ಕುಶಾಲನಗರ ನ.13 NEWS DESK : ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ವತಿಯಿಂದ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಕೇಕ್ ಕತ್ತರಿಸಿ ಸಿಹಿ ಹಂಚಿದರು. ನಂತರ ಊಟದ ವ್ಯವಸ್ಥೆಯನ್ನು ಕಲ್ಪಿಸಿದರು. ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ಪ್ರಮುಖರಾದ ಎಂ. ನಾಗರಾಜ್, ಮಧು ಚಂದ್ರ, ಕಾಂತಾರಾಜ್, ಪುನೀತ್ ಕುಮಾರ್, ಮಧು, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಅನಂತ, ಅರುಣ್ ರಾವ್, ಚಂದ್ರು, ಕೂಡ್ಲೂರು ಈರಪ್ಪ, ಗಿರೀಗೌಡ, ಲೋಕೇಶ್, ಧರ್ಮ, ಅಣ್ಣಚಿ, ಹರೀಶ್, ಶ್ರೀ ಶಕ್ತಿ ವೃಧ್ದಾಶ್ರಮ ಮೇಲ್ವಿಚಾರಕ ಬಿ.ಎಸ್. ಚಂದ್ರು ಸೇರಿದಂತೆ ಬಳಗದ ಸದಸ್ಯರು, ಅಭಿಮಾನಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ನ.13 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನ.14, 15 ಮತ್ತು 16 ರಂದು ಮಡಿಕೇರಿಯಲ್ಲಿ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ನ ಅಧ್ಯಕ್ಷ ಕುಟ್ಟಂಡ ಕುಟ್ಟಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಾಲ್ಕನೇ ವರ್ಷದ ಐಪಿಎಲ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದರು. ನ.14 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ರಾಜ ವಿಜಯ ಕುಮಾರ್, ಸಿಗ್ಮ ನೆಟ್ವರ್ಕ್ಸ್ನ ವ್ಯವಸ್ಥಾಪಕ ನಿರ್ದೇಶಕ ಅವರೆಮಾದಂಡ ಶರಣ್ ಪೂಣಚ್ಚ, ಕೊಡವ ನಟಿ ಕಾಣತಂಡ ಬೀನ ಜಗದೀಶ್, ಕಾಫಿ ಬೆಳೆಗಾರ ಅಪ್ಪನೆರವಂಡ ನಂದಾ ಬೆಳ್ಯಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ…
ನಾಪೋಕ್ಲು ನ.13 NEWS DESK : ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೇ ವಿದ್ಯಾರ್ಥಿಗಳಿಂದ ಟ್ರ್ಯಾಕ್ ಸೂಟ್ಗಳನ್ನು ವಿತರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕೊಡಗು ಕೆಡಿಪಿ ಸದಸ್ಯ ಐನಮಂಡ ರೈನ ಕಾರ್ಯಪ್ಪ, ಹಳೆ ವಿದ್ಯಾರ್ಥಿಗಳಾದ ಬಡಕಡ ಸುರೇಶ್ ಬೆಳ್ಳಿಯಪ್ಪ, ಮಾಜಿ ಸೈನಿಕ ಅಂಜಪರವಂಡ ಸಚಿನ್ ಅಯ್ಯಪ್ಪ ಹಾಗೂ ಅಂಜಪರವಂಡ ಕವಿತ ಕಾರ್ಯಪ್ಪ ಎಸಿಪಿ ಬೆಂಗಳೂರು ಇವರು ಟ್ರ್ಯಾಕ್ ಸೂಟ್ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಬಡಕಡ ಸುರೇಶ್ ಬೆಳ್ಳಿಯಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಜೊತೆಗೆ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ ಹಲವು ಉದಾಹರಣೆಗಳಿವೆ. ಈ ಶಾಲೆಯು ಸಹ ಅಭಿವೃದ್ಧಿ ಪಥದೆಡೆಗೆ ಸಾಗಬೇಕುಎಂದು ಹೆಳಿದರು. ದಾನಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕರಾದ ಪಿ.ಹೆಚ್.ಸಾಜಿದಾ, ಎಂ.ಎ.ಮಮತಾ, ಕೆ.ಎ.ಆಶಿಕಾ ಉಪಸ್ಥಿತರಿದ್ದರು. ಒಟ್ಟು 42 ವಿದ್ಯಾರ್ಥಿಗಳಿಗೆ ಟ್ರ್ಯಾಕ್…
ನಾಪೋಕ್ಲು ನ.13 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ 2024-25ರ ಸಾಲಿನ ವಾರ್ಷಿಕ ಮಹಾಸಭೆಯು ನ.16 ರಂದು ನಡೆಯಲಿದೆ. ಮಡಿಕೇರಿಯ ಬಾಲ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಸಂಘದ ಸದಸ್ಯರು ಹಾಗೂ ಸ್ವಜಾತಿ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ, ಮಹಾಸಭೆಯನ್ನು ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.
ಪುತ್ತೂರು ನ.13 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ತನ್ನ ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪಂಚವಿಂಶತಿ-25 ಎನ್ನುವ ಸರಣಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿûದೆ. ಇದರನ್ವಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ನ.15 ಶನಿವಾರದಂದು ಕಾಲೇಜಿನ ಆವರಣದಲ್ಲಿ ಸ್ಪರ್ಧೆಯು ನಡೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರಕನ್ನಡ, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುತ್ತಾರೆ. ಇದುವರೆಗೆ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಂದು ತಂಡದಲ್ಲಿ 5 ವಿಧ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ವೈಯಕ್ತಿಕ ಹಾಗೂ ತಂಡ ಪ್ರಶಸ್ತಿಯನ್ನು ನೀಡಲಾಗುತ್ತದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಗುತ್ತದೆ. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಗೋರಿಗುಡ್ಡೆಯ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಠ್ಠಲ.ಎ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲ…
ಮಡಿಕೇರಿ ನ.13 NEWS DESK : ಮರಗೋಡು ಎಸ್ ಕೆ ಎಫ್ ಸಿ ವತಿಯಿಂದ ನಡೆದ ಮೊದಲ ವರ್ಷದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಅತಿಥೇಯ ಎಸ್ ಕೆ ಎಫ್ ಸಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೋಕರ್ ಯುನೈಟೆಡ್ ಅಮ್ಮತ್ತಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡಿತು. ಹಾಗೆಯೆ 3 ಹಾಗೂ 4 ಸ್ಥಾನವನ್ನು ಸ್ಟಾರ್ ಬಾಯ್ಸ್ ಅಭ್ಯತ್ ಮಂಗಲ ತಂಡ ಹಾಗೂ ಎಂ.ಎಫ್.ಸಿ ಅಮ್ಮತ್ತಿ ತಂಡ ಪಡೆದುಕೊಂಡಿತು. ಮರಗೋಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಒಟ್ಟು ಏಳು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಸ್ಟಾರ್ ಬಾಯ್ಸ್ ಅಭ್ಯತ್ ಮಂಗಲ ಹಾಗೂ ಸೋಕರ್ ಯುನೈಟೆಡ್ ಅಮ್ಮತ್ತಿ ತಂಡದ ನಡುವೆ ನಡೆದ ರೋಚಕ ಹಣಹಣಿಯಲ್ಲಿ 2 ತಂಡವು ಪೂರ್ಣ ಅವಧಿಯಲ್ಲಿ 1-1 ಗೋಲ್ ಗಳ ಸಮಬಲ ಸಾಧಿಸಿ…
ಮೈಸೂರು ನ.13 NEWS DESK : ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪಿರಿಯಾಪಟ್ಟಣದಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಂಬಾಕು ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ್ದೇನೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪಿರಿಯಾಪಟ್ಟಣದಲ್ಲಿ ತಂಬಾಕು ಮಂಡಳಿಯ ಅಧಿಕಾರಗಳೊಂದಿಗೆ ಸಭೆ ನಡೆಸಿದ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಬೆಳಗಾರರ ಹಿತ ಕಾಪಾಡಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದರು. ಮಂಡಳಿಯ ನಿರ್ದೇಶಕರು ಮತ್ತು ರೈತರೊಂದಿಗೆ ತಂಬಾಕು ಬೆಳೆಯುವ ಸಮುದಾಯದ ತುರ್ತು ಕಾಳಜಿಗಳನ್ನು ಗಮನಕ್ಕೆ ತರಲಾಯಿತು. ನಂತರ ಇದಕ್ಕೆ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ. ರೈತರಿಗೆ ನ್ಯಾಯಯುತ ಬೆಲೆ ಸಿಗಬೇಕಾದರೆ ದರ ಹೆಚ್ಚಿಸಬೇಕು, ತಂಬಾಕು ಹರಾಜು ಮತ್ತು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ತಂಬಾಕು ಮಂಡಳಿ ಕಚೇರಿಗಳಿಗೆ ಭೇಟಿ ನೀಡುವ ರೈತರಿಗೆ ಸೌಲಭ್ಯಗಳು ಮತ್ತು ಸೌಕರ್ಯಗಳನ್ನು ಒದಗಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು ಎಂದು ಸಂಸದರು…
ವಿರಾಜಪೇಟೆ ನ.13 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಕರುನಾಡ ಸಂಭ್ರಮ 2025 ರ ಅಂಗವಾಗಿ ಲೇಖಕರೊಂದಿಗೆ ಸoವಾದ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಹಾಗೂ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕರಾದ ಗಣೇಶ್ ನಿಲವಾಗಿಲು ಅವರ ಚಕ್ರವರ್ತಿ ನೆಪೋಲಿಯನ್ ಹಾಗೂ ಹುಣಸೂರಿನ ಅರಸು ಕೃತಿಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳು ಲೇಖನದ ಕುರಿತ ಚರ್ಚೆಗಳಲ್ಲಿ ಭಾಗವಹಿಸಿ ಅನೇಕ ವಿಚಾರಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಲೇಖಕ ಗಣೇಶ್ ನಿಲವಾಗಿಲು ಅವರು ವಿದ್ಯಾರ್ಥಿಗಳು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳನ್ನು ಓದಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಇತರರಿಗೆ ಜ್ಞಾನವನ್ನು ನೀಡಬೇಕು. ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣದ ಹಂತದಿಂದಲೇ ಕನ್ನಡ ನಾಡು ನುಡಿಯ ಶ್ರೀಮoತಿಕೆಯನ್ನು ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಬೇಕೆಂದು ತಿಳಿಸಿದರು. ಅಧ್ಯಕ್ಷತೆ…
ವಿರಾಜಪೇಟೆ ನ.13 NEWS DESK : ತಾಲ್ಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಸಂತ ತೋಮಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕು ಮಟ್ಟದ ಶಾಲಾ ವಿಧ್ಯಾರ್ಥಿಗಳ 14 ಮತ್ತು 17 ವಯೋಮಿತಿಯ ಅಥ್ಲೆಟಿಕ್ ಕ್ರೀಡಾಕೂಟ ವಿರಾಜಪೇಟೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿದ ಸಂತ ತೋಮಸ್ ಗೋಣಿಕೊಪ್ಪಲು ಶಾಲೆಯ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 17 ವರ್ಷ ವಯೋಮಿತಿ ಬಾಲಕರ ವಿಭಾಗದಲ್ಲಿ ಜವಾಲಿನ್ ಥ್ರೋ ವಿಭಾಗದಲ್ಲಿ ದ್ವೀತಿಯ, ಟ್ರಿಪಲ್ ಜಂಪ್ ವಿಭಾಗದಲ್ಲಿ ಪ್ರಥಮ, 3000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವೀತಿಯ, 5 ಕಿ.ಮೀ ನಡಿಗೆ ಸ್ಪರ್ಧೆ ಯಲ್ಲಿ ಪ್ರಥಮ, ಲಾಂಗ್ ಜಂಪ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹೈಜಂಪ್ ಸ್ಪರ್ಧೆ ಯಲ್ಲಿ ದ್ವೀತಿಯ ಸ್ಥಾನ ಪಡೆದು ಕೊಂಡಿದ್ದಾರೆ. 14 ವರ್ಷ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ಲಾಂಗ್ ಜಂಪ್…
ಮಡಿಕೇರಿ NEWS DESK ನ.13 : ಮಡಿಕೇರಿ ಅರಣ್ಯ ಭವನದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವಿನ ಜನನವಾಗಿ ಎರಡು ವಾರಗಳಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಗರ ಠಾಣಾ ಪೊಲೀಸ್, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.






