ಲೇಖಕ: admin

ಮಡಿಕೇರಿ, NEWS DESK ಏ.1 : ‘ಗುಣಮಟ್ಟದ ಉತ್ಪನ್ನ ಹಾಗೂ ಸೇವೆ ಪ್ರತಿ ಗ್ರಾಹಕರ ಮೂಲಭೂತ ಹಕ್ಕು.. ಗ್ರಾಹಕನೇ ರಾಜ, ಆದರೆ ಹಕ್ಕುಗಳ ಬಗ್ಗೆ ತಿಳುವಳಿಕೆ ಇದ್ದಾಗ ಮಾತ್ರ… ಖರೀದಿಸುವ ಮೊದಲು ಯೋಚಿಸಿ, ಗುಣಮಟ್ಟವನ್ನು ಪರೀಕ್ಷಿಸಿ… ಗ್ರಾಹಕರ ಹಕ್ಕುಗಳ ಅರಿವೇ ಮೋಸದಿಂದ ರಕ್ಷಣೆ… ಈ ಸಂದೇಶವು ಬುಧವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಸಂದರ್ಭದಲ್ಲಿ ಕೇಳಿ ಬಂದವು. ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಾಸದ ಗ್ರಾಹಕರು ಎಂಬ ವಿಷಯದಡಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೊಳಗಿತು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಸಮಾಜದಲ್ಲಿನ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಗ್ರಾಹಕರಾಗಿದ್ದು, ಗ್ರಾಹಕರ ಸುರಕ್ಷತೆ, ಮಾಹಿತಿ ಮತ್ತು ನ್ಯಾಯಸಮ್ಮತ ಸೇವೆ ದೊರಕುವುದು ಅತ್ಯಂತ ಅವಶ್ಯಕವಾಗಿದೆ ಎಂದರು. ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗ್ಗೆ…

Read More

ಮಡಿಕೇರಿ, NEWS DESK ಏ.1: ಕ್ರೀಡೆ ಜೀವನದಲ್ಲಿ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ನಿವೃತ್ತ ಕರ್ನಲ್ ಹಾಗೂ ಮ್ಯಾರಥಾನ್ ಓಟಗಾರ ಕಾವೇರಪ್ಪ ಹೇಳಿದರು. ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇಲ್ಲಿ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ದಿ.ಸಿ.ವಿ. ಶಂಕರ್ ಸ್ವಾಮಿ ಅವರ ಹೆಸರಿನಲ್ಲಿ ಏರ್ಪಡಿಸಲಾಗಿರುವ ೩೨ನೇ ವರ್ಷದ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆ ದೈಹಿಕ ಸಾಮರ್ಥ್ಯದೊಂದಿಗೆ ಸಾಧನೆ ಮಾಡುವ ಛಲವನ್ನು ಬಲಪಡಿಸುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗಾವಕಾಶಗಳೂ ದೊರಕುತ್ತವೆ ಎಂದು ಹೇಳಿದರು. ಮಕ್ಕಳು ಮೊಬೈಲ್‌ಗೆ ದಾಸರಾಗದೆ ಓದುವ ಹಾಗೂ ಬರೆಯುವ ಹವಯಾಸ ಬೆಳೆಸಿಕೊಳ್ಳಬೇಕು. ರಾತ್ರಿ ವೇಳೆಯಲ್ಲಿ ಬರೆಯವದು ಹಾಗೂ ಬೆಳಗ್ಗಿನ ಜಾವ ಬೇಗನೇ ಎದ್ದು ಓದಬೇಕು, ಹಾಗೇ ಮಾಡಿದ್ದಲ್ಲಿ ಸುಲಭವಾಗಿ ಅರ್ಥವಾಗುತ್ತದೆ, ಅಲ್ಲದೆ ಅಂಕ ಗಳಿಸಲು, ವೃತ್ತಿಪರ ಪರೀಕ್ಷೆಗಳನ್ನು ಎದುರಿಸಲು ಸಲಭವಾಗುತ್ತದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಂಡರ‍್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಮಾತನಾಡಿ ಶಿಬಿರದಲ್ಲಿ ತರಬೇತುದಾರರು ಹೇಳಿಕೊಡುವದನ್ನು ಮನನ ಮಾಡಿಕೊಂಡು ಅಭ್ಯಸಿಸಬೇಕು,…

Read More

ಮಡಿಕೇರಿ, NEWS DESK ಏ.1 –   ನಗರದ ಕೊಡಗು ವಿದ್ಯಾಲಯದಲ್ಲಿ  ‘ಸಮಾಗಮ 2026’  ವಾಷಿ೯ಕ ಬೇಸಿಗೆ ಶಿಬಿರ  ಮತ್ತು   ಪಿಕಲ್ ಬಾಲ್ ಕ್ರೀಡಾಂಗಣ  ಉದ್ಘಾಟನೆಗೊಂಡಿತು. ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಆದಿತ್ಯ ಕೋಟೆ, ಡಾ. ಜಾಹ್ನವಿ ಕೋಟೆ,  . ಕಾರ್ಯದರ್ಶಿ ಪೂಣಚ್ಚ ಬಿ ಎಸ್ ಶಾಲಾ ಆಡಳಿತ ಮಂಡಳಿಯ ಸದಸ್ಯ   ಗುರುದತ್ತ್ ಸಿ ಎಸ್, ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ವ್ಯವಸ್ಥಾಪಕ ರವಿ ಪಿ  , ಕಲಾ ತರಬೇತುದಾರಾದ ಪವನ್   ಗಣಪತಿಯ ಕಲಾ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ  ಮತ್ತು ಸಸಿಗೆ ನೀರೆರೆಯುವ ಮೂಲಕ ಶಿಬಿರಕ್ಕೆ   ಚಾಲನೆ ನೀಡಿದರು. ಮುಖ್ಯ ಅತಿಥಿ   ಡಾ. ಜಾಹ್ನವಿ ಕೋಟೆ  ಕೊಡಗು  ವಿದ್ಯಾಲಯದಲ್ಲಿನ  ತಮ್ಮ  ವಿದ್ಯಾಭ್ಯಾಸದ ದಿನಗಳ   ನೆನಪುಗಳನ್ನು ಹಂಚಿಕೊಂಡು,  ಕ್ರೀಡಾಮಾಗ೯ದಶಿ೯ಯಾಗಿದ್ದ ಸಿ.ವಿ. ಶಂಕರ್   ಅವರ  ಶಿಸ್ತು  ಮತ್ತು. ಕ್ರಿಕೆಟ್ ಕ್ರೀಡೆಯಲ್ಲಿ ಅವರು ವಿದ್ಯಾರ್ಥಿಗಳನ್ನು ಸದಾ ಹುರಿದುಂಬಿಸುತ್ತಿದ್ದ  ರೀತಿಯನ್ನು ಶ್ಲಾಘಿಸಿದರು.   ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…

Read More

ಮಡಿಕೇರಿ, NEWS DESK ಏ.1 – ಕೊಡಗೂ ಸೇರಿದಂತೆ ವಿವಿಧೆಡೆ ಪೊಮ್ಮಕ್ಕಡ ಕೂಟಗಳ ನಡುವೆ ಭಾಂದವ್ಯ ವೃದ್ಧಿ ಹಾಗೂ ಕ್ರೀಡಾಮನೋಭಾವ ಮೂಡಿಸುವ ಉದ್ದೇಶದೊಂದಿಗೆ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ   ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂರು ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದ್ದಾರೆ. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ  ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ   ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ   ಪ್ರಥಮ ವಷ೯ದ    ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯನ್ನು  ಉದ್ಘಾಟಿಸಿ ಅವರು  ಮಾತನಾಡಿದರು. ಜೋಮಾಲೆ ಪೊಮ್ಮಕ್ಕಡ ಕೂಟದ ವತಿಯಿಂದ ಥ್ರೋಬಾಲ್ ಪಂದ್ಯಾವಳಿಯ  ಮೂಲಕ  , ಗ್ರಾಮೀಣ ಪ್ರದೇಶಗಳಲ್ಲಿ  ಗ್ರಾಮೀಣ ಕ್ರೀಡಾಪ್ರತಿಭೆಗಳು ಬೆಳಕಿಗೆ ಬರಲು  ಅವಕಾಶವಾಗುತ್ತದೆ ಎಂದರು.  ಎಲ್ಲಾ ಊರುಗಳಲ್ಲಿ ಪೊಮ್ಮಕ್ಕಡ ಕೂಟದ ವತಿಯಿಂದ ಹಲವಾರು ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಂಡು ಬರಲಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಇದರಿಂದ ಸಮಾಜಕ್ಕೆ ಉತ್ತಮ ಸಂದೇಶ ಸಾರಿದಂತಾಗುವುದು…

Read More

ಬೆಂಗಳೂರು, NEWS DESK ಮಾ.31: ‌ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ವಾರ್ತಾಭಾರತಿ ವಿಶೇಷ ವರದಿಗಾರ ಹಾಗೂ ಶಕ್ತಿ ದಿನ‌ ಪತ್ರಿಕೆಯ ವರದಿಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ. ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ) ಲಭಿಸಿದೆ. ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಿತಿಮತಿಯ ತೋಟದಲ್ಲಿ ಬೀಡುಬಿಟ್ಟಿದ್ದ ಮರಿಯಾನೆ ಸೇರಿದಂತೆ ಸುಮಾರು ಐದು ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮತ್ತಿಗೋಡು ಅರಣ್ಯಕ್ಕೆ ಮರಳಿ ಅಟ್ಟಲಾಗಿದೆ. ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯವರ ಆದೇಶದಂತೆ ತಿತಿಮತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರ ನಿರ್ದೇಶನದ ಮೇರೆಗೆ ವಲಯ ಅರಣ್ಯ ಅಧಿಕಾರಿ ಪ್ರಶಾಂತ್, ಡಿಎಫ್‌ಓ ದೇವರಾಜ್ ಮಾರ್ಗದರ್ಶನದಲ್ಲಿ ಪ್ರಾದೇಶಿಕ ವಲಯ ಸಿಬ್ಬದಿಗಳು ಹಾಗೂ ಇಟಿಎಫ್ ತಂಡದವರು ಕಾರ್ಯಾಚರಣೆ ನಡೆಸಿ ಆನೆಗಳನ್ನು ಅರಣ್ಯಕ್ಕೆ ಅಟ್ಟಿದರು.

Read More

ಮಡಿಕೇರಿ ಮಾ.31 NEWS DESK : ಚೇನಂಡ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಮಡಿಕೇರಿ ತಾಲೂಕಿನ ಕೋಕೇರಿಯಲ್ಲಿರುವ ಚೇನಂಡ ಐನ್ ಮನೆಯವರು ಈ ಬಾರಿಯ ಕೊಡವ ಹಾಕಿ ಉತ್ಸವದ ಆತಿಥೇಯ ತಂಡದವರಾಗಿದ್ದಾರೆ. ಆ ಪ್ರಯುಕ್ತ ಈ ಹಿಂದೆಯೇ ಶಾಸಕರನ್ನು ಭೇಟಿಯಾಗಿ, ಹಾಕಿ ಉತ್ಸವಕ್ಕೆ ಪೂರ್ವ ಸಿದ್ಧತೆ ಸಭೆಗೆ ಆಗಮಿಸುವಂತೆ ಕೋರಿದ್ದರು. ಈ ಹಿನ್ನೆಲೆ  ಇಂದು ಶಾಸಕರು ಐನ್ ಮನೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮುಂಬರುವ ಹಾಕಿ ಉತ್ಸವಕ್ಕೆ ಶುಭ ಕೋರಿದರಲ್ಲದೆ, ತನ್ನಿಂದ ಸಾಧ್ಯವಾಗುವ ಎಲ್ಲಾ ಪ್ರೋತ್ಸಾಹವನ್ನು ನೀಡುವುದಾಗಿ ಭರವಸೆ ನೀಡಿದರು. ಹಾಕಿ ಪಂದ್ಯಾವಳಿಯು ಅತ್ಯಂತ ಯಶಸ್ಸು ಕಾಣಲಿ ಎಂದು ಹಾರೈಸಿದರು. ಈ ಸಂದರ್ಭ ಚೇನಂಡ ಕುಟುಂಬದ ಅಧ್ಯಕ್ಷರಾದ ಕಂಬನಿ ಕರುಂಬಯ್ಯ ಸಿಪಿ, ದಿನ ಚಂಗಪ್ಪ, ಕಾರ್ಯದರ್ಶಿ ಮಧು ಮಾದಯ್ಯ, ಜಂಟಿ ಕಾರ್ಯದರ್ಶಿ ತಮ್ಮಿ ತಮ್ಮಯ್ಯ, ಸದಸ್ಯರು ಸುರೇಶ್ ನಾಣಯ್ಯ,…

Read More

ಮಡಿಕೇರಿ ಮಾ.31 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ ವಿರಾಜಪೇಟೆ ಪಟ್ಟಣದಲ್ಲಿ ವಿರಾಜಪೇಟೆ ಉಪ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ‌ ನಡೆಸಿದರು.

Read More

ಮಡಿಕೇರಿ ಮಾ.31 NEWS DESK : ನಾಪೋಕ್ಲುವಿನಲ್ಲಿ  ಏ.1 ರಂದು ನಡೆಯಲಿರುವ ಹಿಂದೂ ಜನ ಜಾಗೃತಿ ಸಭೆಯ ಸಂಬಂಧ ಆಯೋಜಕರ ಮತ್ತು ಇತರೆ ಪ್ರಮುಖರನ್ನೊಳಗೊಂಡ ಶಾಂತಿ ಸಭೆಯನ್ನು ನಾಪೋಕ್ಲು ಠಾಣೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯನ್ನು ಪಾಲಿಸುವುದು, ಆಯೋಜಕರ ಜವಾಬ್ದಾರಿಗಳು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

Read More

ಕಾರ್ಕಳ ಏ.31 NEWS DESK : ಪ್ರಸ್ತುತ ದಿನಮಾನದಲ್ಲಿ ರಜಾ ಸಮಯವನ್ನು ಮಕ್ಕಳು ಕೇವಲ ಮೊಬೈಲ್ ಗೆ ದಾಸರಾಗಿ ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳದೆ ತಮ್ಮ ಅಮೂಲ್ಯ ಬಾಲ್ಯದ ಕ್ಷಣಗಳನ್ನು ವ್ಯರ್ಥವಾಗಿ ಕಳೆಯುತ್ತಿದ್ದಾರೆ. ಇದು ಪ್ರಸ್ತುತ ಹೆತ್ತ ತಂದೆ ತಾಯಿಯರಿಗೂ ಮಕ್ಕಳ ಈ ವರ್ತನೆ ನುಂಗಲಾರದ, ಅರಗಿಸಿಕೊಳ್ಳಲಾಗದ ನೋವಿನ ಕ್ಷಣಗಳು ಹೌದು. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆರಂಭಗೊಳ್ಳಲಿರುವ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂಬ ಧ್ಯೇಯವನ್ನು ಇಟ್ಟುಕೊಂಡು ಇದೇ ಬರುವ ಏ.2, 3 ಮತ್ತು 4 ರಂದು ಮಕ್ಕಳ ವಿಶೇಷ ಶಿಬಿರ ಚಿಲಿಪಿಲಿ-2026* ನಡೆಯಲಿದೆ. ಇಂದಿನ ಸ್ಕ್ರೀನ್ ಟೈಮ್ ಯುಗದಲ್ಲಿ ಮಕ್ಕಳು ತಮ್ಮ ಬಾಲ್ಯವನ್ನು ವ್ಯರ್ಥ ಮಾಡಿಕೊಳ್ಳುತ್ತಿರುವಾಗ ಈ ಶಿಬಿರವು ನೆನಪುಗಳನ್ನು ಸೃಷ್ಟಿಸಲು, ಸೃಜನಶೀಲತೆಯನ್ನು ಹೆಚ್ಚಿಸಲು, ಸ್ನೇಹಿತರನ್ನು ಮಾಡಿಕೊಳ್ಳಲು , ಹೊಸ ಆಸಕ್ತಿಗಳನ್ನು ಕಂಡುಕೊಳ್ಳಲು ಒಟ್ಟಾರೆಯಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಶಿಬಿರವು ಮಕ್ಕಳಿಗೆ ಅತ್ಯಂತ…

Read More