ಮಡಿಕೇರಿ ನ.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿನ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ…
ಲೇಖಕ: admin
ಮಡಿಕೇರಿ ನ.11 NEWS DESK : ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನ.12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ನಗರದ ಗೌಳಿಬೀದಿ ಮಡಿಕೇರಿಯಲ್ಲಿರುವ ಲೋಕಾಯುಕ್ತ ಕಚೇರಿ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರು ತಿಳಿಸಿದ್ದಾರೆ.
ಮಡಿಕೇರಿ ನ.11 NEWS DESK : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ…
ಮಡಿಕೇರಿ ನ.11 NEWS DESK : ಚಿಕ್ಕಬಳ್ಳಾಪುರದಲ್ಲಿ ನಡೆದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಶಾಲಾ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರೆವೆರೆಂಟ ಫಾದರ್ ವಿಜಯಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸೆಲ್ವಾ ರಾಜ್ ಆರ್ ಅಭಿನಂದನೆ ಸಲ್ಲಿಸಿದ್ದಾರೆ. ಆರ್.ಜೀವಿಕ ಸುಂಟಿಕೊಪ್ಪದ ನಿವಾಸಿ ಸೈನಿಕ ರಾಜಕುಮಾರ ಹಾಗೂ ಲಕ್ಷ್ಮಿ ದಂಪತಿಯ ಪುತ್ರಿ. ಜೀವಿಕ ಕರಾಟೆ ತರಬೇತುದಾರರಾದ ಮುಖೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಸುಂಟಿಕೊಪ್ಪ ನ.11 NEWS DESK : ಪರಿಸರ ಕಾನೂನು ಪರೀಕ್ಷೆಯಲ್ಲಿ ದಿವ್ಯಶ್ರೀ. ಎಂ. ರಾಜ್ಯಕ್ಕೆ 5ನೇ ರ್ಯಾಂಕ್ ಗಳಿಸುವ ಮೂಲಕ ಉತ್ತಮ ಸಾಧನೆಯನ್ನು ತೋರಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾನಿಲಯದ ಹುಬ್ಬಳ್ಳಿಯಲ್ಲಿ ನಡೆದ 7 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾದೀಶ ಶಿವರಾಜ್.ವಿ.ಪಾಟೀಲ್ ಹಾಗೂ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಹೆಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ಚಿನ್ನದ ಪದಕ, ಪಾರಿತೋಷಕ ಹಾಗೂ ಅತ್ಯಧಿಕ ಅಂಕಗಳಿಸಿರುವುದಕ್ಕೆ ಸ್ಕಾಲರ್ ಶಿಪ್ ಸ್ವೀಕರಿಸಿರುತ್ತಾರೆ. ಎಂ.ದಿವ್ಯಶ್ರೀ ದಿವಂಗತ ಬಿ.ಎಸ್.ಮುತ್ತಪ್ಪ ಹಾಗೂ ಕುಸುಮ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸುತ್ತ ರಾಜ್ಯ ಉಚ್ಚನ್ಯಾಯಾಲಯದಲ್ಲಿ ವೃತ್ತಿ ನಡೆಸುತ್ತಿದ್ದು, ಮಡಿಕೇರಿಯಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಇನ್ಸ್ ಪೆಕ್ಟರ್ ಶಾಂತರಾಂ ಅವರ ಪತ್ನಿಯಾಗಿದ್ದಾರೆ.
ಮಡಿಕೇರಿ ನ.11 NEWS DESK : ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ 5 ದಶಕಗಳ ಸಾಥ೯ಕ ಸೇವೆ ಸ್ಮರಣೀಯವಾಗಿದೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಶ್ಲಾಘಿಸಿದ್ದಾರೆ. ನಗರದ ಕೊಡವ ಸಮಾಜದಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸುವಣ೯ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಇನ್ನರ್ ವೀಲ್ ಜಿಲ್ಲೆ 318 ರ ಅಧ್ಯಕ್ಷೆ ಶಬರಿ ಕಡಿದಾಳ್, ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿ ವ್ಯಾಪ್ತಿಯಲ್ಲಿ 50 ವಷ೯ಗಳಿಂದ ಸೇವಾ ಕಾಯ೯ ಹಮ್ಮಿಕೊಳ್ಳುವ ಮೂಲಕ ಜನಸೇವೆಯಲ್ಲಿ ಸಕ್ರಿಯವಾಗಿ ಕಾಯ೯ಪ್ರವೖತ್ತವಾಗಿರುವುದು ಸಂತೋಷದ ವಿಚಾರ. ಜನರಿಗೆ ಈ ಸೇವಾ ಕಾಯ೯ಗಳ ನಿಜವಾದ ಪ್ರಯೋಜನ ತಲುಪಿದಾಗ ಸೇವೆಗೆ ನಿಜವಾದ ಸಾಥ೯ಕತೆ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನರ್ ವೀಲ್ ಸಂಸ್ಥೆಯು ಮತ್ತಷ್ಟು ಸೇವಾ ಯೋಜನೆ ಹಮ್ಮಿಕೊಳ್ಳಲು ಸುವಣ೯ ಸಂಭ್ರಮ ಕಾಯ೯ಕ್ರಮ ಸಹಾಯಕವಾಗಲಿ ಎಂದೂ ಅವರು ಹಾರೈಸಿದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯನ್ನು 50 ವಷ೯ಗಳ ಹಿಂದೆ ಸ್ಥಾಪಿಸಿದ್ದ ಡಾ.ಜಯಲಕ್ಷ್ಮಿ ಪಾಟ್ಕರ್ ಅವರು ಗೌರವಾಪ೯ಣೆ…
ಕುಶಾಲನಗರ ನ.11 NEWS DESK : ಭಾರತ ದೇಶದ ಮೂಲ ನಿವಾಸಿಗಳ ಮೂಲ ಧರ್ಮ ಬೌದ್ಧ ಧರ್ಮವಾಗಿದ್ದು, ಭಗವಾನ್ ಬುದ್ಧ ನಮ್ಮ ಮೂಲ ಗುರು ಅವರ ಪಂಚಶೀಲ ತತ್ವಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಹೋಗಬೇಕು. ಮುಂದಿನ ಪೀಳಿಗೆಗೆ ಬುದ್ಧನ ವಿಚಾರಧಾರೆಯನ್ನು ಮನದಟ್ಟು ಮಾಡಿಕೊಡಬೇಕು ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿ ಒಕ್ಕೂಟದ ಗೌರವಾಧ್ಯಕ್ಷ ಬಿ.ಗೋಪಾಲ್ ಹೇಳಿದರು. ಕರ್ನಾಟಕ ಬುದ್ಧ ಧಮ್ಮ ಸಮಿತಿಗಳ ಒಕ್ಕೂಟದ ವತಿಯಿಂದ ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬುದ್ಧ ಧಮ್ಮ ಚಿಂತನ ಮಂಥನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೌರ್ಯ ಸಾಮ್ರಾಜ್ಯದಲ್ಲಿ ಸಾಮ್ರಾಟ ಅಶೋಕ ಚಕ್ರವರ್ತಿ ಆಳ್ವಿಕೆ ಸಂದರ್ಭ ಬೌದ್ಧ ಧರ್ಮ ಸುಂದರವಾದ ಪ್ರೀತಿ, ಸಹಬಾಳ್ವೆ, ಸಹೋದರತ್ವವನ್ನು ಬಿತ್ತಿ ಜನಸಾಮಾನ್ಯರಲ್ಲಿ ಉತ್ತಮ ಬಾಂಧವ್ಯದ ಬುನಾದಿ ಹಾಕಿ ಕೊಟ್ಟಿತ್ತು ಎಂದು ಹೇಳಿದರು. ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿವೃತ್ತ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ದಪ್ಪ ಮಾತನಾಡಿ, ಭಗವಾನ್ ಬುದ್ಧನ ವಿಚಾರಧಾರೆಯನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿ ದಿನ ಅರ್ಧ…
ಮಡಿಕೇರಿ ನ.11 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಇಂಗ್ಲಿಷ್ ವಿಭಾಗದ ಜಾಯ್ಸ್ ಸಾಹಿತ್ಯ ಸಂಘದ ಆಶ್ರಯದಲ್ಲಿ “ಬಿಯಾಂಡ್ ದಿ ಬುಕ್ ಆ್ಯಕ್ಟಿವಿಟಿ – ಲಿಟ್ ಅಪ್” ಎಂಬ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಸಾಹಿತ್ಯ ವಿದ್ಯಾರ್ಥಿ ಶಿಫಾ ಅವರು ಚಟುವಟಿಕೆಯ ಉದ್ದೇಶಗಳ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಮತ್ತು ಜಾಯ್ಸ್ ಸಾಹಿತ್ಯ ಸಂಘದ ಅಧ್ಯಕ್ಷೆ ಪ್ರೊ. ನಯನಾ ಕಶ್ಯಪ್ ಮಾತನಾಡಿ, ಜಾಯ್ಸ್ ಸಾಹಿತ್ಯ ಸಂಘವು ವಿದ್ಯಾರ್ಥಿಗಳ ಒಳಗಿರುವ ಚಿಂತನೆ ಮತ್ತು ಪ್ರತಿಭೆಗೆ ವೇದಿಕೆ ಒದಗಿಸುವ ಉದ್ದೇಶದಿಂದ ಪ್ರತಿವರ್ಷ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ,” ಎಂದು ವಿವರಿಸಿದರು. ಪ್ರಾಂಶುಪಾಲರಾದ ಮೇಜರ್ ರಾಘವ ಬಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸಾಹಿತ್ಯದ ಮೌಲ್ಯವನ್ನು ಜೀವನದ ಬೆಳಕಾಗಿ ಪರಿಗಣಿಸುವಂತೆ ಕರೆ ನೀಡಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಜೊತೆಗೆ ಮಾತನಾಡುವ, ಆಲೋಚಿಸುವ ಮತ್ತು ಅಭಿವ್ಯಕ್ತಿಯ ಕೌಶಲ್ಯವನ್ನು ಹೆಚ್ಚಿಸುತ್ತವೆ,” ಎಂದು ಹೇಳಿದರು. ವಿದ್ಯಾರ್ಥಿಗಳಿಂದ…
ವಿರಾಜಪೇಟೆ ನ.11 NEWS DESK : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ವಿರಾಜಪೇಟೆ ತಾಲ್ಲೂಕು ಸಮಿತಿ ವತಿಯಿಂದ ವಿರಾಜಪೇಟೆ ಕಚೇರಿಯಲ್ಲಿ ಸೆಸ್ಕ್ ಉಪವಿಭಾಗದ ಸಹಾಯಕ ಅಭಿಯಂತರರಾದ ಅಭಿಷೇಕ್ ಅವರು ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎಂ.ಗಣೇಶ ಹಾಗೂ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಕೆ.ಎಂ.ಹಂಸ, ಕಾರ್ಯದರ್ಶಿ ಎನ್.ಜಿ.ಚಂದ್ರಶೇಖರ್ ಮತ್ತು ಸದಸ್ಯರಾದ ರಾಜ, ರಫೀಕ್, ನೌಸರ್, ಯೂಸುಫ್, ರಾಜೇಶ್, ಮನು ಉಪಸ್ತಿತರಿದ್ದರು.
ವಿರಾಜಪೇಟೆ ನ.11 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಪೋಷಕ -ಶಿಕ್ಷಕರ ಸಭೆಯನ್ನು ಸಭೆಯು ನ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲಾ ಪೋಷಕರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸುವಂತೆ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.






