ಮಡಿಕೇರಿ ಜು.2 NEWS DESK : ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದ್ದು, ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪ್ರಮುಖರು ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಶಾಸ್ತ್ರಿ, ಹಲವಾರು ವರ್ಷಗಳಿಂದ ರಸ ಗೊಬ್ಬರ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಸಬ್ಸಿಡಿ ವ್ಯಾಪ್ತಿಗೆ ಒಳಪಡುವ ರಸ ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಮಾತ್ರವಲ್ಲದೇ ಗೊಬ್ಬರ ಜೊತೆಯಲ್ಲಿಯೇ ಇತರ ಉತ್ಪನ್ನಗಳನ್ನು ಖರೀದಿಸಬೇಕೆಂದು ರೈತರನ್ನು ಒತ್ತಾಯಿಸಲಾಗುತ್ತಿದೆ. ಮಾತ್ರವಲ್ಲದೇ ಗೊಬ್ಬರ ಉತ್ಪಾದಕ ಕಂಪೆನಿಯೇ ಗೊಬ್ಬರ ಸರಬರಾಜು ದರವನ್ನು ಪಾವತಿಸಬೇಕು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಉಲ್ಲಂಘಿಸಿ ರೈತರಿಂದಲೇ ಸರಬರಾಜು ದರ ವಸೂಲಿ ಮಾಡಲಾಗುತ್ತಿದೆ. ಈ ಎಲ್ಲಾ ವಿಚಾರಗಳು ಕೃಷಿ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೂ ಮಾಹಿತಿ ಇದೆ. ಆದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ಇಂತಹ ಅವ್ಯವಸ್ಥೆಗಳಿಗೆ…
ಲೇಖಕ: admin
ಮಡಿಕೇರಿ ಜು.2 NEWS DESK : ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಆರಂಭವಾದ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಯು.ಎ.ಇ.ಯ ಹೊಸ ಪ್ರಯಾಣಿಕ ರೈಲು ಸಾರಿಗೆಯ ಪ್ರಥಮ ಯಾನಕ್ಕೆ ಪೈಲಟ್ ಆಗಿ ರಿಯಾಝ್ ಅವರನ್ನು ಅಲ್ಲಿನ ಆಡಳಿತ ನೇಮಕ ಮಾಡಿದೆ. ರಿಯಾಝ್ ಅವರು ಖತರ್ ಮೆಟ್ರೊ ಮತ್ತು ಖತರ್ ಟ್ರಾಮ್ ಸೇವೆಗಳ ಉದ್ಘಾಟನೆಯ ವೇಳೆ ಕೂಡ ಮೊದಲ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು. “ಬಾಲ್ಯದ ಸಮಯದಲ್ಲಿ ಕನಿಷ್ಠ ಸೈಕಲ್ ಕೂಡ ನನಗೆ ಸಿಗಲಿಲ್ಲ. ಈಗ ಅತ್ಯಂತ ಜವಾಬ್ದಾರಿಯುತವಾದ ರೈಲು ಸೇವೆಯ ಪ್ರಥಮ ಯಾನದ ಪೈಲಟ್ ಆಗುವ ಯೋಗ ಸಿಕ್ಕಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ರಿಯಾಝ್ ಅವರು ಪ್ರತಿಕ್ರಿಯಿಸಿದ್ದಾರೆ. ರಿಯಾಝ್ ಅವರು ಪ್ರಸ್ತುತ ಸುಂಟಿಕೊಪ್ಪದಲ್ಲಿ ವಾಸವಿರುವ ಹಾಜಿ ನಝೀರ್ ಹಾಗೂ ರಹ್ಮತ್ ದಂಪತಿಯ ಪುತ್ರ.
ಮಡಿಕೇರಿ ಜು.2 NEWS DESK : ದಕ್ಷಿಣ ಕೊಡಗಿನ ಇತಿಹಾಸ ಪ್ರಸಿದ್ಧ ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ರಚನೆಗೊಂಡ ನೂತನ ಗರ್ಭಗುಡಿಯಲ್ಲಿ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವವು ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಊರ ಕೂಡುಕಟ್ಟಿನ ಯಜಮಾನತ್ವದಲ್ಲಿ ಜು.6 ರಿಂದ 9 ರವರೆಗೆ ನಡೆಯಲಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮೃತ್ಯುಂಜಯ ದೇವಾಲಯ ಸಮಿತಿಯ ಅಧ್ಯಕ್ಷ ಚೋನಿರ ಸುಬ್ರಮಣಿ, ನಾಡ್ ತಕ್ಕ ಕಾಯಪಂಡ ಕೆ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಕ್ಷೇತ್ರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಕುರಿತು ಮಾಹಿತಿ ನೀಡಿದರು. ಜು.6 ರಂದು ಸಂಜೆ 6 ಗಂಟೆಯಿಂದ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪುಣ್ಯಾಹ, ಪ್ರಸಾದ ಶುದ್ಧಿ, ವಾಸ್ತು ರಕ್ಕೋಘ್ನ ಹೋಮ, ವಾಸ್ತು ಬಲಿ ನಡೆಯಲಿದೆ. ಜು.7 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, 12:30ಕ್ಕೆ ಮಧ್ಯಾಹ್ನ ಪೂಜೆ, ಸಂಜೆ 7 ಗಂಟೆಗೆ ದುರ್ಗಾ…
ಮಡಿಕೇರಿ ಜು.2 NEWS DESK : ಕನ್ನಡ ಚಲನಚಿತ್ರ ನಿರ್ಮಾಣಕ್ಕೆ ಅಡಿ ಇಟ್ಟಿರುವ “ರೆಮ್ಸೆಸ್ ಮೋಷನ್ ಪಿಕ್ಚರ್ಸ್” ಸಂಸ್ಥೆ ವತಿಯಿಂದ ಪ್ರತಿಭಾವಂತ ನಟ, ನಟಿಯರ ಆಯ್ಕೆ ಪ್ರಕ್ರಿಯೆ ಜು.11ರಂದು ಬೈಲುಕುಪ್ಪೆಯಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಪ್ರಮುಖರು, ಚಿತ್ರ ನಿರ್ದೇಶಕರು ಹಾಗೂ ನಟರೂ ಆಗಿರುವ ರುಹಾನ್ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯ ಗಣಪತಿ ದೇವಸ್ಥಾನ ಸಮೀಪದ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಉದ್ದೇಶಿತ ಕನ್ನಡ ಚಲನಚಿತ್ರ ನಿರ್ಮಾಣಕ್ಕೆ ಅಗತ್ಯವಾದ ನಟ, ನಟಿಯರ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು. ಕೊಡಗು ಸೇರಿದಂತೆ ಕೊಡಗಿನ ಸುತ್ತಮುತ್ತಲ ಜಿಲ್ಲೆ ತಾಲ್ಲೂಕುಗಳ 10 ವರ್ಷದಿಂದ 60 ವರ್ಷ ಮಯೋಮಿಯವರೆಗಿನ ಆಸಕ್ತ ಕಲಾವಿದರು ಪಾಲ್ಗೊಳ್ಳಬಹುದಾಗಿದೆ. ಸ್ಥಳೀಯ ಪ್ರತಿಭೆಗಳಿಗೆ ವೃತ್ತಿಪರ ಕನ್ನಡ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶ ಕಲ್ಪಿಸುವುದು ಈ ಆಯ್ಕೆ ಪ್ರಕ್ರಿಯೆಯ ಉದ್ದೇಶವೆಂದು ಸ್ಪಷ್ಟಪಡಿಸಿದರು. ಚಿತ್ರೀಕರಣವನ್ನು ಕೊಡಗು ಸೇರಿದಂತೆ ವಿವಿಧೆಡೆಗಳಲ್ಲಿ ನಡೆಸಲಾಗುವುದು. ಸ್ಥಳೀಯ ಆಸಕ್ತ ಕಲಾವಿದರು…
ಮಡಿಕೇರಿ ಜು.2 NEWS DESK : ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ಮತ್ತು ಕೊಡಗಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜು.6 ರಂದು ಮಡಿಕೇರಿಯಲ್ಲಿ ಬೃಹತ್ ವಾಹನ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಕಾಡಾನೆ ದಾಳಿಗೆ ಸಿಲುಕಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಅಂಗವೈಕಲ್ಯತೆಗೆ ಒಳಗಾಗುತ್ತಿದ್ದಾರೆ. ರೈತರು ಕೃಷಿ ಫಸಲು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೂ ರಾಜ್ಯ ಸರಕಾರ ಪರಿಹಾರ ನೀಡುತ್ತಿಲ್ಲ. ಹುಲಿ ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳು, ಸಾಕುಪ್ರಾಣಿಗಳು ಬಲಿಯಾಗುತ್ತಿವೆ. ವನ್ಯಜೀವಿಗಳ ನಿರಂತರ ದಾಳಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸಿ ಮತ್ತು ಡಿ ಭೂಮಿಯಲ್ಲಿ ಕಳೆದ ಹಲವು ವರ್ಷಗಳಿಂದ ಮನೆ…
ಮಡಿಕೇರಿ NEWS DESK ಜು.2 : ಒಂದಕ್ಕಿoತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದುವ ಮೂಲಕ ಮತದಾನದ ಹಕ್ಕನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್, ಭಾರತೀಯ ಚುನಾವಣಾ ಆಯೋಗ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮತದಾರರ ಗುರುತಿನ ಚೀಟಿ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭ ಆದಿಮಸಂಜಾತ ಕೊಡವ ಮತದಾರರನ್ನು ರಕ್ಷಿಸಲು ಮತ್ತು ಕೊಡವಲ್ಯಾಂಡ್ನಲ್ಲಿ ಹೊರಗಿನವರು ಹೊಂದಿರುವ ಒಂದಕ್ಕಿoತ ಹೆಚ್ಚು ವೋಟರ್ ಐಡಿಗಳನ್ನು ರದ್ದುಗೊಳಿಸಲು ತುರ್ತು ಹಸ್ತಕ್ಷೇಪ ಮಾಡಬೇಕೆಂದು ಕೋರಿದ್ದಾರೆ. ಒಂದಕ್ಕಿoತ ಹೆಚ್ಚು ವೋಟರ್ ಐಡಿ ಹೊಂದಿರುವವರ ಕಾರ್ಡ್ಗಳನ್ನು ಕಟ್ಟುನಿಟ್ಟಾಗಿ ರದ್ದುಗೊಳಿಸಬೇಕು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 31ರ ಅಡಿಯಲ್ಲಿ ಅಂತಹ ಅಪರಾಧಿಗಳ ವಿರುದ್ಧ ಕಠಿಣ ದಂಡನಾತ್ಮಕ ಕ್ರಮವನ್ನು ಕೈಗೊಳ್ಳಬೇಕು. ಕೊಡಗಿನ ಕಾನೂನುಬದ್ಧ ಆದಿಮಸಂಜಾತ ಮತದಾರರಾಗಿರುವ ಕೊಡವರನ್ನು ಮತದಾರರ ಪಟ್ಟಿಗೆ ಸೇರಿಸಲು ವಿಶೇಷ ಕಾಳಜಿ ವಹಿಸಬೇಕು. 2026ರ…
ಮಡಿಕೇರಿ ಜು.1 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಏಪ್ರಿಲ್ ಮಾಹೆಯವರೆಗೆ ಮಾತ್ರ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಿದ್ದು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಾಲೇಖಪಾಲಕರ ಆಡಿಟ್ ಗೆ ಅನುಪಾಲನೆ ಒದಗಿಸುವಂತೆ ಪ್ರಿನ್ಸಿಪಲ್ ಅಕೌಂಟೆಂಟ್ ಜನರಲ್ ಇವರು ಪತ್ರದಲ್ಲಿ ಸೂಚಿಸಿದ್ದು, ಈ ಪತ್ರದ ಕ್ರ.ಸಂ.1 ರಲ್ಲಿ ತಾಲ್ಲೂಕುಗಳಲ್ಲಿ ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ ಪಾವತಿಯಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ವಿಷಯದ ಕುರಿತು ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚಿಸಿದರು. ಮಡಿಕೇರಿ ತಾಲ್ಲೂಕಿನಲ್ಲಿ 1 ಪ್ರಕರಣ ಕಂಡುಬಂದಿದ್ದು ಇದುವರೆಗೆ ಬೇರೆ ಬೇರೆ ರೇಷನ್ ಕಾರ್ಡ್ ಇದ್ದು, ಇಬ್ಬರ ಗೃಹಲಕ್ಷ್ಮಿ ಹಣ ಒಂದೇ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ. ಈ ಮಾಹಿತಿಯನ್ನು ಮೇಲಾಧಿಕಾರಿಯವರಿಗೆ ವರದಿ ಮಾಡಲಾಗಿದೆ ಎಂದು ಅಧ್ಯಕ್ಷರು ಹೇಳಿದರು. ಜಿಲ್ಲೆಯಲ್ಲಿ ಹಲವು ಫಲಾನುಭವಿಗಳಿಗೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳಿಗೆ…
ಕುಶಾಲನಗರ ಜು.1 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಸಂಭ್ರಮದಿಂದ ನಡೆಯಿತು. ಕುಶಾಲನಗರ ಎಸ್.ಎಲ್.ವಿ.ಬುಕ್ ಹೌಸ್ ಮಾಲೀಕರಾದ ದಿವಾಕರ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಪತ್ರಿಕೋದ್ಯಮದ ಗೌರವ, ಘನತೆ, ಜವಬ್ದಾರಿ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದುವ ಅಗತ್ಯವಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳು ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿದ ಉದಾಹರಣೆಗಳಿದೆ. ಸಾಮಾಜಿಕ ಬದಲಾವಣೆಗೆ ಪತ್ರಿಕೋದ್ಯಮ ಆಯ್ಕೆ ಕೂಡ ವಿದ್ಯಾರ್ಥಿಗಳಿಗಿದೆ. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಭವಿಷ್ಯದ ಗುರಿ ಈಡೇರಿಕೆಗೆ ಶ್ರಮವಹಿಸಿದಲ್ಲಿ ಮುಂದೆ ಸಾಧಕರಾಗಬಹುದು ಎಂದು ಕಿವಿ ಮಾತು ಹೇಳಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದಮೋಹನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಧೇಯತೆ, ವಿನಯವಂತಿಕೆ ಮೈಗೂಡಿಸಿಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಹಾಗೂ ಪ್ರಪಂಚ ಜ್ಞಾನ ವೃದ್ದಿಸಿಕೊಳ್ಳಲು ಕರೆ ನೀಡಿದರು.…
ಮಡಿಕೇರಿ ಜು.1 NEWS DESK : ವಿರಾಜಪೇಟೆ ಕೊಡವ ಸಮಾಜ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ‘ವ್ಯಸನ ಮುಕ್ತ ‘ ಭಾರತ ಕಲ್ಪನೆಯಡಿಯಲ್ಲಿ ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ ಮಾದಕ ವಸ್ತು ಮುಕ್ತರಾಗಲು ಜಾಗೃತಿ ಕಾರ್ಯಕ್ರಮ ನಡೆಯಿತು. ಪಿಪಿಟಿಯ ಮೂಲಕ ದಕ್ಷಿಣ ಕನ್ನಡ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಗಳು ಮಾದಕವಸ್ತುಗಳು, ಅದರ ಪರಿಣಾಮಗಳು, ಅದರಿಂದ ಸಮಾಜದ ಮೇಲೆ ಉಂಟಾಗುವ ಸಮಸ್ಯೆಗಳು, ವ್ಯಕ್ತಿಯ ಗೌರವ ಇತ್ಯಾದಿಗಳ ಬಗೆಗೆ ವಿವರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಕಾರ್ಯಕ್ರಮ ನಿರ್ವಹಣಾ ಅಧಿಕಾರಿಗಳು, ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಗಳು, ಜಿಲ್ಲಾ ಸಂಚಾಲಕರು, ಶಿಕ್ಷಕರಾದ ಕೃಷ್ಣ ಪ್ರಸಾದ್, ಅರುಣ್, ಧನ್ಯ, ಸಮೀಕ್ಷಾ ಮುಂತಾದ ಶಿಕ್ಷಕರು ಪಾಲ್ಗೊಂಡಿದ್ದರು. ಸಂಸ್ಥೆಯ ವಿದ್ಯಾರ್ಥಿ ಪೂಜಾ ಪ್ರಾರ್ಥಿಸಿದರು. ಶಿಕ್ಷಕಿ , ಸೆವೆಂಟಿ ಆಗಸ್ಟೀನ್ ಸ್ವಾಗತಿಸಿದರು. ಆಶಾ ಅಕ್ಕಮ್ಮ ವಂದಿಸಿದರು.
ಮಡಿಕೇರಿ ಜು.1 NEWS DESK : ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಪಣೀಂದ್ರ ಅವರು ಜುಲೈ, 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜುಲೈ, 03 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆವರೆಗೆ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪ ಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿ ವಿಚಾರಣೆ ನಡೆಸಲಿದ್ದಾರೆ. ಆದ್ದರಿಂದ ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿರುವ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಂದ ಹೊಸದಾಗಿ ಯಾವುದೇ ದೂರು ಸ್ವೀಕರಿಸಲಾಗುವುದಿಲ್ಲ’ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ದಿನಕರ್ ಶೆಟ್ಟಿ ಅವರು ತಿಳಿಸಿದ್ದಾರೆ.






