ಮಡಿಕೇರಿ, NEWS DESK, ಆ.27: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ಮಾಡಿದ್ದು, ರೂ.75.35 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ನೀಡುವ ಪ್ರಸ್ತಾವನೆಯನ್ನು ವಾರ್ಷಿಕ ಮಹಾಸಭೆಯ ಅನುಮೋದನೆಗೆ ಮಂಡಿಸಲು ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಮಾರ್ಚ್ 31ರ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 1,203 ‘ಎ’ ತರಗತಿಯ ಸದಸ್ಯರಿದ್ದು, ಸದಸ್ಯರಿಂದ ರೂ.89.26 ಲಕ್ಷ ಪಾಲು ಬಂಡವಾಳ ಸಂಗ್ರಹವಾಗಿದೆ. ಕ್ಷೇಮ ನಿಧಿ ಸೇರಿದಂತೆ ಇತರೆ ನಿಧಿಗಳಲ್ಲಿ ರೂ.3.95 ಕೋಟಿ ಹಾಗೂ ನಿರಖು ಠೇವಣಿ, ಸಂಚಯ ಠೇವಣಿ ಸೇರಿದಂತೆ ಒಟ್ಟು ರೂ.22.71 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು. ಸಂಘದ ಬಂಡವಾಳದ ಪೈಕಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ, ನಿರಖು ಠೇವಣಿ ಹಾಗೂ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಾಲು ಮತ್ತು ಠೇವಣಿ ರೂಪದಲ್ಲಿ…
ಲೇಖಕ: admin
ಮಡಿಕೇರಿ, NEWS DESK ಆ.27: ಕಸ್ತೂರಿರಂಗನ್ ವರದಿಯಿಂದ ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಯ ನೀಡಿದ್ದಾರೆ. ಮಡಿಕೇರಿಯಲ್ಲಿ ಸಂಸದರ ನೇತೃತ್ವದಲ್ಲಿ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಪರಿಸರ ಪ್ರೇಮಿಗಳೊಂದಿಗೆ ಕಸ್ತೂರಿರಂಗನ್ ವರದಿ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಕಸ್ತೂರಿರಂಗನ್ ವರದಿ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಹಲವು ಹಂತದ ಚರ್ಚೆಗಳು ನಡೆಯಬೇಕಿದೆ ಎಂದು ತಿಳಿಸಿದರು. ಕೊಡಗಿನ ಜನರು ಪ್ರಕೃತಿಯನ್ನು ರಕ್ಷಿಸುವ ಹಾಗೂ ಗೌರವಿಸುವ ಮನೋಭಾವ ಹೊಂದಿದ್ದಾರೆ. ಹೀಗಿರುವಾಗ ಅವರನ್ನು ಅನ್ಯಾಯವಾಗಿ ಅರಣ್ಯ ಕಾಯ್ದೆಯ ವ್ಯಾಪ್ತಿಗೆ ತಳ್ಳುವುದು ಸರಿಯಲ್ಲ. ಕೇರಳದಲ್ಲಿ ಕೈಗೊಂಡಿರುವ ಕ್ರಮದಂತೆ ಕೊಡಗಿನಲ್ಲಿಯೂ ಬಫರ್ ಜೋನ್ ಅನ್ನು ಶೂನ್ಯ ಕಿಲೋಮೀಟರ್ಗೆ ನಿಗದಿಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯನ್ನು ಯಾವುದೇ…
ಸೋಮವಾರಪೇಟೆ, NEWS DESK ಆ.27: ಈದ್ ಮಿಲಾದ್ ಪ್ರೀತಿ, ಶಾಂತಿ, ಸಹನೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ನೆನಪಿಸುವ ಮಹತ್ವದ ಪವಿತ್ರ ದಿನವಾಗಿದೆ ಎಂದು ಶಾಸಕ ಡಾ.ಮಂತರ್ಗೌಡ ಹೇಳಿದರು. ಸಮೀಪದ ಬಜೆಗುಂಡಿ ಗ್ರಾಮದ ಖಿಳಾರಿಯ ಮಸಿದಿಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮನುಷ್ಯರು ಪರಸ್ಪರ ಗೌರವದಿಂದ, ಯಾವುದೇ ಭೇದಭಾವವಿಲ್ಲದೆ ಬದುಕಬೇಕು ಎಂಬ ಸಂದೇಶ ಹಬ್ಬದ ನಿಜವಾದ ಆಶಯವಾಗಿದೆ. ನಮ್ಮ ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇಂತಹ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ಸುಂದರ ಮತ್ತು ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ ಎಂದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ, ಅವರ ಜೀವನವನ್ನು ಅವರು ಮುನ್ನೆಡೆಸುವಂತಾದಾಗ ಅವರಿಗೆ ಮದುವೆ ಮಾಡಿದಲ್ಲಿ ಅವರ ಜೀವನ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮಸೀದಿಯ ಅಭಿವೃದ್ಧಿಗೆ 10…
ಸೋಮವಾರಪೇಟೆ, NEWS DESK ಆ.27: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸಲ್ಲಿಸಿದ್ದ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದೆ. ಮೈಸೂರು ವಿಭಾಗೀಯ ಆರೋಗ್ಯ ಸೇವಾ ಪ್ರಾಧಿಕಾರದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ. ಅವರು ಬುಧವಾರ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಆಸ್ಪತ್ರೆಯಲ್ಲಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಆಸ್ಪತ್ರೆಗೆ ಅರವಳಿಕೆ ತಜ್ಞರು, ಮೂಳೆ ಮತ್ತು ಕೀಲು ತಜ್ಞರು ಹಾಗೂ ಮಕ್ಕಳ ವೈದ್ಯರನ್ನು ಕಾಯಂ ಆಗಿ ನೇಮಕ ಮಾಡಬೇಕು. ಆಸ್ಪತ್ರೆಯ ನೈರ್ಮಲ್ಯೀಕರಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸಬೇಕು. ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ವೈದ್ಯರ ಕೊರತೆ ಸೇರಿದಂತೆ ಆಸ್ಪತ್ರೆಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ…
ಮಡಿಕೇರಿ NEWS DESK ಆ.27 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಆ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಜಿ.ಕೆ ಹಾಗೂ ಯೋಗೇಶ್ ಹೆಚ್.ಎಸ್ ಅವರು ತಿಳಿಸಿದ್ದಾರೆ. ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ರೂ.36 ಸಾವಿರ ವೇತನ ಪಾವತಿಸಬೇಕು, ಹೊರಗುತ್ತಿಗೆ ವ್ಯವಸ್ಥೆ ಬದಲಾಗಿ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಆದೇಶವನ್ನು ರದ್ದುಪಡಿಸಬೇಕು. ರಾಜ್ಯ ಸರಕಾರ 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನವನ್ನು ಬಿಸಿಎಂ, ಎಸ್ಸಿ, ಎಸ್ಟಿ, ಕ್ರೆöÊಸ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನ ಜಾರಿ ಕುರಿತಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯನ್ನು ರದ್ದುಪಡಿಸಬೇಕು. ಹೊರಗುತ್ತಿಗೆ…
ಮಡಿಕೇರಿ NEWS DESK ಆ.27 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಆ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಜಿ.ಕೆ ಹಾಗೂ ಯೋಗೇಶ್ ಹೆಚ್.ಎಸ್ ಅವರು ತಿಳಿಸಿದ್ದಾರೆ. ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ರೂ.36 ಸಾವಿರ ವೇತನ ಪಾವತಿಸಬೇಕು, ಹೊರಗುತ್ತಿಗೆ ವ್ಯವಸ್ಥೆ ಬದಲಾಗಿ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಆದೇಶವನ್ನು ರದ್ದುಪಡಿಸಬೇಕು. ರಾಜ್ಯ ಸರಕಾರ 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನವನ್ನು ಬಿಸಿಎಂ, ಎಸ್ಸಿ, ಎಸ್ಟಿ, ಕ್ರೆöÊಸ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನ ಜಾರಿ ಕುರಿತಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯನ್ನು ರದ್ದುಪಡಿಸಬೇಕು. ಹೊರಗುತ್ತಿಗೆ…
ಮಡಿಕೇರಿ NEWS DESK ಆ.27: ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘ ಮಡಿಕೇರಿ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ವಿಶ್ವಕರ್ಮ ಸಮಾಜ ಸೇವಾ ಸಂಘದ ಭವನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಮಂಗಳೂರಿನ ಪುರೋಹಿತ್ ಸತೀಶ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ನೆರವೇರಿಸಲಾಯಿತು. ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಗಳು ಸಾಂಪ್ರದಾಯಿಕ ಆಚರಣೆಗಳೊಂದಿಗೆ ಭಕ್ತಿಪೂರ್ವಕವಾಗಿ ಜರುಗಿದವು. ಸಮಾಜದ ಅಧ್ಯಕ್ಷ ಜಗದೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸರ್ವ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಸಮಾಜದ ಪರಂಪರೆ, ಸಂಸ್ಕೃತಿ ಹಾಗೂ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಮಡಿಕೇರಿ NEWS DESK ಆ.27 : ರೌಳತುಲ್ ಉಲೂಮ್ ದರ್ಸ್ ಸಂಘಟನೆಯ ಲಿವಾವ್ ಶರಿಯಾ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಸೆ.3ರಂದು ಬೆಳಿಗ್ಗೆ 10 ಗಂಟೆಯಿ0ದ ರಾತ್ರಿ 10ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಕೋಶಾಧಿಕಾರಿ ರಶೀದ್ ಮುಸ್ಲಿಯಾರ್ ಪಯ್ಯಡಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ದರ್ಸ್ ವಿದ್ಯಾರ್ಥಿಗಳಿಂದ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 7 ಗಂಟೆಗೆ ಬೃಹತ್ ಮೌಲಿದ್ ಮಜ್ಲಿಸ್ ಹಾಗೂ ದುಆ ಮಜ್ಲಿಸ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಸಾದಾತ್, ಉಲಮಾ, ಉಮರಾ ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ದಾರಿ ತಪ್ಪುತ್ತಿರುವ ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮಹಿಳೆಯರಿಗಾಗಿ ಎಲ್ಸಿಡಿ ವ್ಯವಸ್ಥೆಯೊಂದಿಗೆ ಪ್ರತ್ಯೇಕ ಸ್ಥಳದ ಸೌಕರ್ಯ ಕಲ್ಪಿಸಲಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಖ್ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಸೈಖುನಾ ಇಂಬಿಚಿ ಕೊಯ ಅಲ್ ಮಶ್ಹೂರ್ ವಳವಟ್ಟಣಮ್, ಸೈಖುನಾ ಅಬೂ ಹನೀಫಲ್ ಫೈಝಿ ತೆನ್ನಲ,…
ಮೂರ್ನಾಡು ಆ.26 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಡಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಕೆ.ಎಂ. ಬಾಬು ಅವರು ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಸಂಘದ ಅಧೀಕ್ಷಕ ಸತೀಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂರ್ನಾಡು ವಲಯದ ಮೇಲ್ವಿಚಾರಕ ಸುಜೀತ್ ಕುಲಾಲ್ ಹಾಗೂ ಮೂರ್ನಾಡು ವಲಯದ ಸೇವಾ ಪ್ರತಿನಿಧಿ ದಿವ್ಯ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕಿ ರೋಹಿಣಿ ಸ್ವಾಗತಿಸಿದರು. ರಶ್ಮಿ ಕಾರ್ಯಕ್ರಮ ನಿರೂಪಿಸಿದರು. ಸೌಮಿನಿ ವಂದಿಸಿದರು. ವರದಿ: ನಾಗರಾಜ್ ಟಿ.ಸಿ., ಮೂರ್ನಾಡು
ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಸಿದ್ದಾಪುರ ಕೊಡಗು ಯೂನಿಯನ್ ಎಸ್ಎನ್ಡಿಪಿ ಅಧ್ಯಕ್ಷರಾದ ವಿ.ಕೆ.ಲೋಕೇಶ್, ಕೊಡಗು ಜಿಲ್ಲೆ ಬಿಲ್ಲವ ಸಮಾಜದ…






