ಮಡಿಕೇರಿ ನ.12 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಲಕ್ಕಿಡಿಪ್ ಫಲಿತಾಂಶವನ್ನು ಸಮಿತಿ ಪ್ರಕಟಿಸಿದೆ. ಬಂಪರ್ ಬಹುಮಾನದ ವಿಜೇತ ಸಂಖ್ಯೆ 2586, ಮೊದಲ ಬಹುಮಾನ 5703, ದ್ವಿತೀಯ ಬಹುಮಾನ 8282, ತೃತೀಯ ಬಹುಮಾನ 0136, ನಾಲ್ಕನೇ ಬಹುಮಾನ 0921, ಸಮಾಧಾನಕರ ಬಹುಮಾನಗಳು 9713, 3528, 9236, 8867, 7353, 8141, 8738, 7879, 9109, 9198, 6207, 5491, 9963, 8874, 5933 ವಿಜೇತರು ಒಂದು ತಿಂಗಳೊಳಗೆ ಮಡಿಕೇರಿ ನಗರದ ಮಹದೇವಪೇಟೆಯಲ್ಲಿರುವ ಶೇಖರ್ ಜ್ಯುವೆಲ್ಲರ್ಸ್ನಲ್ಲಿ ಬಹುಮಾನವನ್ನು ಪಡೆದುಕೊಳ್ಳುವಂತೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ : 9986498466 ಸಂಪರ್ಕಿಸಬಹುದಾಗಿದೆ.
ಲೇಖಕ: admin
ವಿರಾಜಪೇಟೆ ನ.12 NEWS DESK : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಕ್ಕಳ ತುರ್ತು ನಿಧಿ (ಯುನಿಸೆಫ್)ನ ಹೈದರಾಬಾದ್ ಪ್ರಾದೇಶಿಕ ಕಚೇರಿ ಹಾಗೂ ಮೈಸೂರು ವಿಶ್ವ ವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗದ ವತಿಯಿಂದ ಬೆಂಗಳೂರಿನ ಹಲಸೂರಿನಲ್ಲಿರುವ ರ್ಯಾಡಿಸನ್ ಬೆಂಗಳೂರು ಸಿಟಿ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಸಂಬಂಧಿ ಆರೋಗ್ಯ ಕಾರ್ಯಾಗಾರದಲ್ಲಿ ಕೊಡಗಿನಿಂದ ಸಾಹಿತಿ ಹಾಗೂ ಪತ್ರಕರ್ತೆ ರಜಿತ ಕಾರ್ಯಪ್ಪ ಪಾಲ್ಗೋಂಡು ಪ್ರಶಂಸನಾ ಪತ್ರ ಪಡೆದುಕೊಂಡಿದ್ದಾರೆ. ಈ ಸಂದರ್ಭ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಉಪನಿರ್ದೇಶಕಿ ಡಾ. ಇಂದುಮತಿ, ಮೈಸೂರು ವಿಶ್ವ ವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗದ ಪ್ರಾದ್ಯಾಪಕಿ ಡಾ. ಸಪ್ನ, ಯುನಿಸೆಫ್ನ ಭಾರತೀಯ ಘಟಕದ ವೈಧ್ಯಕೀಯ ಸಲಹೆಗಾರ ಡಾ. ಶ್ರೀಧರ್ ಪ್ರಹ್ಲಾದ್, ಹೈದರಾಬಾದ್ ಯುನಿಸೆಫ್ನ ಪ್ರಾದೇಶಿಕ ಕಛೇರಿಯ ಮುಖ್ಯಸ್ಥ ಡಾ. ಪ್ರೊಸುನ್ಸೆನ್ ಮತ್ತಿತರರು ಇದ್ದರು.
ಮಡಿಕೇರಿ ನ.12 NEWS DESK : ಕಾವೇರಿ ನದಿ ಮಾಲಿನ್ಯ ನಿವಾರಣೆ, ತ್ಯಾಜ್ಯ ನಿಯಂತ್ರಣ ಮತ್ತು ನದಿಯ ಹೂಳೆತ್ತುವ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ದಕ್ಷಿಣ ಭಾರತದ ಜೀವನಾಡಿಯಾಗಿರುವ ಕಾವೇರಿ ನದಿ ಕರ್ನಾಟಕ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳ ಲಕ್ಷಾಂತರ ಜನರಿಗೆ ಕುಡಿಯುವ ನೀರು, ಕೃಷಿ ನೀರಾವರಿ ಮತ್ತು ಜೀವನೋಪಾಯದ ಮೂಲವಾಗಿದೆ. ಆದರೆ ಕಳೆದ ಕೆಲವು ದಶಕಗಳಿಂದ ನದಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ಸ್ಥಿತಿಗೆ ಬಂದು ತಲುಪಿದೆ. ನದಿಯನ್ನು ಆವರಿಸಿರುವ ತ್ಯಾಜ್ಯದಿಂದ ಶುದ್ಧ ನೀರಿನ ಲಭ್ಯತೆ ಮತ್ತು ಪರಿಸರ ಸಮತೋಲನ ಎರಡಕ್ಕೂ ಭಾರೀ ಧಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನದಿತೀರ ಪ್ರದೇಶಗಳಲ್ಲಿ ಬೆಳೆಯುತ್ತಿರುವ ಕೈಗಾರಿಕೆಗಳು ಮತ್ತು ನಗರ ಪ್ರದೇಶಗಳಿಂದ ನೇರವಾಗಿ ನದಿಗೆ ಹರಿಯುತ್ತಿರುವ ರಾಸಾಯನಿಕ ತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಒಳಚರಂಡಿಯ ಕಲುಷಿತ ನೀರು ನದಿಯ ಜೀವವೈವಿಧ್ಯವನ್ನು ಹಾಳುಮಾಡಿದೆ. ವಿಶೇಷವಾಗಿ…
ಮಡಿಕೇರಿ ನ.12 NEWS DESK : ಕೊಡಗು ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಥ್ರೋಬಾಲ್ ನಲ್ಲಿ ಬಾಲಕರ ತಂಡ ಪ್ರಥಮ, ವಾಲಿಬಾಲ್ ನಲ್ಲಿ ಬಾಲಕಿಯರ ತಂಡ ಪ್ರಥಮ ಮತ್ತು ಚೆಸ್ ನಲ್ಲಿ ಆರೋಮಲ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಟೇಬಲ್ ಟೆನ್ನಿಸ್ ನಲ್ಲಿ ನೀಲೇಶ್ ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಪ್ರಮೋದ್ ಗೌಡ ತರಬೇತಿ ನೀಡಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ.
ಬೆಂಗಳೂರು ನ.12 NEWS DESK : ಬೆಂಗಳೂರಿನ ಪಿಸಿಡಿಎ ಸಂಕೀರ್ಣದ ಬಹುಪಯೋಗಿ ಸಭಾಂಗಣದಲ್ಲಿಂದು ‘ಸ್ಪರ್ಶ್ ಔಟ್ರೀಚ್’ (ಸ್ಪರ್ಶ್ ಜನಸಂಪರ್ಕ) ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ರಕ್ಷಣಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ‘ಸ್ಪರ್ಶ್’ ಸಂಬಂಧಿತ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಪರಿಹರಿಸಲು ಎರಡು ದಿನಗಳ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಎಎಸ್ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟಿನೆಂಟ್ ಜನರಲ್ ಜೆ.ಕೆ. ಗೆರಾ, ಕರ್ನಾಟಕ ಮತ್ತು ಕೇರಳ ಸಬ್ ಏರಿಯಾದ ಎವಿಎಸ್ಎಂ, ವೈಎಸ್ಎಂ, ಜಿಒಸಿ ಮೇಜರ್ ಜನರಲ್ ವಿ.ಟಿ. ಮ್ಯಾಥ್ಯೂ, ದಕ್ಷಿಣದ ಆಯ್ಕೆ ಕೇಂದ್ರದ ಕಮಾಂಡೆಂಟ್ ಮೇಜರ್ ಜನರಲ್ ಹರೀಶ್ ಭೂತಾನಿ ಮತ್ತು ಬೆಂಗಳೂರಿನ ರಕ್ಷಣಾ ಖಾತೆಗಳ ಪ್ರಧಾನ ನಿಯಂತ್ರಕ (ಪಿಸಿಡಿಎ) ಐಡಿಎಎಸ್ ಶ್ರೀ ಪ್ರಮೋದ್ ಕುಮಾರ್ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಸೇನಾ ಗಣ್ಯರು, ಐಡಿಎಎಸ್ ಅಧಿಕಾರಿಗಳು ಮತ್ತು ರಕ್ಷಣಾ ಪಿಂಚಣಿದಾರರ ದೊಡ್ಡಮಟ್ಟದಲ್ಲಿ ಭಾಗವಹಿಸಿದ್ದರು. ಸ್ಪರ್ಶ್ ಜನಸಂಪರ್ಕ ಕಾರ್ಯಕ್ರಮವು ಪಿಂಚಣಿದಾರರು ಮತ್ತು ಅಧಿಕಾರಿಗಳ ನಡುವೆ ನೇರ ಸಂವಾದವನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದ ಸಮಯದಲ್ಲಿ…
ವಿರಾಜಪೇಟೆ ನ.12 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ವತಿಯಿಂದ ಕೊಡಗಿನ ಕನ್ನಡ ನುಡಿ ವೈಭವದ ಹಬ್ಬ ನುಡಿ ಉತ್ಸವ-2025 ರ ಲಾಂಛನವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜರುಗುವ ಈ ಕಾರ್ಯಕ್ರಮವು ಸಂಭ್ರಮದ ಕಾರ್ಯಕ್ರಮವಾಗಿದ್ದು, ನಮ್ಮ ನಾಡಿನ ಹೆಮ್ಮೆಯ ಹಬ್ಬವು ಆಗಿದೆ. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಕನ್ನಡ ನಾಡು ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ರಾಜ್ಯೋತ್ಸವದ ಆಚರಣೆಯು ನಾವು ನಾಡಿಗೆ ಸಲ್ಲಿಸುವ ಗೌರವವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ನ ನುಡಿ ಉತ್ಸವ ಸಮಿತಿಯ ಸಂಚಾಲಕರು ಹಾಗೂ ಪತ್ರಕರ್ತರಾದ ಅಬ್ದುಲ್ ರೆಹಮಾನ್ ಮಾತನಾಡಿ, ಕನ್ನಡಮ್ಮನ ಸೇವೆಗೆ ನಾವು ಸದಾ ಸಿದ್ಧರಿರಬೇಕು. ವಿರಾಜಪೇಟೆಯ ಈ…
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇದೇ ನ.14 ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಯೂನಿಯನ್ ಜಿಲ್ಲಾಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನ.14 ರಂದು ನಡೆಯಲಿದ್ದು, ಸಮಾರೋಪ ಸಮಾರಂಭ ನ.20 ರಂದು ಮಡಿಕೇರಿಯ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ‘ಉನ್ನತಿ ಭವನ’ದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು. *ಪ್ರಶಸ್ತಿ ಪ್ರದಾನ* ಮಡಿಕೇರಿಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿಯನ್ನು ಪೊನ್ನಂಪೇಟೆಯ ಹಿರಿಯ ಸಹಕಾರಿಗಳಾದ ಚಿರಿಯಂಡ ಕೆ.ಉತ್ತಪ್ಪ ಅವರಿಗೆ ಪ್ರದಾನ ಮಾಡಲಾಗುತ್ತದೆ. ‘ಶ್ರೇಷ್ಠ ಸಹಕಾರಿ ಪ್ರಶಸಿ’್ತಯನ್ನು ಈ ಬಾರಿ ಸೋಮವಾರಪೇಟೆ ತಾಲ್ಲೂಕಿನ ಶುಂಠಿ ಗ್ರಾಮದ ಎಚ್.ಎಸ್.ಮುದ್ದಪ್ಪ, ಮಡಿಕೇರಿ ತಾಲ್ಲೂಕಿನ…
ಬೆಂಗಳೂರು ನ.11 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ನೂತನ ಕುರುಬ ಸಮಾಜದ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ತಿಂತಿಣಿ ಮಠದ ಸಿದ್ದರಾಮೇಶ್ವರ ನಂದಾಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ಸೇರಿ ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದ ಹಾಲಿ / ಮಾಜಿ ಸಚಿವರುಗಳು, ಶಾಸಕರುಗಳು ಸೇರಿ ಹಲವು ಗಣ್ಯರುಗಳು ಉಪಸ್ಥಿತರಿದ್ದರು.
ಮಂಡ್ಯ ನ.12 NEWS DESK : ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.
ಮೂರ್ನಾಡು ನ.12 NEWS DESK : ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾಗಿ ತೇಲಪಂಡ ಸಿ. ಸುಬ್ಬಯ್ಯ ಆಯ್ಕೆಯಾಗಿದ್ದಾರೆ. ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪುದಿಯೊಕ್ಕಡ ಕಾಶಿ ಕರುಂಬಯ್ಯ ಅವರ ಆರೋಗ್ಯದಲ್ಲಿ ಏರುಪೇರು ಇದ್ದು, ಸೇವೆಯಲ್ಲಿ ಮುಂದುವರೆಯಲು ಸಾಧ್ಯವಾಗದಕಾರಣ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಸಮಾಜದ ಅಧ್ಯಕ್ಷರಾಗಿ ತೇಲಪಂಡ ಸಿ. ಸುಬ್ಬಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕೋಟೇರ ಎ.ರಾಜ, ಗೌ. ಕಾರ್ಯದರ್ಶಿಯಾಗಿ ಚಂಗಂಡ ಸೂರಜ್ ತಮ್ಮಯ್ಯ, ಖಜಾಂಚಿಯಾಗಿ ಅಮ್ಮಟಂಡ ಎಮ್. ದೇವಯ್ಯ, ನಿರ್ದೇಶಕರುಗಳಾಗಿ ತಿರುಟೆರ ಕಾಶಿ, ಪೋತಂಡರಾಜ, ಅಮ್ಮಟಂಡ ಮನು, ಮುಂಡಂಡ ತಿಮ್ಮಣ್ಣ, ಪಳಂಗಂಡ ಹರೀಶ್, ಮಚ್ಚಾರಂಡ ಸುಬ್ರಮಣಿ, ಚೇನಂಡ ಲಾಲ, ಮುಕ್ಕಾಟಿರ ಹರೀಶ್, ಚೌರೀರ ಅಪ್ಪಣ್ಣ, ಮಂಡೆಪಂಡ ಕುಟ್ಟಯ್ಯ, ಚೌರೀರ ಪ್ರಕಾಶ್, ಅಚ್ಚಕಾಳಿರ ಅಯ್ಯಪ್ಪ, ಮುಂಡಂಡ ಜಮುನ, ಪಾಂಡಂಡ ಸ್ವಾತಿ ಮತ್ತು ಕುಂಜಿಲಂಡ ಗ್ರೇಸಿ ಅವರುಗಳು ಆಡಳಿತ ಮಂಡಳಿಯಲ್ಲಿ ತಮ್ಮದೆ ಸ್ಥಾನಗಳಲ್ಲಿ ಮುಂದುವರೆಯುತ್ತಾರೆ. ಮೂಡೇರ ಮನು ಮಾದಪ್ಪ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿ : ಟಿ.ಸಿ.…






