ಲೇಖಕ: admin

ಬೆಂಗಳೂರು ನ.14 NEWS DESK : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ…

Read More

ವಿರಾಜಪೇಟೆ ನ.14 NEWS DESK : ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗದೆ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತಿದ್ದು, ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ, ವಿರಾಜಪೇಟೆ ವರ್ತಕರ ಸಂಘ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿತು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ, ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಪ್ರತಿಯೊಬ್ಬರೂ ಕೂಡ ನಾನಾ ರೀತಿಯಲ್ಲಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಮನೆಯಲ್ಲಿ ಇರತಕ್ಕಂತಹ ಯಾವುದೇ ವಿದ್ಯುತ್ ಚಾಲಿತ ಯಂತ್ರಗಳನ್ನು ಕೂಡ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಕುಡಿಯುವ ನೀರಿನಿಂದ ಪ್ರಾರಂಭಿಸಿ ಪ್ರತಿಯೊಂದು ತುಂಬಾ ತೊಂದರೆ ಉಂಟಾಗುತ್ತಿರುವುದೇ ಅಲ್ಲದೆ ಶಾಲಾ-ಕಾಲೇಜು ಮಕ್ಕಳು, ವರ್ತಕರು ವಯೋವೃದ್ಧರು, ಹೆಚ್ಚಿನ ಮಟ್ಟಿನ ವರ್ತಕರು, ವೆಲ್ಡಿಂಗ್, ಲೇತ್, ಸರ್ವಿಸ್ ಸೆಂಟರ್ ಎಂಟಪ್ರ್ರೈಸಸ್‍ಗಳು, ಮಾಂಸದ ಅಂಗಡಿಗಳು ಹಾಗೂ ಇತರೆ ಮಳಿಗೆಯಲ್ಲಿ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗದೆ ಆರ್ಥಿಕವಾಗಿ ಹಿನ್ನಡೆಯಲ್ಲಿದ್ದಾರೆ. ಇದರಿಂದಾಗಿ ಎಲ್ಲರೂ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಆದುದರಿಂದ ತಾವುಗಳು ಆದಷ್ಟು ಬೇಗ ವಿರಾಜಪೇಟೆಯಲ್ಲಿ ಸೂಕ್ತ ರೀತಿಯಲ್ಲಿ ವಿದ್ಯುತ್ ಪೂರೈಕೆ ಮಾಡಿಕೊಡಬೇಕು. ಇದಕ್ಕೆ ಸ್ಪಂದಿಸದೆ…

Read More

ಮಡಿಕೇರಿ ನ.14 NEWS DESK : ದೇಶದ ಏಕತಾ ಪುರುಷ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ‘ಏಕತಾ ನಡಿಗೆ’ ಪೆÇನ್ನಂಪೇಟೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಬಸ್ ನಿಲ್ದಾಣದಿಂದ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರದವರೆಗೆ ಯದುವೀರ್ ಒಡೆಯರ್ ಅವರ ಮುಂದಾಳತ್ವದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಸಾಗಿ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಸಮಾವೇಶಗೊಂಡರು. ಸಭಾ ಕಾರ್ಯಕ್ರಮಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಅನೇಕ ಒಪ್ಪಂದಗಳ ಮೂಲಕ ಭಾರತದ ಏಕತೆಗಾಗಿ ಕೊನೆ ಉಸಿರಿನವರೆಗೂ ಶ್ರಮಿಸಿದ್ದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಭಾರತ ಸದೃಢ…

Read More

ಮಡಿಕೇರಿ NEWS DESK ನ.13 : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಚೆಂಬು ಗ್ರಾಮದ ಮನೆಯೊಂದರಿಂದ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಭದ್ರಾವತಿಯ ಸಿದ್ದಾಪುರ ಗ್ರಾಮದ ಎನ್.ಸಿದ್ದಲಿಂಗ(28) ಹಾಗೂ ಎನ್.ರಘು(26) ಎಂಬುವವರೇ ಬಂಧಿತರಾಗಿದ್ದು, ಆರೋಪಿಗಳಿಂದ 8.50 ಲಕ್ಷ ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ನ.5ರಂದು ಸಂಪಾಜೆ ಸಮೀಪದ ಎಂ.ಚೆಂಬು ಗ್ರಾಮದ ವೀರಪ್ಪ.ಪಿ.ಪಿ. ಎಂಬವರು ಮನೆಯಲ್ಲಿ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಕ್ಯಾಶ್ ಲಾಕರ್‌ನಲ್ಲಿದ್ದ 15 ಸಾವಿರ ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮತ್ತು ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಕುಶಾಲನಗರ ನ.13 NEWS DESK : ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ( ಎಂಪ್ರಿ- ಎನ್ವಿರಾನ್ ಮೆಂಟಲ್ ಮೇನೇಜ್ ಮೆಂಟ್ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ) ವತಿಯಿಂದ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಮೈಸೂರು ಹಾಗೂ ಕೊಡಗು ಜಿಲ್ಲಾ ಸ್ಥಳೀಯ ನಗರ ಸಂಸ್ಥೆಗಳ ಪರಿಸರ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರಿಗೆ ಪೌರಾಡಳಿತ ನಿರ್ದೇಶನಾಲಯದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ “ಚಕ್ರೀಯ ಆರ್ಥಿಕತೆ” (ಸರ್ಕ್ಯುಲರ್ ಎಕಾನಮಿ”) – ಘನತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಚಾಲನೆ ನೀಡಿ ನಮ್ಮ ಕಸ – ನಮ್ಮ ಹೊಣೆ : ಹಾಗೂ ಸ್ವಚ್ಛ ಪರಿಸರ ನಿರ್ಮಾಣ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ ಪರಿಸರ ಪ್ರಶಸ್ತಿ ಪುರಸ್ಕೃತರಾದ ಟಿ.ಜಿ.ಪ್ರೇಮಕುಮಾರ್, ಉತ್ತಮ ಪರಿಸರ ನಿರ್ಮಾಣಕ್ಕೆ ನಾವು ನಮ್ಮಿಂದ ದಿನನಿತ್ಯ ಉತ್ಪತ್ತಿಯಾಗುವ ಕಸವನ್ನು ವಿಂಗಡಿಸಿ ಸೂಕ್ತವಾಗಿ ವಿಲೇವಾರಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. “ನಮ್ಮ ಕಸ- ನಮ್ಮ ಹೊಣೆ” ಎಂಬ…

Read More

ಮಡಿಕೇರಿ ನ.13 NEWS DESK : ಮಿಸ್ಟರ್ ಇಂಡಿಯಾ ಯೂನಿವರ್ಸ್ 2025 ಪ್ರಶಸ್ತಿಗೆ ಭಾಜನರಾದ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದ ಕರಿನೆರವಂಡ ಬಿಶನ್ ಮಾದಪ್ಪ ಅವರನ್ನು ಗೋಣಿಕೊಪ್ಪದಲ್ಲಿ ನಡೆದ ಏಕತಾ ಯಾತ್ರೆ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪರಿಮಳ ಸಭಾಂಗಣದಲ್ಲಿ ನಡೆದ ಏಕತಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಬಿಶನ್ ಮಾದಪ್ಪ ಅವರನ್ನು ಬಿಜೆಪಿ ವತಿಯಿಂದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಸನ್ಮಾನಿಸಿದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ, ಮಾಜಿ ಸದಸ್ಯ ಚೋಟು ಬಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು. ಇದೇ ಅ.6 ರಿಂದ 13 ರವರೆಗೆ ರಾಜಸ್ಥಾನದ ಝೀ ಸ್ಟುಡಿಯೋ ಜೈಪುರದಲ್ಲಿ ನಡೆದ ಸ್ಪರ್ಧೆಯಲ್ಲಿ ಬಿಶನ್ ಮಾದಪ್ಪ ಅವರು ಮಿಸ್ಟರ್ ಇಂಡಿಯಾ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದರು.

Read More

ಸುಂಟಿಕೊಪ್ಪ,ನ. 13 NEWS DESK : ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ನೀರು ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಬುಧವಾರ ಮಡಿಕೇರಿ ನಗರದ ಜ್ಯೂನಿಯರ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹೆಬ್ಬೆಟ್ಟಗೇರಿ ಗ್ರಾಮ ನಿವಾಸಿ ಪಾಂಡೀರ ಪೂವಯ್ಯ ಎಂಬುವವರ ಪುತ್ರ ಚಂಗಪ್ಪ (17) ಹಾಗೂ ಕಾಲೂರು ಗ್ರಾಮದ ನಿವಾಸಿ ಚನ್ನಪಂಡ ತಮ್ಮಯ್ಯ ಎಂಬುವವರ ಪುತ್ರ ತರುಣ್ ತಿಮ್ಮಯ್ಯ(17) ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ದುಬಾರೆ ರ್ಯಾಫ್ಟರ್‍ಗಳು ಮೃತ ದೇಹಗಳಿಗಾಗಿ ಶೋಧ ಕಾರ್ಯ ನಡೆಸಿ, ಚಂಗಪ್ಪ ಮೃತ ದೇಹ ಹೊರ ತೆಗೆದಿದ್ದರು. ಇಂದು ಕಾಲೂರು ಗ್ರಾಮದ ನಿವಾಸಿ ಚನ್ನಪಂಡ ತಮ್ಮಯ್ಯ ಎಂಬುವವರ ಪುತ್ರ ತರುಣ್ ತಿಮ್ಮಯ್ಯ(17) ಮೃತ ದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸಿಬ್ಬಂದಿ, ಅಗ್ನಿ ಶಾಮಕ ದಳದವರು ಸತತವಾಗಿ ಕಾರ್ಯಚರಣೆ ನಡೆಸುವ ಮೂಲಕ ಮೃತದೇಹಗಳನ್ನು ಹಾರಂಗಿ ಹಿನ್ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ…

Read More

ಮಡಿಕೇರಿ ನ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಡೆಯಿತು. ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಡಿ.ಆರ್. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳು ಶಾಲಾ ಕಾಲೇಜುಗಳಲ್ಲಿ ನಡೆಸುವ ಸಾಂಸ್ಕøತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರೊಂದಿಗೆ ತಮ್ಮ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಕಲೆಗಳನ್ನು ಬೆಳಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 9-16 ವರ್ಷದ ಮಕ್ಕಳು ವಿವಿಧ ಸ್ಫರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ,ಬಹುಮಾನ ವಿತರಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮಕ್ಕಳನ್ನು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕ್ಕೂ…

Read More

ಮಡಿಕೇರಿ ನ.13 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26ರಂದು ಮಡಿಕೇರಿಯ ಹೊರವಲಯದಲ್ಲಿರುವ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ “ಭಾರತೀಯ ಸಂವಿಧಾನ ದಿನ”ದೊಂದಿಗೆ 35ನೇ “ಕೊಡವ ನ್ಯಾಷನಲ್ ಡೇ” ಆಚರಿಸಲಾಗುತ್ತದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಆದಿಮಸಂಜಾತ ಏಕ ಜನಾಂಗೀಯ ಅನಿಮಿಸ್ಟಿಕ್ ಕೊಡವರ ಆಕಾಂಕ್ಷೆಗಳನ್ನು ಸಾಧಿಸುವತ್ತ ಶಾಂತಿಯುತ ಹೋರಾಟಗಳನ್ನು ಅವಿರತವಾಗಿ ನಡೆಸಿಕೊಂಡು ಬಂದಿರುವ ಸಿಎನ್‍ಸಿ ಸಂಘಟನೆ, “ಕೊಡವ ನ್ಯಾಷನಲ್ ಡೇ”ಯಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ಆದಿಮಸಂಜಾತ ಹಕ್ಕುಗಳ ಅಡಿಯಲ್ಲಿ ಕೊಡವರಿಗೆ ವಿಶ್ವಸಂಸ್ಥೆಯ ಮಾನ್ಯತೆ, ಎಸ್‍ಟಿ ವರ್ಗೀಕರಣ, ಕೊಡವ ಧಾರ್ಮಿಕ ಸಂಸ್ಕಾರ-ಗನ್-ತೋಕ್‍ಗೆ ಸಾಂವಿಧಾನಿಕ ಖಾತ್ರಿಗಳು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು, ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿ ಗುರುತಿಸಬೇಕು, ಜೀವಜಲ ಕಾವೇರಿ…

Read More

ಸೋಮವಾರಪೇಟೆ ನ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಲಾಯಿತು. ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರದ ಡಾ.ಅನನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿನಿತ್ಯದಲ್ಲಿ ನಮ್ಮ ಜೀವನದಲ್ಲಿ ಸುಲಭವಾಗಿ ಅಳವಡಿಸಿಕೊಳ್ಳಬುಹುದಾದ ಪ್ರಾಣಾಯಾಮ, ಯೋಗಾಸನ, ಸರಳ ಆಹಾರ ಪದ್ಧತಿಗಳ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಯಥೇಚ್ಚವಾಗಿ ಜನರಲ್ಲಿ ಕಾಣಿಸಿಕೊಳ್ಳುವ ಹೃದ್ರೋಗ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ಸುಲಭವಾದ ವ್ಯಾಯಾಮಗಳನ್ನು ಮಾಡುವುದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹದು ಎಂಬ ಬಗ್ಗೆ ಕೆಲವು ಸುಲಭ ಆಸನಗಳನ್ನು ಹೇಳಿಕೊಡುವುದರ ಮೂಲಕ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಜನ ಜಾಗೃತಿ ಸ್ಥಾಪಕ ಅದ್ಯಕ್ಷರಾದ ಅಭಿಮನ್ಯಕುಮಾರ್‌ ಉದ್ಘಾಟಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಜಿ.ಮೇದಪ್ಪ, ನಿವೃತ್ತ ಶಿಕ್ಷಕರಾದ ಮಾಚಯ್ಯ, ತಾಲೂಕು ಯೋಜನಾಧಿಕಾರಿ…

Read More