ಮಡಿಕೇರಿ NEWS DESK ಫೆ.14 : ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮಡಿಕೇರಿಗೆ ಭೇಟಿ ನೀಡಿದರು. ಮಡಿಕೇರಿ ಸಮೀಪದ ಕರ್ಣಂಗೇರಿಗೆ ಖಾಸಗಿ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ಅವರನ್ನು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳು ಸ್ವಾಗತಿಸಿದರು.
ಲೇಖಕ: admin
ಮಡಿಕೇರಿ NEWS DESK ಫೆ.14 : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾ.25, 26 ಮತ್ತು 27ರಂದು ಮಡಿಕೇರಿ ನಗರದಲ್ಲಿ ಶ್ರೀ ರಾಮನವಮಿ ಪ್ರಯುಕ್ತ 36ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು “ಸರ್ವೇಜನಾ: ಸುಖಿನೋಭವಂತು” ಆದರ್ಶದಡಿ ಸರ್ವ ಸಮುದಾಯಗಳು ಒಗ್ಗೂಡಿ ಮೂರು ದಿನಗಳ ರಾಮೋತ್ಸವ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿಂದ ಯಶಸ್ವಿಗೊಳಿಸುವುದಾಗಿ ತಿಳಿಸಿದರು. ಕಳೆದ ವರ್ಷ ಶ್ರೀರಾಮನ ಆದರ್ಶಗಳನ್ನು ಪಾಲನೆ ಮಾಡುತ್ತಾ ಸಾವಿರಾರು ಭಕ್ತರು ರಾಮೋತ್ಸವವನ್ನು ಸಂಭ್ರಮಿಸಿದ್ದಾರೆ, ನಗರದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಈ ಬಾರಿ ಕೂಡ ದಾನಿಗಳು ಸೇರಿದಂತೆ ಸರ್ವರ ಸಹಕಾರದಿಂದ ರಾಮೋತ್ಸವ ಸಡಗರದಿಂದ ನಡೆಯಲಿದ್ದು, ಸುಮಾರು 30ಲಕ್ಷ ರೂ. ಖರ್ಚಾಗಲಿದೆ ಎಂದರು. ಮಾ.25 ರಂದು ಸಂಜೆ 6 ಗಂಟೆಗೆ ನಗರದಲ್ಲಿ ಶ್ರೀರಾಮನ ಪಲ್ಲಕ್ಕಿ ಮತ್ತು ಕಳಸದೊಂದಿಗೆ ಭಕ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಶ್ರೀಕೋದಂಡರಾಮ ದೇವಾಲಯದಲ್ಲಿ ರಾತ್ರಿ ಭಕ್ತರಿಗೆ…
ಬೆಂಗಳೂರು: ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಗಾಯನ ಲೋಕದ ಹೊಸ ಹೊಸ ನಕ್ಷತ್ರಗಳನ್ನು ಪರಿಚಯಿಸಿದ ಹೆಗ್ಗಳಿಕೆ ‘ಸರಿಗಮಪ’ ಕಾರ್ಯಕ್ರಮದ್ದು. ಈಗ ಜೀ ಕನ್ನಡ ವಾಹಿನಿಯು ಮಕ್ಕಳಿಗಾಗಿ **’ಸರಿಗಮಪ ಲಿಟಲ್ ಚಾಂಪ್ಸ್’**ನ ಹೊಸ ಆವೃತ್ತಿಯನ್ನು ಹೊತ್ತು ತರುತ್ತಿದೆ. ಸದ್ಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಪ್ರಸಾರವಾಗುತ್ತಿದ್ದು, ಅದು ಮುಗಿದ ತಕ್ಷಣ ಈ ಗಾಯನ ಹಬ್ಬಕ್ಕೆ ಚಾಲನೆ ಸಿಗಲಿದೆ. ಆಡಿಷನ್ನಲ್ಲಿ ಯಾರು ಭಾಗವಹಿಸಬಹುದು? ವಯೋಮಿತಿ: 3 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಅವಕಾಶ. ಸಿದ್ಧತೆ: ಸ್ಪರ್ಧಿಗಳು 3 ವಿಭಿನ್ನ ಶೈಲಿಯ ಹಾಡುಗಳನ್ನು ಕಲಿಯುವುದು ಕಡ್ಡಾಯ. ನಿಯಮ: ಆಡಿಷನ್ ವೇಳೆ ಯಾವುದೇ ರೀತಿಯ ಕರೋಕೆ (Karaoke) ಬಳಸುವಂತಿಲ್ಲ. ದಿನಾಂಕ ಮತ್ತು ಸ್ಥಳಗಳ ವಿವರ: ಫೆಬ್ರವರಿ 14 ರಿಂದ ಫೆಬ್ರವರಿ 25 ರವರೆಗೆ ರಾಜ್ಯದಾದ್ಯಂತ ಸರಣಿ ಆಡಿಷನ್ಗಳು ನಡೆಯಲಿವೆ: ದಿನಾಂಕ ಜಿಲ್ಲೆಗಳು ಫೆ. 14 (ಇಂದು) ಕೊಪ್ಪಳ, ಶಿವಮೊಗ್ಗ, ತುಮಕೂರು ಫೆ. 15 (ಭಾನುವಾರ) ಬಳ್ಳಾರಿ, ಉಡುಪಿ, ಬೆಂಗಳೂರು ಫೆ. 16 (ಸೋಮವಾರ) ರಾಯಚೂರು, ಮಂಗಳೂರು ಫೆ. 17 (ಮಂಗಳವಾರ)…
ಕೊಲಂಬೊ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ20 ವಿಶ್ವಕಪ್ ಪಂದ್ಯಕ್ಕೆ ಈಗ ಮಳೆಯ ಭೀತಿ ಎದುರಾಗಿದೆ. ಫೆಬ್ರವರಿ 15 ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಹವಾಮಾನ ವೈಪರೀತ್ಯ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ವರದಿ ಮತ್ತು ಆತಂಕ: ನೈಸರ್ಗಿಕ ಅಪಾಯಗಳ ಆರಂಭಿಕ ಎಚ್ಚರಿಕೆ ಕೇಂದ್ರದ ವರದಿಯ ಪ್ರಕಾರ, ಫೆಬ್ರವರಿ 15 ಮತ್ತು 16ರಂದು ಶ್ರೀಲಂಕಾದಲ್ಲಿ ಹವಾಮಾನ ಹದಗೆಡುವ ಸಾಧ್ಯತೆಯಿದೆ. ಅಕ್ಯುವೆದರ್ (AccuWeather) ಮುನ್ಸೂಚನೆಯಂತೆ: ಪಂದ್ಯದ ದಿನದಂದು ಸುಮಾರು 4 ಗಂಟೆಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಶೇ 26 ರಷ್ಟಿದೆ. ಈ ಅನಿಶ್ಚಿತತೆಯು ಈಗಾಗಲೇ ಮೈದಾನಕ್ಕೆ ಆಗಮಿಸಿರುವ ಪ್ರೇಕ್ಷಕರು ಮತ್ತು ಪಂದ್ಯದ ಸಂಘಟಕರಲ್ಲಿ ಆತಂಕ ಮೂಡಿಸಿದೆ. ವಿವಾದಗಳ ನಡುವೆ ಪಂದ್ಯಕ್ಕೆ ಒಪ್ಪಿದ್ದ ಪಾಕಿಸ್ತಾನ: ಈ ಪಂದ್ಯದ ಆಯೋಜನೆ ಸುಲಭವಾಗಿರಲಿಲ್ಲ. ಭದ್ರತಾ ಕಾರಣಗಳಿಂದಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿ ಟೂರ್ನಿಯಿಂದ ಹಿಂದೆ ಸರಿದಿದ್ದ ಬಾಂಗ್ಲಾದೇಶಕ್ಕೆ ಬೆಂಬಲ…
ನವದೆಹಲಿ/ಬೆಂಗಳೂರು: ದೇಶ ಸೇವೆ ಮಾಡುವ ಹಂಬಲವಿರುವ ಯುವಕರಿಗೆ ಭಾರತೀಯ ವಾಯುಪಡೆಯು (Indian Air Force) ಸುವರ್ಣಾವಕಾಶ ನೀಡಿದೆ. ‘ಅಗ್ನಿವೀರ್ ವಾಯು ನಾನ್-ಕಾಂಬ್ಯಾಟೆಂಟ್’ (Agneevir Vayu Non-Combatant) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 23, 2026. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ವಾಯುಪಡೆ ಸ್ಪಷ್ಟಪಡಿಸಿದೆ. ಅರ್ಜಿ ಸಲ್ಲಿಸುವ ವಿಧಾನ (ಆಫ್ಲೈನ್): ಈ ನೇಮಕಾತಿ ಪ್ರಕ್ರಿಯೆಯು ಇತರ ನೇಮಕಾತಿಗಳಿಗಿಂತ ಭಿನ್ನವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ: ಫಾರ್ಮ್ ಭರ್ತಿ: ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಸರಿಯಾಗಿ ಭರ್ತಿ ಮಾಡಬೇಕು. ಅಂಚೆ ಮೂಲಕ ಸಲ್ಲಿಕೆ: ಭರ್ತಿ ಮಾಡಿದ ಅರ್ಜಿಯನ್ನು ಸಾಮಾನ್ಯ ಅಂಚೆ (Ordinary Post) ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ನಿಗದಿತ ವಿಳಾಸಕ್ಕೆ ಕಳುಹಿಸಬೇಕು. ಡ್ರಾಪ್ ಬಾಕ್ಸ್ ಸೌಲಭ್ಯ: ಆನ್ಲೈನ್ನಲ್ಲಿ ಮಾಹಿತಿ ಲಭ್ಯವಿದ್ದರೂ,…
ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರವು ‘ತಾತ್ವಿಕ ಒಪ್ಪಿಗೆ’ ನೀಡಿದೆ. ಆದರೆ, ಈ ಬಾರಿ ಪಂದ್ಯ ವೀಕ್ಷಣೆಗೆ ಕಟ್ಟುನಿಟ್ಟಿನ ನಿಯಮಗಳು ಮತ್ತು ಸುರಕ್ಷತಾ ಷರತ್ತುಗಳನ್ನು ವಿಧಿಸಲಾಗಿದೆ. ಘಟನೆಯ ಹಿನ್ನೆಲೆ ಮತ್ತು ಕುನ್ಹಾ ಆಯೋಗದ ವರದಿ: ಕಳೆದ ವರ್ಷ (2025 ಜೂನ್ 4) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ನಡೆದ ವಿಜಯೋತ್ಸವದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವು ಭದ್ರತಾ ಲೋಪಗಳ ಬಗ್ಗೆ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರ ಪ್ರಮುಖ ಹೇಳಿಕೆಗಳು: ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ…
ಚೆನ್ನೈ/ಬೆಂಗಳೂರು: ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಮಾದರಿಯಲ್ಲೇ, ಈಗ ನೆರೆಯ ತಮಿಳುನಾಡಿನಲ್ಲಿಯೂ ಉಚಿತ ಯೋಜನೆಗಳ ಸುರಿಮಳೆಯಾಗುತ್ತಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಐಎಡಿಎಂಕೆ (AIADMK) ಮತ್ತು ಬಿಜೆಪಿ ಮೈತ್ರಿಕೂಟವು ಮತದಾರರನ್ನು ಸೆಳೆಯಲು ಅತ್ಯಂತ ಆಕರ್ಷಕ ಭರವಸೆಗಳನ್ನು ನೀಡಿದೆ. ಪುರುಷರಿಗೂ ಸಿಗಲಿದೆ ಉಚಿತ ಬಸ್ ಸೇವೆ! ಕರ್ನಾಟಕದಲ್ಲಿ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣದ (ಶಕ್ತಿ ಯೋಜನೆ) ಸೌಲಭ್ಯವಿದೆ. ಆದರೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮಹಿಳೆಯರ ಜೊತೆಗೆ ಪುರುಷರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದಾಗಿ ಮುಖ್ಯಮಂತ್ರಿ ಅಭ್ಯರ್ಥಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಘೋಷಿಸಿದ್ದಾರೆ. ಈ ಮೂಲಕ ಸಾರಿಗೆ ಇಲಾಖೆಯಲ್ಲಿ ಹೊಸ ಕ್ರಾಂತಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ಮಹಿಳೆಯರಿಗೆ ವಾರ್ಷಿಕ 25,000 ರೂಪಾಯಿ ಗಿಫ್ಟ್! ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರು ತಿಂಗಳಿಗೆ 2,000 ರೂಪಾಯಿ ಪಡೆಯುತ್ತಿದ್ದಾರೆ. ಆದರೆ ತಮಿಳುನಾಡಿನಲ್ಲಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ 25,000 ರೂಪಾಯಿ…
ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಆರಂಭವಾಗಲಿರುವ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಶುಲ್ಕವಿಲ್ಲದೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಹಾಲ್ ಟಿಕೆಟ್ ತೋರಿಸಿದರೆ ಸಾಕು! ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಹಣ ನೀಡಿ ಟಿಕೆಟ್ ಖರೀದಿಸುವ ಅಗತ್ಯವಿಲ್ಲ. ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು (Hall Ticket) ತೋರಿಸುವ ಮೂಲಕ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಪ್ರವೇಶ ಪತ್ರವನ್ನೇ ‘ಬಸ್ ಪಾಸ್’ ಎಂದು ಪರಿಗಣಿಸುವಂತೆ ನಿಗಮವು ಎಲ್ಲಾ ಚಾಲಕರು ಮತ್ತು ನಿರ್ವಾಹಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಮುಖ ಮುಖ್ಯಾಂಶಗಳು: ಅವಧಿ: ಪರೀಕ್ಷೆಗಳು ನಡೆಯುವ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ. ಯಾರಿಗೆ ಅನ್ವಯ?: ಪರೀಕ್ಷೆ ಬರೆಯಲು ಹೋಗುವಾಗ ಮತ್ತು ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಎಲ್ಲಿ ನಿಲ್ಲಿಸಬೇಕು?:…
ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಚಾಲನೆ ನೀಡಿದರು. ಕಾಟಕೇರಿ ಬಳಿಯ ಕಾಸ್ಪಾಡಿ ರಸ್ತೆ, ಭಗವತಿ ದೇವಸ್ಥಾನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ, ಅಪ್ಪೇಂದ್ರೀಯಪ್ಪ ದೇವಸ್ಥಾನ ರಸ್ತೆ ಉದ್ಘಾಟನೆ, ಕಾಟಕೇರಿ ಗೋಳಿಕಟ್ಟೆ ಮುಖ್ಯ ರಸ್ತೆ, ಮದೆನಾಡು ಬೈರೆಟ್ಟಿರ ಜಂಕ್ಷನ್ ರಸ್ತೆ ಮತ್ತು ಮದೆನಾಡು ಮಠದ ಮನೆ ರಸ್ತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಉದ್ಘಾಟಿಸಿದರು. ಬಳಿಕ ಗೋಳಿಕಟ್ಟೆ ಸರ್ಕಾರಿ ಶಾಲೆ ಪರಿಶೀಲಿಸಿದರು, ಕೋಲ್ಪೆ ದೈವಸ್ಥಾನ ರಸ್ತೆ ಉದ್ಘಾಟಿಸಿದರು. ಹಾಗೆಯೇ ದೇಶ್ಕೋಡಿ, ಸಾಲಾಪು ರಸ್ತೆ ಭೂಮಿ ಪೂಜೆ ನೆರವೇರಿಸಿದರು. ನಂತರ ಕೋಲ್ಚಾರು ರಸ್ತೆ ಉದ್ಘಾಟನೆ, ಕೆಮ್ಮಾರನ ಶಿರಾಜ್ ರಸ್ತೆ ಉದ್ಘಾಟಿಸಿದರು. ಬಳಿಕ ನೆರಿಯನ ಐನ್ಮನೆಗೆ ಭೇಟಿ ನೀಡಿದರು, ಹಾಗೆಯೇ ಈಶ್ವರಪ್ಪ ಮಾದೂರಪ್ಪ ರಸ್ತೆ ಉದ್ಘಾಟಿಸಿದರು. ಜೋಡುಪಾಲ ಕಿರಿಕಿಲ್ ರಸ್ತೆ ಭೂಮಿಪೂಜೆ, ಅಬ್ಬಿಕೊಲ್ಲಿ ರಸ್ತೆ ಉದ್ಘಾಟಿಸಿದರು. ಕುಡಿಯರ ಕಾಲೋನಿಯಲ್ಲಿ…
ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು* ಇದೇ ಮಾರ್ಚ್ 2 ರ ಸೋಮವಾರ ವಿಜ್ರಂಭಣೆಯಿಂದ ನಡೆಯಲಿದೆ ಎಂದು ತಕ್ಕಮುಖ್ಯಸ್ಥ ರು ಹಾಗು ಭಕ್ತಜನ ಸಂಘದ ಪಧಾಧಿಕಾರಿಗಳು ತಿಳಿಸಿದ್ದಾರೆ. *ದೇವಕಟ್ಟು* ಈ ಪ್ರಯುಕ್ತ ಇದೇ ಫೆಬ್ರವರಿ 17 ರಂದು ಮಂಗಳವಾರ ಅಮಾವಾಸ್ಯೆಯ ದಿನದಂದು ಅಪರಾಹ್ನ ಆದಿಸ್ಥಾನ “ಮಲ್ಮ” ದಲ್ಲಿ ಸಂಪ್ರದಾಯದಂತೆ ದೇವರ ಕಟ್ಟುಬೀಳಲಿದೆ.(ನಾಲ್ಕು ನಾಡಿಗೆ ಸೀಮಿತ). ಹಾಗಾಗಿ ಹಬ್ಬ ಸಂಪನ್ನವಾಗುವತನಕ ಯಾವುದೇ ತುಲಾಭಾರ ಸೇವೆ , ನಾಮಕರಣ, ವಿಶೇಷ ಪೂಜೆಗಳು ನಡೆಯುವದಿಲ್ಲ . ಮಾರ್ಚ್ 2ರ ಸೋಮವಾರ ಬೆಳಿಗ್ಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರು ಹಾಗು ಬಟ್ಯತ್ ವಕ್ಕ ಪೇರಿಯಂಡ ಕುಟುಂಬಸ್ತರ ಹಾಗೂ ಸಂಭಂದಪಟ್ಟ ಇತರ ಕುಟುಂಬಸ್ಥರ ಐನ್ಮನೆಗಳಿಂದ ಜೋಡೆತ್ತು ಪೋರಾಟ,ಪಾಲ್ ಬೈಯ್ಯಾಡ್ ನೊಂದಿಗೆ ಶಾಸ್ತ್ರೋಕ್ತ ವಾಗಿ ಬಂದು ದೇವಳ ತಲುಪುವುದರೊಂದಿಗೆ ಕಲಾಡ್ಚ ಹಬ್ಬ ಪ್ರಾರಂಭವಾಗುವುದು. ಮದ್ಯಾಹ್ನ ನಿತ್ಯ ಪೂಜೆಯೊಂದಿಗೆ ಪ್ರಸಾದವಿತರಣೆ ಹಾಗು ಅನ್ನ ಸಂತರ್ಪಣೆ ನೆರವೇರಲಿದೆ. ನಂತರ ಚಂಡೆ…






