಲೆ ನಮ್ಮ ಇತಿಹಾಸ ಹೆಚ್ಚಾಗಿ ಬೆಳಕು ಚೆಲ್ಲುತ್ತಿಲ್ಲ. ಶಿವಾಜಿ, ಅಬ್ಬಕ್ಕ , ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ಮಹನೀಯರು ನಮ್ಮ…
ವಿರಾಜಪೇಟೆ ನ.15 NEWS DESK : ಅರಮೇರಿಯ ಎಸ್ಎಂಎಸ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಡಿತ್ ಜವಾಹರ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪ್ರಾಂಶುಪಾಲೆ ಬಲ್ಲಚಂಡ ಕುಸುಮ್ ಟಿಟೋ ಪುಷ್ಪ ನಮನ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ವಿದ್ಯಾರ್ಥಿಗಳಿಗೆ ಮೈಂಡ್ ಅಂಡ್ ಮ್ಯಾಟರ್ಸ್ ಸಂಸ್ಥೆಯ ವತಿಯಿಂದ ಮಾನಸಿಕ ಆರೋಗ್ಯದ ಕುರಿತಾಗಿ ಕಾರ್ಯಾಗಾರವನ್ನು ನಡೆಸಲಾಯಿತು. ಇನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ಶಿಕ್ಷಕಿ ಹೇಮಾವತಿ ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಗೈಡ್ ಕ್ಯಾಪ್ಟನ್ ಮೈಥಿಲಿ ರಾವ್, ಶಿಕ್ಷಕರುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ ನ.15 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಿತಿಮತಿ ಪಿ ಎಂ ಶ್ರೀ ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆಗೂಡಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೊಡುವುದು ಮತ್ತು ಹಂಚಿಕೊಳ್ಳುವ ಕಲೆಯ ಮಹತ್ವವನ್ನು ತಿಳಿಸಿಕೊಡಲಾಯಿತು. ಪಿ ಎಂ ಶ್ರೀ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಆಡಳಿತ ಮಂಡಳಿಯ ವತಿಯಿಂದ ನರ್ಸರಿ, ಎಲ್ ಕೆ ಜಿ ,ಯುಕೆಜಿ, ಮಕ್ಕಳಿಗೆ ಬರೆಯಲು ಅನುಕೂಲವಾಗುವಂತಹ ವಸ್ತುಗಳನ್ನು ಜೊತೆಗೆ ಶಾಲೆಗೆ ಜಮಖಾನೆ, ಡಿಕ್ಷನರಿ ಇತ್ಯಾದಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್, ಮಕ್ಕಳ ದಿನಾಚರಣೆಯನ್ನು ಪರಸ್ಪರ ಎರಡು ಶಾಲೆಯ ಮಕ್ಕಳು ಜತೆಗೂಡಿ ಸಂಭ್ರಮದಿಂದ ಆಚರಿಸಿದ್ದೇವೆ. ಮಕ್ಕಳಲ್ಲಿ ಪರಸ್ಪರ ಸ್ನೇಹ, ಸಹಕಾರ, ಭ್ರಾತೃತ್ವ ಭಾವನೆ ಮೂಡಿದಾಗ ಮಾತ್ರ ಮೌಲ್ಯಯುತ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರು. ಮಕ್ಕಳಿಗೆ…
ಗೋಣಿಕೊಪ್ಪ ನ.15 NEWS DESK : ಶಿಕ್ಷಣ ಕ್ಷೇತ್ರದ ಸಾಧನೆಗೆ ಕರುನಾಡ ರತ್ನ ಪ್ರಶಸ್ತಿಯನ್ನು ಹರಿಶ್ಚಂದ್ರಪುರ ಅಂಗನವಾಡಿ ಶಿಕ್ಷಕಿ ಲತಾ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕರ್ನಾಟಕ ಸಾಂಸ್ಕøತಿಕ ಅಕಾಡೆಮಿ, ಈ ಪ್ರಶಸ್ತಿಯನ್ನು ನೀಡುತ್ತಿದೆ. ಬೆಂಗಳೂರಿನ ಕಲಾಗ್ರಾಮ ವೇದಿಕೆಯಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ ನ.15 NEWS DESK : ವಿದ್ಯಾರ್ಥಿಗಳು ಪ್ರತಿಭೆಯನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳುವುದು ಒಂದು ಆಶಯವಾಗಿದೆ ಎಂದು ವೈದ್ಯಕೀಯ ಸಮುದಾಯ ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕøತಿಕ, ಕ್ರೀಡಾ ಮತ್ತು ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಿ ಎಂದು ಹಾರೈಸಿದರು ಹಾಗೂ ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳುವುದು ಮುಖ್ಯ ಎಂದು ಹೇಳಿದರು. ಮಾದಾಪುರ, ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸಿ. ಜಿ ಮಂದಪ್ಪ, ಅವರು ಮಾತನಾಡಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವದ ವಿಕಾಸವನ್ನು ಬೆಳೆಸಿಕೊಳ್ಳುವುದು ಮಹತ್ವವಾಗಿದೆ. ಬಡತನ ಎಂಬುದು ಶಿಕ್ಷಣಕ್ಕೆ ಎಂದಿಗೂ ಅಡ್ಡಿಯಾಗಬಾರದು ಹಾಗೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ದೇಶಕ್ಕೆ ಕೊಡುಗೆ ನೀಡಿ ಎಂದು ಹೇಳಿದರು. 2025 ನೇ ಸಾಲಿನ ಗೌರಮ್ಮ ದತ್ತಿನಿಧಿ ಪ್ರಶಸ್ತಿ ವಿಜೇತರು…
ಮಡಿಕೇರಿ ನ.15 NEWS DESK : ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಿಕೆ, ರಬ್ಬರ್, ಗೇರು ಜೊತೆಗೆ ಕಾಫಿ…
ಮಡಿಕೇರಿ NEWS DESK ನ.14 : ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಕುಡಿಯ ಸಮೂಹ ವಾಸವಿರುವ ಎರಡು ಕಾಲೋನಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಇಲ್ಲಿನ ನಿವಾಸಿಗಳು ನಗರದ ಪತ್ರಿಕಾ ಭವನದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೆಟ್ಟತ್ತೂರು ಗ್ರಾಮದ ಕೊಯಿನಾಲ್ಮಲೆ ಅರಣ್ಯ ಪ್ರದೇಶದ ಕಾಲೋನಿಗಳಿಗೆ ಇಂದಿಗೂ ವಿದ್ಯುತ್ ಸಂಪರ್ಕವಿಲ್ಲ. ಈ ಬಗ್ಗೆ ನೂರಾರು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ, ಪರಿಹಾರ ಮಾತ್ರ ದೊರಕಿಲ್ಲ. ಕಾಲೋನಿಗಳಿಗೆ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ‘ಅರಣ್ಯ ಇಲಾಖೆ’ಯೆ ಅಡ್ಡಿಯಾಗಿದೆಯೆಂದು ಅಲ್ಲಿನ ನಿವಾಸಿ ಕೆ.ಎ.ಸೋಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ನೋವನ್ನು ತೋಡಿಕೊಂಡರು. ಈ ಹಿಂದಿನ ಸರಕಾರದ ಅವಧಿಯಲ್ಲಿ ಬೆಟ್ಟತ್ತೂರಿನ ಈ ಕಾಲೋನಿಗಳ ಬಳಿಯ ಸಮುದಾಯ ಭವನಕ್ಕೆ ವಿದ್ಯುತ್ ಸೌಲಭ್ಯವನ್ನು ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ಒದಗಿಸಲಾಗಿದೆ. ಹೀಗಿದ್ದೂ ಅಲ್ಲೇ ಸಮೀಪದ ಮನೆಗಳು ಇಂದಿಗೂ ಕಗ್ಗತ್ತಲೆಯಲ್ಲೇ ಉಳಿದು ಬಿಟ್ಟಿವೆ. ಕಾಲೋನಿ ನಿವಾಸಿ ಕೆ.ಎ.ಸೋಮಯ್ಯ ಹೇಳುವಂತೆ, ಕಳೆದ ಚುನಾವಣೆಯ ಸಂದರ್ಭ ಕಾಲೋನಿಗೆ ವಿದ್ಯುತ್ ಒದಗಿಸುವುದಾಗಿ ಸುಮಾರು ಎಂಭತ್ತು ವಿದ್ಯುತ್ ಕಂಬಗಳನ್ನು ತಂದು ಹಾಕಲಾಗಿತ್ತು. ಚುನಾವಣೆ ಕಳೆದ…
ಗೋಣಿಕೊಪ್ಪ ನ.14 NEWS DESK : ಭಾರತದ ಮೊದಲ ಪ್ರಧಾನಿ ನೆಹರು ಅವರ ಜನ್ಮ ದಿನವನ್ನು ಗೋಣಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಂಭ್ರಮವಾಗಿಸಿದರು. ಶಾರದ ಪೂಜೆ ನೆರವೇರಿಸುವ ಮೂಲಕ ವಿದ್ಯೆಗಾಗಿ ಪ್ರಾರ್ಥಿಸಿದ ವಿದ್ಯಾರ್ಥಿಗಳು, ನಂತರ ಶಾಲೆಯಲ್ಲಿ ಆಯೋಜಿಸಿದ ಜಾದು ಪ್ರದರ್ಶನವನ್ನು ಕಣ್ತುಂಬಿ ಕೊಂಡು ನೆಹರು ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯಾಗಿ ಅರ್ಥಪೂರ್ಣಗೊಳಿಸಿದರು. ನಂತರ ಪೆÇೀಷಕರ ಮಹಾಸಭೆ ಶಾಲೆಯ ಮೇಲುಸ್ತುವರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಭಾಗವಹಿಸಿದರು, ಈ ಸಂದರ್ಭ ಮಾತನಾಡಿದ ಅವರು, ಚಾಚಾ ನೆಹರು ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ಬಹು ಹೆಮ್ಮೆಯ ವಿಚಾರ. ಸರ್ಕಾರಿ ಶಾಲೆಯಲ್ಲಿ ಓದಿದ ಬಹುತೇಕ ವಿದ್ಯಾರ್ಥಿಗಳು, ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಂತಹ ಸ್ಪೂರ್ತಿದಾಯಕ ನಡೆಗಳನ್ನು ಉತ್ತೇಜಿಸಿ, ಮಕ್ಕಳು ದೇಶಕ್ಕಾಗಿ ಸೇವಿ ಸಲ್ಲಿಸುವಂತ, ದೇಶಭಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸಿ ಓದಿನ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.…






